Homeಮುಖಪುಟಜಮ್ಮು-ಕಾಶ್ಮೀರದಲ್ಲಿ 4 ವರ್ಷದಿಂದ ಪೊಲೀಸರ ನೇಮಕಾತಿಯಾಗಿಲ್ಲ: ಆಡಳಿತದ ವಿರುದ್ಧ ಪೊಲೀಸ್ ಮಹಾನಿರ್ದೇಶಕ ಅಸಮಾಧಾನ

ಜಮ್ಮು-ಕಾಶ್ಮೀರದಲ್ಲಿ 4 ವರ್ಷದಿಂದ ಪೊಲೀಸರ ನೇಮಕಾತಿಯಾಗಿಲ್ಲ: ಆಡಳಿತದ ವಿರುದ್ಧ ಪೊಲೀಸ್ ಮಹಾನಿರ್ದೇಶಕ ಅಸಮಾಧಾನ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪೊಲೀಸ್ ಕಾನ್ಸ್‌ಟೇಬಲ್‌ಗಳು ಮತ್ತು ಮೇಲಧಿಕಾರಿಗಳ ನೇಮಕಾತಿ ಮಾಡದೇ ಇರುವ ಕಾರಣಕ್ಕೆ ಪೊಲೀಸರು ಸಿಬ್ಬಂದಿ ಕೊರತೆಯನ್ನು ಎದುರಿಸುತ್ತಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಯಾವುದೇ ನೇಮಕಾತಿ ನಡೆಯದ ಕಾರಣ ಪೊಲೀಸ್ ಇಲಾಖೆಯಲ್ಲಿ ಮಾನವ ಸಂಪನ್ಮೂಲ ಕೊರತೆಯ ಪರಿಣಾಮದ ಬಗ್ಗೆ ಜೆ & ಕೆ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಸಿಂಗ್ ಪ್ರಕಾರ, 4,000ಕ್ಕೂ ಹೆಚ್ಚು ಪೊಲೀಸ್ ಕಾನ್ಸ್‌ಟೇಬಲ್‌ಗಳ ಪೋಸ್ಟ್‌ಗಳು ಖಾಲಿ ಇವೆ ಮತ್ತು ನೇಮಕಾತಿ ಪರೀಕ್ಷೆಗಳನ್ನು ನಡೆಸಲು ಜಮ್ಮು ಮತ್ತು ಕಾಶ್ಮೀರ ಸೇವೆಗಳ ಆಯ್ಕೆ ಮಂಡಳಿ (JKSSB)ಯು ವಿಫಲವಾಗಿದೆ.

”ನಮ್ಮಲ್ಲಿ 4,000ಕ್ಕೂ ಹೆಚ್ಚು ಖಾಲಿ ಹುದ್ದೆಗಳಿವೆ. ಈ ಕೊರತೆಯು ಪೊಲೀಸ್ ಇಲಾಖೆಯಾದ್ಯಂತ ಕಂಡುಬರುತ್ತಿದೆ” ಎಂದು ಸಿಂಗ್ ಹೇಳಿದರು.

ಪೊಲೀಸ್ ಸಿಬ್ಬಂದಿಯ ನೇಮಕಾತಿಯಲ್ಲಿ ಕೇಂದ್ರಾಡಳಿತ ಪ್ರದೇಶದ ಆಡಳಿತದ ವೈಫಲ್ಯದ ಬಗ್ಗೆ ಇದೇ ಮೊದಲ ಬಾರಿಗೆ ಜೆ & ಕೆ ಪೊಲೀಸ್ ಮುಖ್ಯಸ್ಥರು ಸಾರ್ವಜನಿಕವಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ರಾಜ್ಯತ್ವ ಮತ್ತು ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿದ ನಂತರ, ಆಡಳಿತಾತ್ಮಕ ಬದಲಾವಣೆಗಳ ಭಾಗವಾಗಿ, ಪೊಲೀಸ್ ಇಲಾಖೆಯಲ್ಲಿನ ನೇಮಕಾತಿಯನ್ನು ಸಹ ಪೊಲೀಸ್ ಇಲಾಖೆಯಿಂದ ತೆಗೆದು ಜಮ್ಮು ಮತ್ತು ಕಾಶ್ಮೀರ ಸೇವೆಗಳ ಆಯ್ಕೆ ಮಂಡಳಿಗೆ (JKSSB) ಹಸ್ತಾಂತರಿಸಲಾಯಿತು.

