Homeಮುಖಪುಟಪ್ರಧಾನಿ ಮೋದಿ, 'ವಾಟ್ಸ್ ಆ್ಯಪ್ ಯುನಿವರ್ಸಿಟಿಯ ಕುಲಪತಿ': BRS ನಾಯಕ ಕೆಟಿಆರ್ ತಿರುಗೇಟು

ಪ್ರಧಾನಿ ಮೋದಿ, ‘ವಾಟ್ಸ್ ಆ್ಯಪ್ ಯುನಿವರ್ಸಿಟಿಯ ಕುಲಪತಿ’: BRS ನಾಯಕ ಕೆಟಿಆರ್ ತಿರುಗೇಟು

- Advertisement -
- Advertisement -

ಕೆಸಿಆರ್‌ ಪಕ್ಷವು ಎನ್‌ಡಿಎ ಮೈತ್ರಿಕೂಟವನ್ನು ಸೇರಲು 2020ರಲ್ಲಿ ಬಯಸಿತ್ತು, ಆ ಬೇಡಿಕೆಗೆ ತಾನು ನಿರಾಕರಿಸಿದ್ದೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ ಬೆನ್ನಲ್ಲೇ ಬಿಆರ್‌ಎಸ್‌ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಅವರು, ಪ್ರಧಾನಿ ಮೋದಿ ಅವರು ‘ವಾಟ್ಸ್ ಆ್ಯಪ್ ಯುನಿವರ್ಸಿಟಿಯ ಕುಲಪತಿ’ ಎಂದು ತಿರುಗೇಟು ನೀಡಿದ್ದಾರೆ.

”ಪಿಎಂ ಮೋದಿಯವರ ಬಿಜೆಪಿ ದೊಡ್ಡ ‘ಸುಳ್ಳುʼ ಮತ್ತು ‘ಮೋಸʼದ ಫ್ಯಾಕ್ಟರಿಯಾಗಿದ್ದು, ಅದು ಹಸಿ ಸುಳ್ಳುಗಳನ್ನು ಹೇಳುತ್ತದೆ. ಮೋದಿಯಂತಹ ಮೋಸಗಾರರ ಜೊತೆ ಎಂದಿಗೂ ಬೆರೆಯದ ಹೋರಾಟಗಾರ ಕೆಸಿಆರ್” ಎಂದು ಟ್ವೀಟ್‌ ಮಾಡಿದ್ದಾರೆ.

”ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂಪೂರ್ಣ ಸುಳ್ಳು ಹೇಳುವ ಮೂಲಕ ತಮ್ಮ ಸ್ಥಾನಮಾನದ ಬೆಲೆಯನ್ನು ಕುಗ್ಗಿಸಿಕೊಂಡಿದ್ದಾರೆ” ಎಂದು ಕೆಟಿಆರ್ ಟೀಕಿಸಿದರು.

”ಮಾನಸಿಕ ಸ್ಥಿಮಿತ ಕಳೆದುಕೊಂಡು ಎನ್‌ಡಿಎ ಸೇರಲು, ನಾವು ಹುಚ್ಚು ನಾಯಿಯಿಂದ ಕಚ್ಚಿಸಿಕೊಂಡಿಲ್ಲ. ನಮ್ಮ ಪಕ್ಷ ಮತ್ತು ಅದರ ನಾಯಕತ್ವವು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಿಮ್ಮ ಅನುಮತಿ ಏಕೆ ಬೇಕು?” ಎಂದು ಕೆಟಿಆರ್ ಪ್ರಶ್ನಿಸಿದ್ದಾರೆ.

”ಪ್ರಧಾನಿ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವಾಗ, ಬಿಸಿಸಿಐ ಕಾರ್ಯದರ್ಶಿ ಸ್ಥಾನದಲ್ಲಿ ಭಾರತೀಯ ಕ್ರಿಕೆಟ್ ಅನ್ನು ಮುನ್ನಡೆಸುತ್ತಿರುವ ಜಯ್ ಶಾ ಅವರ ನೇಮಕದ ಬಗ್ಗೆಯೂ ಕೇಳಬೇಕು. ತೆಲಂಗಾಣಕ್ಕೆ ಭೇಟಿ ನೀಡಲು ಬಿಜೆಪಿ ಪ್ರವಾಸಿಗರಿಗೆ ಸ್ವಾಗತವಿದೆ. ಹಿಂದಿನ ಚುನಾವಣೆಯಲ್ಲಿ ಬಿಜೆಪಿ 105 ಸ್ಥಾನಗಳಲ್ಲಿ ಠೇವಣಿ ಕಳೆದುಕೊಂಡಿತ್ತು ಮತ್ತು ಈ ಬಾರಿ 110 ಸ್ಥಾನಗಳಲ್ಲಿ ಠೇವಣಿ ಕಳೆದುಕೊಳ್ಳುತ್ತದೆ, ಬಿಜೆಪಿ ಇಲ್ಲಿ ಒಂದು ಸಂಸದ ಸ್ಥಾನವನ್ನು ಸಹ ಗೆಲ್ಲುವುದಿಲ್ಲ” ಎಂದು ಕೆಟಿಆರ್ ಹೇಳಿದರು.

