Homeಕರ್ನಾಟಕಚಿತ್ರದುರ್ಗ ಜಿಲ್ಲೆಯಲ್ಲಿ ಅಮಾನವೀಯ ಘಟನೆ: ಅಂತರ್ಜಾತಿ ವಿವಾಹವಾದ ವಿಕಲಚೇತನ ಜೋಡಿಗೆ ಬಹಿಷ್ಕಾರ

ಚಿತ್ರದುರ್ಗ ಜಿಲ್ಲೆಯಲ್ಲಿ ಅಮಾನವೀಯ ಘಟನೆ: ಅಂತರ್ಜಾತಿ ವಿವಾಹವಾದ ವಿಕಲಚೇತನ ಜೋಡಿಗೆ ಬಹಿಷ್ಕಾರ

- Advertisement -
- Advertisement -

ಅಂತರ್ಜಾತಿ ವಿವಾಹವಾದ ವಿಕಲಚೇತನ ಜೋಡಿಗೆ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಎನ್ ದೇವರಹಳ್ಳಿಯಲ್ಲಿ ನಡೆದಿದೆ.

ಮಾತು ಬಾರದ ಮತ್ತು ಕಿವಿ ಕೇಳಿಸದ ಎನ್ ದೇವರಹಳ್ಳಿ ಗ್ರಾಮದ ಸಾವಿತ್ರಮ್ಮ ಹಾಗೂ ಆಂಧ್ರ ಮೂಲದ ಮಣಿಕಂಠ ಕಳೆದ 3 ವರ್ಷದ ಹಿಂದೆ ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆ ಆಗಿದ್ದರು. 3 ವರ್ಷದ ಬಳಿಕ ಸಾವಿತ್ರಮ್ಮ ತವರು ಮನೆ ಎನ್ ದೇವರಹಳ್ಳಿಗೆ ಬಂದಿದ್ದರು. ಇಬ್ಬರೂ ಬೇರೆ ಜಾತಿಯವರಾಗಿದ್ದಾರೆ. ಸಾವಿತ್ರಮ್ಮ ಜೋಗಿ ಜನಾಂಗಕ್ಕೆ ಸೇರಿದ್ದು, ಮಣಿಕಂಠ ರೆಡ್ಡಿ ಜನಾಂಗಕ್ಕೆ ಸೇರಿದ್ದಾರೆ.

ಗ್ರಾಮದ ಜೋಗಿ ಜನಾಂಗದ ಹಿರಿಯರು, ನೀವು ಅಂತರ್ ಜಾತಿ ವಿವಾಹ ಆಗಿದ್ದೀರಿ ಎಂದು ಅವರನ್ನು ನಿಂದಿಸಿ, 30,000 ಸಾವಿರ ರೂ. ದಂಡ ವಿಧಿಸಿದ್ದಾರೆ. ಅಲ್ಲದೇ ಗ್ರಾಮದಿಂದ ಬಹಿಷ್ಕಾರ ಹಾಕಿ ಅಮಾನವೀಯತೆ ಮೆರೆದಿದ್ದಾರೆ.

ಸಾವಿತ್ರಮ್ಮ ಬಾಣಂತಿ ಎಂಬುದನ್ನು ಲೆಕ್ಕಸದೇ, ಮಾನವೀಯತೆ ಮರೆತು ಗ್ರಾಮದ ಹಿರಿಯರು ಅನಾಗರೀಕತೆ ತೋರಿ. ಈ ಮುದ್ದಾದ ಜೋಡಿಗೆ ಗ್ರಾಮದಿಂದ ಬಹಿಷ್ಕಾರ ಹಾಕಿದ್ರು ಯಾವುದೇ ಪೊಲೀಸ್ ಠಾಣೆ ಮೆಟ್ಟಿಲೇರದೇ ಮತ್ತೆ ಬೆಂಗಳೂರಿಗೆ ತೆರಳಿದ್ದರು. ಬಳಿಕ ಚಳ್ಳಕೆರೆ ತಾಲೂಕಿನಲ್ಲಿ ನಡೆದ ಪ್ರಸಿದ್ಧ ಗೌರಸಂದ್ರ ಮಾರಮ್ಮ ಜಾತ್ರೆಗೆಂದು ಆಗಮಿಸಿದ್ದಾಗಲೂ ಗ್ರಾಮದ ಅನೇಕ ಮುಖಂಡರು ಅವರಿಗೆ ಕಿರುಕುಳ ಕೊಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ.

ಪುಟ್ಟ ಮಗುವಿನೊಂದಿಗೆ ದಂಪತಿ ಆಗಮಿಸಿದ್ದನ್ನೂ ಲೆಕ್ಕಿಸದ ಗ್ರಾಮಸ್ಥರು ಮನೆ ಬಿಟ್ಟು ಹೋಗುವಂತೆ ಒತ್ತಡ ಹಾಕಿದ್ದಲ್ಲದೇ ಮತ್ತೆಯೂ ದಂಡ ವಿಧಿಸಲು, ಬಹಿಷ್ಕಾರ ಹಾಕಲು ಮುಂದಾಗಿದ್ದಾರೆ. ಇದರಿಂದಾಗಿ ಬೇಸರಗೊಂಡ ಜೋಡಿ ತಮ್ಮ ಪುಟ್ಟ ಮಗುವಿನೊಂದಿಗೆ ಚಳ್ಳಕೆರೆ ಸಾಂತ್ವನ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ. ಸದ್ಯ ಸಂತ್ರಸ್ತ ಜೋಡಿಯ ಪರ ನಿಂತಿರುವ ಸಾಮಾಜಿಕ ಹೋರಾಟಗಾರರಿಂದ ಬಹಿಷ್ಕಾರ ಹಾಕಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.

ಇದನ್ನೂ ಓದಿ: ಉಜ್ಜಯಿನಿ: ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿ ಅರೆಬೆತ್ತಲೆಯಾಗಿ ಪತ್ತೆ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...