Homeಮುಖಪುಟ'ಮಹಿಳಾ ಮೀಸಲಾತಿ ಹೆಸರಲ್ಲಿ ಲಿಪ್‌ಸ್ಟಿಕ್ ಹಚ್ಚುವವರು ಸಂಸತ್ತಿಗೆ ಬರುತ್ತಾರೆ': ಆರ್‌ಜೆಡಿ ನಾಯಕ

‘ಮಹಿಳಾ ಮೀಸಲಾತಿ ಹೆಸರಲ್ಲಿ ಲಿಪ್‌ಸ್ಟಿಕ್ ಹಚ್ಚುವವರು ಸಂಸತ್ತಿಗೆ ಬರುತ್ತಾರೆ’: ಆರ್‌ಜೆಡಿ ನಾಯಕ

- Advertisement -
- Advertisement -

ಮಹಿಳಾ ಮೀಸಲಾತಿ ಮಸೂದೆಯ ಹೆಸರಿನಲ್ಲಿ ಲಿಪ್‌ಸ್ಟಿಕ್ ಮತ್ತು ಬಾಬ್ ಕಟ್ ಹೇರ್ ಸ್ಟೈಲ್ ಮಾಡಿಕೊಂಡ ಮಹಿಳೆಯರು ಮುಂದೆ ಬರುತ್ತಾರೆ ಎಂದು ಹೇಳುವ ಮೂಲಕ ಆರ್‌ಜೆಡಿ ಹಿರಿಯ ನಾಯಕ ಅಬ್ದುಲ್ ಬಾರಿ ಸಿದ್ದಿಕಿ ವಿವಾದಕ್ಕೆ ತುತ್ತಾಗಿದ್ದಾರೆ.

ಬಿಹಾರದ ಮುಜಾಫರ್‌ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿದ್ದಿಕಿ, ”ಹಿಂದುಳಿದ ಸಮುದಾಯಗಳಿಗೆ ಸೇರಿದ ಮಹಿಳೆಯರಿಗೆ ಕೇಂದ್ರ ಸರ್ಕಾರ ಮೀಸಲಾತಿ ನೀಡಬೇಕು. ಇಲ್ಲದಿದ್ದರೆ, ‘ಲಿಪ್‌ಸ್ಟಿಕ್ ಮತ್ತು ಬಾಬ್ ಕಟ್ ಹೇರ್ ಸ್ಟೈಲ್ ಮಾಡಿಕೊಂಡ ಮಹಿಳೆಯರು ಮುಂದೆ ಬರುತ್ತಾರೆ’ ಎಂದು ಅವರು ಹೇಳಿದ್ದಾರೆ.

ವಿವಾದಕ್ಕಿಡಾದ ಬಳಿಕ ಮಾತನಾಡಿದ ಅವರು, ”ಆರ್‌ಜೆಡಿ ಪಕ್ಷವು “ಮೊದಲಿನಿಂದಲೂ” ಮಸೂದೆಯನ್ನು ಬೆಂಬಲಿಸುತ್ತಿದೆ ಎಂದು ಹೇಳುವ ಮೂಲಕ ಸ್ಪಷ್ಟಪಡಿಸಲು ಪ್ರಯತ್ನಿಸಿದರು. ರ‍್ಯಾಲಿಯಲ್ಲಿ ಬಹಳಷ್ಟು ಮಹಿಳೆಯರು ಗ್ರಾಮದವರಾಗಿದ್ದರು, ಹಾಗಾಗಿ ಜನರಿಗೆ ಅರ್ಥವಾಗುವಂತೆ ‘ಗ್ರಾಮ್ಯ ಭಾಷೆಯಲ್ಲಿ’ ಮಾತನಾಡಿದೆ. ಮಸೂದೆಯಲ್ಲಿ ಒಬಿಸಿ ಮಹಿಳೆಯರಿಗೆ ಒಳಮೀಸಲಾತಿ ನೀಡಬೇಕು. ಹೊಸ ಕಾನೂನಿನ ಬಗ್ಗೆ ಎಲ್ಲ ಮಹಿಳೆಯರಿಗೆ ಅರ್ಥಮಾಡಿಕೊಳ್ಳಲಿ ಎಂದು ನಾನು ವಿಶಿಷ್ಟವಾದ ಗ್ರಾಮೀಣ ಭಾಷೆಯನ್ನು ಬಳಸಿರುವುದಾಗಿ” ಅಬ್ದುಲ್ ಬಾರಿ ಸಿದ್ದಿಕಿ ಹೇಳಿದ್ದಾರೆ.

ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಕೌಶಲ್ ಕಿಶೋರ್ ಈ ಹೇಳಿಕೆಯನ್ನು ”ಆರ್‌ಜೆಡಿ ನಾಯಕನ ಸಂಕುಚಿತ ಮನಸ್ಥ್ತಿತಿಯ ಸಂಕೇತ” ಎಂದು ಹೇಳಿದ್ದಾರೆ.

”ಇದು ಅವರ ಸಂಕುಚಿತ  ಮನಸ್ಥಿತಿಯ ಸಂಕೇತ. ಚುನಾಯಿತರಾಗಿ ಸಂಸತ್​​ಗೆ ಬರುವ ಮಹಿಳೆಯರು ಸಂವಿಧಾನ ಮತ್ತು ಕಾನೂನುಗಳನ್ನು ಓದಿ ಸಾರ್ವಜನಿಕ ಹಿತಾಸಕ್ತಿಗಳ ಬಗ್ಗೆ ಮಾತನಾಡುತ್ತಿದ್ದಾರೆ. ಕಾರಿಗೆ ಹೇಗೆ ಎರಡು ಚಕ್ರಗಳಿವೆಯೋ ಅದೇ ರೀತಿ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಮಹಿಳೆಯರು ಮತ್ತು ಪುರುಷರು ಒಟ್ಟಾಗಿ ಸಾರ್ವಜನಿಕ ಹಿತಾಸಕ್ತಿಯ ಕಾನೂನುಗಳನ್ನು ರಚಿಸುವ ಮೂಲಕ ಈ ದೇಶವನ್ನು ಅಭಿವೃದ್ಧಿ ಹೊಂದಿದ ಭಾರತವನ್ನಾಗಿ ಮಾಡಲು ಸಹಾಯ ಮಾಡುತ್ತಾರೆ” ಎಂದು ಅವರು ಹೇಳಿದರು.

ಸಿದ್ದಿಕಿ ಅವರ ಹೇಳಿಕೆಯನ್ನು INDIA ಮೈತ್ರಿಕೂಟದ ಮಿತ್ರಪಕ್ಷವಾದ ಜೆಎಂಎಂ ಟೀಕಿಸಿದೆ. ”ಇಂತಹ ಹೇಳಿಕೆಗಳು ಮಹಿಳೆಯರಿಗೆ ನೋವುಂಟು ಮಾಡುತ್ತವೆ” ಎಂದು ಪಕ್ಷದ ರಾಜ್ಯಸಭಾ ಸಂಸದ ಮಹುವಾ ಮಜಿ ಹೇಳಿದ್ದಾರೆ.

”ನಾವು ಇಂದು 21 ನೇ ಶತಮಾನದಲ್ಲಿದ್ದೇವೆ, ಮಹಿಳೆಯರಿಗೆ ನೋವುಂಟು ಮಾಡುವ ಇಂತಹ ಹೇಳಿಕೆಗಳನ್ನು ತಪ್ಪಿಸಬೇಕು. ಹಿಂದುಳಿದ ವರ್ಗಗಳ ಮಹಿಳೆಯರು ಮುಂದೆ ಬರಬೇಕೆಂದು ನಾವು ಬಯಸುತ್ತೇವೆ. ನಾವು ಮಹಿಳೆಯರಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮಹಿಳೆಯರ ಮೀಸಲಾತಿ ಮಸೂದೆ ಬಗ್ಗೆಯೂ ಮಾತನಾಡುತ್ತಿದ್ದೇವೆ” ಎಂದು ಅವರು ಹೇಳಿದರು.

