Homeಎಕಾನಮಿಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆಯ ಕನ್ನಡ ಅನುವಾದ & ವಿಡಿಯೋಇಲ್ಲಿದೆ

ಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆಯ ಕನ್ನಡ ಅನುವಾದ & ವಿಡಿಯೋಇಲ್ಲಿದೆ

ಸರಿಯಾದ ಪಂಚ್ ಕೊಟ್ಟ ಮನಮೋಹನ್ ಸಿಂಗ್

- Advertisement -
- Advertisement -

ಭಾರತದ ಆರ್ಥಿಕ ವ್ಯವಸ್ಥೆ ಇಂದು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಬೆಳವಣಿಗೆಯ ದರ 5% ಇದ್ದು, ಆರ್ಥಿಕತೆ ದೀರ್ಘಕಾಲೀನ ನಿಧಾನಗತಿಯಲ್ಲಿ ಸಿಲುಕಿಕೊಂಡಿದ್ದು ತಿಳಿಯುತ್ತದೆ. ಭಾರತದ ಅರ್ಥವ್ಯವಸ್ಥೆಯು ಶರವೇಗವಾಗಿ ಬೆಳೆಯುವ ಸಾಮರ್ಥ್ಯ ಹೊಂದಿದೆ. ಆದರೆ ಮೋದಿ ಸರ್ಕಾರದ ಎಲ್ಲಾ ವಿಧದ ಪ್ರಮಾದಗಳು ಈ ನಿಧಾನಗತಿಗೆ ಕಾರಣವಾಗಿದೆ.

ಪ್ರಮುಖವಾಗಿ ಉತ್ಪಾದನಾ ವಲಯದ ಬೆಳವಣಿಗೆ 0.6% ರಷ್ಟಿದ್ದು ಇಂದು ಕುಂಟುವ ಸ್ಥಿತಿಯಲ್ಲಿದೆ.  ಮೋದಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತಂದ  ಜಿ.ಎಸ್.ಟಿ ಪ್ರಮಾದದಿಂದ ಆರ್ಥಿಕ ವ್ಯವಸ್ಥೆ ಇನ್ನು ಸುಧಾರಿಸಿಕೊಂಡಿಲ್ಲ ಎಂಬುದನ್ನು ಇದು ನಿಚ್ಚಳವಾಗಿ ತೋರಿಸುತ್ತಿದೆ.

ದೇಶದಲ್ಲಿ ಬೇಡಿಕೆ ಕುಸಿದಿದೆ ಮತ್ತು ಅನುಭೋಗಿ (ಬಳಕೆ) ದರ 18 ತಿಂಗಳಲ್ಲಿ ಅತಿ ಕನಿಷ್ಠ ಮಟ್ಟದಲ್ಲಿದೆ. ನಾಮಿನಲ್ ಜಿಡಿಪಿ ಬೆಳವಣಿಗೆ 15 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ ಹಾಗೆ ತೆರಿಗೆ ಆದಾಯದಲ್ಲಿ ದೊಡ್ಡ ಅಂತರ ಏರ್ಪಟ್ಟಿದೆ. ತೆರಿಗೆ ಅನಿರ್ದಿಷ್ಟತೆಯಿಂದಾಗಿ ಉದ್ಯಮಿಗಳು ಸ್ಥಿರ ಸ್ಥಿತಿಗೆ ಬರಲಾಗುತ್ತಿಲ್ಲ. ಇದರಿಂದ  ಸಣ್ಣ ಮತ್ತು ದೊಡ್ಡ ಉದ್ಯಮಿಗಳು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ತೆರಿಗೆ ಭಯೋತ್ಪಾದನೆಯು ಅಡೆತಡೆಯಿಲ್ಲದೆ ಮುಂದುವರೆಯುತ್ತಿದ್ದು ಹೂಡಿಕೆದಾರರ ಸ್ಥಿತಿ ಡೋಲಾಯಮಾನವಾಗಿದೆ. ಆರ್ಥಿಕ ಚೇತರಿಕೆಯ ಯಾವ ಲಕ್ಷಣಗಳು ಕಂಡುಬರುತ್ತಿಲ್ಲ .

ಮೋದಿ ಸರ್ಕಾರದ ನೀತಿಗಳು ಉದ್ಯೋಗ ಕಡಿತಕ್ಕೆ ಕಾರಣವಾಗಿದ್ದು, ಆಟೋಮೊಬೈಲ್ ಕ್ಷೇತ್ರವೊಂದರಲ್ಲೆ 3.5 ಲಕ್ಷಕ್ಕೂ ಜಾಸ್ತಿ ಉದ್ಯೋಗಗಳು ನಷ್ಟವಾಗಿವೆ. ಅನೌಪಚಾರಿಕ ವಲಯದಲ್ಲು ದೊಡ್ಡ ಪ್ರಮಾಣದ ಉದ್ಯೋಗ ಕಡಿತವಾಗಿದ್ದು ದುರ್ಬಲ ಕಾರ್ಮಿಕ ವರ್ಗವನ್ನು ಇದು ದುಸ್ಥಿತಿಗೆ ತಳ್ಳುತ್ತಿದೆ.

