Homeಕರ್ನಾಟಕಬಿಜೆಪಿಯಿಂದ MLA ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ ಆರೋಪ: ಸಿಎಂಗೆ ಬರೆದ ಪತ್ರ ವೈರಲ್‌

ಬಿಜೆಪಿಯಿಂದ MLA ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ ಆರೋಪ: ಸಿಎಂಗೆ ಬರೆದ ಪತ್ರ ವೈರಲ್‌

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ‘ಮೀಸಲು ವಿಧಾನಸಭಾ ಕ್ಷೇತ್ರ (ಎಸ್‌.ಸಿ)ದಲ್ಲಿ ಟಿಕೆಟ್ ಕೊಡಿಸುವುದಾಗಿ ಬಿಜೆಪಿ ಮುಖಂಡರು ನಂಬಿಸಿ ಹಣ ಪಡೆದು ವಂಚಿಸಿದ್ದಾರೆ ಎಂದು ಪಿ.ಡಬ್ಲ್ಯೂಡಿ ಇಲಾಖೆಯ ನಿವೃತ್ತ ಸಹಾಯಕ ಅಭಿಯಂತರ ಶಿವಮೂರ್ತಿ ಎಂಬುವವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ವೈರಲ್ ಆಗಿದೆ.

ʼಪುತ್ತೂರಿನ ಬಿಜೆಪಿ ಮುಖಂಡರ ಶೇಖರ್.ಎಸ್.ಪಿ. ಮತ್ತು ಕೊಟ್ಟೂರಿನ ರೇವಣಸಿದ್ದಪ್ಪ ಎಂಬುವವರು ಹಣ ಪಡೆದು ವಂಚನೆ ಮಾಡಿದ್ದಾರೆʼʼ ಎಂದು ಶಿವಮೂರ್ತಿಯವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಈ ಪತ್ರ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ”ಹಣ ವಂಚನೆ ಮಾಡಿದವರ ವಿರುದ್ಧ ಕ್ರಮ ಕೈಗೊಂಡು ನನ್ನ ಹಣವನ್ನು ವಾಪಸ್ಸು ಕೊಡಿಸಿ ನ್ಯಾಯ ಒದಗಿಸಬೇಕು” ಎಂದು ದೂರುದಾರರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?

”ರೇವಣಸಿದ್ದಪ್ಪ ಎಂಬುವವನು ನನ್ನ ನಿವೃತ್ತಿ ಕಾರ್ಯಕ್ರಮದಲ್ಲಿ ಪರಿಚಯವಾಗಿದ್ದು, ಆ ಬಳಿಕ ಒಂದೆರಡು ಕಾರ್ಯಕ್ರಮದಲ್ಲಿ ಭೇಟಿಯಾದಾಗ, 2023ರ ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೆಟ್ ಕೊಡಿಸುವುದಾಗಿ 2022ರ ಅಕ್ಟೋಬರ್ 23 ರಂದು ಬೆಂಗಳೂರಿನ ಒಂದು ಹೋಟೆಲ್‌ನಲ್ಲಿ ಪುತ್ತೂರಿನ ಬಿಜೆಪಿ ಮುಖಂಡ ಶೇಖರ್ ಎನ್.ಪಿ. ಎಂಬವರನ್ನು ಪರಿಚಯಿಸಿದ್ದಾನೆ. ಶೇಖರ್.ಎಸ್.ಪಿ. ನನ್ನ ಪರಿಚಯ ಆದ ಮೇಲೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರ ಬೆಂಗಳೂರಿನ ಬಿಜೆಪಿ ಕಚೇರಿಗೆ ಕರೆದುಕೊಂಡು ಹೋಗಿ ಮತ್ತು ಕಟೀಲು ಅವರು ನನ್ನ ಆತ್ಮೀಯ ಸ್ನೇಹಿತರೆಂದು ಹೇಳಿ ಪರಿಚಯಿಸಿದ್ದರು. ಆ ಬಳಿಕ ನಳಿನ್ ಕುಮಾರ್ ಕಟೀಲು ನನ್ನ ಬಳಿ ಮಾತನಾಡಿ ಟಿಕೆಟ್‌ ವಿಚಾರದ ಎಲ್ಲಾ ವ್ಯವಹಾರವನ್ನು ಶೇಖರ್ ಅವರ ಬಳಿ ಮಾತನಾಡಿ ಎಂದು ತಿಳಿಸಿದ್ದಾರೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

”ಆ ನಂತರ ಶೇಖರ್.ಎನ್.ಪಿ. ಅವರು ನನ್ನ ಬಳಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣವನ್ನು ಕೇಳುತ್ತಾರೆ, ಟಿಕೆಟ್‌ ಸಿಗದೆ ಇದ್ದ ಪಕ್ಷದಲ್ಲಿ ನಿಮ್ಮ ಹಣವನ್ನು ವಾಪಸ್ಸು ನೀಡುತ್ತೇನೆಂದು ತಿಳಿಸುತ್ತಾರೆ. ಇದರಂತೆ 2022 ಆಕ್ಟೋಬರ್ 9ರಿಂದ ಶುರುವಾದ ಹಣದ ವ್ಯವಹಾರ ಎಪ್ರಿಲ್ 2023 ಕ್ಕೆ ರೂ.2 ಕೋಟಿ 55 ಲಕ್ಷದ ವರೆಗೂ ಹಣ ಪಡೆದುಕೊಂಡಿರುತ್ತಾರೆ” ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

