Homeಕರ್ನಾಟಕಬಿಜೆಪಿ-ಜೆಡಿಎಸ್ ಮೈತ್ರಿ: ದಳದಲ್ಲಿ ಭಿನ್ನಮತ, ರಾಜೀನಾಮೆಗೆ ಮುಂದಾದ್ರಾ ಮುಸ್ಲಿ ಮುಖಂಡರು?

ಬಿಜೆಪಿ-ಜೆಡಿಎಸ್ ಮೈತ್ರಿ: ದಳದಲ್ಲಿ ಭಿನ್ನಮತ, ರಾಜೀನಾಮೆಗೆ ಮುಂದಾದ್ರಾ ಮುಸ್ಲಿ ಮುಖಂಡರು?

- Advertisement -
- Advertisement -

2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಬಿಜೆಪಿ-ಜೆಡಿಎಸ್ ಒಂದಾಗಿವೆ. ಇದೀಗ ಜೆಡಿಎಸ್ ಪಕ್ಷ ಬಿಜೆಪಿ ನೇತೃತ್ವದಲ್ಲಿ ಎನ್‌ಡಿಎನ ಭಾಗವಾಗಿದೆ. ಆದರೆ, ಮೈತ್ರಿ ಬೆನ್ನಲ್ಲಿಯೇ ಜೆಡಿಎಸ್‌ನಲ್ಲಿ ಭಿನ್ನಮತ ಸೃಷ್ಟಿಯಾಗಿದ್ದು, ಒಂದಿಷ್ಟು ಶಾಸಕರು ಹಾಗೂ ಹಲವು ಮುಸ್ಲಿಂ ಮುಖಂಡರು ಬಿಜೆಪಿ ಜೊತೆಗಿನ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಕೋಮುವಾದಿ ಬಿಜೆಪಿಯೊಂದಿಗೆ ಜಾತ್ಯಾತೀತ ಪಕ್ಷ ಮೈತ್ರಿ ಮಾಡಿಕೊಂಡಿರುವ ವರಿಷ್ಠರ ನಡೆಗೆ ಬೇಸತ್ತ ಜೆಡಿಎಸ್‌ ಪದಾಧಿಕಾರಿಗಳು ತಮ್ಮ ಸ್ಥಾನಕ್ಕೆ ಈಗಾಗಲೇ ಕೆಲವರು ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನ ತೊರೆಯುವುದಾಗಿ ಸಿಎಂ ಇಬ್ರಾಹಿಂ ಅವರೂ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರ ಬಳಿ ಹೇಳಿದ್ದಾರೆ ಎನ್ನಲಾಗಿದೆ. ಈ ನಡುವೆ ಇನ್ನೂ ಹಲವು ಮುಸ್ಲಿಂ ಮುಖಂಡರು ಪಕ್ಷ ತೊರೆಯುವ ನಿಲುವಿಗೆ ಬಂದಿದ್ದಾರೆ. ಈ ಸಂಬಂಧ ಪಕ್ಷದ ಮುಸ್ಲಿಂ ಮುಖಂಡರು ಬೆಂಗಳೂರಿನಲ್ಲಿ ಸಭೆ ನಡೆಸಿ ಮುಂದಿನ ನಡೆ ಬಗ್ಗೆ ಚರ್ಚಿಸಿದ್ದಾರೆ.

ಈ ಸಭೆಯಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿಯೊಂದಿಗೆ ಹೆಜ್ಜೆ ಹಾಕಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಸಮುದಾಯದ ಜನರ ಭಾವನೆಗೆ ಜೆಡಿಎಸ್‌ ವಿರುದ್ಧವಾಗಿ ನಡೆದುಕೊಂಡಿದ್ದನ್ನು ಮನವರಿಕೆ ಮಾಡಿಕೊಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ.

ಯಾದಗಿರಿ ಜಿಲ್ಲೆಯ ಗುರುಮಿಠಕಲ್‌ನ ಜೆಡಿಎಸ್‌ ಶಾಸಕ ಶರಣಗೌಡ ಕಂದಕೂರು ಅವರು ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಗೆ ಬಹಿರಂಗವಾಗಿಯೇ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಈ ಮೈತ್ರಿ ತಮ್ಮ ಒಪ್ಪಿಗೆ ಇಲ್ಲ, ಒಂದು ವೇಳೆ ನಮ್ಮ ವರಿಷ್ಠರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡರೇ ಕ್ಷೇತ್ರದ ಜನಾಭಿಪ್ರಾಯ ಕೇಳಿ ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದರು. ಅದರ ಬೆನ್ನಲ್ಲಿಯೇ ತಮ್ಮ ಜನ ಸಂಪರ್ಕ ಕಚೇರಿಯನ್ನು ಸಚಿವ ಶರಣಪ್ಪ ದರ್ಶನಾಪುರ ಅವರಿಂದ ಉದ್ಘಾಟನೆ ಮಾಡಿಸಿದ್ದರು. ಜೆಡಿಎಸ್‌ ಶಾಸಕರ ಈ ನಡೆ ಕುತೂಹಲ ಕೆರಳಿಸಿದೆ.

ಕೇವಲ ಶರಣಗೌಡ ಕಂದಕೂರು ಮಾತ್ರವಲ್ಲದೇ ಹಲವು ಜೆಡಿಎಸ್‌ ಶಾಸಕರು ಬಿಜೆಪಿ – ಜೆಡಿಎಸ್‌ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಸುಮಾರು 7-8 ಶಾಸಕರು ಮುಂದಿನ ನಡೆ ಏನು ಎಂಬುದನ್ನು ತೀರ್ಮಾನಿಸಲು ಸಭೆ ಸೇರುತ್ತಾರೆ ಎಂದು ಹೇಳಲಾಗಿದೆ.

ಜೆಡಿಎಸ್‌ – ಬಿಜೆಪಿ ಮೈತ್ರಿ ಖಚಿತವಾಗುತ್ತಿದಂತೆ ಕೊಡಗು ಜೆಡಿಎಸ್‌ ಮಾಜಿ ಅಧ್ಯಕ್ಷ ಕೆಎಂ ಗಣೇಶ್‌ ಮತ್ತು ಅವರ ಬೆಂಬಲಿಗರು ಮತ್ತೆ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಕಾಂಗ್ರೆಸ್‌ ಪಕ್ಷದ ಮಡಿಕೇರಿ ಬ್ಲಾಕ್‌ ಅಧ್ಯಕ್ಷರಾಗಿದ್ದ ಕೆಎಂ ಗಣೇಶ್‌, ಕೆಲ ವರ್ಷಗಳ ಹಿಂದೆ ಅಸಮಾಧಾನಗೊಂಡು ಜೆಡಿಎಸ್‌ ಸೇರ್ಪಡೆಯಾಗಿದ್ದರು. ಸಂಕೇತ್‌ ಪೂವಯ್ಯ ಬಳಿಕ ಜೆಡಿಎಸ್‌ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ಗಣೇಶ್‌ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರು. ವಿಧಾನಸಭೆ ಚುನಾವಣೆಯ ಬಳಿಕ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಗಣೇಶ್‌ ಜೆಡಿಎಸ್‌ – ಬಿಜೆಪಿ ಮೈತ್ರಿ ಖಚಿತವಾಗುತ್ತಿದಂತೆ ಜೆಡಿಎಸ್‌ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಮರಳಿದ್ದಾರೆ.

ಇದನ್ನೂ ಓದಿ: NDA ಮೈತ್ರಿಕೂಟಕ್ಕೆ ಅಧಿಕೃತವಾಗಿ JDS ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...