ಗ್ರಾಮೀಣ ಭಾರತದ ಜನರ ಸ್ಥಿತಿ ದುರ್ಬರವಾಗಿದೆ. ರೈತರ ಬೆಳೆಗೆ ನ್ಯಾಯಯುತ ಬೆಲೆ ಸಿಗುತ್ತಿಲ್ಲ ಮತ್ತು ಗ್ರಾಮೀಣ ಜನರ ಆದಾಯ ಕಡಿಮೆಯಾಗಿದೆ. ಮೋದಿ ಸರ್ಕಾರವು ತೋರಿಸುತ್ತಿರುವ ಕಡಿಮೆ ಹಣದುಬ್ಬರವು ರೈತರ ವೆಚ್ಚ ಮತ್ತು ಆದಾಯದ ನಷ್ಟ ಹಾಗೂ ದೇಶದ 50% ಜನರ ಚಿಂತಾಜನಕ ಸ್ಥಿತಿಗೆ ಸಾಕ್ಷಿಯಾಗಿದೆ.

ಸ್ವತಂತ್ರ ಸಂಸ್ಥೆಗಳನ್ನು ಕಪಿಮುಷ್ಠಿಗೆ ತೆಗೆದುಕೊಂಡು ಅವುಗಳ ಸ್ವಾಯತ್ತತೆಗೆ ಧಕ್ಕೆ ತರಲಾಗಿದೆ. ಸರ್ಕಾರಕ್ಕೆ 1.76 ಲಕ್ಷ ಕೋಟಿ ಬಿಡುಗಡೆ ಮಾಡಿದ ರಿಸರ್ವ್ ಬ್ಯಾಂಕ್ ನ ನೀತಿ ಪರೀಕ್ಷಾರ್ಹ. ಯಾಕೆಂದರೆ ಆರ್.ಬಿ.ಐ ನಿಂದ  ಬಿಡುಗಡೆಯಾದ ದೊಡ್ಡ ಮೊತ್ತದ ಹಣವನ್ನು ಹೇಗೆ ಬಳಸಿಕೊಳ್ಳಬೇಕೆಂದು ತಾನು ಇನ್ನೂ ಯೋಚಿಸಿಲ್ಲ ಎಂದು ಸರ್ಕಾರ ಹೇಳಿದ್ದು ಇದು ಆರ್.ಬಿ.ಐ ನ ಸ್ವಾಯತ್ತತೆ ಮತ್ತು ಸರ್ಕಾರದ ಬೇಜವಾಬ್ದಾರಿಯ ಪ್ರಶ್ನೆಯಾಗಿದೆ.

ಅದಕ್ಕಿಂತ ಜಾಸ್ತಿಯಾಗಿ, ಮೋದಿ ಸರ್ಕಾರದ ಅಡಿಯಲ್ಲಿ ಡೇಟಾದ ವಿಶ್ವಾಸಾರ್ಹತೆ ಪ್ರಶ್ನಾರ್ಥಕವಾಗಿದೆ. ಬಜೆಟ್ ಹೇಳಿಕೆಗಳು ಮತ್ತು ರೋಲ್ ಬ್ಯಾಕ್ ಗಳು ಅಂತರಾಷ್ಟ್ರೀಯ ಹೂಡಿಕೆದಾರರ ವಿಶ್ವಾಸವನ್ನು ಅಲುಗಾಡಿಸಿವೆ. ಭೌಗೋಳಿಕ ರಾಜಕೀಯ ಮರು ಜೋಡಣೆಗಳಿಂದಾಗಿ ಜಾಗತಿಕ ವ್ಯಾಪಾರದಲ್ಲಿ ಇರುವ ಅವಕಾಶಗಳ ಲಾಭವನ್ನು ಪಡೆದು ಭಾರತ ತನ್ನ ರಫ್ತನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮೋದಿ ಸರ್ಕಾರ ಇಂದು ಆರ್ಥಿಕ ನಿರ್ವಹಣೆಯಲ್ಲಿ ವಿಫಲವಾಗಿದೆ.

ನಮ್ಮ ಯುವಕರು, ರೈತರು, ಕೃಷಿ ಕಾರ್ಮಿಕರು, ಉದ್ಯಮಿಗಳು ಮತ್ತು ಅಂಚಿನ ವಲಯದ ದುಡಿಮೆಯ ವರ್ಗದ ಸ್ಥಿತಿ ಸುಧಾರಿಸಬೇಕು. ಭಾರತವನ್ನು ಈಗಿರುವ ಹಾದಿಯಲ್ಲಿ ಮುನ್ನಡೆಸಲು ಸಾಧ್ಯವಿಲ್ಲ. ಆದ್ದರಿಂದ ಹಗೆತನದ ರಾಜಕೀಯವನ್ನು ಬದಿಗಿಟ್ಟು, ವಿವೇಕದ ಮಾತುಗಳನ್ನು ಆಲಿಸಿಕೊಂಡು ಮತ್ತು ವಿಚಾರಶಕ್ತಿಯುಳ್ಳವರನ್ನು ಬಳಸಿಕೊಂಡು ಈ ಮಾನವ ನಿರ್ಮಿತ ಪ್ರಮಾದದಿಂದ ಭಾರತದ ಆರ್ಥಿಕತೆಯನ್ನು ಹೊರತರಬೇಕೆಂದು ನಾನು ಸರ್ಕಾರವನ್ನು ಕೇಳಿಕೊಳ್ಳುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...