Homeಮುಖಪುಟಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಗವಹಿಸುವಿಕೆ ಕೇವಲ 0.001% ಮಾತ್ರ: ಸಂಸದ ಡಾ ಜಾನ್ ಬಿಟ್ಟಾಸ್

ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಗವಹಿಸುವಿಕೆ ಕೇವಲ 0.001% ಮಾತ್ರ: ಸಂಸದ ಡಾ ಜಾನ್ ಬಿಟ್ಟಾಸ್

- Advertisement -
- Advertisement -

ಪ್ರಧಾನಿಯ ಅನುಪಸ್ಥಿತಿಯಲ್ಲಿ ವಿರೋಧ ಪಕ್ಷದ ನಾಯಕ ಮಾತನಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಈ ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಗವಹಿಸುವಿಕೆ ಕೇವಲ 0.001% ಮಾತ್ರ ಎಂದು ಕೇರಳ ಸಿಪಿಎಂ ರಾಜ್ಯಸಭಾ ಸಂಸದ ಡಾ. ಜಾನ್ ಬಿಟ್ಟಾಸ್ ಆರೋಪ ಮಾಡಿದ್ದಾರೆ.

ವಿಶೇಷ ಅಧಿವೇಶನದ ಸಂದರ್ಭದಲ್ಲಿ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಅವರ ಭಾಷಣ ಈದೀಗ ವೈರಲ್‌ ಆಗಿದೆ. ತಮ್ಮ ಭಾಷಣದಲ್ಲಿ ಸಂವಿಧಾನ ಪೀಠಿಕೆಯ ಕುರಿತು ಮಾತನಾಡಿದ್ದ ಜಾನ್‌ ಬ್ರಿಟ್ಟಾಸ್‌, ”ಸಂವಿಧಾನದ ಪೀಠಿಕೆಯಲ್ಲಿ ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವ ಎಂದಿದೆ. ಜೊತೆಗೆ ನ್ಯಾಯದಾನ ಕುರಿತು ಬರೆಯಲಾಗಿದೆ. ನ್ಯಾಯದಾನ ಬಗ್ಗೆ ನೋಡುವುದಾದರೆ ನಾವು ಈಗ ಬುಲ್ಡೋಝರ್‌ ಲೋಕಕ್ಕೆ ತಲುಪಿದ್ದೇವೆ. ಅದೇ ಈಗಿನ ಪ್ರಕಾರ ಅದೇ ನ್ಯಾಯದಾನ ವ್ಯವಸ್ಥೆ” ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

”ಸಂವಿಧಾನದ ಪೀಠಿಕೆಯಲಿ ಪ್ರಜಾಪ್ರಭುತ್ವ ಎಂಬ ಪದವಿದೆ. ಸಂಸತ್ನಲ್ಲಿರುವ ಹೆಚ್ಚಿನ ಸದಸ್ಯರು ಪ್ರಜಾಪ್ರಭುತ್ವ ಎನ್ನುವುದು ಮೋದಿ ಪ್ರಭುತ್ವವಾಗಿ ಬದಲಾಗಿದೆ ಎನ್ನುವುದು ತಿಳಿದಿದ್ದಾರೆ. ಏಕೆಂದರೆ ಎಲ್ಲೆಡೆ ಪ್ರಧಾನಿ ಮೋದಿಯೇ ರಾರಾಜಿಸುತ್ತಿದ್ದಾರೆ” ಎಂದರು.