ಮುಂಬರುವ ತೆಲಂಗಾಣದ ರಾಜ್ಯ ಚುನಾವಣೆಗಾಗಿ ಬಿಜೆಪಿ ಚುನಾವಣಾ ಪ್ರಚಾರವನ್ನು ಅಧಿಕೃತವಾಗಿ ಪ್ರಾರಂಭಿಸಿದೆ. ಕಳೆದ ಮೂರು ದಿನಗಳಲ್ಲಿ ಮೋದಿಯವರು ತಮ್ಮ ಎರಡನೇ ಸಾರ್ವಜನಿಕ ಸಭೆಯನ್ನು ನಡೆಸಿದರು. ಆಗಸ್ಟ್‌ನಲ್ಲಿ ಬಿಆರ್‌ಎಸ್ ರಾಜ್ಯದ 119 ಸ್ಥಾನಗಳ ಪೈಕಿ 115 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎರಡೂ ಪಕ್ಷಗಳ ನಡುವೆ ಪಕ್ಷಾಂತರದ ಅಲೆ ಆರಂಭವಾಗಿದೆ. ಮುಂದಿನ 10 ದಿನಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಮ್ಮ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ಇತ್ತೀಚಿನ ದಿನಗಳಲ್ಲಿ ದೇಶದ ವಿವಿಧ ಪಕ್ಷಗಳು ಎನ್‌ಡಿಎ ತೊರೆದಿವೆ ಎಂದು ಕೆಟಿಆರ್ ಮಂಗಳವಾರ ಹೇಳಿದ್ದಾರೆ. ”ಶಿವಸೇನೆ, ಟಿಡಿಪಿ (ತೆಲುಗು ದೇಶಂ ಪಕ್ಷ), ಜೆಡಿಯು (ಜನತಾ ದಳ-ಯುನೈಟೆಡ್), ಶಿರೋಮಣಿ ಅಕಾಲಿದಳದಂತಹ ಪಕ್ಷಗಳು ಈಗಾಗಲೇ ಎನ್‌ಡಿಎ ತೊರೆದಿವೆ ಮತ್ತು ಪ್ರಸ್ತುತ ಸಿಬಿಐ, ಇಡಿ ಮತ್ತು ಐಟಿ ಮಾತ್ರ ಎನ್‌ಡಿಎ ಭಾಗವಾಗಿದೆ” ಎಂದು ಅವರು ಹೇಳಿದರು.

”ತೆಲಂಗಾಣ ಜನತೆಯ ಆಶೀರ್ವಾದದೊಂದಿಗೆ ಬಿಆರ್‌ಎಸ್ ಪ್ರಜಾಸತ್ತಾತ್ಮಕವಾಗಿ ಎರಡು ಬಾರಿ ಆಯ್ಕೆಯಾಗಿ ಸರ್ಕಾರ ರಚಿಸಿದೆ. ಈ ಟ್ರೆಂಡ್ ಮುಂದುವರಿಯಲಿದ್ದು, ಕೆಸಿಆರ್ ಶೀಘ್ರದಲ್ಲೇ ಹ್ಯಾಟ್ರಿಕ್ ಸಿಎಂ ಆಗಲಿದ್ದಾರೆ. ಸಿಎಂ ಕೆಸಿಆರ್ ಒಬ್ಬ ಹೋರಾಟಗಾರ, ಅವರು ಸುಳ್ಳು ಹೇಳಲು ಹೆಸರಾದ ಮೋದಿಯಂತಹ ಮೋಸಗಾರರೊಂದಿಗೆ ಯಾವುದೇ ರೀತಿಯ ಸಹವಾಸವನ್ನು ಹೊಂದಲು ಬಯಸುವುದಿಲ್ಲ” ಎಂದು ಎಂದು ಕೆಟಿಆರ್ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದ ಪಾಲಿನ 15,000 ಕೋಟಿ ಬಿಡುಗಡೆಗೆ ದೆಹಲಿಯಲ್ಲಿ ಧರಣಿ ಕುಳಿತ ಟಿಎಂಸಿ ಸಂಸದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...