Homeಮುಖಪುಟ'ಇಸ್ಕಾನ್' ಅತಿ ದೊಡ್ಡ ಮೋಸದ ಸಂಸ್ಥೆ, ಹಸುಗಳನ್ನು ಕಟುಕರಿಗೆ ಮಾರಿದೆ: ಬಿಜೆಪಿ ಸಂಸದೆ ಮನೇಕಾ ಗಾಂಧಿ

‘ಇಸ್ಕಾನ್’ ಅತಿ ದೊಡ್ಡ ಮೋಸದ ಸಂಸ್ಥೆ, ಹಸುಗಳನ್ನು ಕಟುಕರಿಗೆ ಮಾರಿದೆ: ಬಿಜೆಪಿ ಸಂಸದೆ ಮನೇಕಾ ಗಾಂಧಿ

- Advertisement -
- Advertisement -

ಅಂತರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ (ಇಸ್ಕಾನ್) ದೇಶದ ಅತಿ ದೊಡ್ಡ ಮೋಸದ ಸಂಸ್ಥೆಯಾಗಿದ್ದು, ಗೋಶಾಲೆಯಿಂದ ಗೋವುಗಳನ್ನು ಕಸಾಯಿ ಖಾನೆಗೆ ಮಾರಾಟ ಮಾಡುತ್ತಿದೆ ಎಂದು ಬಿಜೆಪಿ ಸಂಸದೆ ಮನೇಕಾ ಗಾಂಧಿ ಧಾರ್ಮಿಕ ಸಂಘಟನೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಶ್ವದ ಅತ್ಯಂತ ಪ್ರಭಾವಿ ಕೃಷ್ಣ ಪಂಥವಾದ ಇಸ್ಕಾನ್ ಸಂಸ್ಥೆಯು ಮನೇಕಾ ಗಾಂಧಿ ಅವರ ಆರೋಪಗಳನ್ನು ಸುಳ್ಳು ಎಂದು ತಿರಸ್ಕರಿಸಿತು.

ಮಾಜಿ ಕೇಂದ್ರ ಸಚಿವೆ ಮತ್ತು ಪ್ರಾಣಿ ಹಕ್ಕುಗಳ ಕಾರ್ಯಕರ್ತೆಯಾಗಿರುವ ಮನೇಕಾ ಗಾಂಧಿ ಅವರು ಪ್ರಾಣಿಗಳ ಕಲ್ಯಾಣದ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಧ್ವನಿಯೆತ್ತಿದ್ದಾರೆ.

”ಇಸ್ಕಾನ್ ದೇಶದ ಅತಿದೊಡ್ಡ ಮೋಸದ ಸಂಸ್ಥೆ. ಇದು ಗೋಶಾಲೆಗಳನ್ನು ನಿರ್ವಹಿಸುತ್ತದೆ ಮತ್ತು ವಿಶಾಲವಾದ ಜಮೀನುಗಳನ್ನು ಒಳಗೊಂಡಂತೆ ಸರ್ಕಾರದಿಂದ ಪ್ರಯೋಜನಗಳನ್ನು ಪಡೆಯುತ್ತದೆ” ಎಂದು ಅವರು ವಿಡಿಯೋದಲ್ಲಿ ಹೇಳಿರುವುದು ವೈರಲ್ ಆಗಿದೆ.

ನಂತರ ಅವರು ಆಂಧ್ರಪ್ರದೇಶದ ಇಸ್ಕಾನ್‌ನ ಅನಂತಪುರ ಗೋಶಾಲಾಗೆ ಭೇಟಿ ನೀಡಿದ್ದನ್ನು ನೆನಪಿಸಿಕೊಳ್ಳುತ್ತಾರೆ, ಅಲ್ಲಿ ಅವರು ಹಾಲು ಅಥವಾ ಕರುಗಳನ್ನು ನೀಡದ ಯಾವುದೇ ಹಸುವನ್ನು ಕಾಣಿಸಲಿಲ್ಲ ಎಂದು ಹೇಳುತ್ತಾರೆ. “ಇಡೀ ಡೈರಿಯಲ್ಲಿ ಗೊಡ್ಡು ಹಸು ಇರಲಿಲ್ಲ. ಒಂದು ಕರುವೂ ಇರಲಿಲ್ಲ. ಅಂದರೆ ಎಲ್ಲಾ ಮಾರಾಟ ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.

