Homeಮುಖಪುಟವಿಶೇಷ ಅಧಿವೇಶನ ಚುನಾಯಿತ ಸಂಸದನಿಗೆ ಅವಹೇಳನ ಮಾಡಲು ಕರೆಯಲಾಗಿದೆಯೇ?: ಡ್ಯಾನಿಶ್‌ ಅಲಿ

ವಿಶೇಷ ಅಧಿವೇಶನ ಚುನಾಯಿತ ಸಂಸದನಿಗೆ ಅವಹೇಳನ ಮಾಡಲು ಕರೆಯಲಾಗಿದೆಯೇ?: ಡ್ಯಾನಿಶ್‌ ಅಲಿ

- Advertisement -
- Advertisement -

ಲೋಕಸಭೆಯಲ್ಲಿ ಬಿಎಸ್ಪಿ ಸಂಸದ ಡ್ಯಾನಿಶ್ ಅಲಿ ಅವರ  ಬಗ್ಗೆ ಮತ್ತು ಮುಸ್ಲಿಂ ಸಮುದಾಯದ ಬಗ್ಗೆ ನಿಂದನೆ ಮಾಡಿದ ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಮಧ್ಯೆ ವಿಶೇಷ ಅಧಿವೇಶನವನ್ನು ಚುನಾಯಿತ ಸಂಸದನಿಗೆ ಸಮುದಾಯಕ್ಕೆ ಲಿಂಕ್‌ ಮಾಡಿ ದಾಳಿ ಮಾಡಲು ಕರೆಯಲಾಗಿದೆಯೇ? ಎಂದು ಡ್ಯಾನಿಶ್‌ ಅಲಿ ಪ್ರಶ್ನಿಸಿದ್ದಾರೆ.

ಈ ಕುರಿತು ಮಾತನಾಡಿದ ಸಂಸದ ಡ್ಯಾನಿಶ್ ಅಲಿ, ರಮೇಶ್ ಬಿಧುರಿ ವಿರುದ್ಧ ಸ್ಪೀಕರ್‌ ಕ್ರಮಕೈಗೊಳ್ಳದಿದ್ದರೆ ನಾನು ಸಂಸತ್‌ನ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ, ಅವಹೇಳನದಿಂದ ನೊಂದು ರಾತ್ರಿಯಿಡೀ ನನಗೆ ನಿದ್ರೆ ಬಂದಿಲ್ಲ. ವಿಶೇಷ ಅಧಿವೇಶನವನ್ನು ಚುನಾಯಿತ ಸಂಸದರನ್ನು ಅವರ ಸಮುದಾಯದ ಜೊತೆ ಲಿಂಕ್‌ ಮಾಡಿ ದಾಳಿ ಮಾಡಲು(ಅವಹೇಳನ ಮಾಡಲು) ಕರೆಯಲಾಗಿದೆಯಾ ?  ಈ ಬೆಳವಣಿಗೆ ಇಡೀ ದೇಶವೇ ತಲೆತಗ್ಗಿಸುವಂತೆ ಮಾಡಿದೆ. ಅವರ ಪಕ್ಷ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಾ ಅಥವಾ  ಅವರಿಗೆ ಪ್ರಚಾರ ನೀಡುತ್ತಾ ಎಂದು ನಾವು ನೋಡುತ್ತೇವೆ. ಇದು ದ್ವೇಷದ ಮಾತು ಎಂದು ಹೇಳಿದ್ದಾರೆ.

ಇದಲ್ಲದೆ  ಸಂಸದ ರಮೇಶ್‌ ಬಿಧುರಿ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಸ್ಪೀಕರ್‌ಗೆ ಪತ್ರ ಬರೆದಿರುವುದಾಗಿ ಡ್ಯಾನಿಶ್‌ ಅಲಿ ಹೇಳಿದ್ದಾರೆ. ಪತ್ರದಲ್ಲಿ ಅವರು ನನ್ನ ವಿರುದ್ಧ ಅತ್ಯಂತ ಅಸಹ್ಯಕರ, ನಿಂದನೀಯ ಪದ ಬಳಕೆ  ಮಾಡಿದ್ದಾರೆ.  ಅವರು ನನ್ನ ವಿರುದ್ಧ ಬಳಸಿದ ಪದಗಳಲ್ಲಿ ‘ಭದ್ವಾ’ (ಪಿಂಪ್), ‘ಕಟ್ವಾ’ (ಸುನ್ನತಿ ಮಾಡಿಸಿಕೊಂಡವರು), ‘ಮುಲ್ಲಾ ಉಗ್ರವಾದಿ’ ಮತ್ತು ‘ಮುಲ್ಲಾ ಆತಂಕ್ವಾದಿ’  ‘(ಮುಸ್ಲಿಂ ಭಯೋತ್ಪಾದಕ) ಇತ್ಯಾದಿ ಇದೆ. ಇದು ಅತ್ಯಂತ ದುರದೃಷ್ಟಕರ ಮತ್ತು ಸ್ಪೀಕರ್ ಆಗಿ ನಿಮ್ಮ ನೇತೃತ್ವದ ಹೊಸ ಸಂಸತ್ತಿನ ಕಟ್ಟಡದಲ್ಲಿ ಇದು ನಡೆದಿದೆ. ಈ ಮಹಾನ್ ರಾಷ್ಟ್ರದ ಅಲ್ಪಸಂಖ್ಯಾತ ಸದಸ್ಯ ಮತ್ತು ಚುನಾಯಿತ ಸಂಸದನಾಗಿ ನನಗೆ ನಿಜವಾಗಿಯೂ ಹೃದಯ ವಿದ್ರಾವಕ ಎನಿಸಿದೆ ಎಂದು ಬರೆದಿದ್ದಾರೆ.

