Homeಮುಖಪುಟಗಣಪತಿ ಮೂರ್ತಿ ಬಳಿ ಇಟ್ಟಿದ್ದ ಬಾಳೆಹಣ್ಣು ಕೊಂಡೊಯ್ದ ಶಂಕೆ: ಮುಸ್ಲಿಂ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿ...

ಗಣಪತಿ ಮೂರ್ತಿ ಬಳಿ ಇಟ್ಟಿದ್ದ ಬಾಳೆಹಣ್ಣು ಕೊಂಡೊಯ್ದ ಶಂಕೆ: ಮುಸ್ಲಿಂ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿ ಹತ್ಯೆ

- Advertisement -
- Advertisement -

ಗಣಪತಿ ಮೂರ್ತಿ ಬಳಿ ನೈವೇದ್ಯಕ್ಕೆಂದು ಇಡಲಾಗಿದ್ದ ಬಾಳೆಹಣ್ಣನ್ನು ಕೊಂಡೊಯ್ದ ಶಂಕೆಯಲ್ಲಿ ಮುಸ್ಲಿಂ ಯುವಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಅಮಾನುಷವಾಗಿ ಥಳಿಸಲಾಗಿದ್ದು, ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಇಸಾರ್ ಮೊಹಮ್ಮದ್ (26) ಥಳಿತದಿಂದ ಮೃತಪಟ್ಟ ಯುವಕನಾಗಿದ್ದಾನೆ. ಈತ ದೆಹಲಿಯ ಸುಂದರ್ ನಗರಿ ಪ್ರದೇಶದಲ್ಲಿ ವಾಸಿಸುತ್ತಿದ್ದನು.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ 17 ವರ್ಷದ ಅಪ್ರಾಪ್ತ ಸೇರಿ 7 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ದುಷ್ಕರ್ಮಿಗಳನ್ನು ಕಮಲ್, ಮನೋಜ್, ಯೂನಸ್, ಕಿಶನ್, ಲಕ್ಕಿ ಮತ್ತು ಪಪ್ಪು ಎಂದು ಗುರುತಿಸಲಾಗಿದೆ.

ಸುಂದರ್ ನಗರಿ ಪ್ರದೇಶದ ಜಿ4 ಬ್ಲಾಕ್‌ನಲ್ಲಿ ಗಣೇಶ ಚತುರ್ಥಿ ಆಚರಣೆಗೆ ಗಣಪತಿ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿತ್ತು. ಕಿರಿದಾದ ಓಣಿಯಲ್ಲಿ ವೇದಿಕೆ ಸಜ್ಜುಗೊಳಿಸಲಾಗಿತ್ತು. ಸೆ.27ರಂದು ಬೆಳಗ್ಗೆ ಗಣಪತಿ ಮೂರ್ತಿಯ ಮುಂದೆ ಇಟ್ಟಿದ್ದ ಬಾಳೆಹಣ್ಣು ಇಸಾರ್ ಎತ್ತಿಕೊಂಡು ಬಂದಿದ್ದ ಎಂದು ಆರೋಪಿಸಿ 8- 10 ಮಂದಿ ಆತನನ್ನು ಹಿಡಿದು ವೇದಿಕೆಯಿಂದ ಕೇವಲ 20 ಅಡಿ ದೂರದಲ್ಲಿರುವ ವಿದ್ಯುತ್ ಕಂಬಕ್ಕೆ ಕಟ್ಟಿ ಸುಮಾರು ಎರಡು ಗಂಟೆಗಳ ಕಾಲ ತೀವ್ರವಾಗಿ ಥಳಿಸಿದ್ದಾರೆ. ಹಲ್ಲೆಯ ವೀಡಿಯೊಗಳನ್ನು ರೆಕಾರ್ಡ್ ಮಾಡಲಾಗಿದೆ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಅದನ್ನು ವೈರಲ್‌ ಮಾಡಲಾಗಿದೆ.

G4 ಬ್ಲಾಕ್‌ನ ನಿವಾಸಿಯೊಬ್ಬರು ಈ ಬಗ್ಗೆ ಮಾತನಾಡಿದ್ದು,ಬೆಳಿಗ್ಗೆ 4.30 ರ ಸುಮಾರಿಗೆ ನಾನು ಜೋರಾಗಿ ಕಿರುಚಾಟ ಕೇಳಿ ಎಚ್ಚರಗೊಂಡೆ. ನಾನು ಹೊರಗೆ ಬಂದಾಗ ಜನರ ಗುಂಪೊಂದು ಯಾರನ್ನೋ ಅಮಾನುಷವಾಗಿ ಥಳಿಸುತ್ತಿರುವುದನ್ನು ಕಂಡು ಗಾಬರಿಯಾಯಿತು. ಈ ವೇಳೆ ನೆರೆಹೊರೆಗೆ ಎಚ್ಚರಿಸಿದೆ ಎಂದು ಹೇಳಿದ್ದಾರೆ.

ಇಸಾರ್ ಗಂಭೀರವಾಗಿ ಗಾಯಗೊಂಡು ಚಲಿಸಲು ಸಾಧ್ಯವಾಗಲಿಲ್ಲ. ಅವರನ್ನು ಮನೆಗೆ ಹೇಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದಿಲ್ಲ. ಘಟನೆ ನಡೆದ ಸ್ಥಳದಿಂದ ಕೇವಲ 200 ಮೀಟರ್ ದೂರದಲ್ಲಿ ಇಸಾರ್ ಅವರ ಮನೆ ಇದೆ. ಅಲ್ಲಿ ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಇಸಾರ್ ತಂದೆ ವಾಜಿದ್ ಹಣ್ಣು ಮಾರಾಟಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ನಾಲ್ವರು ಪುತ್ರಿಯರಿದ್ದಾರೆ. ಇಸಾರ್ ಅವರ ತಾಯಿ ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದರು.

