Homeಮುಖಪುಟಗುಜರಾತ್‌: ಮುಸ್ಲಿಂ ಯುವಕರಿಗೆ ಛಡಿಯೇಟು ಪ್ರಕರಣ; ಪೊಲೀಸರ ವಿರುದ್ಧ ದೋಷಾರೋಪ

ಗುಜರಾತ್‌: ಮುಸ್ಲಿಂ ಯುವಕರಿಗೆ ಛಡಿಯೇಟು ಪ್ರಕರಣ; ಪೊಲೀಸರ ವಿರುದ್ಧ ದೋಷಾರೋಪ

- Advertisement -
- Advertisement -

ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದ ನಾಲ್ವರು ಯುವಕರಿಗೆ ಸಾರ್ವಜನಿಕವಾಗಿ ಛಡಿಯೇಟು ನೀಡಿದ ಪ್ರಕರಣದಲ್ಲಿ ನ್ಯಾಯಾಲಯ ನಿಂದನೆಯ ಆರೋಪ ಎದುರಿಸುತ್ತಿರುವ ನಾಲ್ವರು ಪೊಲೀಸರ ವಿರುದ್ಧ ಗುಜರಾತ್ ಹೈಕೋರ್ಟ್ ಬುಧವಾರ ದೋಷಾರೋಪ ದಾಖಲಿಸಿದೆ.

ನ್ಯಾಯಮೂರ್ತಿಗಳಾದ ಎ ಎಸ್ ಸುಪೇಹಿಯಾ ಮತ್ತು ಎಂ ಆರ್ ಮೆಂಗ್ಡೆ ಅವರ ವಿಭಾಗೀಯ ಪೀಠವು, ನಾಡಿಯಾಡ್ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರ ತನಿಖಾ ವರದಿಯನ್ನು ಆಧರಿಸಿ ನ್ಯಾಯಾಂಗ ಉಲ್ಲಂಘನೆ ಗಮನಿಸಿದ್ದಾರೆ. ಡಿ ಕೆ ಬಸು  ಮತ್ತು ಪಶ್ಚಿಮ ಬಂಗಾಳ ರಾಜ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ  ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ನಾಲ್ವರು ಆರೋಪಿಗಳು ಉಲ್ಲಂಘಿಸಿದ್ದಾರೆ ಎಂದು ಕೋರ್ಟ್‌ ಗಮನಿಸಿದೆ.

2022ರ ಆಕ್ಟೋಬರ್‌ನಲ್ಲಿ ಕಲ್ಲೆಸೆತಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳಿಗೆ ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ, ಸಾರ್ವಜನಿಕವಾಗಿ ಥಳಿಸುವ ಕೃತ್ಯದಲ್ಲಿ ಪೊಲೀಸ್‌ ಅಧಿಕಾರಿಗಳು ಪಾಲ್ಗೊಂಡಿದ್ದರು ಎಂಬುವುದನ್ನು ನ್ಯಾಯಾಲಯವು ಕಂಡುಕೊಂಡಿದೆ.

ಆರೋಪಿ ಪೊಲೀಸರಲ್ಲಿ ಒಬ್ಬಾತ ಈ ಕಾನೂನು ಬಾಹಿರ ಹಾಗೂ ಅಪಮಾನಕಾರಿ ಕೃತ್ಯವನ್ನು ನಡಸುವುದಕ್ಕೆ ವೌನಸಮ್ಮತಿಯನ್ನು ನೀಡಿದ್ದಾನೆ. ಹಾಗಾಗಿ ಆತನ ವಿರುದ್ಧ ದೋಷಾರೋಪ ದಾಖಲಿಸುವಲ್ಲಿ ಯಾವುದೇ ರಿಯಾಯಿತಿ ನೀಡಬಾರದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಬಂಧಿತರಿಗೆ ಸಾರ್ವಜನಿಕವಾಗಿ ಛಡಿಯೇಟು ನೀಡುವ ಮೂಲಕ ಆರೋಪಿ ಪೊಲೀಸರು ಸುಪ್ರೀಂಕೋರ್ಟ್ ಮಾರ್ಗದರ್ಶಿಸೂತ್ರಗಳನ್ನು ಉಲ್ಲಂಘಿಸಿದ್ದಾರೆಂದು ನ್ಯಾಯಾಲಯ ಹೇಳಿದೆ.

2022ರ ಆಕ್ಟೋಬರ್ 4ರಂದು ಉಂಧೆಲಾ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಓರ್ವ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಹಾಗೂ ಇಬ್ಬರು ಕಾನ್ಸ್ಟೇಬಲ್ ಗಳನ್ನು ನ್ಯಾಯಾಲಯ ಆರೋಪಿಗಳು ಎಂದು ಗಮನಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಪೀಠವು ಅಕ್ಟೋಬರ್ 11ಕ್ಕೆ ನಿಗದಿಪಡಿಸಿದೆ.