ಇನ್ನು ಅವಹೇಳನಕಾರಿ ಹೇಳಿಕೆಯನ್ನು ಕೊಟ್ಟ ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧ ಸ್ವಪಕ್ಷದ ಸಂಸದ ನಿಶಿಕಾಂತ್ ದುಬೆ ಟೀಕಿಸಿದ್ದು, ಇಂತಹ ಹೇಳಿಕೆಗಳು ಸುಸಂಸ್ಕೃತ ಸಮಾಜಕ್ಕೆ ಸೂಕ್ತವಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು, ತಮ್ಮ ಪಕ್ಷದ ಸಂಸದ ರಮೇಶ್ ಬಿಧುರಿ ಮತ್ತೋರ್ವ ಸಂಸದರ ವಿರುದ್ಧ ನೀಡಿದ್ದ ಕೋಮುವಾದಿ ಹೇಳಿಕೆಗಳನ್ನು ಖಂಡಿಸಿದ್ದಾರೆ ಮತ್ತು ಈ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ಅವಹೇಳನಾಕಾರಿ ಹೇಳಿಕೆ ಬಗ್ಗೆ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಬಿಜೆಪಿ ಸಂಸದ ಬಿಧುರಿಗೆ ಎಚ್ಚರಿಕೆಯನ್ನು ನೀಡಿದ್ದು, ಲೋಕಸಭೆಯ ಕಡತದಿಂದ ಹೇಳಿಕೆ ತೆಗೆದು ಹಾಕಿರುವುದಾಗಿ ಹೇಳಿದ್ದರು. ರಮೇಶ್ ಬಿಧುರಿ ಅವರು ನೀಡಿರುವ ಹೇಳಿಕೆಯನ್ನು ನಾಗರಿಕ ಸಮಾಜ ಸ್ವೀಕರಿಸಲು ಸಾಧ್ಯವಿಲ್ಲ. ಇದಕ್ಕೆ ಎಷ್ಟು ಖಂಡನೆ ವ್ಯಕ್ತಪಡಿಸಿದರೂ ಸಾಲದು. ಸಂಸದರ ಬಗೆಗಿನ ಹೇಳಿಕೆ ಮತ್ತು ಅಸಭ್ಯ ಪದಗಳ ಬಗ್ಗೆ ತನಿಖೆ ನಡೆಸಬೇಕು ಎಂದು ದುಬೆ ಹೇಳಿದ್ದಾರೆ.

ಬಿಜೆಪಿ ಸಂಸದರ ಹೇಳಿಕೆಗೆ ಪ್ರತಿಪಕ್ಷಗಳು ವ್ಯಾಪಕ ಖಂಡನೆಯನ್ನು ವ್ಯಕ್ತಪಡಿಸಿದೆ. ಇದರ ಬೆನ್ನಲ್ಲೇ ಬಿಜೆಪಿ ಪಾರ್ಟಿ ಸಂಸದರಿಗೆ ವಿವರಣೆ ಕೇಳಿ ಶೋಕಾಸ್‌ ನೊಟೀಸ್‌ ನೀಡಿದ್ದು, 15 ದಿನಗಳೊಳಗೆ ಉತ್ತರಿಸಬೇಕು ಎಂದು ಹೇಳಿದೆ.

ಇದನ್ನು ಓದಿ: ಸಂಸತ್ತಿನಲ್ಲಿ ಮುಸ್ಲಿಂ ವಿರೋಧಿ ನಿಂದನೆ: ಬಿಜೆಪಿಯ ನಿಜವಾದ ಬಣ್ಣ ಬಯಲಾಗಿದೆ ಎಂದ ಮಹುವಾ ಮೊಯಿತ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...