(ಗೊಡ್ಡು ಹಸು ಎಂದರೆ ಸ್ವಲ್ಪ ಸಮಯದಿಂದ ಹಾಲು ನೀಡದಿರುವುದು)

”ಇಸ್ಕಾನ್ ತನ್ನ ಎಲ್ಲಾ ಹಸುಗಳನ್ನು ಕಟುಕರಿಗೆ ಮಾರುತ್ತಿದೆ. ಅವರು ರಸ್ತೆಗಳಲ್ಲಿ ‘ಹರೇ ರಾಮ್ ಹರೇ ಕೃಷ್ಣ’ ಎಂದು ಹಾಡುತ್ತಾರೆ. ನಂತರ ಅವರು ತಮ್ಮ ಇಡೀ ಜೀವನ ಹಾಲಿನ ಮೇಲೆ ಅವಲಂಬಿತರಾಗಿದ್ದಾರೆ. ಬಹುಶಃ ಅವರಷ್ಟು ಜಾನುವಾರುಗಳನ್ನು ಯಾರೂ ಕಟುಕರಿಗೆ ಮಾರಾಟ ಮಾಡಿಲ್ಲ” ಎಂದು ಅವರು ಆರೋಪಿಸಿದ್ದಾರೆ.

ಆರೋಪಗಳನ್ನು ತಿರಸ್ಕರಿಸಿದ ಇಸ್ಕಾನ್‌ನ ರಾಷ್ಟ್ರೀಯ ವಕ್ತಾರ ಯುಧಿಸ್ತಿರ್ ಗೋವಿಂದ ದಾಸ್, ”ಈ ಧಾರ್ಮಿಕ ಸಂಸ್ಥೆಯು ಭಾರತದಲ್ಲಿ ಮಾತ್ರವಲ್ಲದೆ ಜಾಗತಿಕವಾಗಿ ಗೋವು ಮತ್ತು ಗೂಳಿ ರಕ್ಷಣೆ ಮತ್ತು ಆರೈಕೆಯಲ್ಲಿ ಮುಂಚೂಣಿಯಲ್ಲಿದೆ. ಹಸುಗಳು ಮತ್ತು ಹೋರಿಗಳ ಸೇವೆ ಮಾಡುತ್ತದೆ ವಿನಃ ಅವರ ಆರೋಪದಂತೆ ಕಟುಕರಿಗೆ ಮಾರಾಟ ಮಾಡುವುದಿಲ್ಲ” ಎಂದು ಅವರು ಹೇಳಿದರು.

ದನದ ಮಾಂಸವು ಪ್ರಧಾನ ಆಹಾರವಾಗಿರುವ ಪ್ರಪಂಚದ ಹಲವು ಭಾಗಗಳಲ್ಲಿ ಇಸ್ಕಾನ್ ಗೋಸಂರಕ್ಷಣೆಗೆ ಮುಂದಾಗಿದೆ. ಮನೇಕ ಗಾಂಧಿ ಅವರು ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಮತ್ತು ಇಸ್ಕಾನ್‌ನ ಹಿತೈಷಿಗಳು ಆದ್ದರಿಂದ ಅವರ ಈ ಹೇಳಿಕೆಗಳಿಂದ ನಮಗೆ ಆಶ್ಚರ್ಯವಾಗಿದೆ” ಎಂದು ಇಸ್ಕಾನ್ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಮೋದಿಯವರ ಪಕ್ಷ, ಸಂಘಪರಿವಾರ ಅತಿ ಹೆಚ್ಚು ದ್ವೇಷ ಭಾಷಣಗಳಲ್ಲಿ ತೊಡಗಿವೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...