Homeಮುಖಪುಟತೆಲಂಗಾಣ, ಆಂಧ್ರದಲ್ಲಿ ಸಾಮಾಜಿಕ ಕಾರ್ಯಕರ್ತರ ನಿವಾಸಗಳ ಮೇಲೆ ಎನ್‌ಐಎ ದಾಳಿ

ತೆಲಂಗಾಣ, ಆಂಧ್ರದಲ್ಲಿ ಸಾಮಾಜಿಕ ಕಾರ್ಯಕರ್ತರ ನಿವಾಸಗಳ ಮೇಲೆ ಎನ್‌ಐಎ ದಾಳಿ

- Advertisement -
- Advertisement -

ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಮಾವೋವಾದಿಗಳ ಜೊತೆಗಿನ ಲಿಂಕ್‌ ಕುರಿತ ತನಿಖೆಯ ಭಾಗವಾಗಿ ಎನ್‌ಐಎ ಅಧಿಕಾರಿಗಳು ನಾಗರಿಕ ಹಕ್ಕುಗಳ ಸಂಘಟನೆಗಳ ನಾಯಕರ ಮತ್ತು ಸಾಮಾಜಿಕ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

ನಾಗರಿಕ ಹಕ್ಕುಗಳ ಕಾರ್ಯಕರ್ತರು ಮತ್ತು ಅಮರುಳ ಬಂಧು ಮಿತ್ರರ ಸಂಘ, ಕುಲ ನಿರ್ಮೂಲನ ಹೋರಾಟ ಸಮಿತಿ (ಕೆಎನ್‌ಪಿಎಸ್), ಚೈತನ್ಯ ಮಹಿಳಾ ಸಂಘದ ನಾಯಕರು ಮತ್ತು ಅವರ ಸಂಬಂಧಿಕರ ಮನೆಗಳಲ್ಲಿ  ಎನ್‌ಐಎ ಅಧಿಕಾರಿಗಳು ಮುಂಜಾನೆಯೇ ಶೋಧ ಆರಂಭಿಸಿದ್ದಾರೆ. ಶೋಧಕ್ಕೊಳಗಾದ ಕೆಲವರನ್ನು ಎನ್‌ಐಎ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದೆ ಎಂದು ಹೇಳಲಾಗಿದೆ.

ಮಾವೋವಾದಿಗಳ ಜೊತೆಗಿನ ನಂಟು  ಹೊಂದಿದ್ದಾರೆಂದು ಆರೋಪಿಸಿ ಎನ್‌ಐಎ ದಾಳಿ ನಡೆದಿದೆ ಎಂದು ಹೇಳಲಾಗದೆ. ಎನ್‌ಐಎ ಅಧಿಕಾರಿಗಳು ಶೋಧದ ಬಳಿಕ ಸಿಆರ್‌ಪಿಸಿಯ ಸೆಕ್ಷನ್ 160ರಡಿಯಲ್ಲಿ ಕೆಲವರಿಗೆ ನೋಟಿಸ್‌ಗಳನ್ನು ನೀಡಿದ್ದಾರೆ.

ನವೆಂಬರ್ 2020ರಲ್ಲಿ ಆಂಧ್ರಪ್ರದೇಶದ ವಿಶಾಖಪಟ್ಟಣಂ ಗ್ರಾಮಾಂತರ ಪೊಲೀಸರು ಬಂಧಿಸಿದ ಪಾಂಗಿ ನಾಗಣ್ಣ ಎಂಬ ಟಿವಿ ಪತ್ರಕರ್ತನಿಗೆ ಸಂಬಂಧಿಸಿದ ಮುಂಚಿಂಗಿಪುಟ್ಟು ಪ್ರಕರಣಕ್ಕೆ ಸಂಬಂಧಿಸಿ ಈ ಶೋಧ ನಡೆದಿದೆ ಎಂದು ಹೇಳಲಾಗಿದೆ.

ಪೊಲೀಸರು ನಾಗಣ್ಣ  ಮತ್ತು ಇತರ 63 ಮಂದಿ ವಿರುದ್ಧ ಯುಎಪಿಎ ಮತ್ತು ಭಾರತೀಯ ದಂಡ ಸಂಹಿತೆಯ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಮಾನವ ಹಕ್ಕುಗಳ ವೇದಿಕೆಯ ವಿ.ಎಸ್.ಕೃಷ್ಣ, ಎಪಿ ನಾಗರಿಕ ಸ್ವಾತಂತ್ರ್ಯ ಸಮಿತಿಯ ವಕೀಲ ವಿ.ರಘುನಾಥ್, ಚಿಲುಕಾ ಚಂದ್ರಶೇಖರ್, ಡಪ್ಪು ರಮೇಶ್, ವಿರಾಸಂನ ವರಲಕ್ಷ್ಮಿ ಸೇರಿದಂತೆ ಅನೇಕ ಕಾರ್ಯಕರ್ತರನ್ನು ವಿಶಾಖಪಟ್ಟಣ ಗ್ರಾಮಾಂತರ ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿತ್ತು.

ಹೈದರಾಬಾದ್‌ನಲ್ಲಿರುವ ಸಾಮಾಜಿಕ ಕಾರ್ಯಕರ್ತೆ ಭವಾನಿ ಮತ್ತು ವಕೀಲ ಸುರೇಶ್ ಅವರ ಮನೆಗಳಲ್ಲಿ ಎನ್‌ಐಎ ತಂಡ ಶೋಧ ನಡೆಸಿದೆ. ಆಂಧ್ರಪ್ರದೇಶದ ಗುಂಟೂರು, ವಿಜಯವಾಡ, ಪೊನ್ನೂರು, ಮಂಗಳಗಿರಿ, ಬಾಪಟ್ಲಾ, ನೆಲ್ಲೂರು, ತಿರುಪತಿ, ಅನಂತಪುರ ಸೇರಿ ವಿವಿಧೆಡೆ ಶೋಧ ಕಾರ್ಯ ನಡೆದಿದೆ.

ಎನ್‌ಐಎ ಅಧಿಕಾರಿಗಳು ಗುಂಟೂರು ಜಿಲ್ಲಾ ನಾಗರಿಕ ಸ್ವಾತಂತ್ರ್ಯ ಸಮಿತಿ ಅಧ್ಯಕ್ಷ ರಾಜಾ ರಾವ್ ಅವರ ಪೊನ್ನೂರಿನ ಮನೆಯಲ್ಲಿ ಶೋಧ ನಡೆಸುತ್ತಿದ್ದಾರೆ. ಪ್ರಜಾ ತಂತ್ರ ಪಕ್ಷವನ್ನು ನಡೆಸುತ್ತಿರುವ ಅವರ ಸ್ನೇಹಿತ ಟಿ ಸುಬ್ಬರಾವ್ ಅವರ ನಿವಾಸದಲ್ಲೂ ಶೋಧ ನಡೆಸಿದ್ದಾರೆ. ನೆಲ್ಲೂರಿನಲ್ಲಿ ಯಳ್ಳಂಕಿ ವೆಂಕಟೇಶ್ವರಲು, ತಿರುಪತಿಯ ಕ್ರಾಂತಿ ಚೈತನ್ಯ ಮತ್ತು ತಿರುಪತಿಯ ಕವಲಿ ಬಾಲಯ್ಯ ಅವರ ಮನೆಗಳಲ್ಲೂ ಶೋಧ ಕಾರ್ಯ ನಡೆದಿದೆ.

ಇದನ್ನು ಓದಿ: ಜಾತಿಗಣತಿ ವರದಿ ಬಿಡುಗಡೆಗೊಳಿಸಿದ ಬಿಹಾರ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...