Homeಮುಖಪುಟಐಟಿ ನಿಯಮಗಳ ತಿದ್ದುಪಡಿ, ಪ್ರತ್ಯೇಕ ಫ್ಯಾಕ್ಟ್‌ಚೆಕ್ ಘಟಕದ ಅಗತ್ಯತೆ ಏನಿದೆ?: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ಪ್ರಶ್ನೆ

ಐಟಿ ನಿಯಮಗಳ ತಿದ್ದುಪಡಿ, ಪ್ರತ್ಯೇಕ ಫ್ಯಾಕ್ಟ್‌ಚೆಕ್ ಘಟಕದ ಅಗತ್ಯತೆ ಏನಿದೆ?: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ಪ್ರಶ್ನೆ

- Advertisement -
- Advertisement -

ಹೊಸ ಐಟಿ ನಿಯಮಗಳು ಸರ್ಕಾರಕ್ಕೆ ಯಾವುದೇ “ಮಾರ್ಗಸೂಚಿಗಳು ಮತ್ತು ಗಾರ್ಡ್‌ರೈಲ್‌ಗಳು ಇಲ್ಲದೆಯೇ “ಅನಿಯಂತ್ರಿತ ಅಧಿಕಾರ” ನೀಡುತ್ತದೆ ಎಂದು ಬಾಂಬೆ ಹೈಕೋರ್ಟ್ ಮಂಗಳವಾರ ಗಮನಿಸಿದೆ.

ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು ನೀಲಾ ಗೋಖಲೆ ಅವರ ವಿಭಾಗೀಯ ಪೀಠವು ಐಟಿ ನಿಯಮದ ತಿದ್ದುಪಡಿಗಳನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ಪೀಠವು, ಪತ್ರಿಕಾ ಮಾಹಿತಿ ಬ್ಯೂರೋ ಫ್ಯಾಕ್ಟ್ ಚೆಕ್‌ನ್ನು ಸ್ಥಾಪಿಸಿದ್ದರೂ ತಿದ್ದುಪಡಿ ಮತ್ತು ಪ್ರತ್ಯೇಕ ಸತ್ಯ ಪರಿಶೀಲನಾ ಘಟಕದ ಅಗತ್ಯತೆ ಏನಿದೆ? ಎಂದು ಸರ್ಕಾರವನ್ನು ಪ್ರಶ್ನಿಸಿತು.

”ನೀವು ಸಾಮಾಜಿಕ ಮಾಧ್ಯಮದಲ್ಲಿ ಅಧಿಕೃತ PIB ಇದೆ, ಹಾಗಿದ್ದಾಗ ಈ ತಿದ್ದುಪಡಿ ಏಕೆ ಅಗತ್ಯವಿತ್ತು ಮತ್ತು ಫ್ಯಾಕ್ಟ್‌ಚೆಕ್ ಘಟಕ ಯಾಕೆ ಸ್ಥಾಪಿಸಬೇಕು? ಈ ತಿದ್ದುಪಡಿಯು ಉದ್ದೇಶವೇ ಬೇರೆ ಎಂದು ನಮಗೆ ಅನಿಸುತ್ತಿದೆ. ಸರ್ಕಾರವು “ಯಾವುದೇ ಫ್ಯಾಕ್ಟ್‌ಚೆಕ್ ಮಾಡಲು ಮಾರ್ಗಸೂಚಿ ಹೊಂದಿರುವುದು ಅಗತ್ಯವಿದೆ” ಎಂದು ನ್ಯಾಯಮೂರ್ತಿ ಪಟೇಲ್ ಹೇಳಿದರು.

ಈ ಮಧ್ಯೆ ಸರ್ಕಾರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪಿಐಬಿಯ ಫ್ಯಾಕ್ಟ್ ಚೆಕ್ ಯುನಿಟ್ “ಹಲ್ಲಿಲ್ಲ ಹಾವಿನಂತೆ” ಎಂದು ಹೇಳಿದರು.

”ಐಟಿ ನಿಯಮಗಳು ವಾಕ್ ಸ್ವಾತಂತ್ರ್ಯವನ್ನು ನಿಗ್ರಹಿಸುವುದಕ್ಕೆ ಸಂಬಂಧಿಸಿಲ್ಲ. ಅಭಿಪ್ರಾಯ, ಟೀಕೆ ಅಥವಾ ತುಲನಾತ್ಮಕ ವಿಶ್ಲೇಷಣೆಯ ಯಾವುದೇ ಅಭಿವ್ಯಕ್ತಿಯನ್ನು ನಿಷೇಧಿಸಲು ಸರ್ಕಾರ ಪ್ರಯತ್ನಿಸುತ್ತಿಲ್ಲ… ವಾಸ್ತವವಾಗಿ ನಾವು ಅಂತವರನ್ನು ಸ್ವಾಗತಿಸುತ್ತೇವೆ, ಅವರಿಗೆ ಪ್ರೋತ್ಸಾಹಿಸುತ್ತೇವೆ ಮತ್ತು ಅವರಿಂದ ಕಲಿಯುತ್ತೇವೆ” ಎಂದು ಅವರು ಹೇಳಿದರು.

ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಪ್ರಕರಣದಲ್ಲಿ ಈ ನಿಯಮಗಳನ್ನು ಅನಿಯಂತ್ರಿತ ಮತ್ತು ಅಸಂವಿಧಾನಿಕವಾಗಿ ಬಳಸಲಾಗಿದೆ ಎಂದು ಉಲ್ಲೇಖಿಸಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಮತ್ತು ಅಸೋಸಿಯೇಷನ್ ಆಫ್ ಇಂಡಿಯನ್ ಮ್ಯಾಗಜೀನ್‌ಗಳು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಆ ಅರ್ಜಿಗಳ ವಿಚಾರಣೆ ಬುಧವಾರವೂ ಮುಂದುವರಿಯಲಿದೆ.

ಈ ತಿದ್ದುಪಡಿಯನ್ನು ಏಪ್ರಿಲ್ 6ರಂದು ತಿಳಿಸಲಾಗಿದೆ, ಸರ್ಕಾರಿ ಸತ್ಯ-ಪರಿಶೀಲನಾ ಘಟಕದಿಂದ ನಕಲಿ ಎಂದು ಪರಿಗಣಿಸಲ್ಪಟ್ಟ ವಿಷಯವನ್ನು ಸಾಮಾಜಿಕ ಮಾಧ್ಯಮ ಕಂಪನಿಗಳು ಮತ್ತು ಇತರ ಮಧ್ಯವರ್ತಿಗಳು  ತೆಗೆದುಹಾಕಬೇಕು ಎಂದು ಹೇಳಿದರು. ಇದನ್ನು ಪತ್ರಿಕಾ ಗುಂಪುಗಳು, ವಿರೋಧ ಪಕ್ಷದ ನಾಯಕರು ಮತ್ತು ಪತ್ರಕರ್ತರು ವ್ಯಾಪಕವಾಗಿ ವಿರೋಧಿಸಿದರು.

ಇದನ್ನೂ ಓದಿ: ‘ಇಸ್ಕಾನ್’ ಅತಿ ದೊಡ್ಡ ಮೋಸದ ಸಂಸ್ಥೆ, ಹಸುಗಳನ್ನು ಕಟುಕರಿಗೆ ಮಾರಿದೆ: ಬಿಜೆಪಿ ಸಂಸದೆ ಮನೇಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...