Homeಮುಖಪುಟಮೀಸಲಾತಿಗಾಗಿ ಮುಸ್ಲಿಮರು ಒಗ್ಗಟ್ಟಾಗಿ ಹೋರಾಡಬೇಕಿದೆ: ಮಾಜಿ ಸಂಸದ ಹುಸೇನ್ ದಳವಾಯಿ

ಮೀಸಲಾತಿಗಾಗಿ ಮುಸ್ಲಿಮರು ಒಗ್ಗಟ್ಟಾಗಿ ಹೋರಾಡಬೇಕಿದೆ: ಮಾಜಿ ಸಂಸದ ಹುಸೇನ್ ದಳವಾಯಿ

- Advertisement -
- Advertisement -

ಇದು ಮುಸ್ಲಿಮರು ಒಗ್ಗಟ್ಟಾಗುವ ಮತ್ತು ತಮ್ಮ ಮೀಸಲಾತಿ ಕೇಳುವ, ತಮಗಾಗಿ ಮಾತನಾಡುವ ಸಮಯ ಎಂದು ಮೌಲಾನಾ ಆಜಾದ್ ವಿಚಾರ ಮಂಚ್ ಅಧ್ಯಕ್ಷ, ಮಾಜಿ ಕಾಂಗ್ರೆಸ್ ಸಂಸದ ಹುಸೇನ್ ದಳವಾಯಿ ಅವರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ಮರಾಠ, ಒಬಿಸಿ ಪ್ರತಿಭಟನೆಗಳು ನಡೆಯುತ್ತಿರುವಾಗ ಮುಸ್ಲಿಮರಿಗೆ ಮೀಸಲಾತಿಯ ಆಗ್ರವು ಮತ್ತೆ ಭುಗಿಲೆದ್ದಿದೆ. ಶುಭಾಂಗಿ ಖಪ್ರೆ ಅವರೊಂದಿಗಿನ ಸಂದರ್ಶನದಲ್ಲಿ ಮೌಲಾನಾ ಆಜಾದ್ ವಿಚಾರ ಮಂಚ್ ಅಧ್ಯಕ್ಷ, ಮಾಜಿ ಕಾಂಗ್ರೆಸ್ ಸಂಸದ ಹುಸೇನ್ ದಳವಾಯಿ ಅವರು ಮುಸ್ಲಿಂ ಮೀಸಲಾತಿಯ ಬೇಡಿಕೆಯನ್ನು ಇಟ್ಟಿದ್ದಾರೆ.

ಮುಸ್ಲಿಂ ಮೀಸಲಾತಿ ಹೊಸ ವಿಚಾರವಲ್ಲ. ಈ ಹಿಂದೆಯೂ ಮುಸ್ಲಿಂ ಮೀಸಲಾತಿಯ ಆಗ್ರಹ ಕೇಳಿಬಂದಿತ್ತು. ಮೀಸಲಾತಿಯ ಬೇಡಿಕೆಯಲ್ಲಿ ಯಾವುದೇ ಸಮುದಾಯವು ಸಮರ್ಥನೆಯನ್ನು ಹೊಂದಿದ್ದರೆ ಅದು ಮುಸ್ಲಿಮರು ಎಂದು ನಾನು ಹೇಳುತ್ತೇನೆ. ನಾನು ವೈಯಕ್ತಿಕವಾಗಿ ಮರಾಠರ ಮೀಸಲಾತಿ ಬೇಡಿಕೆಯನ್ನು ಬೆಂಬಲಿಸುತ್ತೇನೆ. ಅದೇ ರೀತಿ ಮುಸ್ಲಿಮರಿಗೂ ಕೂಡ ಮೀಸಲಾತಿ ಪಡೆಯುವ ಹಕ್ಕಿದೆ ಎಂದು ಹೇಳಿದ್ದಾರೆ.

ಧರ್ಮದ ಆಧಾರದ ಮೇಲೆ ಮೀಸಲಾತಿ ಅಸಂವಿಧಾನಿಕ ಎಂದು ಬಲಪಂಥೀಯರು ಸಾಮಾನ್ಯವಾಗಿ ಹೇಳುವ ವಾದವಾಗಿದೆ. ಆದರೆ ಇಲ್ಲಿ ವಿಷಯವೆಂದರೆ ನಾವು ಧಾರ್ಮಿಕ ಮಾನದಂಡಗಳ ಆಧಾರದ ಮೇಲೆ ಮುಸ್ಲಿಂ ಮೀಸಲಾತಿಯನ್ನು ಬಯಸುತ್ತಿಲ್ಲ. ನಾವು ಪ್ರತಿಪಾದಿಸಲು ಬಯಸುವುದು ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯಾಗಿದೆ. ಮೀಸಲಾತಿಯ ಮೂಲ ಮಾನದಂಡವೆಂದರೆ ಸಾಮಾಜಿಕ ಹಿಂದುಳಿದಿರುವಿಕೆ, ಇದು ಮುಸ್ಲಿಂ ಸಮುದಾಯಕ್ಕೆ ಅನ್ವಯಿಸುತ್ತದೆ. ಸಾಚಾರ್ ಸಮಿತಿ ವರದಿ, ನ್ಯಾಯಮೂರ್ತಿ ರಂಗನಾಥ್ ಮಿಶ್ರಾ ಆಯೋಗದ ವರದಿ ಮುಸ್ಲಿಮರ ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಹಿಂದುಳಿದಿರುವಿಕೆಯನ್ನು ಎತ್ತಿ ತೋರಿಸಿವೆ ಎಂದು ಹೇಳಿದ್ದಾರೆ.

