Homeಮುಖಪುಟಮೀಸಲಾತಿಗಾಗಿ ಮುಸ್ಲಿಮರು ಒಗ್ಗಟ್ಟಾಗಿ ಹೋರಾಡಬೇಕಿದೆ: ಮಾಜಿ ಸಂಸದ ಹುಸೇನ್ ದಳವಾಯಿ

ಮೀಸಲಾತಿಗಾಗಿ ಮುಸ್ಲಿಮರು ಒಗ್ಗಟ್ಟಾಗಿ ಹೋರಾಡಬೇಕಿದೆ: ಮಾಜಿ ಸಂಸದ ಹುಸೇನ್ ದಳವಾಯಿ

- Advertisement -
- Advertisement -

ಇದು ಮುಸ್ಲಿಮರು ಒಗ್ಗಟ್ಟಾಗುವ ಮತ್ತು ತಮ್ಮ ಮೀಸಲಾತಿ ಕೇಳುವ, ತಮಗಾಗಿ ಮಾತನಾಡುವ ಸಮಯ ಎಂದು ಮೌಲಾನಾ ಆಜಾದ್ ವಿಚಾರ ಮಂಚ್ ಅಧ್ಯಕ್ಷ, ಮಾಜಿ ಕಾಂಗ್ರೆಸ್ ಸಂಸದ ಹುಸೇನ್ ದಳವಾಯಿ ಅವರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ಮರಾಠ, ಒಬಿಸಿ ಪ್ರತಿಭಟನೆಗಳು ನಡೆಯುತ್ತಿರುವಾಗ ಮುಸ್ಲಿಮರಿಗೆ ಮೀಸಲಾತಿಯ ಆಗ್ರವು ಮತ್ತೆ ಭುಗಿಲೆದ್ದಿದೆ. ಶುಭಾಂಗಿ ಖಪ್ರೆ ಅವರೊಂದಿಗಿನ ಸಂದರ್ಶನದಲ್ಲಿ ಮೌಲಾನಾ ಆಜಾದ್ ವಿಚಾರ ಮಂಚ್ ಅಧ್ಯಕ್ಷ, ಮಾಜಿ ಕಾಂಗ್ರೆಸ್ ಸಂಸದ ಹುಸೇನ್ ದಳವಾಯಿ ಅವರು ಮುಸ್ಲಿಂ ಮೀಸಲಾತಿಯ ಬೇಡಿಕೆಯನ್ನು ಇಟ್ಟಿದ್ದಾರೆ.

ಮುಸ್ಲಿಂ ಮೀಸಲಾತಿ ಹೊಸ ವಿಚಾರವಲ್ಲ. ಈ ಹಿಂದೆಯೂ ಮುಸ್ಲಿಂ ಮೀಸಲಾತಿಯ ಆಗ್ರಹ ಕೇಳಿಬಂದಿತ್ತು. ಮೀಸಲಾತಿಯ ಬೇಡಿಕೆಯಲ್ಲಿ ಯಾವುದೇ ಸಮುದಾಯವು ಸಮರ್ಥನೆಯನ್ನು ಹೊಂದಿದ್ದರೆ ಅದು ಮುಸ್ಲಿಮರು ಎಂದು ನಾನು ಹೇಳುತ್ತೇನೆ. ನಾನು ವೈಯಕ್ತಿಕವಾಗಿ ಮರಾಠರ ಮೀಸಲಾತಿ ಬೇಡಿಕೆಯನ್ನು ಬೆಂಬಲಿಸುತ್ತೇನೆ. ಅದೇ ರೀತಿ ಮುಸ್ಲಿಮರಿಗೂ ಕೂಡ ಮೀಸಲಾತಿ ಪಡೆಯುವ ಹಕ್ಕಿದೆ ಎಂದು ಹೇಳಿದ್ದಾರೆ.

ಧರ್ಮದ ಆಧಾರದ ಮೇಲೆ ಮೀಸಲಾತಿ ಅಸಂವಿಧಾನಿಕ ಎಂದು ಬಲಪಂಥೀಯರು ಸಾಮಾನ್ಯವಾಗಿ ಹೇಳುವ ವಾದವಾಗಿದೆ. ಆದರೆ ಇಲ್ಲಿ ವಿಷಯವೆಂದರೆ ನಾವು ಧಾರ್ಮಿಕ ಮಾನದಂಡಗಳ ಆಧಾರದ ಮೇಲೆ ಮುಸ್ಲಿಂ ಮೀಸಲಾತಿಯನ್ನು ಬಯಸುತ್ತಿಲ್ಲ. ನಾವು ಪ್ರತಿಪಾದಿಸಲು ಬಯಸುವುದು ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯಾಗಿದೆ. ಮೀಸಲಾತಿಯ ಮೂಲ ಮಾನದಂಡವೆಂದರೆ ಸಾಮಾಜಿಕ ಹಿಂದುಳಿದಿರುವಿಕೆ, ಇದು ಮುಸ್ಲಿಂ ಸಮುದಾಯಕ್ಕೆ ಅನ್ವಯಿಸುತ್ತದೆ. ಸಾಚಾರ್ ಸಮಿತಿ ವರದಿ, ನ್ಯಾಯಮೂರ್ತಿ ರಂಗನಾಥ್ ಮಿಶ್ರಾ ಆಯೋಗದ ವರದಿ ಮುಸ್ಲಿಮರ ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಹಿಂದುಳಿದಿರುವಿಕೆಯನ್ನು ಎತ್ತಿ ತೋರಿಸಿವೆ ಎಂದು ಹೇಳಿದ್ದಾರೆ.

