Homeಮುಖಪುಟಗುಜರಾತ್‌: ಮುಸ್ಲಿಂ ಯುವಕರಿಗೆ ಛಡಿಯೇಟು ಪ್ರಕರಣ; ಪೊಲೀಸರ ವಿರುದ್ಧ ದೋಷಾರೋಪ

ಗುಜರಾತ್‌: ಮುಸ್ಲಿಂ ಯುವಕರಿಗೆ ಛಡಿಯೇಟು ಪ್ರಕರಣ; ಪೊಲೀಸರ ವಿರುದ್ಧ ದೋಷಾರೋಪ

- Advertisement -
- Advertisement -

ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದ ನಾಲ್ವರು ಯುವಕರಿಗೆ ಸಾರ್ವಜನಿಕವಾಗಿ ಛಡಿಯೇಟು ನೀಡಿದ ಪ್ರಕರಣದಲ್ಲಿ ನ್ಯಾಯಾಲಯ ನಿಂದನೆಯ ಆರೋಪ ಎದುರಿಸುತ್ತಿರುವ ನಾಲ್ವರು ಪೊಲೀಸರ ವಿರುದ್ಧ ಗುಜರಾತ್ ಹೈಕೋರ್ಟ್ ಬುಧವಾರ ದೋಷಾರೋಪ ದಾಖಲಿಸಿದೆ.

ನ್ಯಾಯಮೂರ್ತಿಗಳಾದ ಎ ಎಸ್ ಸುಪೇಹಿಯಾ ಮತ್ತು ಎಂ ಆರ್ ಮೆಂಗ್ಡೆ ಅವರ ವಿಭಾಗೀಯ ಪೀಠವು, ನಾಡಿಯಾಡ್ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರ ತನಿಖಾ ವರದಿಯನ್ನು ಆಧರಿಸಿ ನ್ಯಾಯಾಂಗ ಉಲ್ಲಂಘನೆ ಗಮನಿಸಿದ್ದಾರೆ. ಡಿ ಕೆ ಬಸು  ಮತ್ತು ಪಶ್ಚಿಮ ಬಂಗಾಳ ರಾಜ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ  ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ನಾಲ್ವರು ಆರೋಪಿಗಳು ಉಲ್ಲಂಘಿಸಿದ್ದಾರೆ ಎಂದು ಕೋರ್ಟ್‌ ಗಮನಿಸಿದೆ.

2022ರ ಆಕ್ಟೋಬರ್‌ನಲ್ಲಿ ಕಲ್ಲೆಸೆತಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳಿಗೆ ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ, ಸಾರ್ವಜನಿಕವಾಗಿ ಥಳಿಸುವ ಕೃತ್ಯದಲ್ಲಿ ಪೊಲೀಸ್‌ ಅಧಿಕಾರಿಗಳು ಪಾಲ್ಗೊಂಡಿದ್ದರು ಎಂಬುವುದನ್ನು ನ್ಯಾಯಾಲಯವು ಕಂಡುಕೊಂಡಿದೆ.

ಆರೋಪಿ ಪೊಲೀಸರಲ್ಲಿ ಒಬ್ಬಾತ ಈ ಕಾನೂನು ಬಾಹಿರ ಹಾಗೂ ಅಪಮಾನಕಾರಿ ಕೃತ್ಯವನ್ನು ನಡಸುವುದಕ್ಕೆ ವೌನಸಮ್ಮತಿಯನ್ನು ನೀಡಿದ್ದಾನೆ. ಹಾಗಾಗಿ ಆತನ ವಿರುದ್ಧ ದೋಷಾರೋಪ ದಾಖಲಿಸುವಲ್ಲಿ ಯಾವುದೇ ರಿಯಾಯಿತಿ ನೀಡಬಾರದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಬಂಧಿತರಿಗೆ ಸಾರ್ವಜನಿಕವಾಗಿ ಛಡಿಯೇಟು ನೀಡುವ ಮೂಲಕ ಆರೋಪಿ ಪೊಲೀಸರು ಸುಪ್ರೀಂಕೋರ್ಟ್ ಮಾರ್ಗದರ್ಶಿಸೂತ್ರಗಳನ್ನು ಉಲ್ಲಂಘಿಸಿದ್ದಾರೆಂದು ನ್ಯಾಯಾಲಯ ಹೇಳಿದೆ.

2022ರ ಆಕ್ಟೋಬರ್ 4ರಂದು ಉಂಧೆಲಾ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಓರ್ವ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಹಾಗೂ ಇಬ್ಬರು ಕಾನ್ಸ್ಟೇಬಲ್ ಗಳನ್ನು ನ್ಯಾಯಾಲಯ ಆರೋಪಿಗಳು ಎಂದು ಗಮನಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಪೀಠವು ಅಕ್ಟೋಬರ್ 11ಕ್ಕೆ ನಿಗದಿಪಡಿಸಿದೆ.

