Homeಕರ್ನಾಟಕಶಿವಮೊಗ್ಗ ಕೋಮು ಗಲಭೆಗೆ ಟ್ವಿಸ್ಟ್: ಬಜರಂಗದಳದ ರೋಹನ್ ಕಲ್ಲೆಸೆತವೇ ಸಂಘರ್ಷಕ್ಕೆ ಕಾರಣವಾಯ್ತಾ?

ಶಿವಮೊಗ್ಗ ಕೋಮು ಗಲಭೆಗೆ ಟ್ವಿಸ್ಟ್: ಬಜರಂಗದಳದ ರೋಹನ್ ಕಲ್ಲೆಸೆತವೇ ಸಂಘರ್ಷಕ್ಕೆ ಕಾರಣವಾಯ್ತಾ?

- Advertisement -
- Advertisement -

ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಶಿವಮೊಗ್ಗದ ರಾಗಿಗುಡ್ಡದಲ್ಲಿ ಉಂಟಾದ ಕೋಮು ಗಲಭೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈ ಬಗ್ಗೆ ’ಈ ದಿನ’ ನ್ಯೂಸ್ ವೆಬ್ಸೈಟ್ ವರದಿ ಬಿತ್ತರಿಸಿದ್ದು, ಶಾಂತಿನಗರದಲ್ಲಿ ಅಶಾಂತಿ ಸೃಷ್ಟಿಗೆ ಪ್ರಚೋದನೆ ನೀಡಿದ್ದು ಬಜರಂಗದಳದ ಮುಖಂಡ ‘ರೋಹನ್ ಅಲಿಯಾಸ್ ರೋಯಾ’ ಎನ್ನುವ ವ್ಯಕ್ತಿ ಎಂದು ವರದಿ ಹೇಳಿದೆ.

ಶಿವಮೊಗ್ಗ ನಗರದ ಶಾಂತಿನಗರ (ರಾಗಿಗುಡ್ಡ) ಬಡಾವಣೆಯಲ್ಲಿ ಭಾನುವಾರ ಆಯೋಜಿಸಲಾಗಿದ್ದ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ತೂರಿ ಬಂದ ಕಲ್ಲೊಂದು ಉಭಯ ಸಮುದಾಯಗಳ ನಡುವೆ ಗಲಭೆಗೆ ಕಾರಣವಾಗಿತ್ತು.

ಈ ಕಾರ್ಯಕ್ರಮದ ಮೆರವಣಿಗೆ ಮೇಲೆ ಕಲ್ಲು ಬಿದ್ದ ಬಳಿಕ ಉದ್ರಿಕ್ತರಾದ ಮುಸ್ಲಿಂ ಯುವಕರು ತಾವು ಕೂಡ ಕಲ್ಲೆಸೆದು ಪ್ರತಿಕ್ರಿಯಿಸಿದ್ದಾರೆ.

ಈದ್ ಮಿಲಾದ್ ಹಬ್ಬದ ಸಂಭ್ರಮ ಕೆಡಿಸಿ ಪ್ರಚೋದಿಸಲೆಂದು ಕಲ್ಲು ಎಸೆಯಲಾಗಿತ್ತು. ಆದರೆ ಕಲ್ಲು ಎಸೆದದ್ದು ಯಾರೆಂಬುದು ಆರಂಭದಲ್ಲಿ ಪತ್ತೆಯಾಗಿರಲಿಲ್ಲ. ಹಾಗಾಗಿ ಬಿಜೆಪಿ ನಾಯಕರು ಹಾಗೂ ಬಹುತೇಕ ಮಾಧ್ಯಮಗಳು ಇದು ಮುಸ್ಲಿಮ್ ಸಮುದಾಯದವರು ಸೃಷ್ಟಿಸಿದ ಸಂಘರ್ಷ ಎಂದು ಬಿಂಬಿಸಲಾಗಿತ್ತು.

ಈ ಬಗ್ಗೆ ‘ಈ ದಿನ.ಕಾಂ’ಗೆ ಇದೀಗ ಲಭ್ಯವಾಗಿರುವ ಬಲ್ಲಮೂಲಗಳ ಪ್ರಕಾರ ಬಜರಂಗದಳದ ಮುಖಂಡ, ಶಾಂತಿನಗರದ ನಿವಾಸಿ ’ರೋಹನ್ ಅಲಿಯಾಸ್ ರೋಯಾ’ ಎಂಬಾತನೇ ಮೊದಲು ಕಲ್ಲು ಎಸೆದಿದ್ದು ಎಂಬುದು ಖಚಿತವಾಗಿದೆ.

