Homeಮುಖಪುಟಮೀಸಲಾತಿಗಾಗಿ ಮುಸ್ಲಿಮರು ಒಗ್ಗಟ್ಟಾಗಿ ಹೋರಾಡಬೇಕಿದೆ: ಮಾಜಿ ಸಂಸದ ಹುಸೇನ್ ದಳವಾಯಿ

ಮೀಸಲಾತಿಗಾಗಿ ಮುಸ್ಲಿಮರು ಒಗ್ಗಟ್ಟಾಗಿ ಹೋರಾಡಬೇಕಿದೆ: ಮಾಜಿ ಸಂಸದ ಹುಸೇನ್ ದಳವಾಯಿ

- Advertisement -
- Advertisement -

ಇದು ಮುಸ್ಲಿಮರು ಒಗ್ಗಟ್ಟಾಗುವ ಮತ್ತು ತಮ್ಮ ಮೀಸಲಾತಿ ಕೇಳುವ, ತಮಗಾಗಿ ಮಾತನಾಡುವ ಸಮಯ ಎಂದು ಮೌಲಾನಾ ಆಜಾದ್ ವಿಚಾರ ಮಂಚ್ ಅಧ್ಯಕ್ಷ, ಮಾಜಿ ಕಾಂಗ್ರೆಸ್ ಸಂಸದ ಹುಸೇನ್ ದಳವಾಯಿ ಅವರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ಮರಾಠ, ಒಬಿಸಿ ಪ್ರತಿಭಟನೆಗಳು ನಡೆಯುತ್ತಿರುವಾಗ ಮುಸ್ಲಿಮರಿಗೆ ಮೀಸಲಾತಿಯ ಆಗ್ರವು ಮತ್ತೆ ಭುಗಿಲೆದ್ದಿದೆ. ಶುಭಾಂಗಿ ಖಪ್ರೆ ಅವರೊಂದಿಗಿನ ಸಂದರ್ಶನದಲ್ಲಿ ಮೌಲಾನಾ ಆಜಾದ್ ವಿಚಾರ ಮಂಚ್ ಅಧ್ಯಕ್ಷ, ಮಾಜಿ ಕಾಂಗ್ರೆಸ್ ಸಂಸದ ಹುಸೇನ್ ದಳವಾಯಿ ಅವರು ಮುಸ್ಲಿಂ ಮೀಸಲಾತಿಯ ಬೇಡಿಕೆಯನ್ನು ಇಟ್ಟಿದ್ದಾರೆ.

ಮುಸ್ಲಿಂ ಮೀಸಲಾತಿ ಹೊಸ ವಿಚಾರವಲ್ಲ. ಈ ಹಿಂದೆಯೂ ಮುಸ್ಲಿಂ ಮೀಸಲಾತಿಯ ಆಗ್ರಹ ಕೇಳಿಬಂದಿತ್ತು. ಮೀಸಲಾತಿಯ ಬೇಡಿಕೆಯಲ್ಲಿ ಯಾವುದೇ ಸಮುದಾಯವು ಸಮರ್ಥನೆಯನ್ನು ಹೊಂದಿದ್ದರೆ ಅದು ಮುಸ್ಲಿಮರು ಎಂದು ನಾನು ಹೇಳುತ್ತೇನೆ. ನಾನು ವೈಯಕ್ತಿಕವಾಗಿ ಮರಾಠರ ಮೀಸಲಾತಿ ಬೇಡಿಕೆಯನ್ನು ಬೆಂಬಲಿಸುತ್ತೇನೆ. ಅದೇ ರೀತಿ ಮುಸ್ಲಿಮರಿಗೂ ಕೂಡ ಮೀಸಲಾತಿ ಪಡೆಯುವ ಹಕ್ಕಿದೆ ಎಂದು ಹೇಳಿದ್ದಾರೆ.

ಧರ್ಮದ ಆಧಾರದ ಮೇಲೆ ಮೀಸಲಾತಿ ಅಸಂವಿಧಾನಿಕ ಎಂದು ಬಲಪಂಥೀಯರು ಸಾಮಾನ್ಯವಾಗಿ ಹೇಳುವ ವಾದವಾಗಿದೆ. ಆದರೆ ಇಲ್ಲಿ ವಿಷಯವೆಂದರೆ ನಾವು ಧಾರ್ಮಿಕ ಮಾನದಂಡಗಳ ಆಧಾರದ ಮೇಲೆ ಮುಸ್ಲಿಂ ಮೀಸಲಾತಿಯನ್ನು ಬಯಸುತ್ತಿಲ್ಲ. ನಾವು ಪ್ರತಿಪಾದಿಸಲು ಬಯಸುವುದು ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯಾಗಿದೆ. ಮೀಸಲಾತಿಯ ಮೂಲ ಮಾನದಂಡವೆಂದರೆ ಸಾಮಾಜಿಕ ಹಿಂದುಳಿದಿರುವಿಕೆ, ಇದು ಮುಸ್ಲಿಂ ಸಮುದಾಯಕ್ಕೆ ಅನ್ವಯಿಸುತ್ತದೆ. ಸಾಚಾರ್ ಸಮಿತಿ ವರದಿ, ನ್ಯಾಯಮೂರ್ತಿ ರಂಗನಾಥ್ ಮಿಶ್ರಾ ಆಯೋಗದ ವರದಿ ಮುಸ್ಲಿಮರ ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಹಿಂದುಳಿದಿರುವಿಕೆಯನ್ನು ಎತ್ತಿ ತೋರಿಸಿವೆ ಎಂದು ಹೇಳಿದ್ದಾರೆ.

