Homeಕರ್ನಾಟಕಕಾವೇರಿ ನೀರು ಬಿಡಬಾರದೆನ್ನುವುದೇ ನಮ್ಮ ಅನಿಸಿಕೆ, ತಜ್ಞರ ಜತೆ ಚರ್ಚೆ ಬಳಿಕ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಕಾವೇರಿ ನೀರು ಬಿಡಬಾರದೆನ್ನುವುದೇ ನಮ್ಮ ಅನಿಸಿಕೆ, ತಜ್ಞರ ಜತೆ ಚರ್ಚೆ ಬಳಿಕ ತೀರ್ಮಾನ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದೆನ್ನುವುದೇ ನಮ್ಮ ಅನಿಸಿಕೆಯಾಗಿದೆ. ಇಂದು ಸಂಜೆ ತಜ್ಞರ ತಂಡದ ಜತೆಗಿನ ಸಭೆ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ, ದಲಿತ, ಕಾರ್ಮಿಕ ಮತ್ತು ಕನ್ನಡ ಹೋರಾಟಗಾರರ ನಿಯೋಗಕ್ಕೆ ತಿಳಿಸಿದ್ದಾರೆ.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಕಾವೇರಿ ವಿವಾದ ಕುರಿತಂತೆ ರಾಜ್ಯ ಕಬ್ಬು ಬೆಳೆಗಾರರ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ಹಾಗೂ ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದ ಹೋರಾಟಗಾರರ ನಿಯೋಗದೊಂದಿಗೆ ನಡೆದ ಮಹತ್ವದ ಸಭೆಯಲ್ಲಿ ಅವರು ಪ್ರತಿಕ್ರಿಯಿಸಿದರು.

ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಎರಡು ಸಮಿತಿಗಳು ಪರಿಸ್ಥಿತಿ ಅವಲೋಕನ ಮಾಡಿ ಆದೇಶ ನೀಡುತ್ತವೆ. ಬಿಳಿಗುಂಡ್ಲುವಿನಲ್ಲಿ ನೀರು ಬಿಡಬೇಕೆಂದು ಆದೇಶವಾಗಿತ್ತು. ಸಾಮಾನ್ಯ ಪರಿಸ್ಥಿತಿಯಲ್ಲಿ 177.25 ಟಿ ಎಂಸಿ ನೀರನ್ನು ಒಂದು ವರ್ಷದಲ್ಲಿ ಬಿಡಬೇಕೆಂದು ಆದೇಶವಿದೆ. ನಮ್ಮ ರಾಜ್ಯಕ್ಕೆ 284. 85 ಟಿಎಂಸಿ ನೀರು ಅಗತ್ಯವಿದೆ. ಸುಪ್ರೀಂ ಕೋರ್ಟ್‌ನಲ್ಲಿ ಸಂಕಷ್ಟ ಸೂತ್ರ ಸಿದ್ಧಪಡಿಸಿಲ್ಲ. 2 ಸಮಿತಿಗಳಾಗಬೇಕೆಂದು ನ್ಯಾಯಮಂಡಳಿಯೇ ತೀರ್ಮಾನ ಮಾಡಿದೆ ಎಂದು ವಿವರಿಸಿದರು.

ಈ ವರ್ಷ ಆಗಸ್ಟ್‌ನಲ್ಲಿ ಮಳೆ ಕೈಕೊಟ್ಟಿದ್ದರಿಂದ ಸಮಸ್ಯೆ ಉಂಟಾಯಿತು. ಈ ತಿಂಗಳೂ ಕೂಡ ಮಳೆ ಅಷ್ಟೇನೂ ಆಗಿಲ್ಲ. ತಮಿಳುನಾಡಿಗೆ ಹಿಂಗಾರು ಮಳೆಯಿದೆ. ಈವರೆಗೆ 43 ಟಿಎಂಸಿ ನೀರು ಹೋಗಿದೆ. 123 ಟಿಎಂಸಿ ನೀರು ಬಿಡಬೇಕು ಎಂದು ಆದೇಶವಾಗಿದೆ. ಆದರೆ ನಾವು ನೀರು ಬಿಟ್ಟಿಲ್ಲ. ಕಾವೇರಿ ಪ್ರಾಧಿಕಾರ ಪ್ರತಿ ಬಾರಿ ಸಭೆ ಕರೆದಾಗಲೂ ನಾವು ಪ್ರತಿಭಟಿಸುತ್ತಲೇ ಬಂದಿದ್ದೇವೆ. ನೀರಿಲ್ಲ ಎಂದೇ ಹೇಳಿದ್ದೇವೆ. ಸುಪ್ರೀಂಕೋರ್ಟ್ ಮುಂದೆಯೂ ಅರ್ಜಿ ಹಾಕಿದ್ದೆವು. ನಮಗೆ ಬೆಳೆ ಉಳಿಸಿಕೊಳ್ಳಲು 70 ಟಿಎಂಸಿ ನೀರು ನೀರಾವರಿಗೆ ಅಗತ್ಯವಿದೆ. 30 ಟಿಎಂಸಿ ಕುಡಿಯುವ ನೀರಿಗೆ ಅಗತ್ಯವಿದೆ ಹಾಗೂ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯವಿದೆ, ಒಟ್ಟು 106 ಟಿಎಂಸಿ ಅವಶ್ಯಕತೆ ರಾಜ್ಯಕ್ಕೆ ಇದೆ. ಆದರೆ ನಮ್ಮ ಬಳಿ ಇರುವುದು ಕೇವಲ 50 ಟಿಎಂಸಿ ನೀರು. ನಮ್ಮ ಮೊದಲ ಆದ್ಯತೆ ಕುಡಿಯುವ ನೀರು ಎಂದು ಹೇಳಿದರು.

