Homeಕರ್ನಾಟಕಕನ್ನಡ ಬಾವುಟ ಬೇಡವೆಂದ ಸಚಿವ ಸಿ.ಟಿ ರವಿಗೆ ನೆಟ್ಟಿಗರಿಂದ ಫುಲ್ ಕ್ಲಾಸ್..

ಕನ್ನಡ ಬಾವುಟ ಬೇಡವೆಂದ ಸಚಿವ ಸಿ.ಟಿ ರವಿಗೆ ನೆಟ್ಟಿಗರಿಂದ ಫುಲ್ ಕ್ಲಾಸ್..

- Advertisement -
- Advertisement -

ದೇಶಕ್ಕೊಂದು ಧ್ವಜವಿರುವಾಗ ಕನ್ನಡ ಧ್ವಜ ಬೇಕಿಲ್ಲ ಎಂದು ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿರುವ ಸಚಿವ ಸಿಟಿ ರವಿಗೆ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಫುಲ್ ಕ್ಲಾಸ್ ಕೊಟ್ಟಿದ್ದಾರೆ. ಯಾರು ಯಾರು ಏನೇನು ಹೇಳಿದ್ದಾರೆ ನೋಡಿ.

“ಚೀಟಿ ರವಿಯವರೆ, ದೇಶಕ್ಕೊಂದೆ ಧ್ವಜ ಅಂದಿದ್ದೀರಿ, ಬಟ್ ತ್ರಿವರ್ಣ ಧ್ವಜವೋ ಭಗವಾ ದ್ದಜವೋ ಕರೆಕ್ಟಾಗಿ ಹೇಳಿ… ತ್ರಿವರ್ಣ ಧ್ವಜವಾದರೆ ಭಗವಾಧ್ವಜಗಳನ್ನು ಯಾರೂ ಬಳಸೋ ಹಾಗಿಲ್ಲ ಎನ್ನಿ, ಭಗವಾ ಧ್ವಜ ಆಗಿದ್ದರೆ ತ್ರಿವರ್ಣ ಧ್ವಜ ನಮಗೆ ಬೇಡ ಎನ್ನಿ… ಈ ಬಗ್ಗೆ ಸ್ಪಷ್ಟ ನಿಲುವು ಹೇಳಲು ತಾಕತ್ತಿಲ್ಲದಿದ್ದರೆ ತೆಪ್ಪಗಿರಿ. ನಮ್ಮ ಕನ್ನಡ ಧ್ವಜದ ಉಸಾಬರಿ ನಿಮಗೆ ಬೇಡ. ಕನ್ನಡಿಗರುಂಟು ಅವರ ಕನ್ನಡ ಧ್ವಜ ಉಂಟು. ಮೊದಲು “ಕನ್ನಡ ಸಂಸ್ಕೃತಿ” ಮಂತ್ರಿಗಿರಿಗೆ ರಾಜೀನಾಮೆ ಕೊಟ್ಟು ಕೆಳಗಿಳೀರಿ… ಕನ್ನಡ ಸಂಸ್ಕೃತಿ, ಕನ್ನಡತನವನ್ನ ಗೌರವಿಸಲಾಗದ ನಿಮ್ಮಂತ ನಾಲಾಯಕ್ ಗಳಿಂದ ಕನ್ನಡ ಮಾತೆ ಪಡೆದುಕೊಳ್ಳೋದಕ್ಕಿಂದ ಕಳೆದುಕೊಳ್ಳೋದೇ ಹೆಚ್ಚು..ನಡೀರಿ ಆಚೆ..” ಎಂದು ಹರ್ಷಕುಮಾರ್ ಕುಗ್ವೆ ಕಿಡಿಕಾರಿದ್ದಾರೆ.

ಕೆಂಚನೂರು ಎನ್ ಶಂಕರರವರು ಫೇಸ್ ಬುಕ್ ನಲ್ಲಿ “C T ರವಿ ಮತ್ತು ಅವರ ಪಕ್ಷ ಹುಟ್ಟುವ ಮೊದಲೇ ಈ ಬಾವುಟ ಕನ್ನಡ ಮತ್ತು ಕರ್ನಾಟಕದ ಗುರುತಾಗಿ ಇತ್ತು ಮುಂದೆಯೂ ಇರಲಿದೆ. ಇದರಲ್ಲಿ ಯಾವ ಅನುಮಾನವೂ ಇಲ್ಲ”. ಎಂದು ಬರೆದಿದ್ದಾರೆ.

“ಕರ್ನಾಟಕಕ್ಕೆ ಪ್ರತ್ಯೇಕ ನಾಡದ್ವಜ ಅಗತ್ಯವಿಲ್ಲ ಎಂದ ಬಿಜೆಪಿ ಪುಡಾರಿ ಚೀಟಿ ರವಿ
ನಿನ್ನ ಮೋದಿ ನಾಗಾಲ್ಯಾಂಡಿಗೆ ಪ್ರತ್ಯೇಕ ದ್ವಜ, ಪ್ರತ್ಯೇಕ ಸ್ಥಾನಮಾನ ಕೊಟ್ಟಿದ್ದೇತಕೆ? ಎಂದು ವಿನಯ್ ಕಸ್ವೆ ಪ್ರಶ್ನಿಸಿದ್ದಾರೆ.

