Homeಮುಖಪುಟಉತ್ತರಪ್ರದೇಶ: ಮುಸ್ಲಿಂ ಯುವಕನ ಸ್ಕೂಟರ್‌ನಲ್ಲಿ ಪಿಸ್ತೂಲ್‌ ಇಟ್ಟು ಬೆದರಿಸಿ ಹಣ ವಸೂಲಿ: ಪೊಲೀಸರ ವಿರುದ್ಧ ಆರೋಪ

ಉತ್ತರಪ್ರದೇಶ: ಮುಸ್ಲಿಂ ಯುವಕನ ಸ್ಕೂಟರ್‌ನಲ್ಲಿ ಪಿಸ್ತೂಲ್‌ ಇಟ್ಟು ಬೆದರಿಸಿ ಹಣ ವಸೂಲಿ: ಪೊಲೀಸರ ವಿರುದ್ಧ ಆರೋಪ

- Advertisement -
- Advertisement -

ಉತ್ತರಪ್ರದೇಶದ ಮೀರತ್‌ನಲ್ಲಿ ಮುಸ್ಲಿಂ ಪ್ಲಂಬರ್ ಒಬ್ಬರು ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ ಸ್ಕೂಟರ್‌ನಲ್ಲಿ ಪೊಲೀಸರು ಕಂಟ್ರಿಮೇಡ್ ಪಿಸ್ತೂಲ್‌ನ್ನು ಹಾಕಿ ಬಳಿಕ ಬೆದರಿಸಿ ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಫಿರೋಜ್‌ ಎಂಬವರು ಈ ಕುರಿತು ಹೇಳಿಕೆಯನ್ನು ನೀಡಿದ್ದು, ಬುಧವಾರ ರಾತ್ರಿ, ಮೂವರು ಪೊಲೀಸರು ಕಾರಿನಲ್ಲಿ ಮನೆಗೆ ಬಂದು ನನ್ನ ಹೆಸರನ್ನು ಕರೆದರು. ಮನೆಯಲ್ಲಿ ನಾನು ಇರದ ಕಾರಣ ತಾಯಿ ಹೊರಗೆ ಬಂದರು. ಪೊಲೀಸರು ನನಗೆ  ವಿಚಾರಿಸಿ ಸ್ಕೂಟರ್‌ನ ಕೀಗಳನ್ನು ಕೇಳಿದ್ದಾರೆ. ಬಳಿಕ ಮೂವರು ಪೊಲೀಸರು ತನ್ನ ಸ್ಕೂಟರ್‌ನ ಸೀಟನ್ನು ಎತ್ತಿ ಒಳಗೆ ಪಿಸ್ತೂಲ್ ಹಾಕಿದ್ದಾರೆ ಎಂದು ಫಿರೋಜ್ ಆರೋಪಿಸಿದ್ದಾರೆ. ಬಳಿಕ ಪೊಲೀಸರು ಸ್ಕೂಟರ್‌ನ ಒಳಗೆ ಪಿಸ್ತೂಲ್ ಇರುವ ವಿಡಿಯೋ ಮಾಡಿ ಸ್ಕೂಟರ್‌ನೊಂದಿಗೆ ತೆರಳಿದ್ದಾರೆ ಎಂದು ಫಿರೋಜ್‌ ಆರೋಪಿಸಿದ್ದಾರೆ.

ಬಳಿಕ ಪೊಲೀಸರು 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾಗಿ ಆತ ಹೇಳಿಕೊಂಡಿದ್ದು, ಚರ್ಚೆಯ ಬಳಿಕ 50,00 ಲಂಚ ನೀಡಿ  ತನ್ನ ಸ್ಕೂಟರ್ ವಾಪಸ್ ಪಡೆದಿರುವುದಾಗಿ ಫಿರೋಜ್‌ ಹೇಳಿದ್ದಾರೆ.

ಆದರೆ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ರೋಹಿತ್ ಸಿಂಗ್ ಸಜ್ವಾನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಪ್ರಕರಣದ ಕುರಿತು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಪ್ಲಂಬರ್ ಆಗಿರುವ ಫಿರೋಜ್ ಮಾಡಿರುವ ಆರೋಪವನ್ನು ನಿರಾಕರಿಸಿದ್ದಾರೆ. ಪ್ರಕರಣದಲ್ಲಿ ಕರ್ತವ್ಯ ಲೋಪಕ್ಕೆ ಸಂಬಂಧಿಸಿ ಹೆಡ್ ಕಾನ್‌ಸ್ಟೆಬಲ್ ಚೌಬೆ ಸಿಂಗ್, ಕಾನ್ಸ್‌ಟೇಬಲ್ ಓಂವೀರ್ ಸಿಂಗ್ ಮತ್ತು ಅನಿಲ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು  ಹೇಳಿದ್ದಾರೆ.

ಅಮಾನತುಗೊಂಡ ಪೊಲೀಸರು ಶಸ್ತ್ರಾಸ್ತ್ರ ರಿಕವರಿ ಬಗ್ಗೆ ತಮ್ಮ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿಲ್ಲ ಎಂದು ಅವರ ವಿರುದ್ಧ ಆರೋಪಿಸಲಾಗಿದೆ. ಆದರೆ ಅವರು ಫಿಸ್ತೂಲ್ ಇಟ್ಟಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಇನ್ನು ಫಿರೋಜ್ ಅವರು ಮಾಡಿದ ಪೊಲೀಸರ ಮೇಲಿನ ಲಂಚದ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಎಸ್‌ಎಸ್‌ಪಿ ಹೇಳಿದರು.

ಕೆಲವು ದಿನಗಳ ಹಿಂದೆ, ಮೀರತ್‌ನಲ್ಲಿ ಇದೇ ರೀತಿಯ ಘಟನೆ ಸಂಭವಿಸಿದ್ದು, ಸ್ಥಳೀಯ ಪೊಲೀಸ್ ಅಧಿಕಾರಿಗಳು ತಮ್ಮ ಮಗನ ಬಳಿ ಬಂದೂಕು ಇಟ್ಟು ಸುಳ್ಳು ಕೇಸ್‌ ಹಾಕಿ ಬಂಧಿಸಿದ್ದಾರೆ ಎಂದು ಕುಟುಂಬವೊಂದು ಆರೋಪಿಸಿತ್ತು. ತಮ್ಮ ಆರೋಪಕ್ಕೆ ಸಾಕ್ಷಿಯಾಗಿ ಕುಟುಂಬ ಸಿಸಿಟಿವಿ ದೃಶ್ಯಗಳನ್ನು ಕೂಡ ಹಂಚಿಕೊಂಡಿತ್ತು.

ಅಶೋಕ್ ತ್ಯಾಗಿ ಎಂಬವರ ಮನೆಯಲ್ಲಿ ಅಕ್ರಮ ಆಯುಧವನ್ನು ಪೊಲೀಸರೇ ತಂದು ಹಾಕಿ ತಮ್ಮ ಮಗ ಅಂಕಿತ್‌ನನ್ನು ಬಂಧಿಸಿದ್ದಾರೆ ಎಂದು ತ್ಯಾಗಿ ಪತ್ನಿ ರಾಖಿ ಆರೋಪಿಸಿದ್ದರು. ಪ್ರಕರಣದಲ್ಲಿ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಕರ್ತವ್ಯದಿಂದ ವಜಾಗೊಳಿಸಲಾಗಿತ್ತು.

ಇದನ್ನು ಓದಿ: ‘ಜೈಶ್ರೀರಾಮ್’ ಘೋಷಣೆ ಕೂಗುವಂತೆ ಆಗ್ರಹಿಸಿ ಯುವಕನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...