Homeಕರ್ನಾಟಕಬಿಜೆಪಿಯ ಪ್ರಭಾವಿ ನಾಯಕರುಗಳು ಕಾಂಗ್ರೆಸ್ ಸೇರಲಿದ್ದಾರೆ: ಹೊಸ ಬಾಂಬ್ ಸಿಡಿಸಿದ ಶೆಟ್ಟರ್

ಬಿಜೆಪಿಯ ಪ್ರಭಾವಿ ನಾಯಕರುಗಳು ಕಾಂಗ್ರೆಸ್ ಸೇರಲಿದ್ದಾರೆ: ಹೊಸ ಬಾಂಬ್ ಸಿಡಿಸಿದ ಶೆಟ್ಟರ್

- Advertisement -
- Advertisement -

ಬಿಜೆಪಿಯಿಂದ ಹಲವು ಪ್ರಭಾವಿ ನಾಯಕರುಗಳು ಕಾಂಗ್ರೆಸ್ ಸೇರಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ , ಕಾಂಗ್ರೆಸ್ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್​ ಹೊಸ ಬಾಂಬ್ ಸಿಡಿಸಿದ್ದಾರೆ.

ಲೋಕಸಭಾ ಚುನಾವಣೆ ಎದುರಿಸಲು ಜೆಡಿಎಸ್- ಬಿಜೆಪಿ ಮೈತ್ರಿಗೆ ಸಿದ್ಧತೆ ನಡೆಸುತ್ತಿದ್ದರೆ, ಇತ್ತ ಕಾಂಗ್ರೆಸ್​ ಸಹ ಜೆಡಿಎಸ್​ ಹಾಗೂ ಬಿಜೆಪಿ ನಾಯಕರಿಗೆ ಆಪರೇಷನ್ ಹಸ್ತ ನಡೆಸುತ್ತಿದೆ. ಈಗಾಗಲೇ ಕೆಲ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹಲವು ಪ್ರಭಾವಿ ನಾಯಕರುಗಳು ಕಾಂಗ್ರೆಸ್ ಸೇರಲಿದ್ದಾರೆ ಎಂದು ಜಗದೀಶ್ ಶೆಟ್ಟರ್​ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಹಲವು ತಿಂಗಳಿನಿಂದ ಹಲವು ಮಾಜಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ನಿನ್ನೆ ರಾಮಣ್ಣ ಲಮಾಣಿ ಮತ್ತು ಎಂ.ಪಿ‌. ಕುಮಾರಸ್ವಾಮಿ ಮತ್ತೆ ಸಂಪರ್ಕ ಮಾಡಿದಾಗ ಡಿಕೆ ಶಿವಕುಮಾರ್ ಬಳಿ ಕರೆದೊಯ್ದಿದ್ದೆ. ಮುಂದಿನ ವಾರ ಅವರನ್ನು ಅಧಿಕೃತವಾಗಿ ಕಾಂಗ್ರೆಸ್​ಗೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

”ಬಿಜೆಪಿಯಲ್ಲಿ ಬೇಜಾರಾದವರು ಬಹಳಷ್ಟು ಜನ ಇದ್ದಾರೆ. ಲೀಡರ್ ಲೆಸ್ ಪಾರ್ಟಿ ಹೇಗಿರುತ್ತದೆ ಎಂಬುದಕ್ಕೆ ಈಗ ಬಿಜೆಪಿ ಉದಾಹರಣೆ.. ಮಾಜಿ ಶಾಸಕರು, ಜಿಲ್ಲಾ, ತಾಲೂಕು ಮುಖಂಡರು ಸಂಪರ್ಕ ಮಾಡುತ್ತಿದ್ದಾರೆ. ಬಿಜೆಪಿಯಲ್ಲಿ ಅಸಮಾಧಾನಗೊಂಡಿರುವ ದೊಡ್ಡ ಟೀಮ್ ನಮ್ಮನ್ನು ಸಂಪರ್ಕ ಮಾಡುತ್ತಿದೆ. ಇನ್ನೂ ಹಲವು ಮಾಜಿ ಶಾಸಕರು ಸಂಪರ್ಕದಲ್ಲಿದ್ದಾರೆ” ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.

”ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇದೆ, ಶೂನ್ಯ ಪರಿಸ್ಥಿತಿ ಉಳಿದಿದೆ. ಬಿಜೆಪಿಯಲ್ಲಿ ನಾನು ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನಾಗಿ ಎಷ್ಟೋ ಜನರನ್ನು ಬೆಳೆಸಿದ್ದರಿಂದ ನೇರವಾಗಿ ಅವರು ನನ್ನ ಸಂಪರ್ಕಕ್ಕೆ ಬರುತ್ತಿದ್ದಾರೆ. ನನ್ನ ನಾಯಕತ್ವದಲ್ಲಿ ಇರುತ್ತೇವೆ ಎಂದು ಸ್ವ ಇಚ್ಛೆಯಿಂದ ಬರುತ್ತಿದ್ದಾರೆ. ಬಿಟ್ಟು ಬನ್ನಿ ಎಂದು ನಾನು ಯಾರಿಗೂ ಒತ್ತಾಯಿಸಲು ಹೋಗಿಲ್ಲ. ಅವರಾಗಿಯೇ. ಬರುತ್ತಿರುವವರನ್ನು ಮಾತ್ರ ಸೇರ್ಪಡೆ ಮಾಡಿಸುತ್ತಿದ್ದೇನೆ” ಎಂದು ಸ್ಪಷ್ಟಪಡಿಸಿದರು.

