Homeಮುಖಪುಟ‘ನ್ಯೂಸ್‌ಕ್ಲಿಕ್‌’ ವಿರುದ್ಧ ಯುಎಪಿಎ ಪ್ರಕರಣ: ದೆಹಲಿ ಪೊಲೀಸರಿಂದ ಪತ್ರಕರ್ತರ ಮೇಲೆ ದಿಢೀರ್‌ ದಾಳಿ

‘ನ್ಯೂಸ್‌ಕ್ಲಿಕ್‌’ ವಿರುದ್ಧ ಯುಎಪಿಎ ಪ್ರಕರಣ: ದೆಹಲಿ ಪೊಲೀಸರಿಂದ ಪತ್ರಕರ್ತರ ಮೇಲೆ ದಿಢೀರ್‌ ದಾಳಿ

- Advertisement -
- Advertisement -

ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್‌ ಸುದ್ದಿ ಪೋರ್ಟಲ್‌ಗೆ ಸೇರಿದ ಹಲವಾರು ಪತ್ರಕರ್ತರ ಮನೆಗಳಿಗೆ ದಿಲ್ಲಿ ಪೊಲೀಸರು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ.

ಚೀನಾದ ಅಜೆಂಡಾವನ್ನು ಪ್ರಚಾರ ಮಾಡುವ ನೆಟ್‌ವರ್ಕ್‌ನಿಂದ ನ್ಯೂಸ್ ಕ್ಲಿಕ್ ಪೋರ್ಟಲ್ ಹಣವನ್ನು ಪಡೆದಿದೆ ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿ ಆಧರಿಸಿ ದಿಲ್ಲಿ ಪೊಲೀಸರು ಆಗಸ್ಟ್ 17 ರಂದು ಪ್ರಕರಣ ದಾಖಲಿಸಿದ್ದರು.

ದೆಹಲಿ-ಎನ್‌ಸಿಆರ್‌ನ ಸುಮಾರು 20 ಕ್ಕೂ ಸ್ಥಳಗಳಲ್ಲಿ ದೆಹಲಿ ಪೊಲೀಸರ ವಿಶೇಷ ಸೆಲ್‌ನ ಅಧಿಕಾರಿಗಳು ಇಂದು ಶೋಧ ನಡೆಸಿದ್ದಾರೆ. ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ, ಆದರೆ ಕೆಲವು ಪತ್ರಕರ್ತರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗಳಿಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ದಾಳಿಗೊಳಗಾದವರಲ್ಲಿ ನ್ಯೂಸ್‌ಕ್ಲಿಕ್ ವೆಬ್‌ಸೈಟ್‌ನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ, ಪತ್ರಕರ್ತರಾದ ಅಭಿಸರ್ ಶರ್ಮಾ, ಔನಿಂದ್ಯೋ ಚಕ್ರವರ್ತಿ ಮತ್ತು ಭಾಷಾ ಸಿಂಗ್ ಮತ್ತು ವಿಡಂಬನಕಾರ ಸಂಜಯ್ ರಾಜೌರಾ ಸೇರಿದ್ದಾರೆ.

ಈ ಬಗ್ಗೆ ಶರ್ಮಾ ಟ್ವೀಟ್ ಮಾಡಿದ್ದು, ”ಪೊಲೀಸರು ಅವರ ಫೋನ್ ಮತ್ತು ಲ್ಯಾಪ್‌ಟಾಪ್‌ನ್ನು ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು.

ಭಾಷಾ ಸಿಂಗ್ ಫೋನ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ದೆಹಲಿಯಲ್ಲಿರುವ ನ್ಯೂಸ್‌ಕ್ಲಿಕ್‌ನ ಕಚೇರಿಯಲ್ಲೂ ಹುಡುಕಾಟ ನಡೆಯುತ್ತಿದೆ ಎಂದು ವರದಿಯಾಗಿದೆ. ANI ಪ್ರಕಾರ, ಒಟ್ಟಾರೆಯಾಗಿ, 30 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಯುತ್ತಿದೆ.

