Homeಮುಖಪುಟನಾಂದೇಡ್‌: ಸರಣಿ ಸಾವು ಸಂಭವಿಸಿದ ಸರ್ಕಾರಿ ಆಸ್ಪತ್ರೆಯ ಡೀನ್‌ ವಿರುದ್ಧ ಎಫ್ಐಆರ್‌ ದಾಖಲು

ನಾಂದೇಡ್‌: ಸರಣಿ ಸಾವು ಸಂಭವಿಸಿದ ಸರ್ಕಾರಿ ಆಸ್ಪತ್ರೆಯ ಡೀನ್‌ ವಿರುದ್ಧ ಎಫ್ಐಆರ್‌ ದಾಖಲು

- Advertisement -
- Advertisement -

ಮಹಾರಾಷ್ಟ್ರದ ನಾಂದೇಡ್‌ನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 72 ಗಂಟೆಗಳಲ್ಲಿ 31 ರೋಗಿಗಳ ಸರಣಿ ಸಾವುಗಳು ಸಂಭವಿಸಿದ ಹಿನ್ನೆಲೆ ಡೀನ್ ವಿರುದ್ಧ ನರಹತ್ಯೆಯ ಪ್ರಕರಣವನ್ನು ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ ಡೀನ್ ಅಲ್ಲದೆ ಮತ್ತೋರ್ವ ವೈದ್ಯನನ್ನು ಕೂಡ ಆರೋಪಿ ಎಂದು ಹೆಸರಿಸಲಾಗಿದೆ.
ಆಸ್ಪತ್ರೆಯಲ್ಲಿ ಮೃತಪಟ್ಟ ನವಜಾತ ಶಿಶುವಿನ ಸಂಬಂಧಿಕರೋರ್ವರ ದೂರಿನ ಮೇರೆಗೆ ಹಂಗಾಮಿ ಡೀನ್ ಡಾ.ಎಸ್.ಆರ್.ವಕೋಡೆ ಮತ್ತು ಮತ್ತೊಬ್ಬ ವೈದ್ಯರ ವಿರುದ್ಧ ನಾಂದೇಡ್ ಗ್ರಾಮಾಂತರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಡೀನ್ ಮತ್ತು ಮಕ್ಕಳ ತಜ್ಞರ ನಿರ್ಲಕ್ಷ್ಯದಿಂದ ನವಜಾತ ಶಿಶು ಸಾವನ್ನಪ್ಪಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಶಿಶುವಿನ ಕುಟುಂಬದವರು ಆಸ್ಪತ್ರೆಯ ಹೊರಗಿನಿಂದ ಔಷಧಿಗಳನ್ನು ಖರೀದಿಸಿ ಕಾಯುತ್ತಿದ್ದರು. ಆದರೆ ನವಜಾತ ಶಿಶುವನ್ನು ವೈದ್ಯರು ಪರಿಶೀಲಿಸಿಲ್ಲ. ಸಹಾಯಕ್ಕಾಗಿ ಡೀನ್ ಕಚೇರಿಗೆ ಹೋದಾಗ ಅವರನ್ನು ಬೆನ್ನಟ್ಟಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಮಂಗಳವಾರ ಆಸ್ಪತ್ರೆಯಲ್ಲಿ ಡೀನ್‌ಗೆ ಕೊಳಕು ಶೌಚಾಲಯವನ್ನು ಸ್ವಚ್ಛಗೊಳಿಸುವಂತೆ ಬಲವಂತ ಮಾಡಿದ ಆಡಳಿತಾರೂಢ ಶಿವಸೇನೆಯ ಸಂಸದರ ವಿರುದ್ಧ ಡೀನ್ ಪೊಲೀಸರಿಗೆ ದೂರು ನೀಡಿದ ಒಂದು ದಿನದ ನಂತರ ಡೀನ್‌ ವಿರುದ್ಧ ಈ ಪ್ರಕರಣ ದಾಖಲಾಗಿದೆ.

72 ಗಂಟೆಗಳಲ್ಲಿ 31 ಸಾವುಗಳ ವರದಿ ಬೆನ್ನಲ್ಲೇ  ನಾಂದೇಡ್‌ನ ಲೋಕಸಭಾ ಸಂಸದರಾದ ಹೇಮಂತ್ ಪಾಟೀಲ್ ಅವರು ಮಂಗಳವಾರ ಡಾ.ಶಂಕರರಾವ್ ಚವಾಣ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದರು. ಅಲ್ಲಿ ಶೌಚಾಲಯದ ದುಸ್ಥಿತಿ ಕಂಡು ಡೀನ್‌ ಕೈಯಲ್ಲೇ ಅದನ್ನೇ ಶುಚಿಗೊಳಿಸಿದ್ದರು. ಇದರ ಬೆನ್ನಲ್ಲೇ ಸಂಸದರ ವಿರುದ್ಧ ಪೊಲೀಸರಿಗೆ ದೂರನ್ನು ನೀಡಿದ್ದರು.

