Homeಮುಖಪುಟಆಹಾರದ ಪೊಟ್ಟಣ ಕಳ್ಳತನದ ಶಂಕೆಯಲ್ಲಿ ಬುಡಕಟ್ಟು ಬಾಲಕನಿಗೆ ಥಳಿಸಿ ಹತ್ಯೆ

ಆಹಾರದ ಪೊಟ್ಟಣ ಕಳ್ಳತನದ ಶಂಕೆಯಲ್ಲಿ ಬುಡಕಟ್ಟು ಬಾಲಕನಿಗೆ ಥಳಿಸಿ ಹತ್ಯೆ

- Advertisement -
- Advertisement -

ಪಶ್ಚಿಮ ಬಂಗಾಳದ ಪಶ್ಚಿಮ ಮೇದಿನಿಪುರ್ ಜಿಲ್ಲೆಯ ಸಬಾಂಗ್ ಪ್ರದೇಶದಲ್ಲಿ ಆಹಾರದ ಪೊಟ್ಟಣ ಕಳ್ಳತನದ ಶಂಕೆಯಲ್ಲಿ 12 ವರ್ಷದ ಬುಡಕಟ್ಟು ಸಮುದಾಯದ ಬಾಲಕನನ್ನು ಥಳಿಸಿ ಹತ್ಯೆ ಮಾಡಲಾಗಿದೆ.

ಸಬಾಂಗ್‌ನ ಬೋರೋಚರಾ ಗ್ರಾಮದ ನಿವಾಸಿ, ಲೋಧಾ ಶಬರ್ ಸಮುದಾಯದ ಬಾಲಕ ಸುಭಾ ನಾಯಕ್  ಆಹಾರವನ್ನು ಕಳ್ಳತನ ಮಾಡಿದ್ದಾನೆಂದು ಮರಕ್ಕೆ ಕಟ್ಟಿಹಾಕಿ ಹಾಕಿ ಚಿತ್ರಹಿಂಸೆ ನೀಡಲಾಗಿದೆ.

ಈ ಘಟನೆಯು ಸೆ.27ರಂದು ಬುಧವಾರ ನಡೆದಿದೆ. ಸ್ಥಳೀಯ ಆಹಾರ ಮಳಿಗೆಯ ಮಾಲೀಕನೋರ್ವ ಅಂಗಡಿಯಿಂದ ಹೊರಗೆ ಹೋಗಿದ್ದ. ಈ ವೇಳೆ ಅಂಗಡಿಯಿಂದ ಆಹಾರದ ಪೊಟ್ಟಣಗಳು ಕಾಣೆಯಾಗಿದ್ದವು. ಅಂಗಡಿ ಮಾಲಕ ಬಂದು ಇದನ್ನು ನೆರೆಹೊರೆಯವರಿಗೆ ತಿಳಿಸಿದ್ದಾರೆ. ಈ ವೇಳೆ ದನಕರುಗಳಿಗೆ ಆಹಾರಕ್ಕಾಗಿ ಬಳಸುತ್ತಿದ್ದ ಅಲ್ಯೂಮಿನಿಯಂ ಪಾತ್ರೆಯೂ ನಾಪತ್ತೆಯಾಗಿದೆ ಎಂದು ಕೆಲವರು ಹೇಳಿದ್ದಾರೆ.

ಈ ವೇಳೆ ಅಂಗಡಿಯ ಎದುರಿನ ಗುಡಿಸಲಿನ ಬಳಿ ಸುಭಾ ನಾಯಕ್ ಕುಳಿತಿದ್ದರು. ಜನರ ಗುಂಪು ಸುಭಾ ನಾಯಕ್ ಅವರ ಮನೆಗೆ ನುಗ್ಗಿ ಹುಡುಕಾಟ ನಡೆಸಿದ್ದಾರೆ. ಆದರೆ ಏನೂ ಸಿಕ್ಕಿರಲಿಲ್ಲ. ಆದರೆ ಆ ಬಳಿಕ ಆತನ ಮೇಲೆ ಶಂಕೆಯ ಆಧಾರದಲ್ಲಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ತೃಣಮೂಲ ಕಾಂಗ್ರೆಸ್‌ನ ಪಂಚಾಯತ್ ಸದಸ್ಯ ಮೊನೊರಂಜನ್ ಮಾಲ್ ಸೇರಿದಂತೆ ಏಳು ಜನರನ್ನು ಬಂಧಿಸಲಾಗಿದೆ.

ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಆದರೆ ಪ್ರಾಥಮಿಕ ತನಿಖೆಯ ಪ್ರಕಾರ ನಾವು ಕೊಲೆ ಪ್ರಕರಣವನ್ನು ದಾಖಲಿಸಿದ್ದೇವೆ ಎಂದು ಪಶ್ಚಿಮ ಮೇದಿನಿಪುರ ಎಸ್ಪಿ ಧೃತಿಮಾನ್ ಸರ್ಕಾರ್ ಹೇಳಿದ್ದಾರೆ.

ಮರಣೋತ್ತರ ಪರೀಕ್ಷೆಯ ನಂತರ  ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು,  ಭಾರೀ ಪೊಲೀಸ್ ಭದ್ರತೆಯಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ.

ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಸಂತ್ರಸ್ತನ ಸೋದರ ಸಂಬಂಧಿ,  ನನ್ನ ಮನೆಯಿಂದ ಘಟನೆ ನಡೆದ ಸ್ಥಳಕ್ಕೆ 10 ನಿಮಿಷಗಳ ಕಾಲ್ನಡಿಗೆಯ ದೂರ ಇರುವುದು. ಕೆಲವು ಸ್ಥಳೀಯರು ಆತನನ್ನು ಥಳಿಸುತ್ತಿರುವುದನ್ನು ನಾನು ನೋಡಿದೆ. ನಾನು ಇದಕ್ಕೆ ವಿರೋಧಿಸಿದೆ ಆದರೆ ಯಾರೂ ನನ್ನ ಮಾತನ್ನು ಕೇಳಲಿಲ್ಲ. ಅವರು ಅವನನ್ನು ಸ್ಥಳೀಯ ಕ್ಷೌರಿಕನ ಅಂಗಡಿಗೆ ಕರೆದೊಯ್ದು ತಲೆ ಬೋಳಿಸಿದರು. ನಂತರ ಬಸ್ ನಿಲ್ದಾಣಕ್ಕೆ ಕರೆದೊಯ್ದರು. ಅಲ್ಲಿ ಪಂಚಾಯಿತಿ ಸದಸ್ಯರ ಸೂಚನೆ ಮೇರೆಗೆ ಮತ್ತೆ ಹಲ್ಲೆ ಮಾಡಿದ್ದಾರೆ. ಪೊಲೀಸರಿಗೆ ಕರೆ ಮಾಡುವಂತೆ ನಾನು ಅವರಿಗೆ ಮನವಿ ಮಾಡುತ್ತಲೇ ಇದ್ದೆ ಆದರೆ ಅವರು ನನ್ನ ಮಾತನ್ನು ನಿರ್ಲಕ್ಷಿಸಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗಣಪತಿ ಮೂರ್ತಿ ಬಳಿ ಇಟ್ಟಿದ್ದ ಬಾಳೆಹಣ್ಣು ಕೊಂಡೊಯ್ದ ಶಂಕೆ: ಮುಸ್ಲಿಂ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿ ಹತ್ಯೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...