Homeಮುಖಪುಟಭಾರತದ ಹಸಿರು ಕ್ರಾಂತಿಯ ಪಿತಾಮಹ MS ಸ್ವಾಮಿನಾಥನ್ ಇನ್ನಿಲ್ಲ

ಭಾರತದ ಹಸಿರು ಕ್ರಾಂತಿಯ ಪಿತಾಮಹ MS ಸ್ವಾಮಿನಾಥನ್ ಇನ್ನಿಲ್ಲ

- Advertisement -
- Advertisement -

ಕೃಷಿ ವಿಜ್ಞಾನಿ ಮತ್ತು ಭಾರತದ ಹಸಿರು ಕ್ರಾಂತಿಯ ಪಿತಾಮಹ MS ಸ್ವಾಮಿನಾಥನ್ (98) ಅವರು ಇಂದು (ಗುರುವಾರ ) ಬೆಳಿಗ್ಗೆ ಚೆನ್ನೈನಲ್ಲಿ ನಿಧನರಾದರು. ಡಾ ಸ್ವಾಮಿನಾಥನ್ ಅವರು ಅಧಿಕ ಇಳುವರಿಯ ಭತ್ತದ ತಳಿ ಅಭಿವೃದ್ಧಿಯಿಂದ ದೇಶದ ಆಹಾರ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸಸಿದ್ದಾರೆ. ಅದು ಅವರಿಗೆ ಜಾಗತಿಕ ಮನ್ನಣೆಯನ್ನು ತಂದುಕೊಟ್ಟಿತು.

ಮೊಂಕೊಂಬು ಸಾಂಬಶಿವನ್ (ಎಂ.ಎಸ್) ಸ್ವಾಮಿನಾಥನ್‌ ಅವರು 1925ರ ಆ 7ರಂದು ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ಜನಿಸಿದರು. ಹವಾಮಾನ ತಜ್ಞ ಕೃಷಿ ವಿಜ್ಞಾನಿ, ಸಸ್ಯ ತಳಿವಿಜ್ಞಾನಿಯೂ ಆಗಿದ್ದ ಅವರು ಭಾರತದ ಕೃಷಿ ಉತ್ಪನ್ನಗಳ ಅಭಿವೃದ್ಧಿ ಮೂಲಕ ದೇಶದ ಆರ್ಥಿಕತೆ ಉತ್ತಮಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಸಸ್ಯ ತಳಿಶಾಸ್ತ್ರಜ್ಞರಾಗಿ ಡಾ ಸ್ವಾಮಿನಾಥನ್ ಅವರ ಪ್ರಯಾಣವು ಹಸಿರು ಕ್ರಾಂತಿಗೆ ದಾರಿ ಮಾಡಿಕೊಟ್ಟಿತು, ಇದು ಭಾರತೀಯ ಕೃಷಿಯಲ್ಲಿ ಪರಿವರ್ತನೆಯ ಯುಗವಾಗಿದೆ. ಸುಸ್ಥಿರ ಕೃಷಿ ಪದ್ಧತಿಗಾಗಿ ಅವರ ಸಮರ್ಥನೆಯು ಅವರನ್ನು ಸುಸ್ಥಿರ ಆಹಾರ ಭದ್ರತೆಯ ಕ್ಷೇತ್ರದಲ್ಲಿ ವಿಶ್ವ ನಾಯಕನನ್ನಾಗಿ ಮಾಡಿತು.

ವಿಶ್ವ ಸಂಸ್ಥೆಯ ಪರಿಸರ ಕಾರ್ಯಕ್ರಮವು ಸ್ವಾಮಿನಾಥನ್ ಅವರನ್ನು ‘ಆರ್ಥಿಕ ಪರಿಸರ ವಿಜ್ಞಾನದ ಪಿತಾಮಹ’ ಎಂದು ಬಣ್ಣಿಸಿದೆ. 1960 ಹಾಗೂ 70ರ ದಶಕದಲ್ಲಿ ರಾಸಾಯನಿಕ ಹಾಗೂ ಜೈವಿಕ ತಂತ್ರಜ್ಞಾನದ ಮೂಲಕ ಅಕ್ಕಿ ಮತ್ತು ಗೋದಿಯ ಉತ್ಪಾದನೆ ಹೆಚ್ಚಿಸಲು ರೂಪಿಸಲಾದ ಹಸಿರು ಕ್ರಾಂತಿ ಯೋಜನೆಯಲ್ಲಿ ಕೇಂದ್ರ ಕೃಷಿ ಸಚಿವರಾಗಿದ್ದ ಸಿ ಸುಬ್ರಮಣಿಯಂ, ಜಗಜೀವನ ರಾಮ್ ಅವರೊಂದಿಗೆ ಸ್ವಾಮಿನಾಥನ್ ಕೆಲಸ ಮಾಡಿದ್ದರು.