ಸಧ್ಯ ಶಿವಮೊಗ್ಗದಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿದ್ದು, ರಾಗಿಗುಡ್ಡ ಶಾಂತವಾಗಿದೆ. ಸೆಕ್ಷನ್ 144 ಜಾರಿಗೊಳಿಸಿ ಕಟ್ಟುನಿಟ್ಟಿನ ಕ್ರಮ ಜರುಗಿಸಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ಪೊಲೀಸರು ಈವರೆಗೆ 60 ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಬಜರಂಗದಳದವರೂ ಇದ್ದಾರೆ. ಮುಸ್ಲಿಂ ಸಂಘಟನೆಯ ಕೆಲವು ಯುವಕರು ಬಂಧಿತರಾಗಿದ್ದಾರೆ. ಈವರೆಗೆ 25 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಮೂಲಗಳ ಪ್ರಕಾರ, ಬಜರಂಗದಳದ ಮುಖಂಡ ‘ರೋಹನ್ ಅಲಿಯಾಸ್ ರೋಯಾ’ ಕಲ್ಲು ಎಸೆದ ಬಳಿಕ ಗಲಭೆ ಶುರುವಾಯಿತು. ಉದ್ರಿಕ್ತ ಯುವಕರ ಗುಂಪು ಪ್ರತಿಕ್ರಿಯಿಸಿ ಮತ್ತೊಂದು ಕೋಮಿನ ಮನೆಗಳತ್ತ ಕಲ್ಲು ಎಸೆಯಿತು. ಗಲಭೆಯಲ್ಲಿ ಮೂರೂ ಧರ್ಮಗಳವರ ಮನೆಗಳಿಗೂ ಹಾನಿಯಾಗಿದೆ ಹೇಳಲಾಗಿದೆ.

ಹಿಂದೂ ಮಹಾಗಣಪತಿ ಮೆರವಣಿಗೆಯ ವೇಳೆ ವಾರಾಣಸಿಯ ‘ವಿವಾದಿತ’ ಗ್ಯಾನವಾಪಿ ಮಸೀದಿ ಶಿವನ ಮಹಾದ್ವಾರ, ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಇಲ್ಯಾಸ್ ನಗರದತ್ತ ಶ್ರೀರಾಮನು ಬಾಣ ಬಿಡುತ್ತಿದ್ದಾನೆ ಎಂಬಂತೆ ನಿರ್ಮಿಸಲಾದ ದ್ವಾರ, ಮುಸಲ್ಮಾನರಂತೆ ಗಡ್ಡಧಾರಿ ಹಾಗೂ ಹಸಿರು ಬಣ್ಣದ ಪಂಚೆ ತೊಟ್ಟ ಹಿರಣ್ಯಕಶ್ಯಪುವಿನ ಕರುಳು ಬಗೆಯುತ್ತಿರುವಂತೆ ನಿರ್ಮಿಸಲಾದ ನರಸಿಂಹನ ಕಲಾಕೃತಿ – ಇತ್ಯಾದಿಗಳನ್ನು ಪ್ರದರ್ಶಿಸಲಾಗಿತ್ತು. ಆದರೆ ಅಲ್ಪಸಂಖ್ಯಾತರು ಶಾಂತಿ ರೀತಿಯಲ್ಲಿ ವರ್ತಿಸಿ ಗಣೇಶ ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾಗಿದ್ದರು. ತಾವು ಕೂಡ ಹಬ್ಬದಲ್ಲಿ ಭಾಗಿಯಾಗಿ ಸಂಭ್ರಮಿಸಿದ್ದರು.

ಅದೇ ರೀತಿಯಲ್ಲಿ ಭಾನುವಾರ ನಗರಾದ್ಯಂತ ಈದ್ ಹಬ್ಬವನ್ನು ನಗರದಾದ್ಯಂತ್ಯ ಆಯೋಜನೆಯಾಗಿತ್ತು. ಈ ವೇಳೆ ಹಿಂದೂಗಳೂ ಸಹಕರಿಸಿ ಸಂಭ್ರಮಿಸಿದ್ದರು. ಆದರೆ, ಶಾಂತಿನಗರದಲ್ಲಿ ಮಾತ್ರ ಕಲ್ಲು ತೂರಿ ಪ್ರಚೋದಿಸುವ ಮೂಲಕ ಅಶಾಂತಿ ಸೃಷ್ಟಿಸಲಾಯಿತು. ಮೊದಮೊದಲು ಈ ಕಲ್ಲು ತೂರಾಟದ ಹಿಂದೆ ಯಾರಿದ್ದಾರೆಂಬುದು ತಿಳಿದಿರಲಿಲ್ಲ.

ಈ ಮಧ್ಯೆ ಮೊದಲ ಕಲ್ಲು ಎಲ್ಲಿಂದ ಬಂದಿತು ಎಂಬುದಕ್ಕೆ ಈಗ ಸದ್ಯ ರೋಹನ್‌ ಕಡೆಗೆ ಬೆರಳು ಮಾಡಿ ತೋರಿಸಿದೆ. ಕಲ್ಲು ತೂರಿದ ಬಳಿಕ ಭಾನುವಾರ ಸಂಜೆ 5.45ರ ವೇಳೆಯಲ್ಲಿ ಬಜರಂಗದಳದ ಒಂದು ಗುಂಪು ಮರದ ದೊಣ್ಣೆಗಳನ್ನು ಹಿಡಿದು ಓಡಾಡುತ್ತಾ ಗಲಭೆಗೆ ಪ್ರಚೋದಿಸುತ್ತಿರುವುದು ವಿಡಿಯೋವೊಂದರಲ್ಲಿ ಸೆರೆಯಾಗಿದೆ. ಪ್ರಚೋದನೆಯ ಕೃತ್ಯವನ್ನು ತಡೆಯಲು ಪೊಲೀಸ್ ಅಧಿಕಾರಿಗಳು ನಡೆಸಿರುವ ಪ್ರಯತ್ನವನ್ನೂ ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್‌ ಆಗಿದೆ.

