Homeಮುಖಪುಟಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಬಗ್ಗೆ ನ್ಯಾಯಾಂಗದ ಮಧ್ಯಸ್ಥಿಕೆ ಕೋರಿ 16 ಮಾದ್ಯಮ ಸಂಸ್ಥೆಗಳಿಂದ ಸಿಜೆಐಗೆ...

ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಬಗ್ಗೆ ನ್ಯಾಯಾಂಗದ ಮಧ್ಯಸ್ಥಿಕೆ ಕೋರಿ 16 ಮಾದ್ಯಮ ಸಂಸ್ಥೆಗಳಿಂದ ಸಿಜೆಐಗೆ ಪತ್ರ

- Advertisement -
- Advertisement -

ದೇಶದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿಗಳ ಬಗ್ಗೆ ನ್ಯಾಯಾಂಗದ ಗಮನವನ್ನು ಕೋರಿ ಭಾರತದ ವಿವಿಧ ಭಾಗದಲ್ಲಿನ ಪತ್ರಕರ್ತರ 16 ಸಂಘಟನೆಗಳು, ಮಾಧ್ಯಮ ಸಂಸ್ಥೆಗಳು ಒಟ್ಟಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರಿಗೆ ಪತ್ರವನ್ನು ಬರೆದಿದೆ.

ಆನ್‌ಲೈನ್ ನ್ಯೂಸ್ ಪೋರ್ಟಲ್ ನ್ಯೂಸ್‌ಕ್ಲಿಕ್‌ ಜೊತೆ ಸಂಪರ್ಕ ಹೊಂದಿರುವ 46 ಪತ್ರಕರ್ತರು, ಸಂಪಾದಕರು, ಬರಹಗಾರರ ನಿವಾಸಗಳ ಮೇಲೆ ದೆಹಲಿ ಪೊಲೀಸರ ದಾಳಿ ಬೆನ್ನಲ್ಲೇ ಈ ಪತ್ರವನ್ನು ಬರೆಯಲಾಗಿದೆ. ದೆಹಲಿ ಪೊಲೀಸರು ದಾಳಿ ನಡೆಸಿ ಪತ್ರಕರ್ತರ ಹಲವಾರು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿದ್ದಾರೆ. ನ್ಯೂಸ್‌ಕ್ಲಿಕ್‌ ಪೋರ್ಟಲ್‌ನ ನಿರ್ದೇಶಕ ಪ್ರಬೀರ್ ಪುರ್ಕಾಯಸ್ಥ ಮತ್ತು ಅಮಿತ್ ಚಕ್ರವರ್ತಿ ಅವರನ್ನು ಬಂಧಿಸಿದ್ದಾರೆ.

ವಿವಿಧ ನಗರಗಳ ಪ್ರೆಸ್ ಕ್ಲಬ್‌ಗಳು ಸೇರಿದಂತೆ ಸಂಸ್ಥೆಗಳು ಪತ್ರದಲ್ಲಿ, ಪತ್ರಕರ್ತರನ್ನು ಕಾನೂನಿನ ಪ್ರಕಾರ  ಪರಿಗಣಿಸಬೇಕು, ಮಾಧ್ಯಮಗಳ ವಿರುದ್ಧ ತನಿಖಾ ಸಂಸ್ಥೆಗಳ ದಮನಕಾರಿ ಬಳಕೆಯ ಹೆಚ್ಚಳ ಕೊನೆಗೊಳಿಸಲು ನ್ಯಾಯಾಂಗವು ಮಧ್ಯಪ್ರವೇಶಿಸಬೇಕೆಂದು ಎಂದು ಸಿಜೆಐಗೆ ಆಗ್ರಹಿಸಿದ್ದಾರೆ.

