Homeಕರ್ನಾಟಕಕನ್ನಡ ಬಾವುಟ ಬೇಡವೆಂದ ಸಚಿವ ಸಿ.ಟಿ ರವಿಗೆ ನೆಟ್ಟಿಗರಿಂದ ಫುಲ್ ಕ್ಲಾಸ್..

ಕನ್ನಡ ಬಾವುಟ ಬೇಡವೆಂದ ಸಚಿವ ಸಿ.ಟಿ ರವಿಗೆ ನೆಟ್ಟಿಗರಿಂದ ಫುಲ್ ಕ್ಲಾಸ್..

- Advertisement -
- Advertisement -

ದೇಶಕ್ಕೊಂದು ಧ್ವಜವಿರುವಾಗ ಕನ್ನಡ ಧ್ವಜ ಬೇಕಿಲ್ಲ ಎಂದು ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿರುವ ಸಚಿವ ಸಿಟಿ ರವಿಗೆ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಫುಲ್ ಕ್ಲಾಸ್ ಕೊಟ್ಟಿದ್ದಾರೆ. ಯಾರು ಯಾರು ಏನೇನು ಹೇಳಿದ್ದಾರೆ ನೋಡಿ.

“ಚೀಟಿ ರವಿಯವರೆ, ದೇಶಕ್ಕೊಂದೆ ಧ್ವಜ ಅಂದಿದ್ದೀರಿ, ಬಟ್ ತ್ರಿವರ್ಣ ಧ್ವಜವೋ ಭಗವಾ ದ್ದಜವೋ ಕರೆಕ್ಟಾಗಿ ಹೇಳಿ… ತ್ರಿವರ್ಣ ಧ್ವಜವಾದರೆ ಭಗವಾಧ್ವಜಗಳನ್ನು ಯಾರೂ ಬಳಸೋ ಹಾಗಿಲ್ಲ ಎನ್ನಿ, ಭಗವಾ ಧ್ವಜ ಆಗಿದ್ದರೆ ತ್ರಿವರ್ಣ ಧ್ವಜ ನಮಗೆ ಬೇಡ ಎನ್ನಿ… ಈ ಬಗ್ಗೆ ಸ್ಪಷ್ಟ ನಿಲುವು ಹೇಳಲು ತಾಕತ್ತಿಲ್ಲದಿದ್ದರೆ ತೆಪ್ಪಗಿರಿ. ನಮ್ಮ ಕನ್ನಡ ಧ್ವಜದ ಉಸಾಬರಿ ನಿಮಗೆ ಬೇಡ. ಕನ್ನಡಿಗರುಂಟು ಅವರ ಕನ್ನಡ ಧ್ವಜ ಉಂಟು. ಮೊದಲು “ಕನ್ನಡ ಸಂಸ್ಕೃತಿ” ಮಂತ್ರಿಗಿರಿಗೆ ರಾಜೀನಾಮೆ ಕೊಟ್ಟು ಕೆಳಗಿಳೀರಿ… ಕನ್ನಡ ಸಂಸ್ಕೃತಿ, ಕನ್ನಡತನವನ್ನ ಗೌರವಿಸಲಾಗದ ನಿಮ್ಮಂತ ನಾಲಾಯಕ್ ಗಳಿಂದ ಕನ್ನಡ ಮಾತೆ ಪಡೆದುಕೊಳ್ಳೋದಕ್ಕಿಂದ ಕಳೆದುಕೊಳ್ಳೋದೇ ಹೆಚ್ಚು..ನಡೀರಿ ಆಚೆ..” ಎಂದು ಹರ್ಷಕುಮಾರ್ ಕುಗ್ವೆ ಕಿಡಿಕಾರಿದ್ದಾರೆ.

ಕೆಂಚನೂರು ಎನ್ ಶಂಕರರವರು ಫೇಸ್ ಬುಕ್ ನಲ್ಲಿ “C T ರವಿ ಮತ್ತು ಅವರ ಪಕ್ಷ ಹುಟ್ಟುವ ಮೊದಲೇ ಈ ಬಾವುಟ ಕನ್ನಡ ಮತ್ತು ಕರ್ನಾಟಕದ ಗುರುತಾಗಿ ಇತ್ತು ಮುಂದೆಯೂ ಇರಲಿದೆ. ಇದರಲ್ಲಿ ಯಾವ ಅನುಮಾನವೂ ಇಲ್ಲ”. ಎಂದು ಬರೆದಿದ್ದಾರೆ.

“ಕರ್ನಾಟಕಕ್ಕೆ ಪ್ರತ್ಯೇಕ ನಾಡದ್ವಜ ಅಗತ್ಯವಿಲ್ಲ ಎಂದ ಬಿಜೆಪಿ ಪುಡಾರಿ ಚೀಟಿ ರವಿ
ನಿನ್ನ ಮೋದಿ ನಾಗಾಲ್ಯಾಂಡಿಗೆ ಪ್ರತ್ಯೇಕ ದ್ವಜ, ಪ್ರತ್ಯೇಕ ಸ್ಥಾನಮಾನ ಕೊಟ್ಟಿದ್ದೇತಕೆ? ಎಂದು ವಿನಯ್ ಕಸ್ವೆ ಪ್ರಶ್ನಿಸಿದ್ದಾರೆ.