ಕಳೆದ ವರ್ಷ ನವರಾತ್ರಿ ಆಚರಣೆಯ ಸಂದರ್ಭದಲ್ಲಿ, ಕನಿಷ್ಠ ನಾಲ್ವರು ಮುಸ್ಲಿಂ ಯುವಕರನ್ನು ಕಾನೂನುಬಾಹಿರವಾಗಿ ಬಂಧಿಸಲಾಯಿತು ಮತ್ತು ಬಂಧಿತ ಯುವಕರಿಗೆ ಪೊಲೀಸರು ಖೇಡಾದಲ್ಲಿ ಸಾರ್ವಜನಿಕವಾಗಿ ಥಳಿಸಿದ್ದರು.

ಸಂತ್ರಸ್ತರಾದ ಜಹಿರ್ಮಿಯಾ ಮಾಲೆಕ್ (62), ಮಕ್ಸುದಾಬಾನು ಮಾಲೆಕ್ (45), ಸಹದ್ಮಿಯಾ ಮಾಲೆಕ್ (23), ಸಕಿಲ್ಮಿಯಾ ಮಾಲೆಕ್ (24) ಮತ್ತು ಶಾಹಿದ್ರಾಜ ಮಾಲೆಕ್ (25) ಅವರು 13 ಖೇಡಾ ಪೊಲೀಸ್ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಇದಲ್ಲದೆ ಸಂತ್ರಸ್ತರು ಪರಿಹಾರ ಕೋರಿದ್ದರು, ಅರ್ಜಿದಾರರು ಅಹಮದಾಬಾದ್ ರೇಂಜ್ ಐಜಿ ಮತ್ತು ಖೇಡಾ ಎಸ್ಪಿ ಸೇರಿದಂತೆ 15 ಅಧಿಕಾರಿಗಳು ಪಶ್ಚಿಮ ಬಂಗಾಳ ಮತ್ತು ಡಿ ಕೆ ಬಸು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳ  ಉಲ್ಲಂಘನೆ ಮಾಡಿದ್ದಾರೆ ಎಂದು ಹೇಳಿದ್ದರು.

ಇನ್‌ಸ್ಪೆಕ್ಟರ್ ಎ ವಿ ಪರ್ಮಾರ್, ಸಬ್ ಇನ್ಸ್‌ಪೆಕ್ಟರ್ ಡಿ ಬಿ ಕುಮಾವತ್, ಕಾನ್‌ಸ್ಟೆಬಲ್ ರಾಜುಭಾಯ್ ರಮೇಶಭಾಯಿ ದಾಭಿ ಮತ್ತು ಹೆಡ್ ಕಾನ್‌ಸ್ಟೆಬಲ್ ಕನಕ್‌ಸಿನ್ಹ್ ಲಕ್ಷ್ಮಣಸಿನ್ಹ್ ಎಂಬ ನಾಲ್ವರು ಪೊಲೀಸ್ ಅಧಿಕಾರಿಗಳು ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

ಇನ್‌ಸ್ಪೆಕ್ಟರ್ ಪರ್ಮಾರ್, ಸಂತ್ರಸ್ತರಾದ ಸಹದ್ಮಿಯಾ, ಸಕಿಲ್ಮಿಯಾ ಮತ್ತು ಶಾಹಿದ್ರಾಜಾ ಅವರ ಮೇಲೆ ಕೋಲಿನಿಂದ ಹಲ್ಲೆ ನಡೆಸುವುದು, ಸಬ್ ಇನ್ಸ್‌ಪೆಕ್ಟರ್ ಡಿ ಬಿ ಕುಮಾವತ್ ಅಲ್ಲಿ ನಿಂತಿರುವುದು, ಕನಕಸಿಂಹ ಅವರು ಬಿಳಿ ಪೈಪ್ ಹಿಡಿದು ಅರ್ಜಿದಾರರನ್ನು ವ್ಯಾನ್‌ನ ಕಡೆಗೆ ತಳ್ಳುತ್ತಿರುವುದು ಮತ್ತು  ಇನ್ಸ್‌ಪೆಕ್ಟರ್ ಪರ್ಮಾರ್  ಯುವಕರಿಗೆ ಹೊಡೆಯುವಾಗ ಪೇದೆ ರಾಜುಭಾಯ್ ಮೂವರು ಯುವಕರ ಕೈಗಳನ್ನು ಕಂಬಕ್ಕೆ ಗಟ್ಟಿಯಾಗಿ ಹಿಡಿದಿರುವುದು ವೈರಲ್ ವಿಡಿಯೋದಲ್ಲಿ ಕಂಡು ಬಂದಿತ್ತು.

ಇದನ್ನು ಓದಿ: ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಬಗ್ಗೆ ನ್ಯಾಯಾಂಗದ ಮಧ್ಯಸ್ಥಿಕೆ ಕೋರಿ 16 ಮಾದ್ಯಮ ಸಂಸ್ಥೆಗಳಿಂದ ಸಿಜೆಐಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ...

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...