Homeಕರ್ನಾಟಕಶಿವಮೊಗ್ಗ ಕೋಮು ಗಲಭೆಗೆ ಟ್ವಿಸ್ಟ್: ಬಜರಂಗದಳದ ರೋಹನ್ ಕಲ್ಲೆಸೆತವೇ ಸಂಘರ್ಷಕ್ಕೆ ಕಾರಣವಾಯ್ತಾ?

ಶಿವಮೊಗ್ಗ ಕೋಮು ಗಲಭೆಗೆ ಟ್ವಿಸ್ಟ್: ಬಜರಂಗದಳದ ರೋಹನ್ ಕಲ್ಲೆಸೆತವೇ ಸಂಘರ್ಷಕ್ಕೆ ಕಾರಣವಾಯ್ತಾ?

- Advertisement -
- Advertisement -

ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಶಿವಮೊಗ್ಗದ ರಾಗಿಗುಡ್ಡದಲ್ಲಿ ಉಂಟಾದ ಕೋಮು ಗಲಭೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈ ಬಗ್ಗೆ ’ಈ ದಿನ’ ನ್ಯೂಸ್ ವೆಬ್ಸೈಟ್ ವರದಿ ಬಿತ್ತರಿಸಿದ್ದು, ಶಾಂತಿನಗರದಲ್ಲಿ ಅಶಾಂತಿ ಸೃಷ್ಟಿಗೆ ಪ್ರಚೋದನೆ ನೀಡಿದ್ದು ಬಜರಂಗದಳದ ಮುಖಂಡ ‘ರೋಹನ್ ಅಲಿಯಾಸ್ ರೋಯಾ’ ಎನ್ನುವ ವ್ಯಕ್ತಿ ಎಂದು ವರದಿ ಹೇಳಿದೆ.

ಶಿವಮೊಗ್ಗ ನಗರದ ಶಾಂತಿನಗರ (ರಾಗಿಗುಡ್ಡ) ಬಡಾವಣೆಯಲ್ಲಿ ಭಾನುವಾರ ಆಯೋಜಿಸಲಾಗಿದ್ದ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ತೂರಿ ಬಂದ ಕಲ್ಲೊಂದು ಉಭಯ ಸಮುದಾಯಗಳ ನಡುವೆ ಗಲಭೆಗೆ ಕಾರಣವಾಗಿತ್ತು.

ಈ ಕಾರ್ಯಕ್ರಮದ ಮೆರವಣಿಗೆ ಮೇಲೆ ಕಲ್ಲು ಬಿದ್ದ ಬಳಿಕ ಉದ್ರಿಕ್ತರಾದ ಮುಸ್ಲಿಂ ಯುವಕರು ತಾವು ಕೂಡ ಕಲ್ಲೆಸೆದು ಪ್ರತಿಕ್ರಿಯಿಸಿದ್ದಾರೆ.

ಈದ್ ಮಿಲಾದ್ ಹಬ್ಬದ ಸಂಭ್ರಮ ಕೆಡಿಸಿ ಪ್ರಚೋದಿಸಲೆಂದು ಕಲ್ಲು ಎಸೆಯಲಾಗಿತ್ತು. ಆದರೆ ಕಲ್ಲು ಎಸೆದದ್ದು ಯಾರೆಂಬುದು ಆರಂಭದಲ್ಲಿ ಪತ್ತೆಯಾಗಿರಲಿಲ್ಲ. ಹಾಗಾಗಿ ಬಿಜೆಪಿ ನಾಯಕರು ಹಾಗೂ ಬಹುತೇಕ ಮಾಧ್ಯಮಗಳು ಇದು ಮುಸ್ಲಿಮ್ ಸಮುದಾಯದವರು ಸೃಷ್ಟಿಸಿದ ಸಂಘರ್ಷ ಎಂದು ಬಿಂಬಿಸಲಾಗಿತ್ತು.

ಈ ಬಗ್ಗೆ ‘ಈ ದಿನ.ಕಾಂ’ಗೆ ಇದೀಗ ಲಭ್ಯವಾಗಿರುವ ಬಲ್ಲಮೂಲಗಳ ಪ್ರಕಾರ ಬಜರಂಗದಳದ ಮುಖಂಡ, ಶಾಂತಿನಗರದ ನಿವಾಸಿ ’ರೋಹನ್ ಅಲಿಯಾಸ್ ರೋಯಾ’ ಎಂಬಾತನೇ ಮೊದಲು ಕಲ್ಲು ಎಸೆದಿದ್ದು ಎಂಬುದು ಖಚಿತವಾಗಿದೆ.

