Homeಮುಖಪುಟಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಗವಹಿಸುವಿಕೆ ಕೇವಲ 0.001% ಮಾತ್ರ: ಸಂಸದ ಡಾ ಜಾನ್ ಬಿಟ್ಟಾಸ್

ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಗವಹಿಸುವಿಕೆ ಕೇವಲ 0.001% ಮಾತ್ರ: ಸಂಸದ ಡಾ ಜಾನ್ ಬಿಟ್ಟಾಸ್

- Advertisement -
- Advertisement -

ಪ್ರಧಾನಿಯ ಅನುಪಸ್ಥಿತಿಯಲ್ಲಿ ವಿರೋಧ ಪಕ್ಷದ ನಾಯಕ ಮಾತನಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಈ ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಗವಹಿಸುವಿಕೆ ಕೇವಲ 0.001% ಮಾತ್ರ ಎಂದು ಕೇರಳ ಸಿಪಿಎಂ ರಾಜ್ಯಸಭಾ ಸಂಸದ ಡಾ. ಜಾನ್ ಬಿಟ್ಟಾಸ್ ಆರೋಪ ಮಾಡಿದ್ದಾರೆ.

ವಿಶೇಷ ಅಧಿವೇಶನದ ಸಂದರ್ಭದಲ್ಲಿ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಅವರ ಭಾಷಣ ಈದೀಗ ವೈರಲ್‌ ಆಗಿದೆ. ತಮ್ಮ ಭಾಷಣದಲ್ಲಿ ಸಂವಿಧಾನ ಪೀಠಿಕೆಯ ಕುರಿತು ಮಾತನಾಡಿದ್ದ ಜಾನ್‌ ಬ್ರಿಟ್ಟಾಸ್‌, ”ಸಂವಿಧಾನದ ಪೀಠಿಕೆಯಲ್ಲಿ ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವ ಎಂದಿದೆ. ಜೊತೆಗೆ ನ್ಯಾಯದಾನ ಕುರಿತು ಬರೆಯಲಾಗಿದೆ. ನ್ಯಾಯದಾನ ಬಗ್ಗೆ ನೋಡುವುದಾದರೆ ನಾವು ಈಗ ಬುಲ್ಡೋಝರ್‌ ಲೋಕಕ್ಕೆ ತಲುಪಿದ್ದೇವೆ. ಅದೇ ಈಗಿನ ಪ್ರಕಾರ ಅದೇ ನ್ಯಾಯದಾನ ವ್ಯವಸ್ಥೆ” ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

”ಸಂವಿಧಾನದ ಪೀಠಿಕೆಯಲಿ ಪ್ರಜಾಪ್ರಭುತ್ವ ಎಂಬ ಪದವಿದೆ. ಸಂಸತ್ನಲ್ಲಿರುವ ಹೆಚ್ಚಿನ ಸದಸ್ಯರು ಪ್ರಜಾಪ್ರಭುತ್ವ ಎನ್ನುವುದು ಮೋದಿ ಪ್ರಭುತ್ವವಾಗಿ ಬದಲಾಗಿದೆ ಎನ್ನುವುದು ತಿಳಿದಿದ್ದಾರೆ. ಏಕೆಂದರೆ ಎಲ್ಲೆಡೆ ಪ್ರಧಾನಿ ಮೋದಿಯೇ ರಾರಾಜಿಸುತ್ತಿದ್ದಾರೆ” ಎಂದರು.

