Homeಮುಖಪುಟನಿರಾಶ್ರಿತರ ಬಯೋಮೆಟ್ರಿಕ್ ಡೇಟಾ ಸಂಗ್ರಹ: ಕೇಂದ್ರದ ಆದೇಶ ನಿರ್ಲಕ್ಷಿಸುವುದಾಗಿ ಘೋಷಿಸಿದ ಮಿಜೋರಾಂ ಸರ್ಕಾರ

ನಿರಾಶ್ರಿತರ ಬಯೋಮೆಟ್ರಿಕ್ ಡೇಟಾ ಸಂಗ್ರಹ: ಕೇಂದ್ರದ ಆದೇಶ ನಿರ್ಲಕ್ಷಿಸುವುದಾಗಿ ಘೋಷಿಸಿದ ಮಿಜೋರಾಂ ಸರ್ಕಾರ

- Advertisement -
- Advertisement -

ಮ್ಯಾನ್ಮಾರ್‌ನ ಜುಂಟಾದಿಂದ ರಾಜ್ಯಕ್ಕೆ ಪ್ರವೇಶಿಸಿರುವ ನಿರಾಶ್ರಿತರ ಬಯೋಮೆಟ್ರಿಕ್ ಡೇಟಾವನ್ನು ಸಂಗ್ರಹಿಸುವ ಕೇಂದ್ರ ಗೃಹ ಸಚಿವಾಲಯದ ಆದೇಶವನ್ನು ನಿರ್ಲಕ್ಷಿಸುವುದಾಗಿ ಮಿಜೋರಾಂ ಸರ್ಕಾರ ಘೋಷಿಸಿದೆ.

ಏಪ್ರಿಲ್‌ನಲ್ಲಿ ಗೃಹ ಸಚಿವಾಲಯವು ಮಿಜೋರಾಂ ಮತ್ತು ಮಣಿಪುರ ರಾಜ್ಯಗಳಿಗೆ ಬಂದಿರುವ “ಅಕ್ರಮ ವಲಸಿಗರ” ಬಯೋಮೆಟ್ರಿಕ್ ಮತ್ತು ಸ್ವವಿವರಗಳನ್ನು ಸಂಗ್ರಹಿಸಲು ನಿರ್ದೇಶನ ನೀಡಿತ್ತು. ಎರಡೂ ರಾಜ್ಯಗಳು ಮ್ಯಾನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿವೆ. ಜೂನ್‌ನಲ್ಲಿ, ಸೆಪ್ಟೆಂಬರ್ ಅಂತ್ಯದೊಳಗೆ ಎಷ್ಟು ಜನ ನಿರಾಶ್ರಿತರು ರಾಜ್ಯ ಪ್ರವೇಶಿಸಿದ್ದಾರೆ ಎನ್ನುವ ವಿವರವನ್ನು ಕೇಳಲಾಯಿತು.

ಜುಂಟಾದಿಂದ ಪಲಾಯನ ಮಾಡುತ್ತಿರುವ ಮ್ಯಾನ್ಮಾರ್‌ನ ಜನರನ್ನು ಮರಳಿ ಕಳಿಸುವ ಗೃಹ ಸಚಿವಾಲಯದ ನಿರ್ದೇಶನವನ್ನು ಮಿಜೋರಾಂ ಮುಖ್ಯಮಂತ್ರಿ ಝೋರಂತಂಗಾ ತಿರಸ್ಕರಿಸಿದ್ದರು. ಮಿಜೋಗಳು ಮ್ಯಾನ್ಮಾರ್‌ನ ಚಿನ್ ಬುಡಕಟ್ಟಿನೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾರೆ  ಎಂದು ಹೇಳಿದ್ದರು.

”ಮ್ಯಾನ್ಮಾರ್ ನಿರಾಶ್ರಿತರ ಬಯೋಮೆಟ್ರಿಕ್ ಮತ್ತು ಸ್ವವಿವರಗಳ ದತ್ತಾಂಶಗಳ ಸಂಗ್ರಹವು ನಮ್ಮ ಸಹೋದರರು ಮತ್ತು ಸಹೋದರಿಯರ ವಿರುದ್ಧ ತಾರತಮ್ಯವನ್ನು ಉಂಟುಮಾಡುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಸದ್ಯಕ್ಕೆ ಇದನ್ನು ಕೈಗೊಳ್ಳದಿರಲು ನಿರ್ಧರಿಸಲಾಗಿದೆ” ಎಂದು ಅವರು ಹೇಳಿದರು.

ಚುನಾಯಿತ ಪ್ರತಿನಿಧಿಗಳು ಸೇರಿದಂತೆ 30,000ಕ್ಕೂ ಹೆಚ್ಚು ಮ್ಯಾನ್ಮಾರ್ ಪ್ರಜೆಗಳು ಮಿಜೋರಾಂನಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಅಂದಾಜಿಸಲಾಗಿದೆ. ಅವರು ಸಮುದಾಯ ಭವನಗಳು, ತಾತ್ಕಾಲಿಕ ಶಿಬಿರಗಳು, ಚರ್ಚ್‌ಗಳು ಮತ್ತು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದಾರೆ.

ಮಣಿಪುರ ಸರ್ಕಾರದ ವಿನಂತಿಯ ಮೇರೆಗೆ ಬಯೋಮೆಟ್ರಿಕ್ಸ್ ಸಂಗ್ರಹದ ಗಡುವನ್ನು ಗೃಹ ಸಚಿವಾಲಯವು ಮಾರ್ಚ್ 2024ಕ್ಕೆ ವಿಸ್ತರಿಸಿದೆ.

ಮಣಿಪುರವು ಜುಲೈ 29ರಂದು ಈ ಪ್ರಕ್ರಿಯೆಯನ್ನು ಆರಂಭಿಸಿತು, ಆದರೆ ಕುಕಿ ಮತ್ತು ಮೈತಿ ಸಮುದಾಯಗಳ ನಡುವೆ ನಡೆಯುತ್ತಿರುವ ಹಿಂಸಾಚಾರದ ಕಾರಣ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ಒಂದು ವರ್ಷದವರೆಗೆ ವಿಸ್ತರಣೆಯನ್ನು ಕೋರಿದರು. ಗೃಹ ಸಚಿವಾಲಯವು ಆರು ತಿಂಗಳ ವಿಸ್ತರಣೆಯನ್ನು ನೀಡಿತು, ಮಾರ್ಚ್ 31, 2024ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸಲು ಮಣಿಪುರ ಸರ್ಕಾರವನ್ನು ಕೇಳಿದೆ.

ಇದನ್ನೂ ಓದಿ: ಮಣಿಪುರ: ಸಿಎಂ ಕುಟುಂಬದ ಮನೆ ಮೇಲೆ ದಾಳಿಗೆ ಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...