2014ರಲ್ಲಿ ಅಂದಿನ ಕಾಂಗ್ರೆಸ್‌ ಸರಕಾರ ಮರಾಠರಿಗೆ ಶೇ.16ರಷ್ಟು ಮೀಸಲಾತಿ ನೀಡಿತ್ತು. ಮುಸ್ಲಿಮರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ ಶೇ. 5ರಷ್ಟು ಮೀಸಲಾತಿಯನ್ನು ನೀಡಿದೆ. ಬಾಂಬೆ ಹೈಕೋರ್ಟ್ ಉದ್ಯೋಗಗಳಲ್ಲಿ ಮೀಸಲಾತಿಯನ್ನು ಅನುಮೋದಿಸಲಿಲ್ಲ ಆದರೆ ಶಿಕ್ಷಣದಲ್ಲಿ ಮುಸ್ಲಿಮರ ಕೋಟಾವನ್ನು ಎತ್ತಿಹಿಡಿಯಿತು. ದುರದೃಷ್ಟವಶಾತ್ ಸರ್ಕಾರವು ಅದನ್ನು ಜಾರಿಗೆ ವಿಫಲವಾಗಿದೆ ಎಂದು ಹೇಳಿದ್ದಾರೆ.

ಮೌಲಾನಾ ಆಜಾದ್ ವಿಚಾರ ಮಂಚ್ ವತಿಯಿಂದ ನಾವು ಮಹಾರಾಷ್ಟ್ರದಲ್ಲಿ ಪ್ರವಾಸ ಮಾಡುತ್ತೇವೆ ಮತ್ತು ಮುಸ್ಲಿಮರಲ್ಲಿ ತಮ್ಮ ಹಕ್ಕುಗಳಿಗಾಗಿ ಹೋರಾಡಲು ಒಟ್ಟಾಗುಂತೆ ಮತ್ತು ಸಂಘಟಿತರಾಗುವಂತೆ ಮನವಿ ಮಾಡುತ್ತೇವೆ. ನಾವು ಯಾವುದೇ ಹಿಂಸಾಚಾರ ಅಥವಾ ಪ್ರತಿಭಟನೆಗಳನ್ನು ಬಯಸುವುದಿಲ್ಲ. ಆದರೆ ಇದು  ಮುಸ್ಲಿಮರು ಒಗ್ಗೂಡುವ ಮತ್ತು ತಮಗಾಗಿ ಮಾತನಾಡುವ ಸಮಯ ಇದು ಎಂದು ಅವರು ಹೇಳಿದ್ದಾರೆ.

ಶಿಕ್ಷಣ, ಉದ್ಯೋಗ, ಜೀವನ ಮಟ್ಟ ಎಲ್ಲದರಲ್ಲೂ ಮುಸ್ಲಿಮರು ಹಿಂದುಳಿದಿದ್ದಾರೆ. ಮುಸ್ಲಿಮರಲ್ಲಿ ಶಾಲೆ ಬಿಟ್ಟವರ ಪ್ರಮಾಣ ಶೇ.75ರಷ್ಟಿದೆ. 2 ರಿಂದ 2.5 ರಷ್ಟು ಮುಸ್ಲಿಂ ವಿದ್ಯಾರ್ಥಿಗಳು ಮಾತ್ರ ಉನ್ನತ ಶಿಕ್ಷಣವನ್ನು ಪಡೆಯತ್ತಾರೆ. ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರ ಪ್ರಾತಿನಿಧ್ಯವು ಶೇಕಡಾ 2ಕ್ಕಿಂತ ಕಡಿಮೆಯಿದೆ. ಖಾಸಗಿ ಉದ್ಯೋಗಗಳಲ್ಲಿ ಇದು ಶೇ. 3ರಷ್ಟು ಮಾತ್ರ ಇದೆ ಎಂದು ಅವರು ಹೇಳಿದ್ದಾರೆ.

ಕೊಳೆಗೇರಿಗಳಲ್ಲಿ ಹೆಚ್ಚಿನ ಮುಸ್ಲಿಂ ಸಮುದಾಯದ ಜನರು ವಾಸಿಸುತ್ತಿದ್ದಾರೆ. ಸ್ವಾತಂತ್ರ್ಯದ ನಂತರ ಶಿಕ್ಷಣ, ಉದ್ಯೋಗ ಮತ್ತು ಜೀವನೋಪಾಯ ಸೂಚ್ಯಂಕದಲ್ಲಿ ಮುಸ್ಲಿಮರು,  ದಲಿತರು ಮತ್ತು ಬುಡಕಟ್ಟು ಜನಾಂಗದವರಿಗಿಂತ ಕೆಳಗಿರುವುದು ಸತ್ಯ. ದಲಿತರು ಮತ್ತು ಬುಡಕಟ್ಟು ಜನರ ಜೀವನ ಚೆನ್ನಾಗಿದೆ ಎಂದು ನಾನು ಹೇಳುತ್ತಿಲ್ಲ. ನಾನು ಹೇಳಲು ಪ್ರಯತ್ನಿಸುತ್ತಿರುವ ಅಂಶವೆಂದರೆ ದಲಿತರು ಅಥವಾ ಬುಡಕಟ್ಟು ಜನಾಂಗದವರ ಪ್ರಗತಿಗೆ ಹೋಲಿಸಿದರೆ ಮುಸ್ಲಿಮರು ತುಂಬಾ ಕೆಳಮಟ್ಟದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ತಮಿಳುನಾಡು: ಅಂಗಾಂಗ ದಾನ ಮಾಡುವವರಿಗೆ ಸರಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...