2014ರಲ್ಲಿ ಅಂದಿನ ಕಾಂಗ್ರೆಸ್‌ ಸರಕಾರ ಮರಾಠರಿಗೆ ಶೇ.16ರಷ್ಟು ಮೀಸಲಾತಿ ನೀಡಿತ್ತು. ಮುಸ್ಲಿಮರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ ಶೇ. 5ರಷ್ಟು ಮೀಸಲಾತಿಯನ್ನು ನೀಡಿದೆ. ಬಾಂಬೆ ಹೈಕೋರ್ಟ್ ಉದ್ಯೋಗಗಳಲ್ಲಿ ಮೀಸಲಾತಿಯನ್ನು ಅನುಮೋದಿಸಲಿಲ್ಲ ಆದರೆ ಶಿಕ್ಷಣದಲ್ಲಿ ಮುಸ್ಲಿಮರ ಕೋಟಾವನ್ನು ಎತ್ತಿಹಿಡಿಯಿತು. ದುರದೃಷ್ಟವಶಾತ್ ಸರ್ಕಾರವು ಅದನ್ನು ಜಾರಿಗೆ ವಿಫಲವಾಗಿದೆ ಎಂದು ಹೇಳಿದ್ದಾರೆ.

ಮೌಲಾನಾ ಆಜಾದ್ ವಿಚಾರ ಮಂಚ್ ವತಿಯಿಂದ ನಾವು ಮಹಾರಾಷ್ಟ್ರದಲ್ಲಿ ಪ್ರವಾಸ ಮಾಡುತ್ತೇವೆ ಮತ್ತು ಮುಸ್ಲಿಮರಲ್ಲಿ ತಮ್ಮ ಹಕ್ಕುಗಳಿಗಾಗಿ ಹೋರಾಡಲು ಒಟ್ಟಾಗುಂತೆ ಮತ್ತು ಸಂಘಟಿತರಾಗುವಂತೆ ಮನವಿ ಮಾಡುತ್ತೇವೆ. ನಾವು ಯಾವುದೇ ಹಿಂಸಾಚಾರ ಅಥವಾ ಪ್ರತಿಭಟನೆಗಳನ್ನು ಬಯಸುವುದಿಲ್ಲ. ಆದರೆ ಇದು  ಮುಸ್ಲಿಮರು ಒಗ್ಗೂಡುವ ಮತ್ತು ತಮಗಾಗಿ ಮಾತನಾಡುವ ಸಮಯ ಇದು ಎಂದು ಅವರು ಹೇಳಿದ್ದಾರೆ.

ಶಿಕ್ಷಣ, ಉದ್ಯೋಗ, ಜೀವನ ಮಟ್ಟ ಎಲ್ಲದರಲ್ಲೂ ಮುಸ್ಲಿಮರು ಹಿಂದುಳಿದಿದ್ದಾರೆ. ಮುಸ್ಲಿಮರಲ್ಲಿ ಶಾಲೆ ಬಿಟ್ಟವರ ಪ್ರಮಾಣ ಶೇ.75ರಷ್ಟಿದೆ. 2 ರಿಂದ 2.5 ರಷ್ಟು ಮುಸ್ಲಿಂ ವಿದ್ಯಾರ್ಥಿಗಳು ಮಾತ್ರ ಉನ್ನತ ಶಿಕ್ಷಣವನ್ನು ಪಡೆಯತ್ತಾರೆ. ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರ ಪ್ರಾತಿನಿಧ್ಯವು ಶೇಕಡಾ 2ಕ್ಕಿಂತ ಕಡಿಮೆಯಿದೆ. ಖಾಸಗಿ ಉದ್ಯೋಗಗಳಲ್ಲಿ ಇದು ಶೇ. 3ರಷ್ಟು ಮಾತ್ರ ಇದೆ ಎಂದು ಅವರು ಹೇಳಿದ್ದಾರೆ.

ಕೊಳೆಗೇರಿಗಳಲ್ಲಿ ಹೆಚ್ಚಿನ ಮುಸ್ಲಿಂ ಸಮುದಾಯದ ಜನರು ವಾಸಿಸುತ್ತಿದ್ದಾರೆ. ಸ್ವಾತಂತ್ರ್ಯದ ನಂತರ ಶಿಕ್ಷಣ, ಉದ್ಯೋಗ ಮತ್ತು ಜೀವನೋಪಾಯ ಸೂಚ್ಯಂಕದಲ್ಲಿ ಮುಸ್ಲಿಮರು,  ದಲಿತರು ಮತ್ತು ಬುಡಕಟ್ಟು ಜನಾಂಗದವರಿಗಿಂತ ಕೆಳಗಿರುವುದು ಸತ್ಯ. ದಲಿತರು ಮತ್ತು ಬುಡಕಟ್ಟು ಜನರ ಜೀವನ ಚೆನ್ನಾಗಿದೆ ಎಂದು ನಾನು ಹೇಳುತ್ತಿಲ್ಲ. ನಾನು ಹೇಳಲು ಪ್ರಯತ್ನಿಸುತ್ತಿರುವ ಅಂಶವೆಂದರೆ ದಲಿತರು ಅಥವಾ ಬುಡಕಟ್ಟು ಜನಾಂಗದವರ ಪ್ರಗತಿಗೆ ಹೋಲಿಸಿದರೆ ಮುಸ್ಲಿಮರು ತುಂಬಾ ಕೆಳಮಟ್ಟದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ತಮಿಳುನಾಡು: ಅಂಗಾಂಗ ದಾನ ಮಾಡುವವರಿಗೆ ಸರಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...