Homeಮುಖಪುಟದ್ವೇಷ, ಯುದ್ಧ, ಪ್ರೀತಿ ಮತ್ತು ಮಳೆ : ಬಿಫೋರ್ ದ ರೇನ್ ಎಂಬ ಕಲಾಕೃತಿ

ದ್ವೇಷ, ಯುದ್ಧ, ಪ್ರೀತಿ ಮತ್ತು ಮಳೆ : ಬಿಫೋರ್ ದ ರೇನ್ ಎಂಬ ಕಲಾಕೃತಿ

- Advertisement -
- Advertisement -

“Time never dies, circle is not round”
ಸಿನೆಮಾ ರಚಿಸುವಲ್ಲಿ ಜಕ್ಸ್ಟಾಪೊಜಿಷನ್ (juxtaposition) ಎನ್ನುವ ಪದಕ್ಕೆ ತುಂಬಾ ಮಹತ್ವವಿದೆ. ಒಂದು ದೃಶ್ಯದ ನಂತರ ಇನ್ನೊಂದು ದೃಶ್ಯ, ಒಂದು ಶಾಟ್ ನಂತರ ಇನ್ನೊಂದು ದೃಶ್ಯ; ಈ ದೃಶ್ಯಗಳ ಸರಣಿಗಳೇ ಒಂದು ಕಥೆಯನ್ನು ಹೇಳುತ್ತವೆ. ಮೊದಲು ಬರುವ ದೃಶ್ಯ/ಶಾಟ್ ಮುಂದೆ ಬರುವ ದೃಶ್ಯ/ಶಾಟ್‍ಗೆ ಯಾವ ರೀತಿಯ ಸಂಬಂಧ ಹೊಂದಿರಬೇಕು? ಮುಂದಿನ ಶಾಟ್ ಕಥೆಯನ್ನು ಮುಂದುವರೆಸಲೇಬೇಕೆ? ನೇರಾನೇರ ಸಂಬಂಧ ಹೊಂದಿರಲೇಬೇಕೆ? ಇಲ್ಲಿ ನಾನು ಐಸೆನ್‍ಸ್ಟೇನ್ ಅವರ ಮೊಂಟಾಜ್ ಥಿಯರಿಯ ಬಗ್ಗೆ ಹೇಳುತ್ತಿಲ್ಲ. (ಮೋಂಟಾಜ್ ಥಿಯರಿಯ ಬಗ್ಗೆ ಇನ್ನೊಂದು ಕಡೆ ಬರೆದಿದ್ದೇನೆ.) ಕಥೆಯೊಂದು ಹಿಂದಿನಿಂದ ಮುಂದಕ್ಕೆ ಹೋಗಲೇಬೇಕೆ?

ನಮ್ಮ ಜೀವನದ ಕಥೆಯನ್ನು ನೆನಪಿಸಿಕೊಳ್ಳುವ. ಮೊದಲು ಯಾವ ಚಿತ್ರಗಳು ಕಣ್ಣುಮುಂದೆ ಮೂಡುತ್ತವೆ? ತುಂಬಾ ಮಹತ್ವದ ಸಂಗತಿಗಳೇ? ಮಹತ್ವವಲ್ಲದ ಸಂಗತಿಗಳೇ? ನಮ್ಮ ಜೀವನದಲ್ಲಿ ಏನೂ ಪರಿಣಾಮ ಬೀರದ ಒಂದು ಯಾವುದೋ ಚಿತ್ರವು ಮೂಡಿಬರುವುದೇ? ಯಾವ ಶಬ್ದಗಳು ನೆನಪಿನಲ್ಲಿಳಿದಿವೆ? ಯಾವ ಪದಗಳು? ಯಾವೆಲ್ಲ ವಾಸನೆಗಳು? ಎಲ್ಲದಕ್ಕೂ ಒಂದಲ್ಲ ಒಂದು ರೀತಿಯಲ್ಲಿ ಸಂಬಂಧವಿದೆಯೇ? ಸಂಬಂಧ ಕಾಣಿಸಿಕೊಳ್ಳದಿದ್ದರೂ ಯಾವುದೋ ಒಂದು ಸಂಬಂಧ ಇರಲೇಬೇಕಲ್ಲವೇ? ಯಾವುದೀ ಸಂಬಂಧ? ಯಾವುದೀ ಕಥೆ?