”ನಾನು ಸಂಸತ್ತನ್ನು ಹೊರಗಿನಿಂದ ನಿಂತು ನೋಡುತ್ತಿದ್ದೆ. ಈಗ ಈ ಸಂಸತ್ತಿನ ಭಾಗವಾಗಿದ್ದೇನೆ. ಸದಸ್ಯನಾಗಿ ಒಳಭಾಗದಲ್ಲಿ ಕುಳಿತು ನೋಡುತ್ತಿದ್ದೇನೆ. ಈ ಸದನದ ನಾಯಕ ಒಳ್ಳೆಯ ಮಾತುಗಾರ. ಆದರೆ ಅವರು ಜವಹರ್ ಲಾಲ್ ನೆಹರು ಅವರಂತ ಮಹಾನ್ ವ್ಯಕ್ತಿಗಳ ಹೆಸರನ್ನು ಬೇಕೆಂದೇ ಮರೆತಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಭಾಷಣದಲ್ಲಿ ಆ ಮರೆತ ಹೆಸರನ್ನು ನೆನಪಿಸುವ ಪ್ರಯತ್ನ ಮಾಡಿದ್ದಾರೆ” ಎಂದರು.

”20 ಕೋಟಿ ಅಲ್ಪಸಂಖ್ಯಾತರಿರುವ ಈ ದೇಶದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ, ಮಾಧ್ಯಮಗಳಲ್ಲಿ ಅವರ ಪ್ರಾತಿನಿಧಿತ್ವ ಎಷ್ಟಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಈ ಸರ್ಕಾರ ಮೊಘಲರ ಬಗ್ಗೆ ಮಾತಾನಾಡುತ್ತದೆ. ಭಾರತೀಯರ ಬಗ್ಗೆ ಮಾತನಾಡುವುದಕ್ಕಿಂತ ಮೊಘಲರ ಬಗ್ಗೆ ಮಾತನಾಡುವುದು ಉತ್ತಮ. ಏಕೆಂದರೆ ಅದು ಅಕ್ಬರ್‌ನ ಸಂಸ್ಥಾನವಾಗಿರಲಿ, ಔರಂಗಜೇಬನದಾಗಿರಲಿ, ಅಲ್ಲಿ 50%ಕ್ಕಿಂತ ಹೆಚ್ಚಿನ ಸಚಿವರುಗಳು ಹಿಂದೂಗಳಿದ್ದರು. ಅಕ್ಬರ್‌ನ ಸಂಸ್ಥಾನದಲ್ಲಿದ್ದ ಬೀರಬಲ್ ಬಗ್ಗೆ ನಮಗೆಲ್ಲಾ ಗೊತ್ತಿದೆ. ಅತನೂ ಹಿಂದೂ ಆಗಿದ್ದ. ಈಗಿನ ಕೇಂದ್ರ ಸಚಿವ ಸಂಪುಟದಲ್ಲಿ ಒಬ್ಬರಾದರೂ ಅಲ್ಪಸಂಖ್ಯಾತರಿದ್ದಾರಾ?” ಎಂದು ಪ್ರಶ್ನಿಸಿದರು.

”ಪರಂಪರೆಯನ್ನು ನೋಡುವುದಾದರೆ, ನೆಹರೂ ಸರ್ಕಾರ ಮಾದರಿ ಸರ್ಕಾರವಾಗಿತ್ತು. ಅಲ್ಲಿ ಸಮಾಜದ ಪ್ರತೀ ವರ್ಗಕ್ಕೂ ಪ್ರತಿನಿಧಿತ್ವ ಇತ್ತು. ಮೌಲಾನಾ ಆಝಾದ್, ಶಾಮ್ ಪ್ರಸಾದ್ ಮುಖರ್ಜಿಯವರೂ ಆ ಸಂಪುಟದಲಿದ್ದರು. ಮೌಲಾನಾ ಆಝಾದ್ ಅವರು ಜುಮಾ ಮಸೀದಿಯ ಮೆಟ್ಟಿಲಲ್ಲಿ ನಿಂತು, ಇದು ನಮ್ಮ ದೇಶ. ಯಾರೂ ಇಲ್ಲಿಂದ ಹೊರಹೋಗುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದರು. ಸಹೋದರತ್ವ ಅಥವಾ ಭಾತೃತ್ವ ಪದದ ಈಗಿನ ಹೊಸ ಬಳಕೆಯೇನು ಗೊತ್ತೇ? ಪಾಕಿಸ್ತಾನಕ್ಕೆ ಹೋಗಿ ಎನ್ನುವುದು. ಯಾರು ಏನೇ ಮಾತನಾಡಿದರೂ ಬರುವ ಕೊನೆಯ ಪದ ಪಾಕಿಸ್ತಾನಕ್ಕೆ ಹೋಗಿ ಎನ್ನುವುದು. ರಾಷ್ಟ್ರದ್ರೋಹ ಪದವನ್ನೂ ತಪ್ಪಾಗಿ ಅರ್ಥೈಸಲಾಗಿದೆ. ಈ ದೇಶದ ಬಗ್ಗೆ ನಿಮಗೆಷ್ಟು ದೇಶಭಕ್ತಿಯಿದೆಯೋ, ನಮಗೂ ಅಷ್ಟೇ ಇದೆ” ಎಂದು ಸಂಸದರು ಖಾರವಾಗಿ ನುಡಿದರು.