ಸಧ್ಯ ಶಿವಮೊಗ್ಗದಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿದ್ದು, ರಾಗಿಗುಡ್ಡ ಶಾಂತವಾಗಿದೆ. ಸೆಕ್ಷನ್ 144 ಜಾರಿಗೊಳಿಸಿ ಕಟ್ಟುನಿಟ್ಟಿನ ಕ್ರಮ ಜರುಗಿಸಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ಪೊಲೀಸರು ಈವರೆಗೆ 60 ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಬಜರಂಗದಳದವರೂ ಇದ್ದಾರೆ. ಮುಸ್ಲಿಂ ಸಂಘಟನೆಯ ಕೆಲವು ಯುವಕರು ಬಂಧಿತರಾಗಿದ್ದಾರೆ. ಈವರೆಗೆ 25 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಮೂಲಗಳ ಪ್ರಕಾರ, ಬಜರಂಗದಳದ ಮುಖಂಡ ‘ರೋಹನ್ ಅಲಿಯಾಸ್ ರೋಯಾ’ ಕಲ್ಲು ಎಸೆದ ಬಳಿಕ ಗಲಭೆ ಶುರುವಾಯಿತು. ಉದ್ರಿಕ್ತ ಯುವಕರ ಗುಂಪು ಪ್ರತಿಕ್ರಿಯಿಸಿ ಮತ್ತೊಂದು ಕೋಮಿನ ಮನೆಗಳತ್ತ ಕಲ್ಲು ಎಸೆಯಿತು. ಗಲಭೆಯಲ್ಲಿ ಮೂರೂ ಧರ್ಮಗಳವರ ಮನೆಗಳಿಗೂ ಹಾನಿಯಾಗಿದೆ ಹೇಳಲಾಗಿದೆ.

ಹಿಂದೂ ಮಹಾಗಣಪತಿ ಮೆರವಣಿಗೆಯ ವೇಳೆ ವಾರಾಣಸಿಯ ‘ವಿವಾದಿತ’ ಗ್ಯಾನವಾಪಿ ಮಸೀದಿ ಶಿವನ ಮಹಾದ್ವಾರ, ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಇಲ್ಯಾಸ್ ನಗರದತ್ತ ಶ್ರೀರಾಮನು ಬಾಣ ಬಿಡುತ್ತಿದ್ದಾನೆ ಎಂಬಂತೆ ನಿರ್ಮಿಸಲಾದ ದ್ವಾರ, ಮುಸಲ್ಮಾನರಂತೆ ಗಡ್ಡಧಾರಿ ಹಾಗೂ ಹಸಿರು ಬಣ್ಣದ ಪಂಚೆ ತೊಟ್ಟ ಹಿರಣ್ಯಕಶ್ಯಪುವಿನ ಕರುಳು ಬಗೆಯುತ್ತಿರುವಂತೆ ನಿರ್ಮಿಸಲಾದ ನರಸಿಂಹನ ಕಲಾಕೃತಿ – ಇತ್ಯಾದಿಗಳನ್ನು ಪ್ರದರ್ಶಿಸಲಾಗಿತ್ತು. ಆದರೆ ಅಲ್ಪಸಂಖ್ಯಾತರು ಶಾಂತಿ ರೀತಿಯಲ್ಲಿ ವರ್ತಿಸಿ ಗಣೇಶ ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾಗಿದ್ದರು. ತಾವು ಕೂಡ ಹಬ್ಬದಲ್ಲಿ ಭಾಗಿಯಾಗಿ ಸಂಭ್ರಮಿಸಿದ್ದರು.

ಅದೇ ರೀತಿಯಲ್ಲಿ ಭಾನುವಾರ ನಗರಾದ್ಯಂತ ಈದ್ ಹಬ್ಬವನ್ನು ನಗರದಾದ್ಯಂತ್ಯ ಆಯೋಜನೆಯಾಗಿತ್ತು. ಈ ವೇಳೆ ಹಿಂದೂಗಳೂ ಸಹಕರಿಸಿ ಸಂಭ್ರಮಿಸಿದ್ದರು. ಆದರೆ, ಶಾಂತಿನಗರದಲ್ಲಿ ಮಾತ್ರ ಕಲ್ಲು ತೂರಿ ಪ್ರಚೋದಿಸುವ ಮೂಲಕ ಅಶಾಂತಿ ಸೃಷ್ಟಿಸಲಾಯಿತು. ಮೊದಮೊದಲು ಈ ಕಲ್ಲು ತೂರಾಟದ ಹಿಂದೆ ಯಾರಿದ್ದಾರೆಂಬುದು ತಿಳಿದಿರಲಿಲ್ಲ.

ಈ ಮಧ್ಯೆ ಮೊದಲ ಕಲ್ಲು ಎಲ್ಲಿಂದ ಬಂದಿತು ಎಂಬುದಕ್ಕೆ ಈಗ ಸದ್ಯ ರೋಹನ್‌ ಕಡೆಗೆ ಬೆರಳು ಮಾಡಿ ತೋರಿಸಿದೆ. ಕಲ್ಲು ತೂರಿದ ಬಳಿಕ ಭಾನುವಾರ ಸಂಜೆ 5.45ರ ವೇಳೆಯಲ್ಲಿ ಬಜರಂಗದಳದ ಒಂದು ಗುಂಪು ಮರದ ದೊಣ್ಣೆಗಳನ್ನು ಹಿಡಿದು ಓಡಾಡುತ್ತಾ ಗಲಭೆಗೆ ಪ್ರಚೋದಿಸುತ್ತಿರುವುದು ವಿಡಿಯೋವೊಂದರಲ್ಲಿ ಸೆರೆಯಾಗಿದೆ. ಪ್ರಚೋದನೆಯ ಕೃತ್ಯವನ್ನು ತಡೆಯಲು ಪೊಲೀಸ್ ಅಧಿಕಾರಿಗಳು ನಡೆಸಿರುವ ಪ್ರಯತ್ನವನ್ನೂ ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್‌ ಆಗಿದೆ.