ಪತ್ರಕ್ಕೆ ಡಿಜಿಪಬ್ ನ್ಯೂಸ್ ಇಂಡಿಯಾ ಫೌಂಡೇಶನ್, ಇಂಡಿಯನ್ ವುಮೆನ್ಸ್ ಪ್ರೆಸ್ ಕಾರ್ಪ್ಸ್, ಪ್ರೆಸ್ ಕ್ಲಬ್ ಆಫ್ ಇಂಡಿಯಾ, ಫೌಂಡೇಶನ್ ಫಾರ್ ಮೀಡಿಯಾ ಪ್ರೊಫೆಷನಲ್ಸ್, ಚಂಡೀಗಢ ಪ್ರೆಸ್ ಕ್ಲಬ್, ಪತ್ರಕರ್ತರ ರಾಷ್ಟ್ರೀಯ ಒಕ್ಕೂಟ, ದೆಹಲಿ ಪತ್ರಕರ್ತರ ಒಕ್ಕೂಟ, ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟ, ಬೃಹನ್‌ಮುಂಬೈ ಯೂನಿಯನ್ ಆಫ್ ಜರ್ನಲಿಸ್ಟ್ಸ್, ಫ್ರೀ ಸ್ಪೀಚ್ ಕಲೆಕ್ಟಿವ್,  ಮುಂಬೈ ಪ್ರೆಸ್ ಕ್ಲಬ್, ಅರುಣಾಚಲ ಪ್ರದೇಶ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್, ಪ್ರೆಸ್ ಅಸೋಸಿಯೇಷನ್, ಗುವಾಹಟಿ ಪ್ರೆಸ್ ಕ್ಲಬ್, ಇಂಡಿಯನ್ ಜರ್ನಲಿಸ್ಟ್ಸ್ ಯೂನಿಯನ್, ಮತ್ತು ನೆಟ್‌ವರ್ಕ್ ಆಫ್ ವುಮೆನ್ ಇನ್ ಮೀಡಿಯಾ ಇಂಡಿಯಾ ಸಹಿ ಮಾಡಿದೆ.

ನೀವು ಹಲವಾರು ಸಂದರ್ಭಗಳಲ್ಲಿ, ದೇಶದ ತನಿಖಾ ಸಂಸ್ಥೆಗಳನ್ನು ಹೇಗೆ ದುರುಪಯೋಗಪಡಿಸಿಕೊಳ್ಳಲಾಗಿದೆ ಮತ್ತು ಪತ್ರಿಕಾ ಮಾಧ್ಯಮದ ವಿರುದ್ಧ ಬಲವನ್ನು ಹೇಗೆ ಬಳಸಲಾಗಿದೆ ಎಂಬುದನ್ನು ನೋಡಿದ್ದೀರಿ. ಸಂಪಾದಕರು ಮತ್ತು ವರದಿಗಾರರ ವಿರುದ್ಧ ದೇಶದ್ರೋಹ ಮತ್ತು ಭಯೋತ್ಪಾದನೆ ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು ಅನಾವಶ್ಯಕ ಎಫ್‌ಐಆರ್‌ಗಳನ್ನು ಹಾಕಿ ಕಿರುಕುಳದ ಸಾಧನವಾಗಿ ಬಳಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಪತ್ರವನ್ನು ನಿಮಗೆ ತಿಳಿಸುವ ಉದ್ದೇಶವು ಕಾನೂನು ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವುದಕ್ಕೆ ಅಲ್ಲ. ಆದರೆ ತನಿಖೆಯ ಹೆಸರಿನಲ್ಲಿ ಪತ್ರಕರ್ತರನ್ನು ಕರೆಸಿ ಅವರ ಸಾಧನಗಳನ್ನು ವಶಪಡಿಸಿಕೊಂಡಾಗ, ಪ್ರಕ್ರಿಯೆಯಲ್ಲಿ ಅಂತರ್ಗತ ದುರುದ್ದೇಶವಿದೆ ಎಂಬುವುದನ್ನುಗಮನಿಸಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ. ಮಾಧ್ಯಮದ ಮೇಲಿನ ಬೆದರಿಕೆಯು ಪ್ರಜಾಪ್ರಭುತ್ವದ ರಚನೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿ: ಪ್ರತಿಷ್ಟಿತ ಇಂಡೆಕ್ಸ್ ಆಫ್ ಸೆನ್ಸಾರ್ಶಿಪ್ ಪ್ರಶಸ್ತಿಗೆ ಪತ್ರಕರ್ತ ಮೊಹಮ್ಮದ್ ಝುಬೈರ್‌ ನಾಮನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...