Homeಸಿನಿಮಾಕ್ರೀಡೆಏಷ್ಯನ್ ಗೇಮ್ಸ್‌ನಲ್ಲಿ ಭಾರತ ಶುಭಾರಂಭ: ನೇಪಾಳದ ವಿರುದ್ಧ ಮಹಿಳಾ ಟೇಬಲ್ ಟೆನಿಸ್ ಪಟುಗಳಿಗೆ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಶುಭಾರಂಭ: ನೇಪಾಳದ ವಿರುದ್ಧ ಮಹಿಳಾ ಟೇಬಲ್ ಟೆನಿಸ್ ಪಟುಗಳಿಗೆ ಗೆಲುವು

- Advertisement -
- Advertisement -

ಏಷ್ಯನ್ ಗೇಮ್ಸ್ ಗೇಮ್‌ನಲ್ಲಿ ಭಾರತ ಶುಭಾರಂಭ ಮಾಡಿದೆ. ಟೇಬಲ್ ಟೆನಿಸ್ ವಿಭಾಗದಲ್ಲಿ ಶನಿವಾರ ಭಾರತೀಯ ಮಹಿಳಾ ಪಟುಗಳಾದ ದಿಯಾ ಪರಾಗ್ ಚಿತಾಲೆ, ಆಯ್ಹಿಕಾ ಮುಖರ್ಜಿ ಹಾಗೂ ಸುತೀರ್ಥ ಮುಖರ್ಜಿ ನೇಪಾಳ ತಂಡದ ವಿರುದ್ಧ 3-0 ಅಂತರದಲ್ಲಿ ಸುಲಭ ಗೆಲುವು ಸಾಧಿಸಿದ್ದಾರೆ.

ಮೊದಲಿಗೆ ಭಾರತದ ದಿಯಾ ನೇಪಾಳದ ಸಿಕ್ಕಾ ಶ್ರೇಷ್ಠ ವಿರುದ್ಧ ಗೆಲುವು ದಾಖಲಿಸಿದರು. ಅವರು ಮೊದಲ ಪಂದ್ಯವನ್ನು 11-1 ಅಂತರದಲ್ಲಿ ಜಯಿಸಿದ್ದರು. ಅದೇ ಆತ್ಮವಿಶ್ವಾಸದಿಂದ ಆಟ ಮುಂದುವರಿಸಿದ ಅವರು, ಪಂದ್ಯವನ್ನು 7-2 ಅಂತರದೊಂದಿಗೆ ಜಯಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನೇಪಾಳದ ಶ್ರೇಷ್ಠ ಅವರು ದಿಯಾಗೆ ತಿರುಗೇಟು ನೀಡಲು ಪ್ರಯತ್ನಿಸಿದರಾದರೂ, ದಿಯಾ ಎರಡನೆ ಪಂದ್ಯವನ್ನು 11-6 ಅಂತರದಲ್ಲಿ ಸುಲಭವಾಗಿ ಗೆದ್ದುಕೊಂಡರು. ಮೂರನೆಯ ಪಂದ್ಯದಲ್ಲಿ ಭಾರತದ ದಿಯಾ ಮೇಲೆ ಒತ್ತಡ ಹೇರುವಲ್ಲಿ ವಿಫಲವಾದ ನೇಪಾಳದ ಶ್ರೇಷ್ಠ, ಪಂದ್ಯವನ್ನು 11-8 ಅಂತರದಲ್ಲಿ ಸೋತರು. ಇದರಿಂದ ಭಾರತಕ್ಕೆ ಆರಂಭಿಕ ಮುನ್ನಡೆ ದೊರೆಯಿತು.

ನಬಿತಾ ಶ್ರೇಷ್ಠ ವಿರುದ್ಧ ಎರಡನೆಯ ಪಂದ್ಯವಾಡಿದ ಆಯ್ಹಿಕಾ, ಮೊದಲಿಗೆ 2-1 ಮುನ್ನಡೆ ಸಾಧಿಸಿ, ನಂತರ ಪಂದ್ಯವನ್ನು 5-3 ಅಂತರಕ್ಕೆ ಕೊಂಡೊಯ್ದರು. ನಂತರ 11-3 ಅಂತರದಲ್ಲಿ ಮೊದಲ ಪಂದ್ಯವನ್ನು ಜಯಿಸಿದರು.

ಆಯ್ಹಿಕಾಗೆ ಎರಡನೆ ಪಂದ್ಯದಲ್ಲಿ ಪ್ರಬಲ ಪೈಪೋಟಿ ಒಡ್ಡಿದ ನಬಿತಾ, ಪ್ರತಿ ಪಾಯಿಂಟ್‌ಗೂ ಆಯ್ಹಿಕಾ ಹೋರಾಟ ನಡೆಸುವಂತೆ ಮಾಡಿದರು. ಹೀಗಿದ್ದೂ ಆಯ್ಹಿಕಾ ಎರಡನೆ ಪಂದ್ಯವನ್ನು 11-7 ಅಂತರದಲ್ಲಿ ಗೆದ್ದುಕೊಂಡರು. ಮೂರನೆಯ ಪಂದ್ಯದಲ್ಲಿ ನಬಿತಾ ಪೇಲವ ಆಟ ಪ್ರದರ್ಶಿಸಿದ್ದರಿಂದ ಆಯ್ಹಿಕಾ ಆ ಪಂದ್ಯವನ್ನು 11-2 ಅಂತರದಲ್ಲಿ ಜಯಿಸಿದರು. ಇದರಿಂದ ಭಾರತಕ್ಕೆ ನೇಪಾಳದ ವಿರುದ್ಧ 2-0 ಮುನ್ನಡೆ ದೊರೆಯಿತು.

ಮೂರನೆಯ ಪಂದ್ಯದಲ್ಲಿ ನೇಪಾಳದ ಇವಾನಾ ಥಾಪಾ ಮಗರ್ ಅವರನ್ನು ಎದುರಿಸಿದ ಸುತೀರ್ಥ, ಪಂದ್ಯವನ್ನು ಆದಷ್ಟೂ ಬೇಗ ಮುಗಿಸುವ ಧಾವಂತ ಪ್ರದರ್ಶಿಸಿದರು. ಇವಾನಾಗೆ ಯಾವುದೇ ಸಣ್ಣ ಅವಕಾಶವನ್ನೂ ನೀಡದ ಸುತೀರ್ಥ, ಮೊದಲ ಸುತ್ತಿನಲ್ಲಿ 8-0 ಅಂತರದ ಗೆಲುವು ಸಾಧಿಸಿದರು. ನಂತರ ಎರಡು ಮತ್ತು ಮೂರನೆಯ ಸುತ್ತನ್ನು ಕ್ರಮವಾಗಿ 11-5 ಹಾಗೂ 11-2ರ ಅಂತರದಲ್ಲಿ ಜಯಿಸಿದರು.

ಇದನ್ನೂ ಓದಿ: ಏಷ್ಯನ್ ಗೇಮ್ಸ್: ಅರುಣಾಚಲದ ಮೂವರು ವೂಶೂ ಆಟಗಾರ್ತಿಯರಿಗೆ ಚೀನಾ ಪ್ರವೇಶ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...