Homeಮುಖಪುಟಬಿಜೆಪಿಗೆ 10 ವರ್ಷಗಳ ಕಾಲ 'ಮಿಯಾ' ಮತಗಳ ಅಗತ್ಯವಿಲ್ಲ: ಅಸ್ಸಾಂ ಸಿಎಂ ಶರ್ಮಾ

ಬಿಜೆಪಿಗೆ 10 ವರ್ಷಗಳ ಕಾಲ ‘ಮಿಯಾ’ ಮತಗಳ ಅಗತ್ಯವಿಲ್ಲ: ಅಸ್ಸಾಂ ಸಿಎಂ ಶರ್ಮಾ

- Advertisement -
- Advertisement -

ಮುಂದಿನ 10 ವರ್ಷಗಳವರೆಗೆ ಬಾಲ್ಯವಿವಾಹದಂತಹ ಆಚರಣೆಗಳನ್ನು ಕೈಬಿಡುವವರೆಗೆ “ಮಿಯಾ” ಜನರ ಮತಗಳು ಬಿಜೆಪಿಗೆ ಅಗತ್ಯವಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಮಿಯಾ” ಎಂಬ ಪದವನ್ನು ದಕ್ಷಿಣ ಏಷ್ಯಾದಾದ್ಯಂತ ಮುಸ್ಲಿಮರು “ಸಂಭಾವಿತ” ಎಂದು ಅರ್ಥೈಸಲು ಬಳಸಿದರೆ, ಅಸ್ಸಾಂನಲ್ಲಿ ಈ ಪದವನ್ನು ಬಂಗಾಳಿ ಮೂಲದ ಮುಸ್ಲಿಮರನ್ನು ವಿವರಿಸಲು ಜನಾಂಗೀಯ ನಿಂದನೆಯಾಗಿ ನೋಡಲಾಗುತ್ತದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಧರ್ಮಾ, ”ಚುನಾವಣೆಗಳು ಬಂದಾಗ, ನಮಗೆ ಮತ ಹಾಕಬೇಡಿ ಎಂದು ನಾನು ಅವರನ್ನು ವಿನಂತಿಸುತ್ತೇನೆ. ನೀವು ಯಾವಾಗ ಕುಟುಂಬ ಯೋಜನೆಯನ್ನು ಅನುಸರಿಸುತ್ತೀರಿ, ಬಾಲ್ಯ ವಿವಾಹವನ್ನು ನಿಲ್ಲಿಸುತ್ತೀರಿ ಮತ್ತು ಮೂಲಭೂತವಾದವನ್ನು ಹೊರಹಾಕುತ್ತೀರಿ, ಆಗ ನೀವು ನಮಗೆ ಮತ ಹಾಕಿ. ಇದು ಸಾಧ್ಯವಾಗಲು ಸುಮಾರು 10 ವರ್ಷಗಳು ಬೇಕಾಗುತ್ತದೆ. ನಾವು 10 ವರ್ಷಗಳ ನಂತರ ಅವರಲ್ಲಿ ಮತ ಕೇಳುತ್ತೇವೆ, ಈಗ ಮತ ಕೇಳುವುದಿಲ್ಲ” ಎಂದು ಹೇಳಿದ್ದಾರೆ.

”ಬಿಜೆಪಿ ಪರವಾಗಿ ಮತ ಚಲಾಯಿಸುವವರು ಎರಡು ಅಥವಾ ಮೂರಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರಬಾರದು, ತಮ್ಮ ಹೆಣ್ಣುಮಕ್ಕಳನ್ನು ಶಾಲೆಗೆ ಕಳುಹಿಸಬೇಕು, ಬಾಲ್ಯವಿವಾಹದಲ್ಲಿ ಪಾಲ್ಗೊಳ್ಳಬಾರದು ಮತ್ತು ಸೂಫಿಸಂ ಅನ್ನು ಅಳವಡಿಸಿಕೊಳ್ಳಲು ಮೂಲಭೂತವಾದವನ್ನು ಬಿಡಬಾರದು. ಈ ಷರತ್ತುಗಳನ್ನು ಅನುಸರಿಸಿದಾಗ ನಾವು ಮತ ಕೇಳಲು ‘ಚಾರ್’ಗೆ ಹೋಗುತ್ತೇನೆ” ಎಂದು ಶರ್ಮಾ ಹೇಳಿದರು.

ಶರ್ಮಾ ಸರ್ಕಾರವು ಫೆಬ್ರವರಿಯಿಂದ ಈ ಬಾಲ್ಯವಿವಾಹಗಳ ವಿರುದ್ಧದ ಕ್ರಮದ ಭಾಗವಾಗಿ 5,000 ಜನರನ್ನು ಬಂಧಿಸಿದೆ. 14 ವರ್ಷದೊಳಗಿನ ಬಾಲಕಿಯರನ್ನು ಮದುವೆಯಾದ ಪುರುಷರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ ಮತ್ತು 14 ರಿಂದ 18 ವರ್ಷ ವಯಸ್ಸಿನ ಹುಡುಗಿಯರನ್ನು ಮದುವೆಯಾದವರ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪೊಲೀಸರು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ.

ಬಾಲ್ಯ ವಿವಾಹದ ವಿರುದ್ಧದ ಅಭಿಯಾನದ ಭಾಗವಾಗಿ ರಾಜ್ಯ ಪೊಲೀಸರು ಮುಂದಿನ 10 ದಿನಗಳಲ್ಲಿ ಇನ್ನೂ 2,000 ರಿಂದ 3,000 ಪುರುಷರನ್ನು ಬಂಧಿಸಲಿದ್ದಾರೆ ಎಂದು ಸೆಪ್ಟೆಂಬರ್ 10 ರಂದು ಶರ್ಮಾ ಹೇಳಿದ್ದರು.

”ಮಿಯಾ” ಜನರುಬಿಜೆಪಿಗೆ ಮತ ಹಾಕದೆ, ನಮ್ಮ  ಷರತ್ತುಗಳನ್ನು ಅನುಸರಿಸಿದಾಗ ನಮ್ಮನ್ನು ಬೆಂಬಲಿಸಬಹುದು ಎಂದು ಶರ್ಮಾ ಭಾನುವಾರ ಹೇಳಿದ್ದಾರೆ.

”ಬಿಜೆಪಿ ಸಾರ್ವಜನಿಕರಿಗೆ ಒಳ್ಳೆಯದನ್ನೇ ಮಾಡುತ್ತದೆ. ಹಾಗಾಗಿ ಅವರು ನಮ್ಮನ್ನು ಬೆಂಬಲಿಸುತ್ತಾರೆ, ಆದರೆ ಅವರು ನಮಗೆ ಮತ ಹಾಕುವ ಅಗತ್ಯವಿಲ್ಲ. ನಮ್ಮನ್ನು ಬೆಂಬಲಿಸುವುದರಿಂದ ಯಾವುದೇ ಹಾನಿ ಇಲ್ಲ. ಅವರು ಹಿಮಂತ ಬಿಸ್ವ ಶರ್ಮಾ, ನರೇಂದ್ರ ಮೋದಿ ಮತ್ತು ಬಿಜೆಪಿಗೆ ಜಿಂದಾಬಾದ್ ಎಂದು ಕೂಗಲಿ” ಎಂದು ಶರ್ಮಾ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಪ್ರಶ್ನೆ ಕೇಳಿದ ಮಹಿಳಾ ವರದಿಗಾರ್ತಿಗೆ ಅವಮಾನಿಸಲು ಮುಂದಾದ ಅಣ್ಣಾಮಲೈ: ಪತ್ರಕರ್ತರಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...