Homeಮುಖಪುಟ"ರೊಟ್ಟಿಗೆ ಉಪ್ಪು ಮಾತ್ರ": ಯುಪಿ ಶಾಲೆಗಳ ಬಡತನ ತೋರಿಸಿದ ಪತ್ರಕರ್ತನ ವಿರುದ್ಧ ಎಫ್ಐಆರ್!!

“ರೊಟ್ಟಿಗೆ ಉಪ್ಪು ಮಾತ್ರ”: ಯುಪಿ ಶಾಲೆಗಳ ಬಡತನ ತೋರಿಸಿದ ಪತ್ರಕರ್ತನ ವಿರುದ್ಧ ಎಫ್ಐಆರ್!!

- Advertisement -
- Advertisement -

ಶಾಲಾ ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಉಪ್ಪು ಮತ್ತು ರೊಟ್ಟಿ ನೀಡಲಾಗುತ್ತಿರುವ ವಿಡಿಯೋವನ್ನು ರೆಕಾರ್ಡ್ ಮಾಡುವ ಮೂಲಕ ಉತ್ತರ ಪ್ರದೇಶ ಸರ್ಕಾರದ ಚಿತ್ರಣವನ್ನು ದೇಶಕ್ಕೆ ತೋರಿಸಿದ ಪತ್ರಕರ್ತ ಪವನ್ ಕುಮಾರ್ ಜೈಸ್ವಾಲ್ ಮೇಲೆ ದೂರು ದಾಖಲಾಗಿದ್ದು ಎಫ್ಐಆರ್ ಹಾಕಿರುವ ಘಟನೆ ವರದಿಯಾಗಿದೆ.

ಈ ವಿಡಿಯೋ ಮಾಡುವು ಮೂಲಕ “ತಿರಸ್ಕಾರದ ಕೆಲಸ” ಮಾಡಿದ್ದಾರೆ ಎಂದು ಆರೋಪಿಸಿ ಅಹಿರೌರಾ ಪೊಲೀಸ್ ಠಾಣೆಯಲ್ಲಿ ಮಿರ್ಜಾಪುರ ಬ್ಲಾಕ್ ಶಿಕ್ಷಣ ಅಧಿಕಾರಿ ಪ್ರೇಮ್ ಶಂಕರ್ ರಾಮ್ ಅವರ ದೂರಿನ ಮೇರೆಗೆ ಶನಿವಾರ ಎಫ್ಐಆರ್ ದಾಖಲಿಸಲಾಗಿದೆ.

ಪತ್ರಕರ್ತ ಪವನ್ ಕುಮಾರ್ ಜೈಸ್ವಾಲ್, ಗ್ರಾಮದ ಮುಖ್ಯ ಪ್ರತಿನಿಧಿ ರಾಜ್‌ಕುಮಾರ್ ಪಾಲ್ ಮತ್ತು ಇನ್ನೂ ಹಲವು ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ), 186 (ಸರ್ಕಾರಿ ನೌಕರನನ್ನು ಕರ್ತವ್ಯ ನಿರ್ವಹಿಸುವಲ್ಲಿ ಅಡ್ಡಿಪಡಿಸುವುದು), 193 (ಸುಳ್ಳು ಪುರಾವೆಗಳು) ಮತ್ತು 420 (ಮೋಸ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೂರಿನ ಪ್ರಕಾರ, ಜೈಸ್ವಾಲ್ ಮತ್ತು ಪಾಲ್ ಸಂಚು ರೂಪಿಸಿ ಉದ್ದೇಶಪೂರ್ವಕವಾಗಿ ವಿಡಿಯೋವನ್ನು ಯೋಜಿತ ರೀತಿಯಲ್ಲಿ ತಯಾರಿಸಿದ್ದಾರೆ ಮತ್ತು ರಾಜ್ಯ ಸರ್ಕಾರದ ಚಿತ್ರಣವನ್ನು ಕೆಡಿಸುವ “ತಿರಸ್ಕಾರದ ಕೆಲಸ” ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ರೊಟ್ಟಿ ಮಾತ್ರ ಬೇಯಿಸಲಾಗುತ್ತದೆ ಮತ್ತು ಶಾಲೆಯಲ್ಲಿ ತರಕಾರಿ ಬೇಯಿಸುವುದಿಲ್ಲ ಎಂದು ಪಾಲ್ ಗೆ ಮೊದಲೇ ತಿಳಿದಿತ್ತು. ಆದರೆ “ಅದನ್ನು ಸರಿಪಡಿಸುವ ಬದಲು” ಅವರು ಮುದ್ರಣ ಮಾಧ್ಯಮದಲ್ಲಿ ಕೆಲಸ ಮಾಡುವ ಪತ್ರಕರ್ತನನ್ನು ಕರೆದು ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಅದನ್ನು ತೋರಿಸುವಂತೆ ಒತ್ತಾಯಿಸಿದರು. ಇದರಿಂದಾಗಿ “ಪತ್ರಕರ್ತ ತನ್ನ ಮೊಬೈಲ್ನಲ್ಲಿ ವೀಡಿಯೊವನ್ನು ಚಿತ್ರೀಕರಿಸಿದ್ದಾನೆ ಮತ್ತು ಅದನ್ನು ಎಲೆಕ್ಟ್ರಾನಿಕ್ ಮಾಧ್ಯಮ ಸಂಸ್ಥೆಗಳಿಗೆ ಹಂಚಿಕೊಂಡಿದ್ದಾನೆ” ಎಂದು ಆರೋಪಿಸಲಾಗಿದೆ.