2014ರಲ್ಲಿ ಅಂದಿನ ಕಾಂಗ್ರೆಸ್‌ ಸರಕಾರ ಮರಾಠರಿಗೆ ಶೇ.16ರಷ್ಟು ಮೀಸಲಾತಿ ನೀಡಿತ್ತು. ಮುಸ್ಲಿಮರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ ಶೇ. 5ರಷ್ಟು ಮೀಸಲಾತಿಯನ್ನು ನೀಡಿದೆ. ಬಾಂಬೆ ಹೈಕೋರ್ಟ್ ಉದ್ಯೋಗಗಳಲ್ಲಿ ಮೀಸಲಾತಿಯನ್ನು ಅನುಮೋದಿಸಲಿಲ್ಲ ಆದರೆ ಶಿಕ್ಷಣದಲ್ಲಿ ಮುಸ್ಲಿಮರ ಕೋಟಾವನ್ನು ಎತ್ತಿಹಿಡಿಯಿತು. ದುರದೃಷ್ಟವಶಾತ್ ಸರ್ಕಾರವು ಅದನ್ನು ಜಾರಿಗೆ ವಿಫಲವಾಗಿದೆ ಎಂದು ಹೇಳಿದ್ದಾರೆ.

ಮೌಲಾನಾ ಆಜಾದ್ ವಿಚಾರ ಮಂಚ್ ವತಿಯಿಂದ ನಾವು ಮಹಾರಾಷ್ಟ್ರದಲ್ಲಿ ಪ್ರವಾಸ ಮಾಡುತ್ತೇವೆ ಮತ್ತು ಮುಸ್ಲಿಮರಲ್ಲಿ ತಮ್ಮ ಹಕ್ಕುಗಳಿಗಾಗಿ ಹೋರಾಡಲು ಒಟ್ಟಾಗುಂತೆ ಮತ್ತು ಸಂಘಟಿತರಾಗುವಂತೆ ಮನವಿ ಮಾಡುತ್ತೇವೆ. ನಾವು ಯಾವುದೇ ಹಿಂಸಾಚಾರ ಅಥವಾ ಪ್ರತಿಭಟನೆಗಳನ್ನು ಬಯಸುವುದಿಲ್ಲ. ಆದರೆ ಇದು  ಮುಸ್ಲಿಮರು ಒಗ್ಗೂಡುವ ಮತ್ತು ತಮಗಾಗಿ ಮಾತನಾಡುವ ಸಮಯ ಇದು ಎಂದು ಅವರು ಹೇಳಿದ್ದಾರೆ.

ಶಿಕ್ಷಣ, ಉದ್ಯೋಗ, ಜೀವನ ಮಟ್ಟ ಎಲ್ಲದರಲ್ಲೂ ಮುಸ್ಲಿಮರು ಹಿಂದುಳಿದಿದ್ದಾರೆ. ಮುಸ್ಲಿಮರಲ್ಲಿ ಶಾಲೆ ಬಿಟ್ಟವರ ಪ್ರಮಾಣ ಶೇ.75ರಷ್ಟಿದೆ. 2 ರಿಂದ 2.5 ರಷ್ಟು ಮುಸ್ಲಿಂ ವಿದ್ಯಾರ್ಥಿಗಳು ಮಾತ್ರ ಉನ್ನತ ಶಿಕ್ಷಣವನ್ನು ಪಡೆಯತ್ತಾರೆ. ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರ ಪ್ರಾತಿನಿಧ್ಯವು ಶೇಕಡಾ 2ಕ್ಕಿಂತ ಕಡಿಮೆಯಿದೆ. ಖಾಸಗಿ ಉದ್ಯೋಗಗಳಲ್ಲಿ ಇದು ಶೇ. 3ರಷ್ಟು ಮಾತ್ರ ಇದೆ ಎಂದು ಅವರು ಹೇಳಿದ್ದಾರೆ.

ಕೊಳೆಗೇರಿಗಳಲ್ಲಿ ಹೆಚ್ಚಿನ ಮುಸ್ಲಿಂ ಸಮುದಾಯದ ಜನರು ವಾಸಿಸುತ್ತಿದ್ದಾರೆ. ಸ್ವಾತಂತ್ರ್ಯದ ನಂತರ ಶಿಕ್ಷಣ, ಉದ್ಯೋಗ ಮತ್ತು ಜೀವನೋಪಾಯ ಸೂಚ್ಯಂಕದಲ್ಲಿ ಮುಸ್ಲಿಮರು,  ದಲಿತರು ಮತ್ತು ಬುಡಕಟ್ಟು ಜನಾಂಗದವರಿಗಿಂತ ಕೆಳಗಿರುವುದು ಸತ್ಯ. ದಲಿತರು ಮತ್ತು ಬುಡಕಟ್ಟು ಜನರ ಜೀವನ ಚೆನ್ನಾಗಿದೆ ಎಂದು ನಾನು ಹೇಳುತ್ತಿಲ್ಲ. ನಾನು ಹೇಳಲು ಪ್ರಯತ್ನಿಸುತ್ತಿರುವ ಅಂಶವೆಂದರೆ ದಲಿತರು ಅಥವಾ ಬುಡಕಟ್ಟು ಜನಾಂಗದವರ ಪ್ರಗತಿಗೆ ಹೋಲಿಸಿದರೆ ಮುಸ್ಲಿಮರು ತುಂಬಾ ಕೆಳಮಟ್ಟದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ತಮಿಳುನಾಡು: ಅಂಗಾಂಗ ದಾನ ಮಾಡುವವರಿಗೆ ಸರಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...