Homeಮುಖಪುಟಮಹಿಳಾ ಮೀಸಲಾತಿ ಬಿಲ್‌: ಮೋದಿ ಸರಕಾರದ ದ್ರೋಹ ಬಯಲುಗೊಳಿಸಲು 21 ನಗರಗಳಲ್ಲಿ ಪತ್ರಿಕಾಗೋಷ್ಟಿ; ಕಾಂಗ್ರೆಸ್

ಮಹಿಳಾ ಮೀಸಲಾತಿ ಬಿಲ್‌: ಮೋದಿ ಸರಕಾರದ ದ್ರೋಹ ಬಯಲುಗೊಳಿಸಲು 21 ನಗರಗಳಲ್ಲಿ ಪತ್ರಿಕಾಗೋಷ್ಟಿ; ಕಾಂಗ್ರೆಸ್

- Advertisement -
- Advertisement -

ಕಳೆದ ವಾರ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಅಂಗೀಕರಿಸಿದ ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣವೇ ಜಾರಿಗೆ ತರುವಂತೆ ಆಗ್ರಹಿಸಿ ಕಾಂಗ್ರೆಸ್ 21 ನಗರಗಳಲ್ಲಿ 21 ಪತ್ರಿಕಾಗೋಷ್ಠಿಗಳನ್ನು ನಡೆಸಿ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ದ್ರೋಹವನ್ನು ಬಯಲಿಗೆಳೆಯಲಿದೆ ಎಂದು ಕಾಂಗ್ರೆಸ್‌ ಹೇಳಿದೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಪವನ್ ಖೇರಾ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, 21 ನಗರಗಳಲ್ಲಿ, 21 ಮಹಿಳಾ ನಾಯಕರು ಒಂದೇ ಅಜೆಂಡಾದಲ್ಲಿ ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಮೋದಿ ಸರ್ಕಾರದ ದ್ರೋಹವನ್ನು ಬಹಿರಂಗಪಡಿಸಲಿದ್ದಾರೆ ಎಂದು ಹೇಳಿದ್ದಾರೆ. ಇದಲ್ಲದೆ ಕಾಂಗ್ರೆಸ್‌ ಮಹಿಳಾ ಮೀಸಲಾತಿ ಬಿಲ್‌ನ್ನು ಯಾವುದೇ ತಡೆಯಿಲ್ಲದೆ ಶೀಘ್ರ ಜಾರಿಗೆ ಆಗ್ರಹಿಸಿದೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಈ ಕುರಿತು ಮಾತನಾಡಿದ್ದು, ಮಹಿಳೆಯರಿಗೆ 33% ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ಬಿಲ್‌ನ್ನು ನಾಳೆಯಿಂದಲೇ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದು, ಮಹಿಳಾ ಮೀಸಲಾತಿ ಮಸೂದೆ, ಜಾತಿಜನಗಣತಿ, ಕ್ಷೇತ್ರವಿಂಗಡನೆಗೆ ಯಾವುದೇ ರೀತಿಯ ಸಂಬಂಧ ಇಲ್ಲ ಎಂದು ಅವರು ಹೇಳಿದ್ದಾರೆ.

ಭಾರತೀಯ ಮಹಿಳೆಯರು ರಾಜಕೀಯದಲ್ಲಿ ಭಾಗವಹಿಸಲು ಅವಕಾಶವನ್ನು  ಪಂಚಾಯತಿ ರಾಜ್‌ನಲ್ಲಿ 33% ಮೀಸಲಾತಿ ನೀಡುವ ಮೂಲಕ ಕಾಂಗ್ರೆಸ್ ಮಾಡಿದೆ. ನಾವು ಪಂಚಾಯತ್ ರಾಜ್‌ನಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವಾಗ ಆರ್‌ಎಸ್‌ಎಸ್ ಮಹಿಳೆಯರನ್ನು ಅನುಮತಿಸುವುದಿಲ್ಲ ಎನ್ನುವ ಅಂಶವನ್ನು ಅರ್ಥೈಸಿಕೊಳ್ಳಬೇಕಿದೆ. ಮಹಿಳಾ ಸಬಲೀಕರಣದಲ್ಲಿ ಯಾರು ಆಸಕ್ತಿ ಹೊಂದಿದ್ದಾರೆ ಎಂಬುವುದು ಇದರಿಂದ ಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮೊದಲು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ ರಾಹುಲ್ ಗಾಂಧಿ ಅವರು ಮಹಿಳಾ ಮೀಸಲಾತಿ ಮಸೂದೆಯನ್ನು ಅನುಷ್ಠಾನಗೊಳಿಸುವಲ್ಲಿ ವಿಳಂಬವಾದ ಬಗ್ಗೆ ಸರ್ಕಾರವನ್ನು ಟೀಕಿಸಿದ್ದಾರೆ. ಕ್ಷೇತ್ರವಾರು ವಿಂಗಡನೆ ಮತ್ತು ಜನಗಣತಿ ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಎಂದು ಹೇಳಿದ್ದಾರೆ.

ಮಹಿಳಾ ಮೀಸಲಾತಿ ಮಸೂದೆ ಒಳ್ಳೆಯದೇ ಆಗಿದೆ. ಅದರಲ್ಲಿ ಜನಗಣತಿ ಮತ್ತು ಕ್ಷೇತ್ರ ವಿಂಗಡನೆ ಮಾಡಬೇಕಾಗಿದೆ ಎಂದು ನಮಗೆ ಎರಡು ಅಡಿಟಿಪ್ಪಣಿಗಳು ಕಾಣಿಸಿಕೊಂಡವು. ಇವೆರಡಕ್ಕೂ ವರ್ಷಗಳು ಬೇಕಾಗುತ್ತವೆ. ನಿಜವೆಂದರೆ ಮೀಸಲಾತಿ ಇಂದು ಜಾರಿಗೆ ತರಬಹುದು. ಇದು ಸಂಕೀರ್ಣವಾದ ವಿಷಯವಲ್ಲ ಆದರೆ ಸರ್ಕಾರವು ಅದನ್ನು ಮಾಡಲು ಬಯಸುವುದಿಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಸರ್ಕಾರ  ಮಸೂದೆ ಅಂಗೀಕರಿಸಿದೆ. ಆದರೆ ಇದು ಇನ್ನು 10 ವರ್ಷಗಳ ನಂತರ ಜಾರಿಗೆ ಬರಲಿದೆ. ಇದು ಜಾರಿಗೆ ಬರುತ್ತದೋ, ಇಲ್ಲವೋ ಎಂದು  ಯಾರಿಗೂ ತಿಳಿದಿಲ್ಲ. ಇದು ಗೊಂದಲದ ಮತ್ತು ಜನರ ಗಮನ ಬೇರೆಡೆ ಸೆಳೆಯುವ ತಂತ್ರ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

 

ಇದನ್ನು ಓದಿ: ಉತ್ತರಪ್ರದೇಶ: ಲೋಕಸಭೆ, ವಿಧಾನಸಭೆಗಳಲ್ಲಿ SC, ST, OBCಗಳಿಗಿಂತ ಹೆಚ್ಚು ಪ್ರಾತಿನಿಧ್ಯ ಪಡೆದ ಬ್ರಾಹ್ಮಣ, ಠಾಕೂರ್‌ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...