Homeಮುಖಪುಟ'ನನ್ನ ಟಿಕೆಟ್‌ ರದ್ದುಗೊಳಿಸುವ ಧೈರ್ಯ ಯಾರಿಗಿದೆ?': ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್‌ಭೂಷಣ್ ಸಿಂಗ್

‘ನನ್ನ ಟಿಕೆಟ್‌ ರದ್ದುಗೊಳಿಸುವ ಧೈರ್ಯ ಯಾರಿಗಿದೆ?’: ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್‌ಭೂಷಣ್ ಸಿಂಗ್

- Advertisement -
- Advertisement -

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿದ್ದ ವೇಳೆ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎನ್ನುವ ಆರೋಪಗಳು ಕೇಳಿಬಂದಿವೆ. ಹೀಗಾಗಿ ಅವರಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುತ್ತೀರಾ ಎಂಬ ಪ್ರಶ್ನೆಗೆ, ”ನನ್ನ ಟಿಕೆಟ್‌ನ್ನು ಯಾರು ರದ್ದು ಮಾಡುತ್ತಾರೆ?” ಎಂದು ಸಿಂಗ್ ಹೇಳುತ್ತಿರುವ ವೀಡಿಯೊ ವೈರಲ್ ಆಗಿದೆ.

ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬ್ರಿಜ್‌ ಭೂಷಣ್ ಅವರು, ”ಕೌನ್ ಕಾತ್ ರಹಾ ಹೈ ಉಸ್ಕಾ ನಾಮ್ ಬಟಾವೋ?… ಕಟೋಗೆ ಆಪ್? ಕಟೋ?…(ನನ್ನ ಟಿಕೆಟ್ ಅನ್ನು ಯಾರು ರದ್ದು ಮಾಡುತ್ತಾರೆ? ನೀವು ಅದನ್ನು ಮಾಡುತ್ತೀರಾ? ನೀವು?…)” ಎಂದು ಹೇಳಿರುವ ವಿಡಿಯೋ ಹರಿದಾಡುತ್ತಿದೆ.

ವೀಡಿಯೊ ವೈರಲ್ ಆಗುತ್ತಿದ್ದಂತೆ, ಸಾಮಾಜಿಕ ಮಾಧ್ಯಮದಲ್ಲಿ ಅನೇಕರು, ಬ್ರಿಜ್ ಭೂಷಣ್ ವಿರುದ್ಧದ ಪ್ರಕರಣವು ತನಿಖೆಯಲ್ಲಿದ್ದಾಗಲೂ ಅವರ “ಅಹಂಕಾರ” ಕಡಿಮೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಕೂಡ ವಿಡಿಯೋವನ್ನು ಹಂಚಿಕೊಂಡಿದ್ದಾರೆ, ಸಿಂಗ್ ಅವರು “ಅಧಿಕಾರದ ದುರಹಂಕಾರ” ತೋರಿಸಿದ್ದಾರೆ ಎಂದಿದ್ದಾರೆ.

”ದೇಶಕ್ಕಾಗಿ ಪದಕ ಗೆದ್ದ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬ್ರಿಜ್ ಭೂಷಣ್, ತನ್ನ ಟಿಕೆಟ್‌ನ್ನು ರದ್ದುಗೊಳಿಸುವ ಧೈರ್ಯ ಯಾರಿಗಿದೆ ಎಂದು ಬಹಿರಂಗವಾಗಿ ಸವಾಲು ಹಾಕುತ್ತಾನೆ. ಅಂದರೆ ಇದರಲ್ಲಿ ದೊಡ್ಡವರ ಕೈವಾಡ ಇದೆ ಅನಿಸುತ್ತದೆ. ಇದು ಅವರ ಅಧಿಕಾರದ ದುರಹಂಕಾರ” ಎಂದು ಅವರು ಹೇಳಿದ್ದಾರೆ.

ಭಾರತೀಯ ಕುಸ್ತಿ ಒಕ್ಕೂಟದ ನಿರ್ಗಮನ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಸಿಕ್ಕ ಪ್ರತಿ ಅವಕಾಶದಲ್ಲೂ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ದೆಹಲಿ ಪೊಲೀಸರು ಶನಿವಾರ ಸ್ಥಳೀಯ ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇಂಡಿಯಾ ಟುಡೇ ಪ್ರಕಾರ, ದೆಹಲಿ ಪೊಲೀಸರನ್ನು ಪ್ರತಿನಿಧಿಸುವ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಶ್ರೀವಾಸ್ತವ ಅವರು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರ ಪೀಠದ ಮುಂದೆ ಈ ಮಹತ್ವದ ಹೇಳಿಕೆ ನೀಡಿದ್ದು, ಸಿಂಗ್ ಅವರಿಗೆ ಅವರು ಉದ್ದೇಶಪೂರ್ವಕವಾಗಿಯೇ ಈ ರೀತಿ ಮಾಡುತ್ತಿದ್ದರು ಎಂದು ಹೇಳಿದ್ದಾರೆ.