ನ್ಯೂಸ್‌ಕ್ಲಿಕ್ ಅಮೆರಿಕದ ಮಿಲಿಯನೇರ್ ನೆವಿಲ್ಲೆ ರಾಯ್ ಸಿಂಘಮ್‌ನ ಅವರ ಸುತ್ತ ಕೇಂದ್ರೀಕೃತವಾದ ನೆಟ್‌ವರ್ಕ್‌ನಿಂದ “ಚೀನೀ ಪ್ರಚಾರವನ್ನು” ಪ್ರಪಂಚದಾದ್ಯಂತ ಹರಡಲು ಹಣವನ್ನು ಪಡೆದಿದೆ ಆಗಸ್ಟ್ 5ರಂದು, ನ್ಯೂಯಾರ್ಕ್ ಟೈಮ್ಸ್ ವರದಿಯೊಂದನ್ನು ಪ್ರಕಟಿಸಿತ್ತು.

ಸಿಂಘಮ್ ಅವರು ”ಚೀನೀ ಸರ್ಕಾರಿ ಮಾಧ್ಯಮ ಸಂಸ್ಥೆ’ದೊಂದಿಗೆ ನಿಕಟವಾಗಿ ಕೆಲಸ ಮಾಡಿದರು ಮತ್ತು ವಿವಿಧ ದೇಶಗಳಲ್ಲಿ ಚೀನೀ ಪರವಾಗಿ ಪ್ರಚಾರ ಮಾಡಿದರು ಎಂದು ವರದಿ ಹೇಳಿದೆ.

ಆ ಸಮಯದಲ್ಲಿ, ನ್ಯೂಸ್‌ಕ್ಲಿಕ್ ವೆಬ್‌ಸೈಟ್‌ನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರು ಚೀನಾದ ಕಮ್ಯುನಿಸ್ಟ್ ಪಕ್ಷದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಂಘಟನೆಯ ಕುರಿತಾದ ಆರೋಪಗಳು ಸುಳ್ಳು ಎಂದು ತಿಳಿಸಿದ್ದರು.

ಇದಕ್ಕೂ ಮುನ್ನ ಜಾರಿ ನಿರ್ದೇಶನಾಲಯವು ನ್ಯೂಸ್ ಪೋರ್ಟಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅದಕ್ಕೆ ಹಣ ನೀಡಿರುವ ಬಗ್ಗೆ ತನಿಖೆ ನಡೆಸಿತ್ತು. ನ್ಯೂಸ್ ಪೋರ್ಟಲ್‌ಗೆ ಸಂಬಂಧಿಸಿದ ಕೆಲವು ಆಸ್ತಿಗಳನ್ನು ಕೇಂದ್ರ ಸಂಸ್ಥೆ ಕೂಡ ಪಟ್ಟಿ ಮಾಡಿತ್ತು.

ಚೀನಾದೊಂದಿಗೆ ಸಂಪರ್ಕ ಹೊಂದಿದ ಸಂಸ್ಥೆಗಳಿಂದ ನ್ಯೂಸ್ ಪೋರ್ಟಲ್ ಸುಮಾರು ₹ 38 ಕೋಟಿ ಮೊತ್ತವನ್ನು ಪಡೆದಿದೆ ಎಂದು ಇಡಿ ಈ ಹಿಂದೆ ಆರೋಪಿಸಿತ್ತು. ಈ ಮೊತ್ತವನ್ನು ಹೇಗೆ ಬಳಸಲಾಗಿದೆ ಎಂಬುದು ಪರಿಶೀಲನೆ ಮಾಡಲಾಗುತ್ತಿದೆ ಎಂದು ವರದಿಯಾಗಿದೆ.

NewsClick ನಿಂದ ಸಂಬಳ ಅಥವಾ ಸಂಭಾವನೆ ಪಡೆದ ಜನರು ಪರಿಶೀಲನೆ ಅಡಿಯಲ್ಲಿದ್ದಾರೆ. ಹೆಚ್ಚಿನ ತನಿಖೆಗಾಗಿ ಇಂದು ಮನೆಗಳನ್ನು ಶೋಧಿಸಿದ ಪತ್ರಕರ್ತರ ಲ್ಯಾಪ್‌ಟಾಪ್ ಮತ್ತು ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹುಡುಕಾಟದ ಕುರಿತು ಹೆಚ್ಚಿನ ಮಾಹಿತಿಯನ್ನು ನಂತರ ಹಂಚಿಕೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕೋವಿಡ್-19 ಲಸಿಕೆ: ಕ್ಯಾಟಲಿನ್ ಕಾರಿಕೊ, ಡ್ರ್ಯೂ ವೈಸ್‌ಮನ್‌​​ಗೆ ವೈದ್ಯಕೀಯ ನೊಬೆಲ್ ಪುರಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...