 

ಈ ವಿಡಿಯೋದಲ್ಲಿ ರೋಹನ್ ಜೊತೆಗೆ ಇತರರೂ ಮರದ ತಡಿಕೆಯೊಂದನ್ನು ಮುರಿದು, ಕೋಲುಗಳನ್ನು ಹಿಡಿದುಕೊಂಡು ಓಡಾಡುತ್ತಿರುವುದನ್ನು ಇಲ್ಲಿ ಕಾಣಬಹುದು. ಅದರಲ್ಲಿ ಸಿ.ಆರ್. ಎಂಬ ಅಕ್ಷರಗಳನ್ನು ಬರೆದಿರುವ ಟೀ ಶರ್ಟ್ ಧರಿಸಿರುವಾತನೇ ರೋಹನ್ ಅಲಿಯಾಸ್ ರೋಯಾ. ಈತ ಬಜರಂಗದಳದಲ್ಲಿ ಸಕ್ರಿಯನಾಗಿದ್ದಾನೆ ಎಂದು ಬಲ್ಲಮೂಲಗಳು ತಿಳಿಸಿವೆ.

ರಾಗಿಗುಡ್ಡದಲ್ಲಿ ಆಯೋಜಿಸಿದ್ದ ಈದ್ ಮಿಲಾದ್ ಮೆರವಣಿಗೆಯು ದೊಡ್ಡ ಪ್ರಮಾಣದಲ್ಲಿ ಶುರುವಾಗಿತ್ತು. ರೋಹನ್ ಮತ್ತು ಆತನ ಗುಂಪು ಮೆರವಣಿಗೆಯ ಮೇಲೆ ಕಲ್ಲು ಎಸೆಯುವ ಮೂಲಕ ಕೋಮು ವೈಮನಸ್ಯಕ್ಕೆ ಕಾರಣವಾಗಿದೆ.

”ನಗರದಲ್ಲಿ ಹಿಂದೂ ಗಣಪತಿ ಆಚರಣೆಯ ವೇಳೆ ವಿವಾದಾತ್ಮಕ ಮಹಾದ್ವಾರಗಳನ್ನು ನಗರಸಭೆ ತೆಗೆಸಬೇಕು. ಪೊಲೀಸರು ಈ ಕುರಿತು ಹೆಚ್ಚಿನ ಕ್ರಮ ಜರುಗಿಸಲು ಅಸಾಧ್ಯವಾಗಿದೆ” ಎಂದೂ ಕೆಲವು ಪೊಲೀಸರು ಅಸಹಾಯಕತೆ ತೋಡಿಕೊಂಡಿದ್ದಾರೆ ಎಂದು ಈ ದಿನ.ಕಾಂ ವರದಿ ಮಾಡಿದೆ.

ಇದನ್ನೂ ಓದಿ: ಶಿವಮೊಗ್ಗ: ತಲ್ವಾರು ಹಿಡಿದು ಉತ್ತರ ಕೊಡಲು ಗೊತ್ತಿದೆ; ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಲಾ ನಿಮಗೆ ಕೊಲ್ಲಿ ರಾಷ್ಟ್ರಗಳಿಂದ ಅಷ್ಟೋಂದು ಹಣ ಬರುತ್ತಿದೆ. ಮತ್ತೇಕೆ ಹೀಗೆ ಡಿಜಿಟಲ್ ಬಿಕ್ಷೆ ಬೇಡುವಿರಿ? ಪೊಲೀಸರಿಗೇ ಸಿಗದ ಸಾಕ್ಷಿಗಳು ನಿಮಗೆ ಹೇಗೆ ಸಿಗುತ್ತಿವೆ? ನಿಮ್ಮ ಅಂಕಣಗಳು, ಲೇಖನಗಳನ್ನು ನೋಡಿದರೇ ಆ ಗೌರಿ ಲಂಕೇಶ್ ಎಂತಹವಳು ಎಂಬ ಅರಿವಾಗುತ್ತದೆ. ನಿಮ್ಮಂತಹ ಹಿಂದೂ ವಿರೋಧಿಗಳನ್ನು ಬೆಂಬಲಿಸುವ ಸರ್ಕಾರವನ್ನು ಜನತೆ ಆರಿಸಿದ ಪರಿಣಾಮ ಕರ್ನಾಟಕದಲ್ಲಿ ಮಳೆ ಇಲ್ಲದೇ ಬರ ಬಂದಿರುವುದು. ಛೀ ಥೂ ನಿಮ್ಮಗಳ ಜನ್ಮಕ್ಕೆ.

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...