”ನಾನು ಸಂಸತ್ತನ್ನು ಹೊರಗಿನಿಂದ ನಿಂತು ನೋಡುತ್ತಿದ್ದೆ. ಈಗ ಈ ಸಂಸತ್ತಿನ ಭಾಗವಾಗಿದ್ದೇನೆ. ಸದಸ್ಯನಾಗಿ ಒಳಭಾಗದಲ್ಲಿ ಕುಳಿತು ನೋಡುತ್ತಿದ್ದೇನೆ. ಈ ಸದನದ ನಾಯಕ ಒಳ್ಳೆಯ ಮಾತುಗಾರ. ಆದರೆ ಅವರು ಜವಹರ್ ಲಾಲ್ ನೆಹರು ಅವರಂತ ಮಹಾನ್ ವ್ಯಕ್ತಿಗಳ ಹೆಸರನ್ನು ಬೇಕೆಂದೇ ಮರೆತಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಭಾಷಣದಲ್ಲಿ ಆ ಮರೆತ ಹೆಸರನ್ನು ನೆನಪಿಸುವ ಪ್ರಯತ್ನ ಮಾಡಿದ್ದಾರೆ” ಎಂದರು.

”20 ಕೋಟಿ ಅಲ್ಪಸಂಖ್ಯಾತರಿರುವ ಈ ದೇಶದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ, ಮಾಧ್ಯಮಗಳಲ್ಲಿ ಅವರ ಪ್ರಾತಿನಿಧಿತ್ವ ಎಷ್ಟಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಈ ಸರ್ಕಾರ ಮೊಘಲರ ಬಗ್ಗೆ ಮಾತಾನಾಡುತ್ತದೆ. ಭಾರತೀಯರ ಬಗ್ಗೆ ಮಾತನಾಡುವುದಕ್ಕಿಂತ ಮೊಘಲರ ಬಗ್ಗೆ ಮಾತನಾಡುವುದು ಉತ್ತಮ. ಏಕೆಂದರೆ ಅದು ಅಕ್ಬರ್‌ನ ಸಂಸ್ಥಾನವಾಗಿರಲಿ, ಔರಂಗಜೇಬನದಾಗಿರಲಿ, ಅಲ್ಲಿ 50%ಕ್ಕಿಂತ ಹೆಚ್ಚಿನ ಸಚಿವರುಗಳು ಹಿಂದೂಗಳಿದ್ದರು. ಅಕ್ಬರ್‌ನ ಸಂಸ್ಥಾನದಲ್ಲಿದ್ದ ಬೀರಬಲ್ ಬಗ್ಗೆ ನಮಗೆಲ್ಲಾ ಗೊತ್ತಿದೆ. ಅತನೂ ಹಿಂದೂ ಆಗಿದ್ದ. ಈಗಿನ ಕೇಂದ್ರ ಸಚಿವ ಸಂಪುಟದಲ್ಲಿ ಒಬ್ಬರಾದರೂ ಅಲ್ಪಸಂಖ್ಯಾತರಿದ್ದಾರಾ?” ಎಂದು ಪ್ರಶ್ನಿಸಿದರು.

”ಪರಂಪರೆಯನ್ನು ನೋಡುವುದಾದರೆ, ನೆಹರೂ ಸರ್ಕಾರ ಮಾದರಿ ಸರ್ಕಾರವಾಗಿತ್ತು. ಅಲ್ಲಿ ಸಮಾಜದ ಪ್ರತೀ ವರ್ಗಕ್ಕೂ ಪ್ರತಿನಿಧಿತ್ವ ಇತ್ತು. ಮೌಲಾನಾ ಆಝಾದ್, ಶಾಮ್ ಪ್ರಸಾದ್ ಮುಖರ್ಜಿಯವರೂ ಆ ಸಂಪುಟದಲಿದ್ದರು. ಮೌಲಾನಾ ಆಝಾದ್ ಅವರು ಜುಮಾ ಮಸೀದಿಯ ಮೆಟ್ಟಿಲಲ್ಲಿ ನಿಂತು, ಇದು ನಮ್ಮ ದೇಶ. ಯಾರೂ ಇಲ್ಲಿಂದ ಹೊರಹೋಗುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದರು. ಸಹೋದರತ್ವ ಅಥವಾ ಭಾತೃತ್ವ ಪದದ ಈಗಿನ ಹೊಸ ಬಳಕೆಯೇನು ಗೊತ್ತೇ? ಪಾಕಿಸ್ತಾನಕ್ಕೆ ಹೋಗಿ ಎನ್ನುವುದು. ಯಾರು ಏನೇ ಮಾತನಾಡಿದರೂ ಬರುವ ಕೊನೆಯ ಪದ ಪಾಕಿಸ್ತಾನಕ್ಕೆ ಹೋಗಿ ಎನ್ನುವುದು. ರಾಷ್ಟ್ರದ್ರೋಹ ಪದವನ್ನೂ ತಪ್ಪಾಗಿ ಅರ್ಥೈಸಲಾಗಿದೆ. ಈ ದೇಶದ ಬಗ್ಗೆ ನಿಮಗೆಷ್ಟು ದೇಶಭಕ್ತಿಯಿದೆಯೋ, ನಮಗೂ ಅಷ್ಟೇ ಇದೆ” ಎಂದು ಸಂಸದರು ಖಾರವಾಗಿ ನುಡಿದರು.