ಇದನ್ನೂ ಓದಿ: ನಾಳೆ ಕರ್ನಾಟಕ ಬಂದ್: ಜನಜೀವನ ಅಸ್ತವ್ಯಸ್ತ ಸಾಧ್ಯತೆ

ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳೊಂದಿಗೆ ನೀರಾವರಿ ತಜ್ಞರು, ಮಾಜಿ ಅಡ್ವೊಕೇಟ್ ಜನರಲ್ ಗಳೊಂದಿಗೆ ಇಂದು ಸಂಜೆ ಸಭೆ ಕರೆಯಲಾಗಿದ್ದು, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು. ನೀರು ಕೊಡಬಾರದೆಂದು ನಮ್ಮ ಅನಿಸಿಕೆ. ನೀರು ಬಿಡದಿದ್ದರೆ, ಜಲಾಶಯಗಳನ್ನು ಕೇಂದ್ರ ಸರ್ಕಾರ ವಶಕ್ಕೆ ಪಡೆಯಬಹುದು, contempt of court ಆಗುತ್ತದೆ, ಸರ್ಕಾರವನ್ನು ಡಿಸ್ಮಿಸ್ ಮಾಡಬಹುದು ಎಂದು ಪರಿಸ್ಥಿತಿಯನ್ನು ವಿವರಿಸಿದರು.

ಸಭೆಯಲ್ಲಿ ಮಾತನಾಡಿದ ಕುರುಬೂರು ಶಾಂತಕುಮಾರ್ ಅವರು, ”ಕರ್ನಾಟಕದ ಜನರಿಗೆ ಪೆಟ್ಟು ಬೀಳುವ ಆದೇಶ ಬೀಳುತ್ತಿ,. ಜನ ಆತಂಕಗೊಂಡಿದ್ದಾರೆ. ರೈತರ ಪರವಾಗಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಸಂಘಟನೆಗಳು ಜನಪರವಾಗಿ ಹೋರಾಟ ಮಾಡಿದಾಗ ಅವರ ಮೇಲೆ ಹಾಕಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕೆಂದು ಮನವಿ ಮಾಡಿದರು. ಮೇಕೆದಾಟು ಯೋಜನೆಗೆ ಶೀಘ್ರ ಕಾಯಕಲ್ಪ ನೀಡಬೇಕೆಂದು ಒತ್ತಾಯಿಸಿದರು.

ಮುಖ್ಯಮಂತ್ರಿ ಚಂದ್ರು ಮಾತನಾಡಿ, ”ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಬಂದ್ ಮಾಡಿದ್ದಾರೆ. ಪ್ರಾಧಿಕಾರದ ತೀರ್ಪು ಅವೈಜ್ಞಾನಿಕವಾಗಿದೆ. ಲೋಪ ಎಲ್ಲಿ ಆಗಿದೆ ಎಂದು ಸ್ಪಷ್ಟಪಡಿಸಬೇಕು. ನಮ್ಮ ಹಕ್ಕೊತ್ತಾಯವನ್ನು ತಮಿಳುನಾಡಿನಂತೆಯೇ ತೀವ್ರವಾಗಿ ಮಾಡಬೇಕು. ಸಂಕಷ್ಟ ಪರಿಹಾರ ಸೂತ್ರ ಇಲ್ಲದಿದ್ದರೂ ನೀರು ಬಿಡುವಂತೆ ಸೂಚಿಸುವುದು ತಪ್ಪು. ಆದೇಶ ಉಲ್ಲಂಘನೆ ಮಾಡಿದರೆ ಏನಾಗುತ್ತದೆ ಎಂದು ಪಟ್ಟಿ ಮಾಡಬೇಕು ಎಂದು ಹೇಳಿದರು. ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ತಮಿಳುನಾಡು ಬೆಳೆಗೆ ನೀರು ಕೇಳುತ್ತಿದೆ. ತಕ್ಷಣ ಸದನ ಕರೆದು ಈ ಕುರಿತು ತೀರ್ಮಾನ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ನಿಮ್ಮ ಎಲ್ಲಾ ಬೇಡಿಕೆಗಳ ಬಗ್ಗೆ ಸಂಜೆ ತಜ್ಞರ ತಂಡದ ಜತೆಗೂ ಚರ್ಚಿಸಲಾಗುವುದು. ಬಳಿಕ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ನಿಯೋಗದಲ್ಲಿ ರೈತ, ದಲಿತ, ಕಾರ್ಮಿಕ ಮತ್ತು ಕನ್ನಡ ಸಂಘಟನೆಗಳ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...