Homeಎಕಾನಮಿಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆಯ ಕನ್ನಡ ಅನುವಾದ & ವಿಡಿಯೋಇಲ್ಲಿದೆ

ಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆಯ ಕನ್ನಡ ಅನುವಾದ & ವಿಡಿಯೋಇಲ್ಲಿದೆ

ಸರಿಯಾದ ಪಂಚ್ ಕೊಟ್ಟ ಮನಮೋಹನ್ ಸಿಂಗ್

- Advertisement -
- Advertisement -

ಭಾರತದ ಆರ್ಥಿಕ ವ್ಯವಸ್ಥೆ ಇಂದು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಬೆಳವಣಿಗೆಯ ದರ 5% ಇದ್ದು, ಆರ್ಥಿಕತೆ ದೀರ್ಘಕಾಲೀನ ನಿಧಾನಗತಿಯಲ್ಲಿ ಸಿಲುಕಿಕೊಂಡಿದ್ದು ತಿಳಿಯುತ್ತದೆ. ಭಾರತದ ಅರ್ಥವ್ಯವಸ್ಥೆಯು ಶರವೇಗವಾಗಿ ಬೆಳೆಯುವ ಸಾಮರ್ಥ್ಯ ಹೊಂದಿದೆ. ಆದರೆ ಮೋದಿ ಸರ್ಕಾರದ ಎಲ್ಲಾ ವಿಧದ ಪ್ರಮಾದಗಳು ಈ ನಿಧಾನಗತಿಗೆ ಕಾರಣವಾಗಿದೆ.

ಪ್ರಮುಖವಾಗಿ ಉತ್ಪಾದನಾ ವಲಯದ ಬೆಳವಣಿಗೆ 0.6% ರಷ್ಟಿದ್ದು ಇಂದು ಕುಂಟುವ ಸ್ಥಿತಿಯಲ್ಲಿದೆ.  ಮೋದಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತಂದ  ಜಿ.ಎಸ್.ಟಿ ಪ್ರಮಾದದಿಂದ ಆರ್ಥಿಕ ವ್ಯವಸ್ಥೆ ಇನ್ನು ಸುಧಾರಿಸಿಕೊಂಡಿಲ್ಲ ಎಂಬುದನ್ನು ಇದು ನಿಚ್ಚಳವಾಗಿ ತೋರಿಸುತ್ತಿದೆ.

ದೇಶದಲ್ಲಿ ಬೇಡಿಕೆ ಕುಸಿದಿದೆ ಮತ್ತು ಅನುಭೋಗಿ (ಬಳಕೆ) ದರ 18 ತಿಂಗಳಲ್ಲಿ ಅತಿ ಕನಿಷ್ಠ ಮಟ್ಟದಲ್ಲಿದೆ. ನಾಮಿನಲ್ ಜಿಡಿಪಿ ಬೆಳವಣಿಗೆ 15 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ ಹಾಗೆ ತೆರಿಗೆ ಆದಾಯದಲ್ಲಿ ದೊಡ್ಡ ಅಂತರ ಏರ್ಪಟ್ಟಿದೆ. ತೆರಿಗೆ ಅನಿರ್ದಿಷ್ಟತೆಯಿಂದಾಗಿ ಉದ್ಯಮಿಗಳು ಸ್ಥಿರ ಸ್ಥಿತಿಗೆ ಬರಲಾಗುತ್ತಿಲ್ಲ. ಇದರಿಂದ  ಸಣ್ಣ ಮತ್ತು ದೊಡ್ಡ ಉದ್ಯಮಿಗಳು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ತೆರಿಗೆ ಭಯೋತ್ಪಾದನೆಯು ಅಡೆತಡೆಯಿಲ್ಲದೆ ಮುಂದುವರೆಯುತ್ತಿದ್ದು ಹೂಡಿಕೆದಾರರ ಸ್ಥಿತಿ ಡೋಲಾಯಮಾನವಾಗಿದೆ. ಆರ್ಥಿಕ ಚೇತರಿಕೆಯ ಯಾವ ಲಕ್ಷಣಗಳು ಕಂಡುಬರುತ್ತಿಲ್ಲ .

ಮೋದಿ ಸರ್ಕಾರದ ನೀತಿಗಳು ಉದ್ಯೋಗ ಕಡಿತಕ್ಕೆ ಕಾರಣವಾಗಿದ್ದು, ಆಟೋಮೊಬೈಲ್ ಕ್ಷೇತ್ರವೊಂದರಲ್ಲೆ 3.5 ಲಕ್ಷಕ್ಕೂ ಜಾಸ್ತಿ ಉದ್ಯೋಗಗಳು ನಷ್ಟವಾಗಿವೆ. ಅನೌಪಚಾರಿಕ ವಲಯದಲ್ಲು ದೊಡ್ಡ ಪ್ರಮಾಣದ ಉದ್ಯೋಗ ಕಡಿತವಾಗಿದ್ದು ದುರ್ಬಲ ಕಾರ್ಮಿಕ ವರ್ಗವನ್ನು ಇದು ದುಸ್ಥಿತಿಗೆ ತಳ್ಳುತ್ತಿದೆ.