”2002 ಅಕ್ಟೋಬರ್ 15ರಂದು ಚಿತ್ರದುರ್ಗದಲ್ಲಿ ರಸ್ತೆಯ ಬಳಿ ಶೇಖರ್ ಒಬ್ಬ ವ್ಯಕ್ತಿಯನ್ನು ಕಳುಹಿಸಿ 50 ಲಕ್ಷ ರೂ. ಗಳ ನಗದು ಹಣವನ್ನು ಪಡೆದಿದ್ದಾನೆ. ತದನಂತರ ಆನ್‌ಲೈನ್ ಪೇಮೆಂಟ್ ಸೇರಿ ಇದೇ ತರ ರೂ.1 ಕೋಟಿ 65 ಲಕ್ಷ ರೂ. ಶೇಖರ್ ಎನ್.ಪಿ. ಅವರಿಗೆ ಸೇರಿರುತ್ತದೆ”ʼ ಎಂದು ಪತ್ರದಲ್ಲಿ ತಿಳಿಸಲಾಗಿದೆ.

”ಇದರ ಜೊತೆಗೆ ಕೊಟ್ಟೂರು ತಾಲೂಕಿನ, ಬೆನಕನಹಳ್ಳಿ ಗ್ರಾಮದ ಬಿಜೆಪಿ ಮುಖಂಡನಾಗಿದ್ದ ರೇವಣಸಿದ್ದಪ್ಪ ಬೆಂಗಳೂರಿನ ಒಂದು ಹೋಟೆಲ್‌ಗೆ ಕರೆದುಕೊಂಡು, ಹೋಗಿ, ಬಿ.ಜೆ.ಪಿ ಹಿರಿಯ ನಾಯಕರಿಗೆ ಮತ್ತು ಇತ್ತರರಿಗೆ ಕೊಡಬೇಕೆಂದು ಹೇಳಿ 50 ಲಕ್ಷ ರೂ. ಗಳ ನಗದನ್ನು ಕುಡ್ಲಿಗಿ ತಾಲೂಕಿನ ಚಿಕ್ಕಹೋಗಿಗಹಳ್ಳಿ ಗ್ರಾಮದ ಆರೆಸ್ಸೆಸ್ ಮುಖಂಡ ನಾಗಣ್ಣ ಎಂಬವರ ‌ಸಮ್ಮುಖದಲ್ಲಿ ಪಡೆದಿದ್ದಾನೆ” ಎಂದು ಶಿವಮೂರ್ತಿ ಪತ್ರದಲ್ಲಿ ಆರೋಪಿಸಿದ್ದಾರೆ.

”ಈ ಹಣವನ್ನು ನನ್ನ ಸ್ವಂತ ನಿವೇಶನವನ್ನು ಮಾರಿ ನನ್ನ ಜಮೀನಿನ ಬೆಳೆಗಳನ್ನು ಮಾರಾಟ ಮಾಡಿ, ಸ್ನೇಹಿತರಿಂದ ಸಾಲ ಪಡೆದು ಹಾಗೂ ನಿವೃತ್ತಿಯಿಂದ ಬಂದ ಹಣವನ್ನೆಲ್ಲಾ ಸೇರಿಸಿ ಇವರಿಗೆ ಕೊಟ್ಟಿರುತ್ತೇನೆ. ಇದಾದ ಮೇಲೆ ನಂತರದ ದಿನಗಳಲ್ಲಿ 2023ರ ಎಪ್ರಿಲ್ ತಿಂಗಳಿನಲ್ಲಿ ಹಗರಿಬೊಮ್ಮನಹಳ್ಳಿ ಮೀಸಲು ವಿಧಾನಸಭಾ ಕ್ಷೇತ್ರದ (ಎಸ್.ಸಿ) ಬಿಜೆಪಿ ಟಿಕೆಟ್ ಘೋಷಣೆಯಾದಾಗ, ಅದರಲ್ಲಿ ನನ್ನ ಬದಲಿಗೆ ಬಿ.ರಾಮು ಎಂಬುವವರಿಗೆ ಟಿಕೆಟ್ ಸಿಗುತ್ತದೆ.‌ ಇದರಿಂದ ನನಗೆ ವಂಚನೆ ಆಗಿರುವುದು ಅರಿವಾಗಿದೆ” ಎಂದು ತಿಳಿಸಿದ್ದಾರೆ.

”ಹಣ ಪಡೆದವರಿಗೆ ಕರೆ ಮಾಡಿದಾಗ ನನ್ನ ಕರೆ ಸ್ವೀಕರಿಸಿಲ್ಲ. ಬೇರೆಯವರ ಫೋನ್ ನಿಂದ್ ಕರೆ ಮಾಡಿ ಹಣ ಕೊಡುವಂತೆ ಒತ್ತಾಯಿಸಿದರೆ ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಹಾಗಾಗಿ ನನ್ನ ಹಣವನ್ನು ನನಗೆ ಕೊಡಿಸಿ ನ್ಯಾಯ ಒದಗಿಸಿ ಕೊಡಬೇಕು” ಎಂದು ಮುಖ್ಯಮಂತ್ರಿಗಳನ್ನು ಶಿವಮೂರ್ತಿ ಒತ್ತಾಯಿಸಿದ್ದಾರೆ.

ವೈರಲ್ ಆಗಿರುವ ಪತ್ರದಲ್ಲಿ ಶಿವಮೂರ್ತಿ ಅವರ ಸಹಿ ಇದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಪ್ರಕಟನೆ ಅವರು ನೀಡಿಲ್ಲ.

ಇದನ್ನೂ ಓದಿ: ಶಿರಹಟ್ಟಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ: ಹಾಲಶ್ರೀ ಸ್ವಾಮೀಜಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...