ಇನ್ನು ನಮ್ಮ ಸಮಾಜದ ಕಥೆಯನ್ನು ಅದೇ ರೀತಿ ಪರಿಶೀಲಿಸುವ. ಹೇಗೆ ರೂಪುಗೊಂಡಿತು ಈ ಸಮಾಜ, ಈ ದೇಶ? ಯುದ್ಧದಿಂದಲೋ, ಶಾಂತಿಯಿಂದಲೋ? ಬಲಿದಾನದಿಂದಲೋ? ಸ್ವಾರ್ಥದಿಂದಲೋ? ಇಂದು ಆಗುವ ಘಟನೆಗೂ ಮೊನ್ನೆ ಆದ ಘಟನೆಗೂ ನೂರಾರು ವರ್ಷ ಹಿಂದೆ ಎಲ್ಲೋ ಆದ ಘಟನೆಗೂ ಯಾವುದೇ ಸಂಬಂಧವಿದೆಯೇ? ಆ ಘಟನೆ ಇಂದು ಆದ ಘಟನೆಗೆ ಕಾರಣವಾಗಿದೆಯೇ? ಏನೆಲ್ಲ ಮಾಡಿದರೂ ಇತಿಹಾಸ ಮರುಕಳಿಸುತ್ತೆ ಎನ್ನುತ್ತಾರೆ, ಅದು ನಿಜವೇ? ಸಮಾಜದ ಆಗುಹೋಗುಗಳಲ್ಲಿ ಒಬ್ಬ ವ್ಯಕ್ತಿ ಎಂತಹ ಪಾತ್ರ ವಹಿಸುತ್ತಾನೆ? ಅವಳು ಅಥವಾ ಅವಳು ಪರಿಣಾಮಕಾರಿಯಾದ ಪಾತ್ರ ವಹಿಸಬಲ್ಲಳೇ? ಒಂದು ಪಾತ್ರ ವಹಿಸಬಲ್ಲಳು ಎನ್ನುವ ನಂಬಿಕೆ ಹುಸಿಯಾದರೆ?

ಇನ್ನು ದ್ವೇಷ ಮತ್ತು ಅದರೊಂದಿಗೆ ಬರುವ ಕಲಹ, ಯುದ್ಧಗಳಿಗೆ ಅರ್ಥವಿದೆಯೇ? ಇತಿಹಾಸದಿಂದ ನಾವು ಏನನ್ನೂ ಕಲಿಯುವುದೇ ಇಲ್ಲವೇ?
1994 ರಲ್ಲಿ ಬಿಡುಗಡೆಯಾದ ಚಿತ್ರ ಬಿಫೋರ್ ದ ರೇನ್ ಎನ್ನುವ ಚಿತ್ರ ಈ ಎಲ್ಲ ಪ್ರಶ್ನೆಗಳನ್ನು ಹುಟ್ಟುಹಾಕುತ್ತೆ ಎಂದು ಹೇಳಲಾಗುವುದಿಲ್ಲ. ಆದರೆ ಇಂತಹ ಅನೇಕ ಪ್ರಶ್ನೆಗಳು ಮೂಡುವುದಂತೂ ನಿಜ.

