Homeಮುಖಪುಟತೆಲಂಗಾಣ, ಆಂಧ್ರದಲ್ಲಿ ಸಾಮಾಜಿಕ ಕಾರ್ಯಕರ್ತರ ನಿವಾಸಗಳ ಮೇಲೆ ಎನ್‌ಐಎ ದಾಳಿ

ತೆಲಂಗಾಣ, ಆಂಧ್ರದಲ್ಲಿ ಸಾಮಾಜಿಕ ಕಾರ್ಯಕರ್ತರ ನಿವಾಸಗಳ ಮೇಲೆ ಎನ್‌ಐಎ ದಾಳಿ

- Advertisement -
- Advertisement -

ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಮಾವೋವಾದಿಗಳ ಜೊತೆಗಿನ ಲಿಂಕ್‌ ಕುರಿತ ತನಿಖೆಯ ಭಾಗವಾಗಿ ಎನ್‌ಐಎ ಅಧಿಕಾರಿಗಳು ನಾಗರಿಕ ಹಕ್ಕುಗಳ ಸಂಘಟನೆಗಳ ನಾಯಕರ ಮತ್ತು ಸಾಮಾಜಿಕ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

ನಾಗರಿಕ ಹಕ್ಕುಗಳ ಕಾರ್ಯಕರ್ತರು ಮತ್ತು ಅಮರುಳ ಬಂಧು ಮಿತ್ರರ ಸಂಘ, ಕುಲ ನಿರ್ಮೂಲನ ಹೋರಾಟ ಸಮಿತಿ (ಕೆಎನ್‌ಪಿಎಸ್), ಚೈತನ್ಯ ಮಹಿಳಾ ಸಂಘದ ನಾಯಕರು ಮತ್ತು ಅವರ ಸಂಬಂಧಿಕರ ಮನೆಗಳಲ್ಲಿ  ಎನ್‌ಐಎ ಅಧಿಕಾರಿಗಳು ಮುಂಜಾನೆಯೇ ಶೋಧ ಆರಂಭಿಸಿದ್ದಾರೆ. ಶೋಧಕ್ಕೊಳಗಾದ ಕೆಲವರನ್ನು ಎನ್‌ಐಎ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದೆ ಎಂದು ಹೇಳಲಾಗಿದೆ.

ಮಾವೋವಾದಿಗಳ ಜೊತೆಗಿನ ನಂಟು  ಹೊಂದಿದ್ದಾರೆಂದು ಆರೋಪಿಸಿ ಎನ್‌ಐಎ ದಾಳಿ ನಡೆದಿದೆ ಎಂದು ಹೇಳಲಾಗದೆ. ಎನ್‌ಐಎ ಅಧಿಕಾರಿಗಳು ಶೋಧದ ಬಳಿಕ ಸಿಆರ್‌ಪಿಸಿಯ ಸೆಕ್ಷನ್ 160ರಡಿಯಲ್ಲಿ ಕೆಲವರಿಗೆ ನೋಟಿಸ್‌ಗಳನ್ನು ನೀಡಿದ್ದಾರೆ.

ನವೆಂಬರ್ 2020ರಲ್ಲಿ ಆಂಧ್ರಪ್ರದೇಶದ ವಿಶಾಖಪಟ್ಟಣಂ ಗ್ರಾಮಾಂತರ ಪೊಲೀಸರು ಬಂಧಿಸಿದ ಪಾಂಗಿ ನಾಗಣ್ಣ ಎಂಬ ಟಿವಿ ಪತ್ರಕರ್ತನಿಗೆ ಸಂಬಂಧಿಸಿದ ಮುಂಚಿಂಗಿಪುಟ್ಟು ಪ್ರಕರಣಕ್ಕೆ ಸಂಬಂಧಿಸಿ ಈ ಶೋಧ ನಡೆದಿದೆ ಎಂದು ಹೇಳಲಾಗಿದೆ.

ಪೊಲೀಸರು ನಾಗಣ್ಣ  ಮತ್ತು ಇತರ 63 ಮಂದಿ ವಿರುದ್ಧ ಯುಎಪಿಎ ಮತ್ತು ಭಾರತೀಯ ದಂಡ ಸಂಹಿತೆಯ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಮಾನವ ಹಕ್ಕುಗಳ ವೇದಿಕೆಯ ವಿ.ಎಸ್.ಕೃಷ್ಣ, ಎಪಿ ನಾಗರಿಕ ಸ್ವಾತಂತ್ರ್ಯ ಸಮಿತಿಯ ವಕೀಲ ವಿ.ರಘುನಾಥ್, ಚಿಲುಕಾ ಚಂದ್ರಶೇಖರ್, ಡಪ್ಪು ರಮೇಶ್, ವಿರಾಸಂನ ವರಲಕ್ಷ್ಮಿ ಸೇರಿದಂತೆ ಅನೇಕ ಕಾರ್ಯಕರ್ತರನ್ನು ವಿಶಾಖಪಟ್ಟಣ ಗ್ರಾಮಾಂತರ ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿತ್ತು.

ಹೈದರಾಬಾದ್‌ನಲ್ಲಿರುವ ಸಾಮಾಜಿಕ ಕಾರ್ಯಕರ್ತೆ ಭವಾನಿ ಮತ್ತು ವಕೀಲ ಸುರೇಶ್ ಅವರ ಮನೆಗಳಲ್ಲಿ ಎನ್‌ಐಎ ತಂಡ ಶೋಧ ನಡೆಸಿದೆ. ಆಂಧ್ರಪ್ರದೇಶದ ಗುಂಟೂರು, ವಿಜಯವಾಡ, ಪೊನ್ನೂರು, ಮಂಗಳಗಿರಿ, ಬಾಪಟ್ಲಾ, ನೆಲ್ಲೂರು, ತಿರುಪತಿ, ಅನಂತಪುರ ಸೇರಿ ವಿವಿಧೆಡೆ ಶೋಧ ಕಾರ್ಯ ನಡೆದಿದೆ.

ಎನ್‌ಐಎ ಅಧಿಕಾರಿಗಳು ಗುಂಟೂರು ಜಿಲ್ಲಾ ನಾಗರಿಕ ಸ್ವಾತಂತ್ರ್ಯ ಸಮಿತಿ ಅಧ್ಯಕ್ಷ ರಾಜಾ ರಾವ್ ಅವರ ಪೊನ್ನೂರಿನ ಮನೆಯಲ್ಲಿ ಶೋಧ ನಡೆಸುತ್ತಿದ್ದಾರೆ. ಪ್ರಜಾ ತಂತ್ರ ಪಕ್ಷವನ್ನು ನಡೆಸುತ್ತಿರುವ ಅವರ ಸ್ನೇಹಿತ ಟಿ ಸುಬ್ಬರಾವ್ ಅವರ ನಿವಾಸದಲ್ಲೂ ಶೋಧ ನಡೆಸಿದ್ದಾರೆ. ನೆಲ್ಲೂರಿನಲ್ಲಿ ಯಳ್ಳಂಕಿ ವೆಂಕಟೇಶ್ವರಲು, ತಿರುಪತಿಯ ಕ್ರಾಂತಿ ಚೈತನ್ಯ ಮತ್ತು ತಿರುಪತಿಯ ಕವಲಿ ಬಾಲಯ್ಯ ಅವರ ಮನೆಗಳಲ್ಲೂ ಶೋಧ ಕಾರ್ಯ ನಡೆದಿದೆ.

ಇದನ್ನು ಓದಿ: ಜಾತಿಗಣತಿ ವರದಿ ಬಿಡುಗಡೆಗೊಳಿಸಿದ ಬಿಹಾರ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...