ಎಂ.ಆರ್ ಕೃಷ್ಣರವರು ಕನ್ನಡ ಬಾವುಟ ನಮ್ಮ ಆಸ್ಮಿತೆ. ಹಿಂದಿ ಗುಲಾಮಿಗಳು ಮತ್ತು ಕನ್ನಡದ್ರೋಹಿಗಳ ವಿರುದ್ಧ ಕಸ್ತೂರಿ ಕನ್ನಡಿಗರ ಹೋರಾಟ ನಿತ್ಯ ನಿರಂತರ ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಷ್ಟ್ರ ಸಮಿತಿಯ ಅಧ್ಯಕ್ಷರಾದ ರವಿ ಕೃಷ್ಣಾರೆಡ್ಡಿಯವರು ಈ ಕುರಿತು ವಿವರವಾಗಿ ಬರೆದಿದ್ದಾರೆ.
ಕರ್ನಾಟಕ ರಾಜ್ಯಕ್ಕೆ ತನ್ನದೇ ಆದ ಸ್ವತಂತ್ರ ಲಾಂಛನವಿದೆ. ಈಗ ಸ್ವತಂತ್ರ ಧ್ವಜವನ್ನು ಹೊಂದುವ ಸಮಯ.

ಭಾರತ ಗಣರಾಜ್ಯವು ಒಕ್ಕೂಟ ವ್ಯವಸ್ಥೆಯ ದೇಶ (Federal, albeit a quasi). ಒಕ್ಕೂಟ ವ್ಯವಸ್ಥೆಯಲ್ಲಿ ಹಲವು ವಿಚಾರಗಳಲ್ಲಿ ಸ್ವತಂತ್ರ ಅಸ್ತಿತ್ವ ಮತ್ತು ಆಡಳಿತವ್ಯಾಪ್ತಿ ಇರುವ ರಾಜ್ಯಗಳಿರುತ್ತವೆ. ಆ ರಾಜ್ಯಗಳಿಗೆ ತಮ್ಮದೇ ಆದ ಲಾಂಛನ ಮತ್ತು ಧ್ವಜಗಳಿರುತ್ತವೆ. ಹಾಗೆಯೇ ಆಯಾ ರಾಜ್ಯಗಳ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುವ ಕೆಲವು ಸ್ವತಂತ್ರ ಕಾಯ್ದೆ, ಕಾನೂನುಗಳೂ.

ಯಾವುದೋ ಕಾರಣಕ್ಕೆ ಇಲ್ಲಿಯವರೆಗೂ ನಮ್ಮ ರಾಜ್ಯ ಸ್ವಂತ ಧ್ವಜವನ್ನು ರೂಪಿಸಿಕೊಂಡಿರಲಿಲ್ಲ ಎಂದಮಾತ್ರಕ್ಕೆ ಅದು ಮುಂದೆಂದೂ ಇರಬಾರದು ಎಂದಿಲ್ಲ.

ಈ ಹಿನ್ನೆಲೆಯಲ್ಲಿ ಕನ್ನಡಿಗರ ಮತ್ತು ಕರ್ನಾಟಕದ ಪ್ರಜೆಗಳ ಜನಾಭಿಪ್ರಾಯವನ್ನು ಗೌರವಿಸಿ ಈ ಕೂಡಲೇ ಕರ್ನಾಟಕ ರಾಜ್ಯ ಸರ್ಕಾರವು ಸ್ವತಂತ್ರ ಧ್ವಜವನ್ನು ಹೊಂದುವ ನಿಟ್ಟಿನಲ್ಲಿ ಕಾನೂನು ಪ್ರಕ್ರಿಯೆಗೆ ಮುಂದಾಗಬೇಕು ಎಂದು “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷವು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತದೆ. ರಾಜ್ಯದ “ಕನ್ನಡ ಮತ್ತು ಸಂಸ್ಕೃತಿ” ಇಲಾಖೆಯ ಸಚಿವರಾದ ಸಿ.ಟಿ.ರವಿಯವರು ಈ ಪ್ರಕ್ರಿಯೆಗೆ ಪೂರಕವಾಗಿ ತಮ್ಮ ಇಲಾಖೆಯ ವತಿಯಿಂದ ಯಾವುದೆಲ್ಲಾ ಕಾನೂನು ಮತ್ತು ಆಡಳಿತ ಪ್ರಕ್ರಿಯೆಗಳನ್ನು ಮಾಡಬೇಕಿದೆಯೋ ಅದನ್ನು ಶ್ರದ್ಧಾಭಕ್ತಿಯಿಂದ ಹಾಗೂ ಕರ್ತವ್ಯನಿಷ್ಠೆಯಿಂದ ನಿರ್ವಹಿಸಬೇಕೆಂದು ನಾವು ಅವರನ್ನು ಒತ್ತಾಯಿಸುತ್ತೇವೆ. ಇದಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡರೆ ಅದು ‘ಕರ್ನಾಟಕ ವಿರೋಧಿ ಕೃತ್ಯ’ ಎಂದು ಎಚ್ಚರಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Mr. ಸಿ.ಟಿ ರವಿ ಕನ್ನಡ ಬಾವುಟ ಹಾರಿಸಿದ್ದೇನೆ ಅದ್ ಯಾವಾ ಕೇಸ್ ಹಾಕೀಸ್ತೀಯೋ ಹಾಕ್ಸು. ನನ್ನ ಕನ್ನಡ ಭಾಷೆಗೆ ಪ್ರತ್ಯೇಕ ನಾಡಧ್ವಜ ಹೊಂದುವುದು ರಾಷ್ಟ್ರದ್ರೋಹವಾದರೆ ನಾನು ರಾಷ್ಟ ದ್ರೋಹಿಯಾಗಲು ಸಿದ್ದ….. ಎಂದು ಕನ್ನಡ ರಣಧೀರ ಪಡೆಯ ಹರೀಶ್ ಕುಮಾರ್ ಬಿ ಸವಾಲು ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...