ಈ ಚಿತ್ರವನ್ನು ಮೂರು ಭಾಗಗಳಲ್ಲಿ ವಿಂಗಡಿಸಲಾಗಿದೆ; ಪದಗಳು (words), ಚಿತ್ರಗಳು (pictures) ಮತ್ತು ಚಹರೆಗಳು (faces). ಕೆಲವು ಮಕ್ಕಳು ಆಟವಾಡುತ್ತ ಒಂದು ಆಮೆಯನ್ನು ಒಂದು ಕಡೆ ಇರಿಸಿ, ಅದರ ಸುತ್ತಲೂ ಕಟ್ಟಿಗೆಗಳನ್ನಿಟ್ಟು, ಆ ಕಟ್ಟಿಗೆಗಳಿಗೆ ಬೆಂಕಿ ಹಚ್ಚುತ್ತಾರೆ. ಆಗ ಒಬ್ಬ ಬಾಲಕ ತನ್ನಲ್ಲಿದ್ದು ಜೀವಂತ ಗುಂಡುಗಳನ್ನು ಆ ಬೆಂಕಿಯಲ್ಲಿ ಹಾಕುತ್ತಾನೆ. ಆಮೆ ಸುಟ್ಟುಕರಕಲಾಗುತ್ತದೆ. ಈ ಮಕ್ಕಳ ಆಟದೊಂದಿಗೆ ಎರಡು ವರ್ಷಗಳಿಂದ ಮೌನವ್ರತ ಪಾಲಿಸುತ್ತಿರುವ ಒಬ್ಬ ಯುವ ಪಾದ್ರಿಯ ಕಥೆ ತೋರಿಸಲಾಗುತ್ತದೆ. ಒಬ್ಬ ಹದಿವಯಸ್ಸಿನ ಬಾಲಕಿ ಈ ಪಾದ್ರಿಯ ಕೊಠಡಿಯನ್ನು ಸೇರಿಕೊಳ್ಳುತ್ತಾಳೆ. ಅವಳನ್ನು ಹುಡುಕುತ್ತ ಗನ್‍ಗಳನ್ನು ಹಿಡಿದುಕೊಂಡು ಕೆಲವರು ಬರುವರು. ಅವಳು ಯಾರು, ಅವಳನ್ನು ಇವರೇಕೆ ಹುಡುಕುತ್ತಿದ್ದಾರೆ ಎನ್ನುವುದು ನಂತರ ತಿಳಿಯುತ್ತೆ.

ಎರಡನೇ ಭಾಗದಲ್ಲಿ ಅಲೆಕ್ಸಾಂಡರ್ ಕಿರ್ಕೊವ್ ಎನ್ನುವ ಯುದ್ಧಗಳನ್ನು ಕವರ್ ಮಾಡುವ ಛಾಯಾಚಿತ್ರಗ್ರಾಹಕ ಮತ್ತು ಅವನ ಗೆಳತಿ ಆ್ಯನ್‍ನ ಕಥೆಗೆ ಬರುತ್ತೇವೆ. ಆ್ಯನ್ ತನ್ನ ಗಂಡನನ್ನು ಬಿಟ್ಟು ಅಲೆಕ್ಸಾಂಡರ್ ಜೊತೆಗೆ ಹೋಗಬೇಕೆನ್ನುವ ಬಯಕೆ, ಗೊಂದಲದಲ್ಲಿದ್ದಾಳೆ. ಅಲೆಕ್ಸಾಂಡರ್ ಯಾವುದೋ ದ್ವಂದ್ವದಲ್ಲಿದ್ದಾನೆ. ತನ್ನ ತವರು ದೇಶ, ಮತ್ತು ಇತರ ಕಡೆ ನಡೆಯುತ್ತಿರುವ ಯುದ್ಧ, ತನ್ನ ಕಾರಣದಿಂದಾದ ಸಾವಿನಿಂದ ತಪ್ಪಿತಸ್ಥ ಭಾವನೆಯಿಂದ ಬಳಲುತ್ತಿದ್ದಾನೆ. ಈ ಕಥೆಯೂ ಕೊನೆಗೊಳ್ಳುವುದು ಒಂದು ದುರಂತದಿಂದಲೇ.