ಮಹಿಳಾ ಕುಸ್ತಿಪಟು ನೀಡಿದ ದೂರನ್ನು ಉಲ್ಲೇಖಿಸಿದ ವಕೀಲರು, ತಜಕಿಸ್ತಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿಂಗ್ ಅವರು  ಮಹಿಳಾ ಕುಸ್ತಿಪಟುವನ್ನು ಕೋಣೆಗೆ ಕರೆದು ಬಲವಂತವಾಗಿ ತಬ್ಬಿಕೊಂಡಿದ್ದರು. ಇದಕ್ಕೆ ಆಕೆ ವಿರೋಧಿಸಿದಾಗ ಕುಸ್ತಿಪಟುವಿಗೆ  ನಾನು ನಿನ್ನ ‘ಅಪ್ಪನಂತೆ’ ಅದಕ್ಕಾಗಿ ಈ ರೀತಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ಈ ಘಟನೆ ನೋಡಿದರೆ ಅವರು ಉದ್ದೇಶಪೂರ್ವಕವಾಗಿಯೇ ಮಾಡಿದ್ದಾರೆಂದು ಸ್ಪಷ್ಟವಾಗಿ ತಿಳಿದು ಬರುತ್ತದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಉತ್ತರ ಪ್ರದೇಶದ ಭಾರತೀಯ ಜನತಾ ಪಕ್ಷದ ಸಂಸದ ಸಿಂಗ್ ವಿರುದ್ಧ ಆರು ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.

ಕನಿಷ್ಠ ಎರಡು ಸಂದರ್ಭಗಳಲ್ಲಿ ಕ್ರೀಡೆಗೆ ಸಂಬಂಧಿಸಿದ ಸಹಾಯ ಮಾಡಲು ಸಿಂಗ್ ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ದೂರುದಾರ ಕ್ರೀಡಾಪಟುಗಳು ಲೈಂಗಿಕ ಕಿರುಕುಳದ 15 ಘಟನೆಗಳನ್ನು ಕೂಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಮತ್ತು ಎರಡು ಬಾರಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಭಾರತದ ಅಗ್ರ ಕುಸ್ತಿಪಟುಗಳು ಜನವರಿಯಲ್ಲಿ ಸಿಂಗ್ ವಿರುದ್ಧ ಮೊದಲು ಪ್ರತಿಭಟನೆಯನ್ನು ಪ್ರಾರಂಭಿಸಿದ್ದರು. ಆರೋಪಗಳ ತನಿಖೆಗಾಗಿ ರಚಿಸಲಾಗಿದ್ದ ಮೇಲ್ವಿಚಾರಣಾ ಸಮಿತಿಯು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಏಪ್ರಿಲ್‌ನಲ್ಲಿ ಪ್ರತಿಭಟನೆ ಪುನರಾರಂಭಿಸಿದ್ದರು.

ಏಪ್ರಿಲ್‌ನಲ್ಲಿ ಸುಪ್ರೀಂ ಕೋರ್ಟ್ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ ನಂತರ ದೆಹಲಿ ಪೊಲೀಸರು ಸಿಂಗ್ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಿದ್ದಾರೆ. ಜೂನ್ 15 ರಂದು ಸಿಂಗ್ ವಿರುದ್ಧ 1,000 ಪುಟಗಳ ಆರೋಪಪಟ್ಟಿ ಸಲ್ಲಿಸಲಾಗಿತ್ತು.

ಆಗಸ್ಟ್‌ನಲ್ಲಿ ನಡೆದ ಪ್ರಕರಣದ ಹಿಂದಿನ ವಿಚಾರಣೆಯ ಸಂದರ್ಭದಲ್ಲಿ, ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಿಂಗ್ ಮತ್ತು ಅವರ ಅಮಾನತುಗೊಂಡ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರನ್ನು ವಿಚಾರಣೆಗೆ ಒಳಪಡಿಸಲು ಸಾಕಷ್ಟು ಪುರಾವೆಗಳಿವೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಆದರೆ ಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯನ್ನು ಅಪ್ಪಿಕೊಳ್ಳುವುದು ಅಥವಾ ಸ್ಪರ್ಶಿಸುವುದು ಅಪರಾಧವಲ್ಲ ಎಂದು ಭೂಷಣ್ ನ್ಯಾಯಾಲಯಕ್ಕೆ ತಿಳಿಸಿದ್ದರು. ಪ್ರಕರಣದ  ಕುರಿತು ಕೋರ್ಟ್ ಅಕ್ಟೋಬರ್ 7 ರಂದು ಮುಂದಿನ ವಿಚಾರಣೆ ನಡೆಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...