HomeUncategorizedಶಿವಮೊಗ್ಗ: ತಲ್ವಾರು ಹಿಡಿದು ಉತ್ತರ ಕೊಡಲು ಗೊತ್ತಿದೆ; ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ

ಶಿವಮೊಗ್ಗ: ತಲ್ವಾರು ಹಿಡಿದು ಉತ್ತರ ಕೊಡಲು ಗೊತ್ತಿದೆ; ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ

- Advertisement -
- Advertisement -

ಶಿವಮೊಗ್ಗದಲ್ಲಿ ಮೀಲಾದ್ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಪ್ರಚೋದನಾಕಾರಿಯಾಗಿ ಹೇಳಿಕೆಯನ್ನು ಕೊಟ್ಟಿದ್ದು, ತಲ್ವಾರ್‌ಗೆ ವಾಪಾಸ್ಸು ತಲ್ವಾರು ಹಿಡಿದುಕೊಂಡು ಉತ್ತರ ಕೊಡಲು ಹಿಂದೂ ಸಮಾಜಕ್ಕೆ ಗೊತ್ತಿದೆ ಎಂದು ಹೇಳಿದ್ದಾರೆ.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಈಶ್ವರಪ್ಪ, ತಲ್ವಾರ್‌ಗೆ ವಾಪಾಸ್ಸು ತಲ್ವಾರು ಹಿಡಿದುಕೊಂಡು ಉತ್ತರ ಕೊಡಲು  ಹಿಂದೂ ಸಮಾಜಕ್ಕೆ ಬರುತ್ತೆ ಇದನ್ನು ನಾನು ಮುಖ್ಯಮಂತ್ರಿಗೆ, ಗೃಹ ಸಚಿವರಿಗೆ ಮುಸಲ್ಮಾನ ಗೂಂಡಾಗಳಿಗೆ ಹೇಳಕ್ಕೆ ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಮೆರವಣಿಗೆಯಲ್ಲಿ ಯಾರೂ ತಲ್ವಾರು ಹಿಡಿದಿಲ್ಲ ಎಂದು ಗೃಹ ಸಚಿವರು ಹೇಳಿದ್ದಾರೆ. ಕಾಂಗ್ರೆಸ್ ಸರಕಾರ ಮುಸ್ಲಿಮರ ಗುಲಾಮರಾಗಿದ್ದಾರೆ. ಇದು ಹಿಂದೂಗಳಿಗೆ ಭಯ ಹುಟ್ಟಿಸಲು ಮಾಡಿದ ಕಾರ್ಯಕ್ರಮ. ಹಿಂದೂ ಸಮಾಜ ಇದಕ್ಕೆ ಜಗ್ಗಲ್ಲ, ಬಗ್ಗಲ್ಲ, ಹಿಂದೂಗಳಿಗೆ ಪ್ರಚೋದನೆ ಕೊಡುವ ರೀತಿ  ಔರಂಗಜೇಬ, ಟಿಪ್ಪುಸುಲ್ತಾನ ಅವರ ಪೋಟೊ ಹಾಕಿದ್ದಾರೆ. ಯಾರು ಸ್ಪೂರ್ತಿ ಕೊಟ್ಟವರು ಇವರಿಗೆ, ಇವರೆಲ್ಲ ದೇಶದ್ರೋಹಿಗಳು ಎಂದು ಹೇಳಿಕೆ ಕೊಟ್ಟಿದ್ದಾರೆ.

ಪೊಲೀಸರು ಮೆರವಣಿಗೆಗೆ ಕೊಟ್ಟ ಸ್ಥಳವೇ ಬೇರೆ,ಸಂಜೆ 6 ಗಂಟೆಗೆ ಮೆರವಣಿಗೆ ಮುಗಿಸಲು ಹೇಳಿದರೂ 7.30ವರೆಗೂ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಪೊಲೀಸ್ ಇಲಾಖೆ ಬದುಕಿದೆಯಾ. ಸರ್ಕಾರ ಬದುಕಿದಿಯಾ. ಗೃಹಮಂತ್ರಿಗಳು ಬರಲಿ, ಆ ಏರಿಯಾದ ಮನೆಗಳಿಗೆ ಹೋಗಿ ನೋಡಲಿ. ಸಣ್ಣಪುಟ್ಟ ಗಲಾಟೆ, ತಲ್ವಾರ್ ಹಿಡಿದಿಲ್ಲ ಎನ್ನುವ ಸಚಿವ ಗೃಹಮಂತ್ರಿ ಅಗಲು ಅನ್ ಫಿಟ್, ರಾಜೀನಾಮೆ ಕೊಡಲಿ ಎಂದು ಹೇಳಿದ್ದಾರೆ.

ರಾಗಿಗುಡ್ಡಕ್ಕೆ ನಮ್ಮ ಶಾಸಕರು ಹೋಗಿ ಬಂದಿದ್ದಾರೆ. ಮನೆಗಳಿಗೆ ನುಗ್ಗಿ ಹೊಡೆದಿದ್ದಾರೆ. ಕಲ್ಲು ತೂರಾಟ ಮಾಡಿದ್ದಾರೆ. ಕರ್ತವ್ಯದಲ್ಲಿದ್ದ ಹಲವು ಪೊಲೀಸರಿಗೂ ಕಲ್ಲು ಬಿದ್ದಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಶಿವಮೊಗ್ಗ: ಮೀಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ, ನಿಷೇಧಾಜ್ಞೆ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...