ಕಳೆದ ವರ್ಷ ನವರಾತ್ರಿ ಆಚರಣೆಯ ಸಂದರ್ಭದಲ್ಲಿ, ಕನಿಷ್ಠ ನಾಲ್ವರು ಮುಸ್ಲಿಂ ಯುವಕರನ್ನು ಕಾನೂನುಬಾಹಿರವಾಗಿ ಬಂಧಿಸಲಾಯಿತು ಮತ್ತು ಬಂಧಿತ ಯುವಕರಿಗೆ ಪೊಲೀಸರು ಖೇಡಾದಲ್ಲಿ ಸಾರ್ವಜನಿಕವಾಗಿ ಥಳಿಸಿದ್ದರು.

ಸಂತ್ರಸ್ತರಾದ ಜಹಿರ್ಮಿಯಾ ಮಾಲೆಕ್ (62), ಮಕ್ಸುದಾಬಾನು ಮಾಲೆಕ್ (45), ಸಹದ್ಮಿಯಾ ಮಾಲೆಕ್ (23), ಸಕಿಲ್ಮಿಯಾ ಮಾಲೆಕ್ (24) ಮತ್ತು ಶಾಹಿದ್ರಾಜ ಮಾಲೆಕ್ (25) ಅವರು 13 ಖೇಡಾ ಪೊಲೀಸ್ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಇದಲ್ಲದೆ ಸಂತ್ರಸ್ತರು ಪರಿಹಾರ ಕೋರಿದ್ದರು, ಅರ್ಜಿದಾರರು ಅಹಮದಾಬಾದ್ ರೇಂಜ್ ಐಜಿ ಮತ್ತು ಖೇಡಾ ಎಸ್ಪಿ ಸೇರಿದಂತೆ 15 ಅಧಿಕಾರಿಗಳು ಪಶ್ಚಿಮ ಬಂಗಾಳ ಮತ್ತು ಡಿ ಕೆ ಬಸು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳ  ಉಲ್ಲಂಘನೆ ಮಾಡಿದ್ದಾರೆ ಎಂದು ಹೇಳಿದ್ದರು.

ಇನ್‌ಸ್ಪೆಕ್ಟರ್ ಎ ವಿ ಪರ್ಮಾರ್, ಸಬ್ ಇನ್ಸ್‌ಪೆಕ್ಟರ್ ಡಿ ಬಿ ಕುಮಾವತ್, ಕಾನ್‌ಸ್ಟೆಬಲ್ ರಾಜುಭಾಯ್ ರಮೇಶಭಾಯಿ ದಾಭಿ ಮತ್ತು ಹೆಡ್ ಕಾನ್‌ಸ್ಟೆಬಲ್ ಕನಕ್‌ಸಿನ್ಹ್ ಲಕ್ಷ್ಮಣಸಿನ್ಹ್ ಎಂಬ ನಾಲ್ವರು ಪೊಲೀಸ್ ಅಧಿಕಾರಿಗಳು ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

ಇನ್‌ಸ್ಪೆಕ್ಟರ್ ಪರ್ಮಾರ್, ಸಂತ್ರಸ್ತರಾದ ಸಹದ್ಮಿಯಾ, ಸಕಿಲ್ಮಿಯಾ ಮತ್ತು ಶಾಹಿದ್ರಾಜಾ ಅವರ ಮೇಲೆ ಕೋಲಿನಿಂದ ಹಲ್ಲೆ ನಡೆಸುವುದು, ಸಬ್ ಇನ್ಸ್‌ಪೆಕ್ಟರ್ ಡಿ ಬಿ ಕುಮಾವತ್ ಅಲ್ಲಿ ನಿಂತಿರುವುದು, ಕನಕಸಿಂಹ ಅವರು ಬಿಳಿ ಪೈಪ್ ಹಿಡಿದು ಅರ್ಜಿದಾರರನ್ನು ವ್ಯಾನ್‌ನ ಕಡೆಗೆ ತಳ್ಳುತ್ತಿರುವುದು ಮತ್ತು  ಇನ್ಸ್‌ಪೆಕ್ಟರ್ ಪರ್ಮಾರ್  ಯುವಕರಿಗೆ ಹೊಡೆಯುವಾಗ ಪೇದೆ ರಾಜುಭಾಯ್ ಮೂವರು ಯುವಕರ ಕೈಗಳನ್ನು ಕಂಬಕ್ಕೆ ಗಟ್ಟಿಯಾಗಿ ಹಿಡಿದಿರುವುದು ವೈರಲ್ ವಿಡಿಯೋದಲ್ಲಿ ಕಂಡು ಬಂದಿತ್ತು.

ಇದನ್ನು ಓದಿ: ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಬಗ್ಗೆ ನ್ಯಾಯಾಂಗದ ಮಧ್ಯಸ್ಥಿಕೆ ಕೋರಿ 16 ಮಾದ್ಯಮ ಸಂಸ್ಥೆಗಳಿಂದ ಸಿಜೆಐಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...