Homeಕರ್ನಾಟಕಶಿವಮೊಗ್ಗ ಕೋಮು ಗಲಭೆಗೆ ಟ್ವಿಸ್ಟ್: ಬಜರಂಗದಳದ ರೋಹನ್ ಕಲ್ಲೆಸೆತವೇ ಸಂಘರ್ಷಕ್ಕೆ ಕಾರಣವಾಯ್ತಾ?

ಶಿವಮೊಗ್ಗ ಕೋಮು ಗಲಭೆಗೆ ಟ್ವಿಸ್ಟ್: ಬಜರಂಗದಳದ ರೋಹನ್ ಕಲ್ಲೆಸೆತವೇ ಸಂಘರ್ಷಕ್ಕೆ ಕಾರಣವಾಯ್ತಾ?

- Advertisement -
- Advertisement -

ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಶಿವಮೊಗ್ಗದ ರಾಗಿಗುಡ್ಡದಲ್ಲಿ ಉಂಟಾದ ಕೋಮು ಗಲಭೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈ ಬಗ್ಗೆ ’ಈ ದಿನ’ ನ್ಯೂಸ್ ವೆಬ್ಸೈಟ್ ವರದಿ ಬಿತ್ತರಿಸಿದ್ದು, ಶಾಂತಿನಗರದಲ್ಲಿ ಅಶಾಂತಿ ಸೃಷ್ಟಿಗೆ ಪ್ರಚೋದನೆ ನೀಡಿದ್ದು ಬಜರಂಗದಳದ ಮುಖಂಡ ‘ರೋಹನ್ ಅಲಿಯಾಸ್ ರೋಯಾ’ ಎನ್ನುವ ವ್ಯಕ್ತಿ ಎಂದು ವರದಿ ಹೇಳಿದೆ.

ಶಿವಮೊಗ್ಗ ನಗರದ ಶಾಂತಿನಗರ (ರಾಗಿಗುಡ್ಡ) ಬಡಾವಣೆಯಲ್ಲಿ ಭಾನುವಾರ ಆಯೋಜಿಸಲಾಗಿದ್ದ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ತೂರಿ ಬಂದ ಕಲ್ಲೊಂದು ಉಭಯ ಸಮುದಾಯಗಳ ನಡುವೆ ಗಲಭೆಗೆ ಕಾರಣವಾಗಿತ್ತು.

ಈ ಕಾರ್ಯಕ್ರಮದ ಮೆರವಣಿಗೆ ಮೇಲೆ ಕಲ್ಲು ಬಿದ್ದ ಬಳಿಕ ಉದ್ರಿಕ್ತರಾದ ಮುಸ್ಲಿಂ ಯುವಕರು ತಾವು ಕೂಡ ಕಲ್ಲೆಸೆದು ಪ್ರತಿಕ್ರಿಯಿಸಿದ್ದಾರೆ.

ಈದ್ ಮಿಲಾದ್ ಹಬ್ಬದ ಸಂಭ್ರಮ ಕೆಡಿಸಿ ಪ್ರಚೋದಿಸಲೆಂದು ಕಲ್ಲು ಎಸೆಯಲಾಗಿತ್ತು. ಆದರೆ ಕಲ್ಲು ಎಸೆದದ್ದು ಯಾರೆಂಬುದು ಆರಂಭದಲ್ಲಿ ಪತ್ತೆಯಾಗಿರಲಿಲ್ಲ. ಹಾಗಾಗಿ ಬಿಜೆಪಿ ನಾಯಕರು ಹಾಗೂ ಬಹುತೇಕ ಮಾಧ್ಯಮಗಳು ಇದು ಮುಸ್ಲಿಮ್ ಸಮುದಾಯದವರು ಸೃಷ್ಟಿಸಿದ ಸಂಘರ್ಷ ಎಂದು ಬಿಂಬಿಸಲಾಗಿತ್ತು.

ಈ ಬಗ್ಗೆ ‘ಈ ದಿನ.ಕಾಂ’ಗೆ ಇದೀಗ ಲಭ್ಯವಾಗಿರುವ ಬಲ್ಲಮೂಲಗಳ ಪ್ರಕಾರ ಬಜರಂಗದಳದ ಮುಖಂಡ, ಶಾಂತಿನಗರದ ನಿವಾಸಿ ’ರೋಹನ್ ಅಲಿಯಾಸ್ ರೋಯಾ’ ಎಂಬಾತನೇ ಮೊದಲು ಕಲ್ಲು ಎಸೆದಿದ್ದು ಎಂಬುದು ಖಚಿತವಾಗಿದೆ.