1972 ಮತ್ತು 1979ರ ನಡುವೆ, ಡಾ ಸ್ವಾಮಿನಾಥನ್ ಅವರು ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಮಹಾನಿರ್ದೇಶಕರಾಗಿ ಮತ್ತು ಭಾರತ ಸರ್ಕಾರದ ಕಾರ್ಯದರ್ಶಿಯಾಗಿ, ಕೃಷಿ ಸಂಶೋಧನೆ ಮತ್ತು ಶಿಕ್ಷಣ ಇಲಾಖೆಗೆ ಸೇವೆ ಸಲ್ಲಿಸಿದರು.

ಅಧಿಕ ಇಳುವರಿಯ ಭತ್ತ ಹಾಗೂ ಗೋಧಿ ತಳಿಯ ಅಭಿವೃದ್ಧಿಗಾಗಿ 1987ರಲ್ಲಿ ಅವರಿಗೆ ಜಾಗತಿಕ ಆಹಾರ ಬಹುಮಾನ ಲಭಿಸಿತ್ತು. ಅದರಿಂದ ಬಂದ ಹಣದಲ್ಲಿ ಅವರು ಚೆನ್ನೈನಲ್ಲಿ ಎಂ.ಎಸ್‌.ಸ್ವಾಮಿನಾಥನ್‌ ಸಂಶೋಧನಾ  ಪ್ರತಿಷ್ಠಾನವನ್ನು ಆರಂಭಿಸಿದರು. 1971ರಲ್ಲಿ ರೇಮನ್ ಮ್ಯಾಗ್ಸೆಸೆ ಹಾಗೂ 1986ರಲ್ಲಿ ಆಲ್ಬರ್ಟ್ ಐನ್‌ಸ್ಟೀನ್ ವಿಶ್ವ ವಿಜ್ಞಾನ ಪ್ರಶಸ್ತಿಗಳೂ ಅವರಿಗೆ ಸಂದಿವೆ.

ಇವುಗಳೊಂದಿಗೆ ಪದ್ಮಶ್ರೀ, ಪದ್ಮ ಭೂಷಣ ಹಾಗೂ ಪದ್ಮ ವಿಭೂಷಣ ಪ್ರಶಸ್ತಿಗಳು ಸ್ವಾಮಿನಾಥನ್ ಅವರಿಗೆ ಸಂದಿವೆ. ಎಚ್.ಕೆ ಫಿರೋದಿಯಾ ಪ್ರಶಸ್ತಿ, ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಪ್ರಶಸ್ತಿ ಹಾಗೂ ಇಂದಿರಾ ಗಾಂಧಿ ಪ್ರಶಸ್ತಿಗಳೂ ಸ್ವಾಮಿನಾಥನ್ ಅವರಿಗೆ ಲಭಿಸಿವೆ.

ದೇಶದ ಕೃಷಿ ಕ್ಷೇತ್ರದಲ್ಲಿ ಅಲ್ಲದೆ, ಜಾಗತಿಕ ಮಟ್ಟದಲ್ಲಿ ಸ್ವಾಮಿನಾಥನ್ ಅವರ ಕಾರ್ಯ ಹೆಚ್ಚು ಜನಪ್ರಿಯ. ಜಾಗತಿಕ ಮಟ್ಟದ ಹಲವು ಕೃಷಿ ಹಾಗೂ ಪರಿಸರ ಜಾಗೃತಿ ಕುರಿತ ಕಾರ್ಯ ಕ್ರಮಗಳಲ್ಲಿ ಅವರು ಸಕ್ರೀಯರಾಗಿದ್ದರು. ಟೈಮ್ ನಿಯತಕಾಲಿಕೆ ಪ್ರಕಟಿಸಿದ 20ನೇ ಶತಮಾನದ 20 ಅತ್ಯಂತ ಪ್ರಭಾವಿಗಳ ಪಟ್ಟಿಯಲ್ಲಿ ಸ್ವಾಮಿನಾಥನ್ ಅವರ ಹೆಸರು ಸೇರಿತ್ತು.

ಸ್ವಾಮಿನಾಥನ್ ಅವರು ಮೂವರು ಪುತ್ರಿಯರಾದ ಸೌಮ್ಯಾ ಸ್ವಾಮಿನಾಥನ್, ಮಧುರಾ ಸ್ವಾಮಿನಾಥನ್ ಮತ್ತು ನಿತ್ಯಾ ಸ್ವಾಮಿನಾಥನ್‌ ಅವರನ್ನು ಅಗಲಿದ್ದಾರೆ. ಸ್ವಾಮಿನಾಥನ್ ಅವರ ಪತ್ನಿ ಮೀನಾ 2022ರಲ್ಲಿ ನಿಧನರಾಗಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ ಅಮಾನವೀಯ ಘಟನೆ: ಅಂತರ್ಜಾತಿ ವಿವಾಹವಾದ ವಿಕಲಚೇತನ ಜೋಡಿಗೆ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...