”ಸಾರ್ವಭೌಮತ್ವ ಎನ್ನುವುದು ಟ್ರಂಪ್ – ಬೈಡೆನ್ ನಂತಹಾ ನಾಯಕರನ್ನು ಕರೆಸಿ ಹೊಗಳುವುದು ಎನ್ನುವಂತಾಗಿದೆ. ನಮ್ಮಲ್ಲೇ ಇರುವ ನೆಹರುವನ್ನು ನೀವು ಮರೆತಿದ್ದೀರಿ. ಸಮಾಜವಾದ ಎನ್ನುವುದು ಅದಾನಿವಾದ ಆಗಿದೆ. ಈ ದೇಶದಲ್ಲಿ ಹಲವು ಜನರಿಗೆ ರಿಪಬ್ಲಿಕ್ (ಗಣರಾಜ್ಯ) ಎಂದರೆ ಅರ್ನಬ್ ಗೋಸ್ವಾಮಿ ಎಂಬಂತಾಗಿದೆ. ಇದು ಈ ದೇಶದ ಈಗಿನ ವ್ಯವಸ್ಥೆ” ಎಂದು ವ್ಯಂಗ್ಯವಾಡಿದರು.

”ಪ್ರಧಾನಿ ಕಚೇರಿಯಲ್ಲಿ ಕೂತ ಒಬ್ಬ ವ್ಯಕ್ತಿ ಈ ಸಂವಿಧಾನ ನಿರುಪಯುಕ್ತ. ಇದು ಕೇವಲ 17 ವರ್ಷ ಬಳಸಲು ಯೋಗ್ಯ. ನನಗೆ ಸಮಾಜವಾದ ಮತ್ತು ಜಾತ್ಯಾತೀತತೆ ಎಂಬ ಪದದ ಅರ್ಥಗಳೇ ಗೊತ್ತಿಲ್ಲ ಎನ್ನುತ್ತಾನೆ. ಅದೇ ವ್ಯಕ್ತಿ ಪ್ರಧಾನಿಯ ಆರ್ಥಿಕ ಸಲಹೆಗಾರ. ಆತನಿಗೆ ಹಾಗೆ ಹೇಳಲು ಅಷ್ಟೊಂದು ಧೈರ್ಯ ಇದೆಯೇ? ಯಾರಿಗಾದರೂ ಸಂಪುಟ ದರ್ಜೆಯ ಸಚಿವರಿಗೆ ಆತನಿಗೆ ಬಾಯಿ ಮುಚ್ಚು ಎಂದು ಹೇಳುವ ಧೈರ್ಯ ಇದೆಯೇ? ಯಾರಾದರೂ ಹೇಳಿದ್ದಾರೆಯೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ‘ನಗರ ನಕ್ಸಲ್ ಯಾರು? ಅವರ ಬಗ್ಗೆ ವಿವರ ನೀಡಿ..’: ಪ್ರಧಾನಿ ಹೇಳಿಕೆ ಕುರಿತು ಗೃಹ ಸಚಿವಾಲಯಕ್ಕೆ ಸಾಕೇತ್ ಗೋಖಲೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...