”ಸಾರ್ವಭೌಮತ್ವ ಎನ್ನುವುದು ಟ್ರಂಪ್ – ಬೈಡೆನ್ ನಂತಹಾ ನಾಯಕರನ್ನು ಕರೆಸಿ ಹೊಗಳುವುದು ಎನ್ನುವಂತಾಗಿದೆ. ನಮ್ಮಲ್ಲೇ ಇರುವ ನೆಹರುವನ್ನು ನೀವು ಮರೆತಿದ್ದೀರಿ. ಸಮಾಜವಾದ ಎನ್ನುವುದು ಅದಾನಿವಾದ ಆಗಿದೆ. ಈ ದೇಶದಲ್ಲಿ ಹಲವು ಜನರಿಗೆ ರಿಪಬ್ಲಿಕ್ (ಗಣರಾಜ್ಯ) ಎಂದರೆ ಅರ್ನಬ್ ಗೋಸ್ವಾಮಿ ಎಂಬಂತಾಗಿದೆ. ಇದು ಈ ದೇಶದ ಈಗಿನ ವ್ಯವಸ್ಥೆ” ಎಂದು ವ್ಯಂಗ್ಯವಾಡಿದರು.

”ಪ್ರಧಾನಿ ಕಚೇರಿಯಲ್ಲಿ ಕೂತ ಒಬ್ಬ ವ್ಯಕ್ತಿ ಈ ಸಂವಿಧಾನ ನಿರುಪಯುಕ್ತ. ಇದು ಕೇವಲ 17 ವರ್ಷ ಬಳಸಲು ಯೋಗ್ಯ. ನನಗೆ ಸಮಾಜವಾದ ಮತ್ತು ಜಾತ್ಯಾತೀತತೆ ಎಂಬ ಪದದ ಅರ್ಥಗಳೇ ಗೊತ್ತಿಲ್ಲ ಎನ್ನುತ್ತಾನೆ. ಅದೇ ವ್ಯಕ್ತಿ ಪ್ರಧಾನಿಯ ಆರ್ಥಿಕ ಸಲಹೆಗಾರ. ಆತನಿಗೆ ಹಾಗೆ ಹೇಳಲು ಅಷ್ಟೊಂದು ಧೈರ್ಯ ಇದೆಯೇ? ಯಾರಿಗಾದರೂ ಸಂಪುಟ ದರ್ಜೆಯ ಸಚಿವರಿಗೆ ಆತನಿಗೆ ಬಾಯಿ ಮುಚ್ಚು ಎಂದು ಹೇಳುವ ಧೈರ್ಯ ಇದೆಯೇ? ಯಾರಾದರೂ ಹೇಳಿದ್ದಾರೆಯೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ‘ನಗರ ನಕ್ಸಲ್ ಯಾರು? ಅವರ ಬಗ್ಗೆ ವಿವರ ನೀಡಿ..’: ಪ್ರಧಾನಿ ಹೇಳಿಕೆ ಕುರಿತು ಗೃಹ ಸಚಿವಾಲಯಕ್ಕೆ ಸಾಕೇತ್ ಗೋಖಲೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...