 

ಈ ವಿಡಿಯೋದಲ್ಲಿ ರೋಹನ್ ಜೊತೆಗೆ ಇತರರೂ ಮರದ ತಡಿಕೆಯೊಂದನ್ನು ಮುರಿದು, ಕೋಲುಗಳನ್ನು ಹಿಡಿದುಕೊಂಡು ಓಡಾಡುತ್ತಿರುವುದನ್ನು ಇಲ್ಲಿ ಕಾಣಬಹುದು. ಅದರಲ್ಲಿ ಸಿ.ಆರ್. ಎಂಬ ಅಕ್ಷರಗಳನ್ನು ಬರೆದಿರುವ ಟೀ ಶರ್ಟ್ ಧರಿಸಿರುವಾತನೇ ರೋಹನ್ ಅಲಿಯಾಸ್ ರೋಯಾ. ಈತ ಬಜರಂಗದಳದಲ್ಲಿ ಸಕ್ರಿಯನಾಗಿದ್ದಾನೆ ಎಂದು ಬಲ್ಲಮೂಲಗಳು ತಿಳಿಸಿವೆ.

ರಾಗಿಗುಡ್ಡದಲ್ಲಿ ಆಯೋಜಿಸಿದ್ದ ಈದ್ ಮಿಲಾದ್ ಮೆರವಣಿಗೆಯು ದೊಡ್ಡ ಪ್ರಮಾಣದಲ್ಲಿ ಶುರುವಾಗಿತ್ತು. ರೋಹನ್ ಮತ್ತು ಆತನ ಗುಂಪು ಮೆರವಣಿಗೆಯ ಮೇಲೆ ಕಲ್ಲು ಎಸೆಯುವ ಮೂಲಕ ಕೋಮು ವೈಮನಸ್ಯಕ್ಕೆ ಕಾರಣವಾಗಿದೆ.

”ನಗರದಲ್ಲಿ ಹಿಂದೂ ಗಣಪತಿ ಆಚರಣೆಯ ವೇಳೆ ವಿವಾದಾತ್ಮಕ ಮಹಾದ್ವಾರಗಳನ್ನು ನಗರಸಭೆ ತೆಗೆಸಬೇಕು. ಪೊಲೀಸರು ಈ ಕುರಿತು ಹೆಚ್ಚಿನ ಕ್ರಮ ಜರುಗಿಸಲು ಅಸಾಧ್ಯವಾಗಿದೆ” ಎಂದೂ ಕೆಲವು ಪೊಲೀಸರು ಅಸಹಾಯಕತೆ ತೋಡಿಕೊಂಡಿದ್ದಾರೆ ಎಂದು ಈ ದಿನ.ಕಾಂ ವರದಿ ಮಾಡಿದೆ.

ಇದನ್ನೂ ಓದಿ: ಶಿವಮೊಗ್ಗ: ತಲ್ವಾರು ಹಿಡಿದು ಉತ್ತರ ಕೊಡಲು ಗೊತ್ತಿದೆ; ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಲಾ ನಿಮಗೆ ಕೊಲ್ಲಿ ರಾಷ್ಟ್ರಗಳಿಂದ ಅಷ್ಟೋಂದು ಹಣ ಬರುತ್ತಿದೆ. ಮತ್ತೇಕೆ ಹೀಗೆ ಡಿಜಿಟಲ್ ಬಿಕ್ಷೆ ಬೇಡುವಿರಿ? ಪೊಲೀಸರಿಗೇ ಸಿಗದ ಸಾಕ್ಷಿಗಳು ನಿಮಗೆ ಹೇಗೆ ಸಿಗುತ್ತಿವೆ? ನಿಮ್ಮ ಅಂಕಣಗಳು, ಲೇಖನಗಳನ್ನು ನೋಡಿದರೇ ಆ ಗೌರಿ ಲಂಕೇಶ್ ಎಂತಹವಳು ಎಂಬ ಅರಿವಾಗುತ್ತದೆ. ನಿಮ್ಮಂತಹ ಹಿಂದೂ ವಿರೋಧಿಗಳನ್ನು ಬೆಂಬಲಿಸುವ ಸರ್ಕಾರವನ್ನು ಜನತೆ ಆರಿಸಿದ ಪರಿಣಾಮ ಕರ್ನಾಟಕದಲ್ಲಿ ಮಳೆ ಇಲ್ಲದೇ ಬರ ಬಂದಿರುವುದು. ಛೀ ಥೂ ನಿಮ್ಮಗಳ ಜನ್ಮಕ್ಕೆ.

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...