2022ರಲ್ಲಿ, ಮಂಡಳಿಯು 1,200 ಪೊಲೀಸ್ ಸಬ್-ಇನ್‌ಸ್ಪೆಕ್ಟರ್‌ಗಳ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿತು – ಇದು ಕೇಂದ್ರಾಡಳಿತ ಪ್ರದೇಶದ ಆಡಳಿತದ ಅಡಿಯಲ್ಲಿ ಮೊದಲ ಪ್ರಮುಖ ನೇಮಕಾತಿಯಾಗಿದೆ. ಆದರೆ, ಈ  ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಇದೆ. ಹಾಗಾಗಿಯೇ ಇದು ಜಮ್ಮು ಮತ್ತು ಕಾಶ್ಮೀರಿನಾದ್ಯಂತ ಉದ್ಯೋಗ ಆಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆಗಳು ನಡೆದವು. ಸಿಬಿಐ ತನಿಖೆಯ ಪ್ರಕಾರ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರೀ ಭ್ರಷ್ಟಾಚಾರ ಮತ್ತು ಅವ್ಯವಹಾರ ನಡೆದಿದ್ದು, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಪರೀಕ್ಷೆಯ ಪತ್ರಿಕೆಗಳು ₹ 20 ರಿಂದ 30 ಲಕ್ಷಕ್ಕೆ ಮಾರಾಟವಾಗಿವೆ ಎಂದು ಹೇಳಲಾಗಿದೆ.

ಆನಂತರ ನೇಮಕಾತಿ ಪಟ್ಟಿಯನ್ನು ರದ್ದುಗೊಳಿಸಿದ ನಂತರ, J&K ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೊಸ ಪರೀಕ್ಷೆ ಘೋಷಿಸಿದರು. ಪಾರದರ್ಶಕ ಮತ್ತು ನ್ಯಾಯಯುತ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಭರವಸೆ ನೀಡಿದರು. ಆದರೆ ಹೊಸ ಪರೀಕ್ಷೆಗಳನ್ನು ಘೋಷಿಸಿದ ಕೂಡಲೇ, ಪರೀಕ್ಷೆಗಳನ್ನು ನಡೆಸಲು ಕಳಂಕಿತ ಮತ್ತು ಕಪ್ಪುಪಟ್ಟಿಗೆ ಸೇರಿದ ಏಜೆನ್ಸಿಗೆ ಗುತ್ತಿಗೆ ನೀಡುವ ಸರ್ಕಾರದ ನಿರ್ಧಾರವು ಸಾವಿರಾರು ಉದ್ಯೋಗ ಆಕಾಂಕ್ಷಿಗಳಿಗೆ ಮತ್ತು ನೇಮಕಾತಿ ಪ್ರಕ್ರಿಯೆಯ ನ್ಯಾಯಸಮ್ಮತತೆಗೆ ಮತ್ತೊಂದು ಹೊಡೆತವನ್ನು ನೀಡಿದೆ.

”ಮೊದಲು, ಪೊಲೀಸರು ತನ್ನದೇ ಆದ ಪ್ರಕ್ರಿಯೆಯ ಮೂಲಕ ನೇಮಕಾತಿಗಳನ್ನು ಮಾಡುತ್ತಿದ್ದರು. ಹೊಸ ಪ್ರಯೋಗವನ್ನು ಮಾಡಲಾಯಿತು ಮತ್ತು ಪ್ರಕ್ರಿಯೆಯನ್ನು ಬೇರೆ ಇಲಾಖೆಗೆ ಹಸ್ತಾಂತರಿಸಲಾಯಿತು. ಅಂದಿನಿಂದ,  ಯಾವುದೇ ನೇಮಕಾತಿ ನಡೆಯುತ್ತಿಲ್ಲ” ಎಂದು ಸಿಂಗ್ ಹೇಳಿದರು.

ಇಲ್ಲಿಯವರೆಗೆ, ಸರ್ಕಾರದ ನೇಮಕಾತಿ ಸಂಸ್ಥೆ ಬಿಡುಗಡೆ ಮಾಡಿದ ನಾಲ್ಕು ಆಯ್ಕೆ ಪಟ್ಟಿಗಳನ್ನು ರದ್ದುಗೊಳಿಸಲಾಗಿದೆ. ಇವರನ್ನು ಸಿಬಿಐ ತನಿಖೆ ನಡೆಸುತ್ತಿದ್ದು, ಇದರಲ್ಲಿ ಭಾಗಿಯಾಗಿರುವ ಹಲವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಸಂಸತ್ತಿನಲ್ಲಿ ಕೋಮುವಾದಿ ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ ರಮೇಶ್ ಬಿಧುರಿ ಚುನಾವಣಾ ಉಸ್ತುವಾರಿಯಾಗಿ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...