“ಈ ವಿಷಯವು ನಮ್ಮ ಗಮನಕ್ಕೆ ಬಂದಿದೆ ಮತ್ತು ಸಮಸ್ಯೆಯ ಕುರಿತು ತನಿಖೆಗೆ ಆದೇಶಿಸಲಾಗಿತ್ತು. ರೊಟ್ಟಿ ಮತ್ತು ಉಪ್ಪನ್ನು ಬಡಿಸಿದ ಆರೋಪ ನಿಜವೆಂದು ತಿಳಿದುಬಂದ ನಂತರ, ಮುರಾರಿ ಮತ್ತು ಅರವಿಂದ ತ್ರಿಪಾಠಿ ಎಂಬ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಮತ್ತು ಕಠಿಣ ಕ್ರಮ ಕೈಗೊಳ್ಳಲಾಗುವುದು ”ಎಂದು ಮಿರ್ಜಾಪುರದ ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುರಾಗ್ ಪಟೇಲ್ ಹೇಳಿದ್ದಾರೆ.

ಮಿರ್ಜಾಪುರ ಜಿಲ್ಲೆಯ ಜಮಾಲ್‌ಪುರ ಬ್ಲಾಕ್‌ನಲ್ಲಿರುವ ಸಿಯೂರ್ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತಮ್ಮ ಮಧ್ಯಾಹ್ನ  ಊಟದಲ್ಲಿ ಉಪ್ಪು ಮತ್ತು ರೊಟ್ಟಿ ಮಾತ್ರ ತಿನ್ನುತ್ತಿರುವ ವಿಡಿಯೋ ಆಗಸ್ಟ್ 22 ರಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು.

ಪ್ರಮುಖ ಪೌಷ್ಠಿಕಾಂಶ ಯೋಜನೆಯಡಿಯ ಮಾನದಂಡಗಳ ಪ್ರಕಾರ, ದ್ವಿದಳ ಧಾನ್ಯಗಳು, ಅಕ್ಕಿ, ರೊಟ್ಟಿ ಮತ್ತು ತರಕಾರಿಗಳು, ಕೆಲವು ದಿನಗಳಲ್ಲಿ ಹಣ್ಣುಗಳು ಮತ್ತು ಹಾಲಿನೊಂದಿಗೆ ಶಾಲೆಗೆ ಹೋಗುವ ಮಕ್ಕಳಿಗೆ ಅಗತ್ಯವಾದ ಪೌಷ್ಠಿಕಾಂಶವುಳ್ಳ ಆಹಾರವನ್ನು ನೀಡಬೇಕಾಗಿತ್ತು.

ಜೈಸ್ವಾಲ್ ವಿರುದ್ಧ ಎಫ್‌ಐಆರ್ ಹಾಕಿದ ಸುದ್ದಿ ಹೊರಬಿದ್ದ ನಂತರ, ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಅವರನ್ನು ಬೆಂಬಲಿಸಿದ್ದಾರೆ. ನೇಹಾ ದೀಕ್ಷಿತ್ ಮತ್ತು ರೋಹಿಣಿ ಸಿಂಗ್ ಸೇರಿದಂತೆ ಹಲವಾರು ಪತ್ರಕರ್ತರು ಎಫ್‌ಐಆರ್ ಅನ್ನು ಟೀಕಿಸುತ್ತಿದ್ದಲ್ಲದೇ ಜೈಸ್ವಾಲ್ ರವರ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಅಲ್ಲಿ ಅವರು ಕಂಡದ್ದನ್ನು ವರದಿ ಮಾಡಿದ್ದಾರೆ ಇದರಲ್ಲಿ ತಪ್ಪೇನು ಎಂದು ಪುನರುಚ್ಚರಿಸಿದ್ದಾರೆ. ಕ್ರಮ ತೆಗೆದುಕೊಳ್ಳಬೇಕಿರುವುದು ಸರ್ಕಾರದ ಮೇಲೆ, ಶಿಕ್ಷಣ ಇಲಾಖೆಯ ಅಧಿಕಾರಗಳ ವಿರುದ್ಧವೇ ಹೊರತು ಪ್ರಾಮಾಣಿಕ ಪತ್ರಕರ್ತರ ಮೇಲಲ್ಲ ಎಂದು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...