ಅದರೊಳಗೆ ಒಬಿಸಿ ಕೋಟಾ ಇಲ್ಲದ ಮಹಿಳಾ ಕೋಟಾ ಮಸೂದೆಗೆ ಆರ್‌ಜೆಡಿಯ ಆಕ್ಷೇಪ ಹೊಸದೇನಲ್ಲ. ಆರ್‌ಜೆಡಿ ಮುಖಂಡರು, ಸಮಾಜವಾದಿ ಪಕ್ಷದ ಸಂಸದರು ಮತ್ತು ಒಮ್ಮೆ ಜೆಡಿಯು ನೇತೃತ್ವ ವಹಿಸಿದ್ದ ಶರದ್ ಯಾದವ್, ಈ ಹಿಂದೆ ಹಲವು ಸಂದರ್ಭಗಳಲ್ಲಿ ಸದನದ ಬಾವಿಗೆ ನುಗ್ಗಿ, ಮಸೂದೆಯ ಪ್ರತಿಯನ್ನು ಕಸಿದುಕೊಳ್ಳಲು ಯತ್ನಿಸಿ ಮಸೂದೆ ಅಂಗೀಕಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದರು.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ತಂದೆ ಮತ್ತು ಪಕ್ಷದ ಮುಖ್ಯಸ್ಥರಾಗಿದ್ದ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರು ”ಈ ಮೀಸಲಾತಿಯು ಶ್ರೀಮಂತ ಮಹಿಳೆಯರಿಗೆ ಮಾತ್ರ ಹೇಗೆ ಪ್ರಯೋಜನವನ್ನು ನೀಡುತ್ತದೆ” ಎಂಬ ಅವರ ಹೇಳಿಕೆಗಾಗಿ ಕನಿಷ್ಠ ಎರಡು ಬಾರಿ ವಿವಾದಕ್ಕೆ ಒಳಗಾಗಿದ್ದರು.

2012 ರಲ್ಲಿ ಮೀಸಲಾತಿ ಬೇಡಿಕೆಯ ಬಗ್ಗೆ ಕೇಳಿದಾಗ, ಅವರು “…ಬಡೇ ಘರ್ ಕಿ ಲಡ್ಕಿಯಾ ಔರ್ ಮಹಿಳಾಯೇನ್ ಕೋ ಫಾಯ್ದಾ ಮಿಲೇಗಾ… ಹುಮಾರಿ ಗಾಂವ್ ಕಿ ಗರೀಬ್ ಮಹಿಲಾವೋಂ ಕೋ ನಹಿಂ… ಆಕರ್ಷಕ್ ನಹೀ ಹೋತಿ…ಬಾಸ್ ಇತ್ನಾ ಕಹುಂಗಾ… ಜ್ಞಾದಾ ನಹೀ… (ಈಗಿನ ರೂಪದಲ್ಲಿರುವ ಮಹಿಳಾ ಮೀಸಲಾತಿ ಮಸೂದೆಯು ಶ್ರೀಮಂತ ಮತ್ತು ನಗರ ಪ್ರದೇಶದ ಮಹಿಳೆಯರಿಗೆ ಮಾತ್ರ ಪ್ರಯೋಜನವನ್ನು ನೀಡುತ್ತದೆ… ನಮ್ಮ ಬಡ ಮತ್ತು ಗ್ರಾಮೀಣ ಮಹಿಳೆಯರು ಆಕರ್ಷಕವಾಗಿಲ್ಲ…ನಾನು ಹೇಳುವುದಿಷ್ಟೇ)” ಎಂದಿದ್ದರು.

ಎರಡು ವರ್ಷಗಳ ಹಿಂದೆ, ಮಾರ್ಚ್ 2010 ರಲ್ಲಿ ಅಂಗೀಕಾರಕ್ಕಾಗಿ ರಾಜ್ಯಸಭೆಯಲ್ಲಿ ಮಸೂದೆಯನ್ನು ಮಂಡಿಸಿದಾಗ, “ಮಹಿಳಾ ಮೀಸಲಾತಿ ಮಸೂದೆಯು ಪ್ರಸ್ತುತ ಸ್ವರೂಪದಲ್ಲಿ ಅಂಗೀಕರಿಸಲ್ಪಟ್ಟರೆ, ಸಂಸತ್ತಿನಲ್ಲಿ ಯುವಕರನ್ನು ಶಿಳ್ಳೆ ಹೊಡೆಯಲು ಪ್ರಚೋದಿಸುತ್ತದೆ” ಎಂದು ಅವರು ಹೇಳಿದ್ದರು.

ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33 ಪ್ರತಿಶತ ಮೀಸಲಾತಿಯನ್ನು ಕೋರುವ ಮಹಿಳಾ ಮೀಸಲಾತಿ ಮಸೂದೆಗೆ ಒಪ್ಪಿಗೆ ನೀಡಿದರು.

ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿಯಿಂದ ಅಂತಿಮ ಮುದ್ರೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...