- Advertisement -
- Advertisement -
ಭಗತ್ ಸಿಂಗ್ ಜನ್ಮದಿನದ ಪ್ರಯುಕ್ತ ಇಂದು (ಸೆ.28) ಜಿಲ್ಲೆಯ ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದಲ್ಲಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಮಹಾತ್ಮ ಗಾಂಧೀಜಿಯನ್ನು ಹತ್ಯೆಗೈದ ನಾಥೂರಾಮ್ ಗೋಡ್ಸೆಯ ಫೋಟೊ ಇರುವ ಫ್ಲೆಕ್ಸ್ ಹಿಡಿದು ಮೆರವಣಿಗೆ ಮಾಡಲಾಗಿದೆ.
ವೈಜೂ ಸಾಹುಕಾರ ಮುರಗಾನೂರ ಇವರ ಮುಂದಾಳತ್ವದಲ್ಲಿ ನಡೆದ ಮೆರವಣಿಗೆಯಲ್ಲಿ, ಭಗತ್ ಸಿಂಗ್, ರಾಣಿ ಚೆನ್ನಮ್ಮ, ಸರ್ದಾರ್ ವಲ್ಲಭಭಾಯಿ ಪಟೇಲ್ ಮುಂತಾದ ರಾಷ್ಟ್ರ ನಾಯಕರ ಫೋಟೊ ಜೊತೆಗೆ ಸಾವರ್ಕರ್ ಮತ್ತು ಗಾಂಧಿ ಹಂತಕ ಗೋಡ್ಸೆಯ ಫೋಟೋವನ್ನೂ ಮೆರವಣಿಗೆ ಮಾಡಲಾಗಿದೆ. ಸಧ್ಯ ಈ ಫೋಟೊ ವೈರಲ್ ಆಗಿದ್ದು ಸಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ಬಗ್ಗೆ ಮಾತನಾಡಿದ ನೆಲೋಗಿ ಠಾಣೆಯ ಪೊಲೀಸರು, ”ಈ ಕಾರ್ಯಕ್ರಮಕ್ಕೆ ಯಾವುದೇ ಅನುಮತಿಯನ್ನು ಪಡೆದಿಲ್ಲ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ ಅಮಾನವೀಯ ಘಟನೆ: ಅಂತರ್ಜಾತಿ ವಿವಾಹವಾದ ವಿಕಲಚೇತನ ಜೋಡಿಗೆ ಬಹಿಷ್ಕಾರ