Homeಕರ್ನಾಟಕಬಿಜೆಪಿಯಿಂದ MLA ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ ಆರೋಪ: ಸಿಎಂಗೆ ಬರೆದ ಪತ್ರ ವೈರಲ್‌

ಬಿಜೆಪಿಯಿಂದ MLA ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ ಆರೋಪ: ಸಿಎಂಗೆ ಬರೆದ ಪತ್ರ ವೈರಲ್‌

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ‘ಮೀಸಲು ವಿಧಾನಸಭಾ ಕ್ಷೇತ್ರ (ಎಸ್‌.ಸಿ)ದಲ್ಲಿ ಟಿಕೆಟ್ ಕೊಡಿಸುವುದಾಗಿ ಬಿಜೆಪಿ ಮುಖಂಡರು ನಂಬಿಸಿ ಹಣ ಪಡೆದು ವಂಚಿಸಿದ್ದಾರೆ ಎಂದು ಪಿ.ಡಬ್ಲ್ಯೂಡಿ ಇಲಾಖೆಯ ನಿವೃತ್ತ ಸಹಾಯಕ ಅಭಿಯಂತರ ಶಿವಮೂರ್ತಿ ಎಂಬುವವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ವೈರಲ್ ಆಗಿದೆ.

ʼಪುತ್ತೂರಿನ ಬಿಜೆಪಿ ಮುಖಂಡರ ಶೇಖರ್.ಎಸ್.ಪಿ. ಮತ್ತು ಕೊಟ್ಟೂರಿನ ರೇವಣಸಿದ್ದಪ್ಪ ಎಂಬುವವರು ಹಣ ಪಡೆದು ವಂಚನೆ ಮಾಡಿದ್ದಾರೆʼʼ ಎಂದು ಶಿವಮೂರ್ತಿಯವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಈ ಪತ್ರ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ”ಹಣ ವಂಚನೆ ಮಾಡಿದವರ ವಿರುದ್ಧ ಕ್ರಮ ಕೈಗೊಂಡು ನನ್ನ ಹಣವನ್ನು ವಾಪಸ್ಸು ಕೊಡಿಸಿ ನ್ಯಾಯ ಒದಗಿಸಬೇಕು” ಎಂದು ದೂರುದಾರರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?

”ರೇವಣಸಿದ್ದಪ್ಪ ಎಂಬುವವನು ನನ್ನ ನಿವೃತ್ತಿ ಕಾರ್ಯಕ್ರಮದಲ್ಲಿ ಪರಿಚಯವಾಗಿದ್ದು, ಆ ಬಳಿಕ ಒಂದೆರಡು ಕಾರ್ಯಕ್ರಮದಲ್ಲಿ ಭೇಟಿಯಾದಾಗ, 2023ರ ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೆಟ್ ಕೊಡಿಸುವುದಾಗಿ 2022ರ ಅಕ್ಟೋಬರ್ 23 ರಂದು ಬೆಂಗಳೂರಿನ ಒಂದು ಹೋಟೆಲ್‌ನಲ್ಲಿ ಪುತ್ತೂರಿನ ಬಿಜೆಪಿ ಮುಖಂಡ ಶೇಖರ್ ಎನ್.ಪಿ. ಎಂಬವರನ್ನು ಪರಿಚಯಿಸಿದ್ದಾನೆ. ಶೇಖರ್.ಎಸ್.ಪಿ. ನನ್ನ ಪರಿಚಯ ಆದ ಮೇಲೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರ ಬೆಂಗಳೂರಿನ ಬಿಜೆಪಿ ಕಚೇರಿಗೆ ಕರೆದುಕೊಂಡು ಹೋಗಿ ಮತ್ತು ಕಟೀಲು ಅವರು ನನ್ನ ಆತ್ಮೀಯ ಸ್ನೇಹಿತರೆಂದು ಹೇಳಿ ಪರಿಚಯಿಸಿದ್ದರು. ಆ ಬಳಿಕ ನಳಿನ್ ಕುಮಾರ್ ಕಟೀಲು ನನ್ನ ಬಳಿ ಮಾತನಾಡಿ ಟಿಕೆಟ್‌ ವಿಚಾರದ ಎಲ್ಲಾ ವ್ಯವಹಾರವನ್ನು ಶೇಖರ್ ಅವರ ಬಳಿ ಮಾತನಾಡಿ ಎಂದು ತಿಳಿಸಿದ್ದಾರೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

”ಆ ನಂತರ ಶೇಖರ್.ಎನ್.ಪಿ. ಅವರು ನನ್ನ ಬಳಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣವನ್ನು ಕೇಳುತ್ತಾರೆ, ಟಿಕೆಟ್‌ ಸಿಗದೆ ಇದ್ದ ಪಕ್ಷದಲ್ಲಿ ನಿಮ್ಮ ಹಣವನ್ನು ವಾಪಸ್ಸು ನೀಡುತ್ತೇನೆಂದು ತಿಳಿಸುತ್ತಾರೆ. ಇದರಂತೆ 2022 ಆಕ್ಟೋಬರ್ 9ರಿಂದ ಶುರುವಾದ ಹಣದ ವ್ಯವಹಾರ ಎಪ್ರಿಲ್ 2023 ಕ್ಕೆ ರೂ.2 ಕೋಟಿ 55 ಲಕ್ಷದ ವರೆಗೂ ಹಣ ಪಡೆದುಕೊಂಡಿರುತ್ತಾರೆ” ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