ಗಣಪತಿಗೆ ಅರ್ಪಿಸಿದ ಪ್ರಸಾದವನ್ನು ತೆಗೆದುಕೊಂಡಿದ್ದಾನೆಂದು ಅವರು ನನ್ನ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನಾನು ಅರಿತುಕೊಂಡೆ. ಅವರು ನನ್ನ ಮಗನ ಕೈ ಮತ್ತು ಕಾಲುಗಳನ್ನು ಬಿಗಿಯಾಗಿ ಕಟ್ಟಿಹಾಕಿದ್ದಾರೆ. ನೀರು ಕೇಳಿದರೂ ಕೊಡದೆ ಅವರು ಅವನಿಗೆ ಅಮಾನವೀಯವಾಗಿ ಥಳಿಸಿದ್ದಾರೆ. ನಮಗೆ ನ್ಯಾಯ ಬೇಕು. ನಾನು ಹಲವು ಬಾರಿ ಪ್ರಸಾದ ತಿಂದಿದ್ದೇನೆ. ಇಲ್ಲಿನ ಹಿಂದೂ ಬಾಂಧವರು ನನಗೆ ಪ್ರಸಾದ ಕೊಟ್ಟಿದ್ದಾರೆ. ನನ್ನ ಮಗನ ಅಗಲಿಕೆ ನಮ್ಮ ಜೀವನವನ್ನು ಛಿದ್ರಗೊಳಿಸಿದೆ ಎಂದು ಇಸಾರ್ ತಂದೆ ವಾಜಿದ್ ದಿ ವೈರ್‌ ಜೊತೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ.

ಮತ್ತೊಬ್ಬ ಸ್ಥಳೀಯ ಶ್ಯಾಮ್ ಅವರು ಈ ಬಗ್ಗೆ ಮಾತನಾಡಿದ್ದು, ಇಸಾರ್ ಪರಿಚಿತ, ಕಳ್ಳತನ ಮಾಡಿದ್ದಾನೆಂದು ಅವನನ್ನು ಥಳಿಸಲಾಯಿತು ಎಂದು ಕೆಲವರು ಹೇಳಿಕೊಂಡಿದ್ದಾರೆ. ಅವನು ನಿರಪರಾಧಿ ಎಂದು ನಾನು ಬಲವಾಗಿ ನಂಬುತ್ತೇನೆ. ಅವನು ಇತರರಿಗೆ ಸಹಾಯ ಮಾಡುತ್ತಿದ್ದ ಮತ್ತು ಅವನು ಕಳ್ಳತನ ಈವರೆಗೆ ಮಾಡಿದ ಬಗ್ಗೆ ಯಾವುದೇ ಸಾಕ್ಷಿ ಇಲ್ಲ ಎಂದು ಹೇಳಿದ್ದಾರೆ.

ಈಶಾನ್ಯ ಡಿಸಿಪಿ ಜಾಯ್ ಎನ್ ಟಿರ್ಕಿ ಈ ಬಗ್ಗೆ ಮಾತನಾಡಿದ್ದು , ಮುಂಜಾನೆ 5 ಗಂಟೆಯ ಸುಮಾರಿಗೆ ಅವರು ಇಸಾರ್‌ನನ್ನು ಹಿಡಿದಿದ್ದಾರೆ. ಕಳ್ಳನೆಂದು ಭಾವಿಸಿ ಆತನಿಗೆ ಪ್ರಶ್ನೆಗಳನ್ನು ಕೇಳಿದರು ಆದರೆ ಅವರು ಮಾನಸಿಕವಾಗಿ ಅಸ್ವಸ್ಥರಾಗಿದ್ದರಿಂದ ಸರಿಯಾಗಿ ಉತ್ತರಿಸಲು ಸಾಧ್ಯವಾಗಲಿಲ್ಲ. ನಂತರ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ ಎಂದು ಹೇಳಿದ್ದಾರೆ.

ಇಸಾರ್‌ನ ನೆರೆಹೊರೆಯವರು ಮತ್ತು ಕುಟುಂಬದ ಸದಸ್ಯರು ಅವರು ಮಾನಸಿಕವಾಗಿ ಅಸ್ವಸ್ಥರಾಗಿದ್ದರು ಎಂಬ ಹೇಳಿಕೆಯನ್ನು ಸುಳ್ಳು ಎಂದು ಹೇಳಿದ್ದಾರೆ.

ನೆರೆಹೊರೆಯವರಾದ ಮೊಹಮ್ಮದ್ ಸಮೀಮ್ ಈ ಕುರಿತು ಮಾತನಾಡಿದ್ದು, ಇಸಾರ್ ಯಾವುದೇ ಮಾನಸಿಕ ಅಸ್ವಸ್ಥ ಯುವಕ ಅಲ್ಲ. ನಾನು ಅವರನ್ನು ಬಹಳ ಸಮಯದಿಂದ ಬಲ್ಲೆ. ಅವರ ಮೇಲಿನ ಕಳ್ಳತನದ ಆರೋಪ ನಿರಾಧಾರ. ಅವರು ಕೇವಲ ಮುಸ್ಲಿಂ ಮತ್ತು ಪ್ರಸಾದ ತೆಗೆದುಕೊಂಡ ಕಾರಣಕ್ಕಾಗಿ ಈ ಕ್ರೌರ್ಯಕ್ಕೆ ಒಳಗಾಗಿ ಹತ್ಯೆಯಾಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗುಜರಾತ್‌: ದಲಿತ ಇಂಜಿನಿಯರ್‌ಗೆ ಜಾತಿ ನಿಂದಿಸಿ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...