Homeಕರ್ನಾಟಕನಾಳೆ ಕರ್ನಾಟಕ ಬಂದ್: ಜನಜೀವನ ಅಸ್ತವ್ಯಸ್ತ ಸಾಧ್ಯತೆ

ನಾಳೆ ಕರ್ನಾಟಕ ಬಂದ್: ಜನಜೀವನ ಅಸ್ತವ್ಯಸ್ತ ಸಾಧ್ಯತೆ

- Advertisement -
- Advertisement -

ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ನಾಳೆ (ಶುಕ್ರವಾರ) ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ನೂರಾರು ಸಂಘಟನೆಗಳು ಬಂದ್​ಗೆ ಸಂಪೂರ್ಣ ಬೆಂಬಲ ನೀಡಿದ್ದು, ನಾಳೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಂದ್ ಯಶಸ್ವಿಯಾಗುವ ಸಾಧ್ಯತೆ ಇದೆ. ಬಂದ್​ ಯಶಸ್ವಿ ಮಾಡಲು ಕನ್ನಡಪರ ಹಾಗೂ ರೈತ ಪರ ಸಂಘಟನೆಗಳಿಂದ ಭಾರೀ ತಯಾರಿ ನಡೆದಿದೆ.

ಟೋಲ್ ಗೇಟ್, ರಾಷ್ಟ್ರೀಯ ಹೆದ್ದಾರಿಗಳನ್ನು ತಡೆಯಲು ಹೋರಾಟಗಾರರು ಪ್ಲಾನ್​ ಮಾಡಿದ್ದಾರೆ. ರಾಜ್ಯದ ಪ್ರಮುಖ ಹೆದ್ದಾರಿಗಳಲ್ಲೇ ಪ್ರತಿಭಟನೆ ನಡೆಸುವುದಕ್ಕೆ ಕನ್ನಡ ಸಂಘಟನೆಗಳ ತಯಾರಿ ನಡೆಸುತ್ತಿವೆ. ನಗರಗಳ ವ್ಯಾಪ್ತಿ ಮಾತ್ರವಲ್ಲದೆ, ತಾಲೂಕು ಕೇಂದ್ರಗಳಲ್ಲಿ ಹಾದು ಹೋಗುವ ಹೆದ್ದಾರಿಗಳಲ್ಲೂ ಪ್ರತಿಭಟನೆಗೆ ಸಿದ್ಧತೆ ನಡೆಯುತ್ತಿದೆ.

ಈಗಾಗಲೇ ಇಡೀ ರಾಜ್ಯಕ್ಕೆ ಕನ್ನಡಪರ ಸಂಘಟನೆಗಳು ಸಂದೇಶ ಕೊಟ್ಟಿವೆ. ಕಳೆದ ಮಂಗಳವಾರವಷ್ಟೇ ಬೆಂಗಳೂರು ಬಂದ್​ ಮಾಡಲಾಯಿತು. ಇದೀಗ ಅಖಂಡ ಕರ್ನಾಟಕ ಬಂದ್​ ಗೆ ಸಕಲ ತಯಾರಿ ನಡೆಯುತ್ತಿದೆ.

ಶುಕ್ರವಾರ ಕರ್ನಾಟಕ ಬಂದ್​ಗೆ ಇಂದು ಸಹ ಅಬ್ಬರದ ಪ್ರಚಾರ ನಡೆಯುತ್ತಿದೆ. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬಂದ್‌ಗೆ ಬೆಂಬಲ ನೀಡುವಂತೆ ವಿವಿಧ ಸಂಘಟನೆಗಳು ಮನವಿ ಮಾಡುತ್ತಿವೆ. ನಗರ ಹಲವು ಕಡೆ ತೆರದ ವಾಹನದ ಮುಖಾಂತರ ವಾಟಳ್ ನಾಗರಾಜ್ ಮನವಿ ಮಾಡುತ್ತಿದ್ದಾರೆ. ನಿನ್ನೆ ಮಾಲ್, ಮಾರುಕಟ್ಟೆ ಸೇರಿ ಹಲವು ಕಡೆ ಹೋಗಿ ಪ್ರಚಾರ ಮಾಡಿದರು.

ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳವರೆಗೆ ಪ್ರತಿದಿನ 5 ಸಾವಿರ ಕ್ಯೂಸೆಕ್​​ ನೀರನ್ನು ಹರಿಸಬೇಕೆಂದು ಸೆ.12ರಂದು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಪಾಲಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೆ.18ರಂದು ಆದೇಶ ಹೊರಡಿಸಿತ್ತು. ಇದರ ವಿರುದ್ಧ ಸುಪ್ರೀಂಕೋರ್ಟ್​ಗೆ ಕರ್ನಾಟಕ ಮೇಲ್ಮನವಿ ಸಲ್ಲಿಸಿತ್ತು. ಸೆ.21ರಂದು ತೀರ್ಪು ಪ್ರಕಟಿಸಿದ ನ್ಯಾಯಾಲಯ CWMA ಆದೇಶವನ್ನು ಎತ್ತಿಹಿಡಿದಿತ್ತು. ಅದರಂತೆ ರಾಜ್ಯ ಸರ್ಕಾರ ನೀರು ಬಿಡುಗಡೆ ಸಹ ಮಾಡಿತು. ಅತ್ತ ಸಂಘಟನೆಗಳು ಬಂದ್​ ಗೆ ಕರೆ ಕೊಡುತ್ತಿದ್ದರೆ. ಇದರ ನಡುವೆ ಮತ್ತೆ 3000 ಸಾವಿರ ಕ್ಯೂಸೆಕ್​ ನೀರು ಹರಿಸಲು ಕಾವೇರಿ ನದಿ ನೀರು ಸಮಿತಿ ಶಿಫಾರಸು ಮಾಡಿರುವುದರಿಂದ ನಾಳಿನ ಕರ್ನಾಟಕ ಬಂದ್​ ತೀವ್ರತೆ ಪಡೆದುಕೊಳ್ಳುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ.

ಇದನ್ನೂ ಓದಿ: ನಾಳೆ ಬೆಂಗಳೂರು, ಶುಕ್ರವಾರ ಅಖಂಡ ಕರ್ನಾಟಕ ಬಂದ್‌ಗೆ ಕರೆ: ಯಾವ ಸೌಲಭ್ಯ ಇರಲಿದೆ, ಏನಿರಲ್ಲ- ಮಾಹಿತಿ ಇಲ್ಲಿದೆ…

ಜನಜೀವನ ಅಸ್ತವ್ಯಸ್ತ ಸಾಧ್ಯತೆ: 

ಕರ್ನಾಟಕ ಬಂದ್‌ನಿಂದ ವಿಶೇಷವಾಗಿ ರಾಜ್ಯದ ದಕ್ಷಿಣ ಭಾಗದಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗುವ ಸಾಧ್ಯತೆಯಿದೆ. ನಗರದ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಎಲ್ಲ ವರ್ಗದ ಜನರು ಭಾಗವಹಿಸುವ ಸಾಧ್ಯತೆ ಇದೆ ಎಂದು ಸಂಘಟಕರು ತಿಳಿಸಿದ್ದಾರೆ.

ಬಂದ್ ಇಡೀ ಕರ್ನಾಟಕಕ್ಕೆ ಮತ್ತು ಹೆದ್ದಾರಿಗಳು, ಟೋಲ್ ಗೇಟ್‌ಗಳು, ರೈಲು ಸೇವೆಗಳು ಮತ್ತು ವಿಮಾನ ನಿಲ್ದಾಣಗಳನ್ನು ಮುಚ್ಚಲು ಪ್ರಯತ್ನಿಸುತ್ತೇವೆ ಎಂದು ಹೇಳಲಾಗಿದೆ. ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಸಹ ಬಂದ್‌ಗೆ ಬೆಂಬಲ ನೀಡಿದ್ದು, ಕರ್ನಾಟಕದ ಹೋಟೆಲ್‌ಗಳು, ಆಟೋರಿಕ್ಷಾಗಳು ಬಂದ್‌ಗೆ ಬೆಂಬಲ ನೀಡಿವೆ.

ಆಟೋರಿಕ್ಷಾ ಚಾಲಕರ ಒಕ್ಕೂಟ ಮತ್ತು ಓಲಾ ಉಬರ್ ಚಾಲಕರು ಮತ್ತು ಮಾಲೀಕರ ಸಂಘ (OUDOA) ಬಂದ್‌ಗೆ ಬೆಂಬಲ ನೀಡುತ್ತಿದೆ. ನಾವು ನಾಳೆ ನಾಯಂಡಹಳ್ಳಿಯಿಂದ ಫ್ರೀಡಂ ಪಾರ್ಕ್‌ವರೆಗೆ ರ್ಯಾಲಿ ನಡೆಸುತ್ತೇವೆ” ಎಂದು ಅದರ ಅಧ್ಯಕ್ಷ ತನ್ವೀರ್ ಪಾಷಾ ತಿಳಿಸಿದ್ದಾರೆ.

ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಮುಷ್ಕರಕ್ಕೆ ನೈತಿಕ ಬೆಂಬಲ ನೀಡಿದೆ. ಶುಕ್ರವಾರ ಇಡೀ ದಿನ ರೆಸ್ಟೋರೆಂಟ್‌ಗಳು ಮತ್ತು ತಿನಿಸುಗಳನ್ನು ಮುಚ್ಚಬೇಕೆ ಎಂಬುದರ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲು ಅವರು ಸಭೆ ನಡೆಸುತ್ತಿದ್ದರು.

