Homeಮುಖಪುಟಬ್ರಿಜ್ ಭೂಷಣ್ ಸಿಕ್ಕ ಅವಕಾಶದಲ್ಲಿ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು: ಕೋರ್ಟ್‌ಗೆ ತಿಳಿಸಿದ ದೆಹಲಿ ಪೊಲೀಸರು

ಬ್ರಿಜ್ ಭೂಷಣ್ ಸಿಕ್ಕ ಅವಕಾಶದಲ್ಲಿ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು: ಕೋರ್ಟ್‌ಗೆ ತಿಳಿಸಿದ ದೆಹಲಿ ಪೊಲೀಸರು

- Advertisement -
- Advertisement -

ಭಾರತೀಯ ಕುಸ್ತಿ ಒಕ್ಕೂಟದ ನಿರ್ಗಮನ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಸಿಕ್ಕ ಪ್ರತಿ ಅವಕಾಶದಲ್ಲೂ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ದೆಹಲಿ ಪೊಲೀಸರು ಶನಿವಾರ ಸ್ಥಳೀಯ ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇಂಡಿಯಾ ಟುಡೇ ಪ್ರಕಾರ, ದೆಹಲಿ ಪೊಲೀಸರನ್ನು ಪ್ರತಿನಿಧಿಸುವ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಶ್ರೀವಾಸ್ತವ ಅವರು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರ ಪೀಠದ ಮುಂದೆ ಈ ಮಹತ್ವದ ಹೇಳಿಕೆ ನೀಡಿದ್ದು, ಸಿಂಗ್ ಅವರಿಗೆ ಅವರು ಉದ್ದೇಶಪೂರ್ವಕವಾಗಿಯೇ ಈ ರೀತಿ ಮಾಡುತ್ತಿದ್ದರು ಎಂದು ಹೇಳಿದ್ದಾರೆ.

ಮಹಿಳಾ ಕುಸ್ತಿಪಟು ನೀಡಿದ ದೂರನ್ನು ಉಲ್ಲೇಖಿಸಿದ ವಕೀಲರು, ತಜಕಿಸ್ತಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿಂಗ್ ಅವರು  ಮಹಿಳಾ ಕುಸ್ತಿಪಟುವನ್ನು ಕೋಣೆಗೆ ಕರೆದು ಬಲವಂತವಾಗಿ ತಬ್ಬಿಕೊಂಡಿದ್ದರು. ಇದಕ್ಕೆ ಆಕೆ ವಿರೋಧಿಸಿದಾಗ ಕುಸ್ತಿಪಟುವಿಗೆ  ನಾನು ನಿನ್ನ ‘ಅಪ್ಪನಂತೆ’ ಅದಕ್ಕಾಗಿ ಈ ರೀತಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ಈ ಘಟನೆ ನೋಡಿದರೆ ಅವರು ಉದ್ದೇಶಪೂರ್ವಕವಾಗಿಯೇ ಮಾಡಿದ್ದಾರೆಂದು ಸ್ಪಷ್ಟವಾಗಿ ತಿಳಿದು ಬರುತ್ತದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಉತ್ತರ ಪ್ರದೇಶದ ಭಾರತೀಯ ಜನತಾ ಪಕ್ಷದ ಸಂಸದ ಸಿಂಗ್ ವಿರುದ್ಧ ಆರು ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.

ಕನಿಷ್ಠ ಎರಡು ಸಂದರ್ಭಗಳಲ್ಲಿ ಕ್ರೀಡೆಗೆ ಸಂಬಂಧಿಸಿದ ಸಹಾಯ ಮಾಡಲು ಸಿಂಗ್ ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ದೂರುದಾರ ಕ್ರೀಡಾಪಟುಗಳು ಲೈಂಗಿಕ ಕಿರುಕುಳದ 15 ಘಟನೆಗಳನ್ನು ಕೂಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಮತ್ತು ಎರಡು ಬಾರಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಭಾರತದ ಅಗ್ರ ಕುಸ್ತಿಪಟುಗಳು ಜನವರಿಯಲ್ಲಿ ಸಿಂಗ್ ವಿರುದ್ಧ ಮೊದಲು ಪ್ರತಿಭಟನೆಯನ್ನು ಪ್ರಾರಂಭಿಸಿದ್ದರು. ಆರೋಪಗಳ ತನಿಖೆಗಾಗಿ ರಚಿಸಲಾಗಿದ್ದ ಮೇಲ್ವಿಚಾರಣಾ ಸಮಿತಿಯು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಏಪ್ರಿಲ್‌ನಲ್ಲಿ ಪ್ರತಿಭಟನೆ ಪುನರಾರಂಭಿಸಿದ್ದರು.

ಏಪ್ರಿಲ್‌ನಲ್ಲಿ ಸುಪ್ರೀಂ ಕೋರ್ಟ್ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ ನಂತರ ದೆಹಲಿ ಪೊಲೀಸರು ಸಿಂಗ್ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಿದ್ದಾರೆ. ಜೂನ್ 15 ರಂದು ಸಿಂಗ್ ವಿರುದ್ಧ 1,000 ಪುಟಗಳ ಆರೋಪಪಟ್ಟಿ ಸಲ್ಲಿಸಲಾಗಿತ್ತು.

ಆಗಸ್ಟ್‌ನಲ್ಲಿ ನಡೆದ ಪ್ರಕರಣದ ಹಿಂದಿನ ವಿಚಾರಣೆಯ ಸಂದರ್ಭದಲ್ಲಿ, ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಿಂಗ್ ಮತ್ತು ಅವರ ಅಮಾನತುಗೊಂಡ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರನ್ನು ವಿಚಾರಣೆಗೆ ಒಳಪಡಿಸಲು ಸಾಕಷ್ಟು ಪುರಾವೆಗಳಿವೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಆದರೆ ಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯನ್ನು ಅಪ್ಪಿಕೊಳ್ಳುವುದು ಅಥವಾ ಸ್ಪರ್ಶಿಸುವುದು ಅಪರಾಧವಲ್ಲ ಎಂದು ಭೂಷಣ್ ನ್ಯಾಯಾಲಯಕ್ಕೆ ತಿಳಿಸಿದ್ದರು. ಪ್ರಕರಣದ  ಕುರಿತು ಕೋರ್ಟ್ ಅಕ್ಟೋಬರ್ 7 ರಂದು ಮುಂದಿನ ವಿಚಾರಣೆ ನಡೆಸಲಿದೆ.

ಇದನ್ನು ಓದಿ: ‘ದಿ ವೈರ್’ ಸಂಪಾದಕರಿಂದ ವಶಪಡಿಸಿಕೊಂಡ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ಹಿಂತಿರುಗಿಸಲು ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...