ಗ್ರಾಮೀಣ ಭಾರತದ ಜನರ ಸ್ಥಿತಿ ದುರ್ಬರವಾಗಿದೆ. ರೈತರ ಬೆಳೆಗೆ ನ್ಯಾಯಯುತ ಬೆಲೆ ಸಿಗುತ್ತಿಲ್ಲ ಮತ್ತು ಗ್ರಾಮೀಣ ಜನರ ಆದಾಯ ಕಡಿಮೆಯಾಗಿದೆ. ಮೋದಿ ಸರ್ಕಾರವು ತೋರಿಸುತ್ತಿರುವ ಕಡಿಮೆ ಹಣದುಬ್ಬರವು ರೈತರ ವೆಚ್ಚ ಮತ್ತು ಆದಾಯದ ನಷ್ಟ ಹಾಗೂ ದೇಶದ 50% ಜನರ ಚಿಂತಾಜನಕ ಸ್ಥಿತಿಗೆ ಸಾಕ್ಷಿಯಾಗಿದೆ.

ಸ್ವತಂತ್ರ ಸಂಸ್ಥೆಗಳನ್ನು ಕಪಿಮುಷ್ಠಿಗೆ ತೆಗೆದುಕೊಂಡು ಅವುಗಳ ಸ್ವಾಯತ್ತತೆಗೆ ಧಕ್ಕೆ ತರಲಾಗಿದೆ. ಸರ್ಕಾರಕ್ಕೆ 1.76 ಲಕ್ಷ ಕೋಟಿ ಬಿಡುಗಡೆ ಮಾಡಿದ ರಿಸರ್ವ್ ಬ್ಯಾಂಕ್ ನ ನೀತಿ ಪರೀಕ್ಷಾರ್ಹ. ಯಾಕೆಂದರೆ ಆರ್.ಬಿ.ಐ ನಿಂದ  ಬಿಡುಗಡೆಯಾದ ದೊಡ್ಡ ಮೊತ್ತದ ಹಣವನ್ನು ಹೇಗೆ ಬಳಸಿಕೊಳ್ಳಬೇಕೆಂದು ತಾನು ಇನ್ನೂ ಯೋಚಿಸಿಲ್ಲ ಎಂದು ಸರ್ಕಾರ ಹೇಳಿದ್ದು ಇದು ಆರ್.ಬಿ.ಐ ನ ಸ್ವಾಯತ್ತತೆ ಮತ್ತು ಸರ್ಕಾರದ ಬೇಜವಾಬ್ದಾರಿಯ ಪ್ರಶ್ನೆಯಾಗಿದೆ.

ಅದಕ್ಕಿಂತ ಜಾಸ್ತಿಯಾಗಿ, ಮೋದಿ ಸರ್ಕಾರದ ಅಡಿಯಲ್ಲಿ ಡೇಟಾದ ವಿಶ್ವಾಸಾರ್ಹತೆ ಪ್ರಶ್ನಾರ್ಥಕವಾಗಿದೆ. ಬಜೆಟ್ ಹೇಳಿಕೆಗಳು ಮತ್ತು ರೋಲ್ ಬ್ಯಾಕ್ ಗಳು ಅಂತರಾಷ್ಟ್ರೀಯ ಹೂಡಿಕೆದಾರರ ವಿಶ್ವಾಸವನ್ನು ಅಲುಗಾಡಿಸಿವೆ. ಭೌಗೋಳಿಕ ರಾಜಕೀಯ ಮರು ಜೋಡಣೆಗಳಿಂದಾಗಿ ಜಾಗತಿಕ ವ್ಯಾಪಾರದಲ್ಲಿ ಇರುವ ಅವಕಾಶಗಳ ಲಾಭವನ್ನು ಪಡೆದು ಭಾರತ ತನ್ನ ರಫ್ತನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮೋದಿ ಸರ್ಕಾರ ಇಂದು ಆರ್ಥಿಕ ನಿರ್ವಹಣೆಯಲ್ಲಿ ವಿಫಲವಾಗಿದೆ.

ನಮ್ಮ ಯುವಕರು, ರೈತರು, ಕೃಷಿ ಕಾರ್ಮಿಕರು, ಉದ್ಯಮಿಗಳು ಮತ್ತು ಅಂಚಿನ ವಲಯದ ದುಡಿಮೆಯ ವರ್ಗದ ಸ್ಥಿತಿ ಸುಧಾರಿಸಬೇಕು. ಭಾರತವನ್ನು ಈಗಿರುವ ಹಾದಿಯಲ್ಲಿ ಮುನ್ನಡೆಸಲು ಸಾಧ್ಯವಿಲ್ಲ. ಆದ್ದರಿಂದ ಹಗೆತನದ ರಾಜಕೀಯವನ್ನು ಬದಿಗಿಟ್ಟು, ವಿವೇಕದ ಮಾತುಗಳನ್ನು ಆಲಿಸಿಕೊಂಡು ಮತ್ತು ವಿಚಾರಶಕ್ತಿಯುಳ್ಳವರನ್ನು ಬಳಸಿಕೊಂಡು ಈ ಮಾನವ ನಿರ್ಮಿತ ಪ್ರಮಾದದಿಂದ ಭಾರತದ ಆರ್ಥಿಕತೆಯನ್ನು ಹೊರತರಬೇಕೆಂದು ನಾನು ಸರ್ಕಾರವನ್ನು ಕೇಳಿಕೊಳ್ಳುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...