ಸಧ್ಯ ಶಿವಮೊಗ್ಗದಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿದ್ದು, ರಾಗಿಗುಡ್ಡ ಶಾಂತವಾಗಿದೆ. ಸೆಕ್ಷನ್ 144 ಜಾರಿಗೊಳಿಸಿ ಕಟ್ಟುನಿಟ್ಟಿನ ಕ್ರಮ ಜರುಗಿಸಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ಪೊಲೀಸರು ಈವರೆಗೆ 60 ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಬಜರಂಗದಳದವರೂ ಇದ್ದಾರೆ. ಮುಸ್ಲಿಂ ಸಂಘಟನೆಯ ಕೆಲವು ಯುವಕರು ಬಂಧಿತರಾಗಿದ್ದಾರೆ. ಈವರೆಗೆ 25 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಮೂಲಗಳ ಪ್ರಕಾರ, ಬಜರಂಗದಳದ ಮುಖಂಡ ‘ರೋಹನ್ ಅಲಿಯಾಸ್ ರೋಯಾ’ ಕಲ್ಲು ಎಸೆದ ಬಳಿಕ ಗಲಭೆ ಶುರುವಾಯಿತು. ಉದ್ರಿಕ್ತ ಯುವಕರ ಗುಂಪು ಪ್ರತಿಕ್ರಿಯಿಸಿ ಮತ್ತೊಂದು ಕೋಮಿನ ಮನೆಗಳತ್ತ ಕಲ್ಲು ಎಸೆಯಿತು. ಗಲಭೆಯಲ್ಲಿ ಮೂರೂ ಧರ್ಮಗಳವರ ಮನೆಗಳಿಗೂ ಹಾನಿಯಾಗಿದೆ ಹೇಳಲಾಗಿದೆ.

ಹಿಂದೂ ಮಹಾಗಣಪತಿ ಮೆರವಣಿಗೆಯ ವೇಳೆ ವಾರಾಣಸಿಯ ‘ವಿವಾದಿತ’ ಗ್ಯಾನವಾಪಿ ಮಸೀದಿ ಶಿವನ ಮಹಾದ್ವಾರ, ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಇಲ್ಯಾಸ್ ನಗರದತ್ತ ಶ್ರೀರಾಮನು ಬಾಣ ಬಿಡುತ್ತಿದ್ದಾನೆ ಎಂಬಂತೆ ನಿರ್ಮಿಸಲಾದ ದ್ವಾರ, ಮುಸಲ್ಮಾನರಂತೆ ಗಡ್ಡಧಾರಿ ಹಾಗೂ ಹಸಿರು ಬಣ್ಣದ ಪಂಚೆ ತೊಟ್ಟ ಹಿರಣ್ಯಕಶ್ಯಪುವಿನ ಕರುಳು ಬಗೆಯುತ್ತಿರುವಂತೆ ನಿರ್ಮಿಸಲಾದ ನರಸಿಂಹನ ಕಲಾಕೃತಿ – ಇತ್ಯಾದಿಗಳನ್ನು ಪ್ರದರ್ಶಿಸಲಾಗಿತ್ತು. ಆದರೆ ಅಲ್ಪಸಂಖ್ಯಾತರು ಶಾಂತಿ ರೀತಿಯಲ್ಲಿ ವರ್ತಿಸಿ ಗಣೇಶ ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾಗಿದ್ದರು. ತಾವು ಕೂಡ ಹಬ್ಬದಲ್ಲಿ ಭಾಗಿಯಾಗಿ ಸಂಭ್ರಮಿಸಿದ್ದರು.

ಅದೇ ರೀತಿಯಲ್ಲಿ ಭಾನುವಾರ ನಗರಾದ್ಯಂತ ಈದ್ ಹಬ್ಬವನ್ನು ನಗರದಾದ್ಯಂತ್ಯ ಆಯೋಜನೆಯಾಗಿತ್ತು. ಈ ವೇಳೆ ಹಿಂದೂಗಳೂ ಸಹಕರಿಸಿ ಸಂಭ್ರಮಿಸಿದ್ದರು. ಆದರೆ, ಶಾಂತಿನಗರದಲ್ಲಿ ಮಾತ್ರ ಕಲ್ಲು ತೂರಿ ಪ್ರಚೋದಿಸುವ ಮೂಲಕ ಅಶಾಂತಿ ಸೃಷ್ಟಿಸಲಾಯಿತು. ಮೊದಮೊದಲು ಈ ಕಲ್ಲು ತೂರಾಟದ ಹಿಂದೆ ಯಾರಿದ್ದಾರೆಂಬುದು ತಿಳಿದಿರಲಿಲ್ಲ.

ಈ ಮಧ್ಯೆ ಮೊದಲ ಕಲ್ಲು ಎಲ್ಲಿಂದ ಬಂದಿತು ಎಂಬುದಕ್ಕೆ ಈಗ ಸದ್ಯ ರೋಹನ್‌ ಕಡೆಗೆ ಬೆರಳು ಮಾಡಿ ತೋರಿಸಿದೆ. ಕಲ್ಲು ತೂರಿದ ಬಳಿಕ ಭಾನುವಾರ ಸಂಜೆ 5.45ರ ವೇಳೆಯಲ್ಲಿ ಬಜರಂಗದಳದ ಒಂದು ಗುಂಪು ಮರದ ದೊಣ್ಣೆಗಳನ್ನು ಹಿಡಿದು ಓಡಾಡುತ್ತಾ ಗಲಭೆಗೆ ಪ್ರಚೋದಿಸುತ್ತಿರುವುದು ವಿಡಿಯೋವೊಂದರಲ್ಲಿ ಸೆರೆಯಾಗಿದೆ. ಪ್ರಚೋದನೆಯ ಕೃತ್ಯವನ್ನು ತಡೆಯಲು ಪೊಲೀಸ್ ಅಧಿಕಾರಿಗಳು ನಡೆಸಿರುವ ಪ್ರಯತ್ನವನ್ನೂ ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್‌ ಆಗಿದೆ.