ಮೂರನೇ ಭಾಗದಲ್ಲಿ ಅಲೆಕ್ಸಾಂಡರ್‍ನೊಂದಿಗೆ ಮತ್ತೇ ಮೆಸಿಡೋನಿಯಾ ದೇಶದ ಅಂತಃಕಲಹಕ್ಕೆ ಮರಳುತ್ತೇವೆ. ಅಲೆಕ್ಸಾಂಡರ್ ತನ್ನ ಹುಟ್ಟೂರಿಗೆ ಯಾವ ಕಾರಣಕ್ಕೆ ಬಂದನು ಎನ್ನುವುದು ತಿಳಿಯುವುದಿಲ್ಲ. ಅಲ್ಲಿ ತನ್ನ ಸಂಬಂಧಿಕರು, ತನ್ನ ಸಂಬಂಧಿಕರೊಂದಿಗೆ ದ್ವೇಷ ಸಾಧಿಸುತ್ತಿರುವ ಇನ್ನೊಂದು ಧರ್ಮದವರು ಇರುವ ಇನ್ನೊಂದೂರಿನಲ್ಲಿ ತನ್ನ ಗೆಳತಿ ಮತ್ತು ಅವರ ಕುಟುಂಬದವರನ್ನು ಭೇಟಿ ಆಗಬೇಕಿದೆ. ಅಂತರ್ ಯುದ್ಧದಿಂದ ಬಳಲುತ್ತಿರುವ ಈ ಪ್ರದೇಶದಲ್ಲಿ ಪ್ರೀತಿ, ಕರಳು ಸಂಬಂಧಕ್ಕಿಂತ ದ್ವೇಷವೇ ಮೇಲುಗೈ ಸಾಧಿಸಿದೆ. ಅಲ್ಲಿ ಇವನು ಸಾಧಿಸುವುದಾದರೂ ಏನು? ಸಾಧಿಸುವುದಕ್ಕಾಗಿ ಬಂದಿದ್ದಾನೆಯೇ? ಮರಳಿ ಮೌನವ್ರತ ಆಚರಿಸುತ್ತಿದ್ದ ಪಾದ್ರಿಗೆ ಆ ಬಾಲಕಿ ಭೇಟಿಯಾಗುವುದಕ್ಕೂ ಮುಂಚಿನ ಕಥೆಯನ್ನು ಹೇಳಲಾಗುತ್ತದೆ. ಆಗ ಸರ್ಕಲ್ ಈಸ್ ನಾಟ್ ರೌಂಡ್ ಎನ್ನುವ ವಾಕ್ಯಕ್ಕೆ ಅರ್ಥಬರುತ್ತೆ.

ದ್ವೇಷಕ್ಕಾಗಿ ತಮ್ಮ ಪ್ರೀತಪಾತ್ರರನ್ನೇ ಕೊಲ್ಲುವ ಪ್ರವೃತ್ತಿಗೆ ಕಾರಣಗಳನ್ನು ಈ ಚಿತ್ರ ಹುಡುಕುವುದಿಲ್ಲ. ಹದಗೆಟ್ಟಿರುವ ಪರಿಸ್ಥಿತಿಯ ಭಾಗಶಃ ಚಿತ್ರಣವನ್ನು ಮಾತ್ರ ನೀಡಲಾಗುತ್ತದೆ. ಇಂತಹ ಒಂದು ಪರಿಸ್ಥಿತಿಯಲ್ಲೂ ಪ್ರೀತಿ ಹುಟ್ಟಬಲ್ಲದೇ, ಇರುವ ಪ್ರೀತಿ ಮುಂದುವರೆಯುವುದೇ? ಆಳವಾದ ಪ್ರೀತಿ, ಉತ್ಕಟವಾದ ಬಯಕೆಯನ್ನು ಹತ್ತಿಕ್ಕಲು ಸಾಧ್ಯವಾಗದೇ ಇರಬಹುದು, ಆದರೆ ಪ್ರೀತಿಸುವವರನ್ನೇ ಹತ್ತಿಕ್ಕಿದರೆ ಪ್ರೀತಿಯನ್ನೂ ಕೊಂದಂತೆಯೇ?