ಎಂ.ಆರ್ ಕೃಷ್ಣರವರು ಕನ್ನಡ ಬಾವುಟ ನಮ್ಮ ಆಸ್ಮಿತೆ. ಹಿಂದಿ ಗುಲಾಮಿಗಳು ಮತ್ತು ಕನ್ನಡದ್ರೋಹಿಗಳ ವಿರುದ್ಧ ಕಸ್ತೂರಿ ಕನ್ನಡಿಗರ ಹೋರಾಟ ನಿತ್ಯ ನಿರಂತರ ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಷ್ಟ್ರ ಸಮಿತಿಯ ಅಧ್ಯಕ್ಷರಾದ ರವಿ ಕೃಷ್ಣಾರೆಡ್ಡಿಯವರು ಈ ಕುರಿತು ವಿವರವಾಗಿ ಬರೆದಿದ್ದಾರೆ.
ಕರ್ನಾಟಕ ರಾಜ್ಯಕ್ಕೆ ತನ್ನದೇ ಆದ ಸ್ವತಂತ್ರ ಲಾಂಛನವಿದೆ. ಈಗ ಸ್ವತಂತ್ರ ಧ್ವಜವನ್ನು ಹೊಂದುವ ಸಮಯ.

ಭಾರತ ಗಣರಾಜ್ಯವು ಒಕ್ಕೂಟ ವ್ಯವಸ್ಥೆಯ ದೇಶ (Federal, albeit a quasi). ಒಕ್ಕೂಟ ವ್ಯವಸ್ಥೆಯಲ್ಲಿ ಹಲವು ವಿಚಾರಗಳಲ್ಲಿ ಸ್ವತಂತ್ರ ಅಸ್ತಿತ್ವ ಮತ್ತು ಆಡಳಿತವ್ಯಾಪ್ತಿ ಇರುವ ರಾಜ್ಯಗಳಿರುತ್ತವೆ. ಆ ರಾಜ್ಯಗಳಿಗೆ ತಮ್ಮದೇ ಆದ ಲಾಂಛನ ಮತ್ತು ಧ್ವಜಗಳಿರುತ್ತವೆ. ಹಾಗೆಯೇ ಆಯಾ ರಾಜ್ಯಗಳ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುವ ಕೆಲವು ಸ್ವತಂತ್ರ ಕಾಯ್ದೆ, ಕಾನೂನುಗಳೂ.

ಯಾವುದೋ ಕಾರಣಕ್ಕೆ ಇಲ್ಲಿಯವರೆಗೂ ನಮ್ಮ ರಾಜ್ಯ ಸ್ವಂತ ಧ್ವಜವನ್ನು ರೂಪಿಸಿಕೊಂಡಿರಲಿಲ್ಲ ಎಂದಮಾತ್ರಕ್ಕೆ ಅದು ಮುಂದೆಂದೂ ಇರಬಾರದು ಎಂದಿಲ್ಲ.

ಈ ಹಿನ್ನೆಲೆಯಲ್ಲಿ ಕನ್ನಡಿಗರ ಮತ್ತು ಕರ್ನಾಟಕದ ಪ್ರಜೆಗಳ ಜನಾಭಿಪ್ರಾಯವನ್ನು ಗೌರವಿಸಿ ಈ ಕೂಡಲೇ ಕರ್ನಾಟಕ ರಾಜ್ಯ ಸರ್ಕಾರವು ಸ್ವತಂತ್ರ ಧ್ವಜವನ್ನು ಹೊಂದುವ ನಿಟ್ಟಿನಲ್ಲಿ ಕಾನೂನು ಪ್ರಕ್ರಿಯೆಗೆ ಮುಂದಾಗಬೇಕು ಎಂದು “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷವು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತದೆ. ರಾಜ್ಯದ “ಕನ್ನಡ ಮತ್ತು ಸಂಸ್ಕೃತಿ” ಇಲಾಖೆಯ ಸಚಿವರಾದ ಸಿ.ಟಿ.ರವಿಯವರು ಈ ಪ್ರಕ್ರಿಯೆಗೆ ಪೂರಕವಾಗಿ ತಮ್ಮ ಇಲಾಖೆಯ ವತಿಯಿಂದ ಯಾವುದೆಲ್ಲಾ ಕಾನೂನು ಮತ್ತು ಆಡಳಿತ ಪ್ರಕ್ರಿಯೆಗಳನ್ನು ಮಾಡಬೇಕಿದೆಯೋ ಅದನ್ನು ಶ್ರದ್ಧಾಭಕ್ತಿಯಿಂದ ಹಾಗೂ ಕರ್ತವ್ಯನಿಷ್ಠೆಯಿಂದ ನಿರ್ವಹಿಸಬೇಕೆಂದು ನಾವು ಅವರನ್ನು ಒತ್ತಾಯಿಸುತ್ತೇವೆ. ಇದಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡರೆ ಅದು ‘ಕರ್ನಾಟಕ ವಿರೋಧಿ ಕೃತ್ಯ’ ಎಂದು ಎಚ್ಚರಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Mr. ಸಿ.ಟಿ ರವಿ ಕನ್ನಡ ಬಾವುಟ ಹಾರಿಸಿದ್ದೇನೆ ಅದ್ ಯಾವಾ ಕೇಸ್ ಹಾಕೀಸ್ತೀಯೋ ಹಾಕ್ಸು. ನನ್ನ ಕನ್ನಡ ಭಾಷೆಗೆ ಪ್ರತ್ಯೇಕ ನಾಡಧ್ವಜ ಹೊಂದುವುದು ರಾಷ್ಟ್ರದ್ರೋಹವಾದರೆ ನಾನು ರಾಷ್ಟ ದ್ರೋಹಿಯಾಗಲು ಸಿದ್ದ….. ಎಂದು ಕನ್ನಡ ರಣಧೀರ ಪಡೆಯ ಹರೀಶ್ ಕುಮಾರ್ ಬಿ ಸವಾಲು ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...