”2002 ಅಕ್ಟೋಬರ್ 15ರಂದು ಚಿತ್ರದುರ್ಗದಲ್ಲಿ ರಸ್ತೆಯ ಬಳಿ ಶೇಖರ್ ಒಬ್ಬ ವ್ಯಕ್ತಿಯನ್ನು ಕಳುಹಿಸಿ 50 ಲಕ್ಷ ರೂ. ಗಳ ನಗದು ಹಣವನ್ನು ಪಡೆದಿದ್ದಾನೆ. ತದನಂತರ ಆನ್‌ಲೈನ್ ಪೇಮೆಂಟ್ ಸೇರಿ ಇದೇ ತರ ರೂ.1 ಕೋಟಿ 65 ಲಕ್ಷ ರೂ. ಶೇಖರ್ ಎನ್.ಪಿ. ಅವರಿಗೆ ಸೇರಿರುತ್ತದೆ”ʼ ಎಂದು ಪತ್ರದಲ್ಲಿ ತಿಳಿಸಲಾಗಿದೆ.

”ಇದರ ಜೊತೆಗೆ ಕೊಟ್ಟೂರು ತಾಲೂಕಿನ, ಬೆನಕನಹಳ್ಳಿ ಗ್ರಾಮದ ಬಿಜೆಪಿ ಮುಖಂಡನಾಗಿದ್ದ ರೇವಣಸಿದ್ದಪ್ಪ ಬೆಂಗಳೂರಿನ ಒಂದು ಹೋಟೆಲ್‌ಗೆ ಕರೆದುಕೊಂಡು, ಹೋಗಿ, ಬಿ.ಜೆ.ಪಿ ಹಿರಿಯ ನಾಯಕರಿಗೆ ಮತ್ತು ಇತ್ತರರಿಗೆ ಕೊಡಬೇಕೆಂದು ಹೇಳಿ 50 ಲಕ್ಷ ರೂ. ಗಳ ನಗದನ್ನು ಕುಡ್ಲಿಗಿ ತಾಲೂಕಿನ ಚಿಕ್ಕಹೋಗಿಗಹಳ್ಳಿ ಗ್ರಾಮದ ಆರೆಸ್ಸೆಸ್ ಮುಖಂಡ ನಾಗಣ್ಣ ಎಂಬವರ ‌ಸಮ್ಮುಖದಲ್ಲಿ ಪಡೆದಿದ್ದಾನೆ” ಎಂದು ಶಿವಮೂರ್ತಿ ಪತ್ರದಲ್ಲಿ ಆರೋಪಿಸಿದ್ದಾರೆ.

”ಈ ಹಣವನ್ನು ನನ್ನ ಸ್ವಂತ ನಿವೇಶನವನ್ನು ಮಾರಿ ನನ್ನ ಜಮೀನಿನ ಬೆಳೆಗಳನ್ನು ಮಾರಾಟ ಮಾಡಿ, ಸ್ನೇಹಿತರಿಂದ ಸಾಲ ಪಡೆದು ಹಾಗೂ ನಿವೃತ್ತಿಯಿಂದ ಬಂದ ಹಣವನ್ನೆಲ್ಲಾ ಸೇರಿಸಿ ಇವರಿಗೆ ಕೊಟ್ಟಿರುತ್ತೇನೆ. ಇದಾದ ಮೇಲೆ ನಂತರದ ದಿನಗಳಲ್ಲಿ 2023ರ ಎಪ್ರಿಲ್ ತಿಂಗಳಿನಲ್ಲಿ ಹಗರಿಬೊಮ್ಮನಹಳ್ಳಿ ಮೀಸಲು ವಿಧಾನಸಭಾ ಕ್ಷೇತ್ರದ (ಎಸ್.ಸಿ) ಬಿಜೆಪಿ ಟಿಕೆಟ್ ಘೋಷಣೆಯಾದಾಗ, ಅದರಲ್ಲಿ ನನ್ನ ಬದಲಿಗೆ ಬಿ.ರಾಮು ಎಂಬುವವರಿಗೆ ಟಿಕೆಟ್ ಸಿಗುತ್ತದೆ.‌ ಇದರಿಂದ ನನಗೆ ವಂಚನೆ ಆಗಿರುವುದು ಅರಿವಾಗಿದೆ” ಎಂದು ತಿಳಿಸಿದ್ದಾರೆ.

”ಹಣ ಪಡೆದವರಿಗೆ ಕರೆ ಮಾಡಿದಾಗ ನನ್ನ ಕರೆ ಸ್ವೀಕರಿಸಿಲ್ಲ. ಬೇರೆಯವರ ಫೋನ್ ನಿಂದ್ ಕರೆ ಮಾಡಿ ಹಣ ಕೊಡುವಂತೆ ಒತ್ತಾಯಿಸಿದರೆ ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಹಾಗಾಗಿ ನನ್ನ ಹಣವನ್ನು ನನಗೆ ಕೊಡಿಸಿ ನ್ಯಾಯ ಒದಗಿಸಿ ಕೊಡಬೇಕು” ಎಂದು ಮುಖ್ಯಮಂತ್ರಿಗಳನ್ನು ಶಿವಮೂರ್ತಿ ಒತ್ತಾಯಿಸಿದ್ದಾರೆ.

ವೈರಲ್ ಆಗಿರುವ ಪತ್ರದಲ್ಲಿ ಶಿವಮೂರ್ತಿ ಅವರ ಸಹಿ ಇದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಪ್ರಕಟನೆ ಅವರು ನೀಡಿಲ್ಲ.

ಇದನ್ನೂ ಓದಿ: ಶಿರಹಟ್ಟಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ: ಹಾಲಶ್ರೀ ಸ್ವಾಮೀಜಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...