 

ಈ ವಿಡಿಯೋದಲ್ಲಿ ರೋಹನ್ ಜೊತೆಗೆ ಇತರರೂ ಮರದ ತಡಿಕೆಯೊಂದನ್ನು ಮುರಿದು, ಕೋಲುಗಳನ್ನು ಹಿಡಿದುಕೊಂಡು ಓಡಾಡುತ್ತಿರುವುದನ್ನು ಇಲ್ಲಿ ಕಾಣಬಹುದು. ಅದರಲ್ಲಿ ಸಿ.ಆರ್. ಎಂಬ ಅಕ್ಷರಗಳನ್ನು ಬರೆದಿರುವ ಟೀ ಶರ್ಟ್ ಧರಿಸಿರುವಾತನೇ ರೋಹನ್ ಅಲಿಯಾಸ್ ರೋಯಾ. ಈತ ಬಜರಂಗದಳದಲ್ಲಿ ಸಕ್ರಿಯನಾಗಿದ್ದಾನೆ ಎಂದು ಬಲ್ಲಮೂಲಗಳು ತಿಳಿಸಿವೆ.

ರಾಗಿಗುಡ್ಡದಲ್ಲಿ ಆಯೋಜಿಸಿದ್ದ ಈದ್ ಮಿಲಾದ್ ಮೆರವಣಿಗೆಯು ದೊಡ್ಡ ಪ್ರಮಾಣದಲ್ಲಿ ಶುರುವಾಗಿತ್ತು. ರೋಹನ್ ಮತ್ತು ಆತನ ಗುಂಪು ಮೆರವಣಿಗೆಯ ಮೇಲೆ ಕಲ್ಲು ಎಸೆಯುವ ಮೂಲಕ ಕೋಮು ವೈಮನಸ್ಯಕ್ಕೆ ಕಾರಣವಾಗಿದೆ.

”ನಗರದಲ್ಲಿ ಹಿಂದೂ ಗಣಪತಿ ಆಚರಣೆಯ ವೇಳೆ ವಿವಾದಾತ್ಮಕ ಮಹಾದ್ವಾರಗಳನ್ನು ನಗರಸಭೆ ತೆಗೆಸಬೇಕು. ಪೊಲೀಸರು ಈ ಕುರಿತು ಹೆಚ್ಚಿನ ಕ್ರಮ ಜರುಗಿಸಲು ಅಸಾಧ್ಯವಾಗಿದೆ” ಎಂದೂ ಕೆಲವು ಪೊಲೀಸರು ಅಸಹಾಯಕತೆ ತೋಡಿಕೊಂಡಿದ್ದಾರೆ ಎಂದು ಈ ದಿನ.ಕಾಂ ವರದಿ ಮಾಡಿದೆ.

ಇದನ್ನೂ ಓದಿ: ಶಿವಮೊಗ್ಗ: ತಲ್ವಾರು ಹಿಡಿದು ಉತ್ತರ ಕೊಡಲು ಗೊತ್ತಿದೆ; ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಲಾ ನಿಮಗೆ ಕೊಲ್ಲಿ ರಾಷ್ಟ್ರಗಳಿಂದ ಅಷ್ಟೋಂದು ಹಣ ಬರುತ್ತಿದೆ. ಮತ್ತೇಕೆ ಹೀಗೆ ಡಿಜಿಟಲ್ ಬಿಕ್ಷೆ ಬೇಡುವಿರಿ? ಪೊಲೀಸರಿಗೇ ಸಿಗದ ಸಾಕ್ಷಿಗಳು ನಿಮಗೆ ಹೇಗೆ ಸಿಗುತ್ತಿವೆ? ನಿಮ್ಮ ಅಂಕಣಗಳು, ಲೇಖನಗಳನ್ನು ನೋಡಿದರೇ ಆ ಗೌರಿ ಲಂಕೇಶ್ ಎಂತಹವಳು ಎಂಬ ಅರಿವಾಗುತ್ತದೆ. ನಿಮ್ಮಂತಹ ಹಿಂದೂ ವಿರೋಧಿಗಳನ್ನು ಬೆಂಬಲಿಸುವ ಸರ್ಕಾರವನ್ನು ಜನತೆ ಆರಿಸಿದ ಪರಿಣಾಮ ಕರ್ನಾಟಕದಲ್ಲಿ ಮಳೆ ಇಲ್ಲದೇ ಬರ ಬಂದಿರುವುದು. ಛೀ ಥೂ ನಿಮ್ಮಗಳ ಜನ್ಮಕ್ಕೆ.

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...