HomeಮುಖಪುಟINDIA ಮೈತ್ರಿಕೂಟಕ್ಕೆ AIADMK ಸೇರ್ಪಡೆ ವಿಚಾರ: ಡಿಎಂಕೆ ಜೊತೆ ಚರ್ಚಿಸಿದ ಬಳಿಕ ನಿರ್ಧಾರ ಎಂದ ಶರದ್...

INDIA ಮೈತ್ರಿಕೂಟಕ್ಕೆ AIADMK ಸೇರ್ಪಡೆ ವಿಚಾರ: ಡಿಎಂಕೆ ಜೊತೆ ಚರ್ಚಿಸಿದ ಬಳಿಕ ನಿರ್ಧಾರ ಎಂದ ಶರದ್ ಪವಾರ್

- Advertisement -
- Advertisement -

ಎಐಎಡಿಎಂಕೆಯನ್ನು INDIA ಮೈತ್ರಿಕೂಟದ ಜೊತೆ ಸೇರಿಸಿಕೊಳ್ಳುವ ನಿರ್ಧಾರದ ಬಗ್ಗೆ ಡಿಎಂಕೆ ಅಥವಾ ಅದರ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರನ್ನು ಸಂಪರ್ಕಿಸಲಾಗುವುದು ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಮಂಗಳವಾರ ಹೇಳಿದ್ದಾರೆ.

ಸೋಮವಾರ ಎಐಎಡಿಎಂಕೆ ಪಕ್ಷವು ಬಿಜೆಪಿಯೊಂದಿಗಿನ ತನ್ನ ನಾಲ್ಕು ವರ್ಷಗಳ ಸಂಬಂಧವನ್ನು ಕೊನೆಗೊಳಿಸಿರುವುದಾಗಿ ಅಧಿಕೃತವಾಗಿ ಘೋಷಿಸಿತು. ಇದರೊಂದಿಗೆ ಎನ್‌ಡಿಎ ಮೈತ್ರಿಕೂಟದಿಂದ ಹೊರನಡೆದಿದೆ. 2024ರ ಲೋಕಸಭೆ ಚುನಾವಣೆಗೆ ಪ್ರತ್ಯೇಕ ರಂಗವನ್ನು ಮುನ್ನಡೆಸುವುದಾಗಿ ಹೇಳಿದೆ.

ಎಐಎಡಿಎಂಕೆಯನ್ನು ಇಂಡಿಯಾ ಬ್ಲಾಕ್ ಅಡಿಯಲ್ಲಿ ತರಲು ಪ್ರಯತ್ನಿಸಲಾಗುತ್ತದೆಯೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪವಾರ್, ”ಡಿಎಂಕೆಯು INDIA ಮೈತ್ರಿಕೂಟದ ಭಾಗವಾಗಿದೆ. ಹಾಗಾಗಿ ಡಿಎಂಕೆ ಅಥವಾ ಸ್ಟಾಲಿನ್ ಅವರನ್ನು ಸಂಪರ್ಕಿಸದೆ ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದರು.

INDIA ಮೈತ್ರಿಯು 28 ವಿರೋಧ ಪಕ್ಷಗಳ ಒಕ್ಕೂಟವಾಗಿದ್ದು, 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ NDAಯನ್ನು ಎದುರಿಸುವ ಗುರಿಯನ್ನು ಹೊಂದಿದೆ.

ಎನ್‌ಡಿಎ ಮೈತ್ರಿಕೂಟದೊಂದಿಗೆ ಎಐಎಡಿಎಂಕೆ ಮೈತ್ರಿ ಅಂತ್ಯ

2024ರ ಸಾರ್ವತ್ರಿಕ ಚುನಾವಣೆಗು ಮುನ್ನವೇ ತಮಿಳುನಾಡಿನ ಎಐಎಡಿಎಂಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಜೊತೆಗಿನ ಮೈತ್ರಿಯನ್ನು ಸೋಮವಾರ ಅಧಿಕೃತವಾಗಿ ಮುರಿದುಕೊಂಡಿದೆ.

ಈ ಬಗ್ಗೆ ಎಐಎಡಿಎಂಕೆ ಉಪ ಸಂಯೋಜಕ ಕೆ.ಪಿ. ಮುನುಸಾಮಿ ಅವರು ಚೆನ್ನೈನಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಮಾತನಾಡಿದ್ದು, ”ಇಂದಿನಿಂದ ಬಿಜೆಪಿ ಮತ್ತು ಎನ್‌ಡಿಎ ಮೈತ್ರಿಕೂಟದೊಂದಿಗಿನ ಎಲ್ಲಾ ಸಂಬಂಧಗಳನ್ನು ಎಐಎಡಿಎಂಕೆ ಮುರಿದುಕೊಳ್ಳುತ್ತಿದೆ” ಎಂದು ತಿಳಿಸಿದ್ದಾರೆ.

”ಬಿಜೆಪಿಯ ರಾಜ್ಯ ನಾಯಕತ್ವವು ನಮ್ಮ ಮಾಜಿ ನಾಯಕರು, ನಮ್ಮ ಕಾರ್ಯಕರ್ತರು ಮತ್ತು ನಮ್ಮ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಬಗ್ಗೆ ಕಳೆದ ಒಂದು ವರ್ಷದಿಂದ ನಿರಂತರವಾಗಿ ಅನಗತ್ಯ ಟೀಕೆಗಳನ್ನು ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

”ಈ ಕುರಿತು ನಡೆದ ಸಭೆಯಲ್ಲಿ ಪಕ್ಷದ ಶಾಸಕರು ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಿದ್ದಾರೆ. ಪಕ್ಷವು ಹೊಸ ಮೈತ್ರಿಕೂಟವನ್ನು ರಚಿಸುತ್ತದೆ ಮತ್ತು ಮುಂಬರುವ ಸಂಸತ್ತಿನ ಚುನಾವಣೆಯನ್ನು ಸ್ವತಃ ಎದುರಿಸಲಿದೆ” ಎಂದು ಅವರು ಘೋಷಿಸಿದ್ದಾರೆ.

ಇದನ್ನೂ ಓದಿ: NDAದಿಂದ ಹೊರನಡೆದ AIADMK, ಬಿಜೆಪಿಯೊಂದಿಗೆ ಉಳಿದವರು ಅವಕಾಶವಾದಿಗಳು ಮಾತ್ರ: ಕಪಿಲ್ ಸಿಬಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...