”ಕಾಂಗ್ರೆಸ್ ಕಾರ್ಯಕರ್ತ, ನಾಯಕನಾಗಿ ಪಕ್ಷ ಬಲವರ್ಧನೆಯ ಪ್ರಯತ್ನ ಮಾಡುತ್ತಿದ್ದೇನೆ. ಬಿಜೆಪಿಯಲ್ಲಿ ಇದ್ದಾಗ ಅನಂತಕುಮಾರ್, ಯಡಿಯೂರಪ್ಪ ನನಗೇ ಜವಾಬ್ದಾರಿ ಕೊಡುತ್ತಿದ್ದರು. ಬಿಜೆಪಿಯಲ್ಲಿ ನಾನೇ ಡಾಮಿನೇಟ್ ಮಾಡಲು ಹೋಗಲಿಲ್ಲ. ಯಾರ್ಯಾರು ನಾಯಕರು ಇದ್ದರೋ ಅವರನ್ನು ಒಪ್ಪಿಕೊಂಡು ಬಂದಿದ್ದೇನೆ. ಕಾಂಗ್ರೆಸ್‌ನಲ್ಲಿ ಸಂಪರ್ಕ ಮಾಡಿದವರನ್ನು ಸೇರಿಸುವ ಪ್ರಯತ್ನ ಆಗಿದೆಯೇ ಹೊರತು ನನ್ನ ಸ್ವ ಹಿತಾಸಕ್ತಿ ಇಲ್ಲ. ಕಾಂಗ್ರೆಸ್ ನಲ್ಲಿ ಸೇರ್ಪಡೆ ಮಾಡಿಸಿ ಎಂದು ಯಾವುದೇ ಜವಾಬ್ದಾರಿ ಕೊಟ್ಟಿಲ್ಲ ನನ್ನ ಸಂಪರ್ಕ ಮಾಡಿದವರನ್ನು ಪಕ್ಷದ ಅಧ್ಯಕ್ಷರ, ಹೈಕಮಾಂಡ್ ಗಮನಕ್ಕೆ ತರುವ ಕೆಲಸ ಮಾಡಿದ್ದೇನೆ” ಎಂದು ಹೇಳಿದರು.

ಜೆಡಿಎಸ್ ಬಿಜೆಪಿ ಮೈತ್ರಿ ಬಗ್ಗೆ ಮಾತನಾಡಿದ ಶೆಟ್ಟರ್, ”ಬಿಜೆಪಿ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‌ಗೆ ಪ್ಲಸ್ ಮೈನಸ್ ಏನೂ ಇಲ್ಲ. ಮೈತ್ರಿಯಿಂದ ಜೆಡಿಎಸ್‌ಗೆ ಲಾಭವೇ ಹೊರತು ಬಿಜೆಪಿಗೆ ಲಾಭ ಸಾಧ್ಯವೇ ಇಲ್ಲ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ದುರ್ಬಲವಾಗಿದೆ. ಮೈತ್ರಿಯಿಂದ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಡಾಮಿನೇಟ್ ಮಾಡುತ್ತದೆ. ಮೈತ್ರಿಯಿಂದ ಬಿಜೆಪಿ ಮತ್ತಷ್ಟು ದುರ್ಬಲ ಆಗುತ್ತದೆ. ರಾಜ್ಯ ಬಿಜೆಪಿ ನಾಯಕರನ್ನು ಎಷ್ಟು ಸೈಡ್ ಲೈನ್ ಮಾಡಿದ್ದಾರೆ ಎಂಬುದಕ್ಕೆ ಮೊನ್ನೆಯ ದೆಹಲಿಯ ಸಭೆಯೇ ಸಾಕ್ಷಿ . ಜೆಡಿಎಸ್ ಎ ಟೀಮ್ ಆಗಿದೆ. ಬಿಜೆಪಿ ಜೆಡಿಎಸ್ ನ ಬಿ ಟೀಮ್ ಆಗಿದೆ. ಪ್ರತಾಪ್ ಸಿಂಹ ದೇವೇಗೌಡರ ಕಾಲಿಗೆ ಬಿದ್ದಿದ್ದು ಬಿಜೆಪಿಯ ಈಗಿನ ಪರಿಸ್ಥಿತಿ ತೋರಿಸುತ್ತದೆ” ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: ಬಿಜೆಪಿಯ ದುರಾಡಳಿತದಲ್ಲಿ ಹೆಣ್ಣುಮಕ್ಕಳು, ದಲಿತರು ಸುರಕ್ಷಿತವಾಗಿಲ್ಲ: ಪ್ರಿಯಾಂಕಾ ಗಾಂಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...