ಎಷ್ಟಾದರೂ ಇದೊಂದು ಸಿನೆಮಾ, ಒಂದು ಚಿತ್ರಕ್ಕೆ ಇರಬೇಕಾದ ಸ್ಟ್ರಕ್ಚರ್‍ ಅನ್ನು ಪಾಲಿಸದೇ, ಸ್ವಾತಂತ್ರವನ್ನು ಬಳಸಿ ಯುದ್ಧ ಮತ್ತು ಪ್ರೀತಿಯ ಕಥೆಯನ್ನು ಹೆಣೆದಿರುವ ಈ ಚಿತ್ರ ಒಂದು ಅದ್ಭುತ ಕಲಾಕೃತಿ. ಈ ಚಿತ್ರದ ಹಿನ್ನೆಲೆ ಸಂಗೀತ (ಅತ್ಯಂತ ಮಿತವಾಗಿ ಬಳಸಿದ), ಕೇಳಿಬರುವ ನೈಜ ಶಬ್ದಗಳು ಚಿತ್ರದ ಆಳವನ್ನು ಇನ್ನಷ್ಟು ಹೆಚ್ಚಿಸುತ್ತವೆ. ಇದು ಮೆಸೆಡೋನಿಯಾದ ನಿರ್ದೇಶಕ ಮ್ಯೂಚೊ ಮಾಂಚೆಸ್ಕಿಯ (Milcho Manchevski) ಮೊದಲ ಚಿತ್ರ. ತನ್ನ ಮೊದಲ ಚಿತ್ರದಲ್ಲೇ ಕಥನಗಾರಿಕೆಯಲ್ಲಿ ಆಟವಾಡಿ ಯಶಸ್ವಿಯಾಗಿದ್ದಾರೆ. ಕಥೆಗಾರಿಕೆಯಲ್ಲಿ ಈ ಚಿತ್ರವನ್ನು ಅನೇಕರು ಅಮೆರಿಕ ಕ್ವೆಂಟಿನ್ ಟ್ಯಾರಂಟಿನೋ ಅವರ ಪಲ್ಪ್ ಫಿಕ್ಷನ್ ಜೊತೆಗೆ ಹೋಲಿಸಿದ್ದಾರೆ. ಆದರೆ ಈ ಇಬ್ಬರೂ ದಿಗ್ಗಜರೂ ಪರಸ್ಪರ ಪ್ರಭಾವಿತರಾಗಿಲ್ಲ ಎನ್ನುವುದು ಸ್ಪಷ್ಟ. ಹಾಲಿವುಡ್‍ನ ಟ್ಯಾರಂಟಿನೊ ಕಥೆಗಾರಿಕೆಯಲ್ಲಿ ಆಟವಾಡುವುದಕ್ಕಾಗಿಯೇ ಆಟವಾಡಿದ್ದಾರೆ ಎನ್ನುವುದಾದರೆ, ಬಿಫೋರ್ ದ ರೇನ್ ಚಿತ್ರದಲ್ಲಿ ಮ್ಯಾಂಚೆಸ್ಕಿ, ಕಥೆಯ ಆಳವನ್ನು, ಆಯಾ ಪಾತ್ರಗಳ ಪಯಣದ ಆಳವನ್ನೂ, ದೇಶಕಾಲದ ಪಯಣ, ಯುದ್ಧ ದ್ವೇಷದ ಪರಿಣಾಮಗಳನ್ನು ಗಟ್ಟಿಯಾಗಿ ಅನುಭವಿಸಲು ತಮ್ಮ ಕಥನಶೈಲಿಯನ್ನು ಅಳವಡಿಸಿಕೊಂಡಿದ್ದಾರೆ.

ಚಿತ್ರದ ಹೆಸರೇ ಹೇಳುವಂತೆ, ಏನೆಲ್ಲ ಆದರೂ ಎಲ್ಲರೂ ಇಂದೋ ನಾಳೆಯೋ ಬರಲಿರುವ ಮಳೆಯನ್ನೇ ಎದುರುನೋಡುತ್ತಿದ್ದಾರೆ. ಹಿಂಸೆ, ಪ್ರೀತಿ, ಹುಟ್ಟು, ಸಾವುಗಳೆಲ್ಲವೂ ಮಳೆಯಲ್ಲಿ ತೊಯ್ದುಹೋಗುವುದರ ಮೂಲಕ ಚಿತ್ರ ಕೊನೆಗೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...