ರಾಜ್ಯ ಸಾರಿಗೆ ಇಲಾಖೆಯು ತಮ್ಮ ಸೇವೆಗಳನ್ನು ಎಂದಿನಂತೆ ಮುಂದುವರಿಸಲು ರಾಜ್ಯ ಸಾರಿಗೆ ನಿಗಮಗಳಿಗೆ ನಿರ್ದೇಶನ ನೀಡಿದೆ. ಕರ್ನಾಟಕದ ಉತ್ತರ ಭಾಗದ ಬಳ್ಳಾರಿ, ಕಲಬುರಗಿ, ಬೀದರ್, ಬಾಗಲಕೋಟೆ, ವಿಜಯಪುರ, ಯಾದಗಿರಿ, ಹುಬ್ಬಳ್ಳಿ-ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ದಾವಣಗೆರೆಯ ರೈತರು ಮತ್ತು ವರ್ತಕರು ಬಂದ್‌ಗೆ ತಮ್ಮ ನೈತಿಕ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ ಆದರೆ ಬಂದ್ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಕರ್ನಾಟಕ ಬಂದ್​ಗೆ ನೈತಿಕ ಬೆಂಬಲ ನೀಡಲು ಶಾಲೆಗಳು ಮುಂದಾಗಿದೆ. ಶಾಲೆಗಳಿಗೆ ರಜೆ ನೀಡುವ ಜವಬ್ದಾರಿಯನ್ನು ಆಯಾ ಆಡಳಿತ ಮಂಡಳಿ ತಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳು ಶಾಲೆಗಳ ರಜೆ ನೀಡುವ ಬಗ್ಗೆ ನಿರ್ಧಾರಕ್ಕೆ ಮನವಿ ನೀಡಲಾಗಿದೆ ಎಂದು ರೂಪ್ಸಾ ಖಾಸಗಿ ಶಾಲೆಗಳ ಸಂಘಟನೆಯ ಲೋಕೇಶ್ ತಾಳಿಕಟ್ಟೆ ಮನವಿ ಮಾಡಿದ್ದಾರೆ.

ಬೀದಿ ಬದಿ ವ್ಯಾಪಾರಿಗಳು ಕೂಡ ಬಂದ್​ಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ. ಬೆಳಗ್ಗೆ 6 ರಿಂದ ಸಂಜೆ 6 ವರೆಗೂ ರಾಜ್ಯಾದ್ಯಂತ ಬೀದಿ ಬದಿ ವ್ಯಾಪಾರಿಗಳು ಹಾಗೂ ಸ್ಥಳೀಯ ಮಾರ್ಕೆಟ್ ಬೀದಿ ಬದಿ ವ್ಯಾಪಾರಗಳು ಸಂಪೂರ್ಣ ಸ್ಥಗಿತವಾಗಲಿದೆ ಎಂದು ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ರಾಜ್ಯಾಧ್ಯಕ್ಷ ರಂಗಸ್ವಾಮಿ ತಿಳಿಸಿದ್ದಾರೆ.

ಕಾವೇರಿ ವಿಚಾರವಾಗಿ ನಾಳೆ ಕರ್ನಾಟಕ ಬಂದ್ ಹಿನ್ನೆಲೆ ಬಂದ್ ಬೆಂಬಲಿಸಿ ನಾಳೆ ಹೆದ್ದಾರಿ, ರೈಲು ತಡೆದು ಚಳವಳಿ ನಡೆಸಲಾಗುವುದು ಎಂದು ಮಂಡ್ಯದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕಾವೇರಿ ಹೋರಾಟ ಮತ್ತಷ್ಟು ತೀವ್ರಗೊಳಿಸಲು ನಿರ್ಧಾರ ಮಾಡಲಾಗಿದ್ದು, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಹಾಗೂ ರೈಲು ತಡೆಗೆ ನಿರ್ಧಾರ ಮಾಡಲಾಗಿದೆ.

ನಾಳೆ ಬೆಂಗಳೂರು ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಮೆಟ್ರೋ ರೈಲು ಸುರಕ್ಷತಾ ವಿಭಾಗದ ಆಯುಕ್ತರು ಕೆಂಗೇರಿಯಿಂದ ಚಲ್ಲಘಟ್ಟ ನಡುವೆ ಹೊಸ ಮಾರ್ಗ ಪರಿಶೀಲನೆ ನಡೆಸಲಿದ್ದು, ಈ ಹಿನ್ನಲೆ ನಾಳೆ ಕೆಂಗೇರಿಯಿಂದ ಮೈಸೂರು ರಸ್ತೆ ನಿಲ್ದಾಣಗಳ ನಡುವೆ ಸಂಚಾರವಿಲ್ಲ. ಆದರೆ, ಬೈಯ್ಯಪ್ಪನಹಳ್ಳಿಯಿಂದ ಮೈಸೂರು ರಸ್ತೆ ನಿಲ್ದಾಣಗಳ ನಡುವೆ ಸೇವೆ ಲಭ್ಯವಿರಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...