ಸಂಸದರು ತಮ್ಮ ಭೇಟಿಯ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ಸರ್ಕಾರ ಕೋಟಿಗಟ್ಟಲೆ ಖರ್ಚು ಮಾಡುತ್ತದೆ, ಆದರೆ ಇಲ್ಲಿನ ಪರಿಸ್ಥಿತಿ ನೋಡಿ ನನಗೆ ನೋವಾಗಿದೆ. ತಿಂಗಳಿನಿಂದ ಶೌಚಾಲಯಗಳನ್ನು ಸ್ವಚ್ಛಗೊಳಿಸಿಲ್ಲ. ಆಸ್ಪತ್ರೆಯ ವಾರ್ಡ್‌ಗಳಲ್ಲಿನ ಶೌಚಾಲಯಗಳಿಗೆ ಬೀಗ ಹಾಕಲಾಗಿದೆ. ಶೌಚಾಲಯದಲ್ಲಿ ನೀರು ಕೂಡ ಇರಲಿಲ್ಲ ಎಂದು ಪಾಟೀಲ್ ಹೇಳಿದ್ದರು.

ಇದನ್ನು ಓದಿ: ಗುಜರಾತ್‌: ಮುಸ್ಲಿಂ ಯುವಕರಿಗೆ ಛಡಿಯೇಟು ಪ್ರಕರಣ; ಪೊಲೀಸರ ವಿರುದ್ಧ ದೋಷಾರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್: ಗಾಳಿಪಟದ ದಾರ ಕುತ್ತಿಗೆ ಸೀಳಿ ಸ್ಥಳದಲ್ಲಿ ಪ್ರಾಣ ಬಿಟ್ಟ 48 ವರ್ಷದ ಬೈಕ್ ಸವಾರ

ಬೀದರ್ ಜಿಲ್ಲೆಯ ತಲಮಡಗಿ ಸೇತುವೆ ಬಳಿಯ ರಸ್ತೆಯಲ್ಲಿ ಮಗಳನ್ನು ಕರೆತರಲು ಬೈಕ್ ನಲ್ಲಿ ತೆರಳುತ್ತಿದ್ದ 48 ವರ್ಷದ ವ್ಯಕ್ತಿ ಕೊರಳಿಗೆ ಗಾಳಿ ಪಟದ ದಾರ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ನಡೆದಿದೆ.  ಮೃತ...

ಐ-ಪ್ಯಾಕ್ ಮೇಲಿನ ದಾಳಿ: ಟಿಎಂಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್

ಐ-ಪಿಎಸಿಗೆ ಸಂಬಂಧಿಸಿದ ಇತ್ತೀಚಿನ ದಾಳಿಗಳ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಪಕ್ಷದ ಫೈಲ್‌ಗಳು ಮತ್ತು ಚುನಾವಣಾ ಸಂಬಂಧಿತ ಡೇಟಾವನ್ನು ವಶಪಡಿಸಿಕೊಂಡಿದೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಲ್ಲಿಸಿದ್ದ ಅರ್ಜಿಯನ್ನು ಕಲ್ಕತ್ತಾ ಹೈಕೋರ್ಟ್...

ತೆಲಂಗಾಣ| ಪಂಚಾಯತ್ ಚುನಾವಣೆಯ ನಂತರ 500 ಬೀದಿ ನಾಯಿಗಳ ಸಾಮೂಹಿಕ ಕೊಲೆ; ‘ನಾಯಿ ಮುಕ್ತ ಗ್ರಾಮ’ದ ಭರವಸೆ ನೀಡಿದ್ದ ಅಭ್ಯರ್ಥಿಗಳು

ತೆಲಂಗಾಣದ ಹನಮಕೊಂಡ ಮತ್ತು ಕಾಮರೆಡ್ಡಿ ಜಿಲ್ಲೆಗಳಿಂದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಜನವರಿಯ ಮೊದಲ ಎರಡು ವಾರಗಳಲ್ಲಿ ಸುಮಾರು 500 ನಾಯಿಗಳನ್ನು ವಿಷ ಹಾಕಿ ಕೊಂದಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ....

ಕಾನ್ಪುರ ದೇಹತ್‌ನಲ್ಲಿ ನೆರೆಯವರ ಹಲ್ಲೆಯಿಂದ ದಲಿತ ರೈತ ಸಾವು; ಆರು ಮಂದಿ ಬಂಧನ

ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯಲ್ಲಿ 50 ವರ್ಷದ ದಲಿತ ರೈತನೊಬ್ಬ ತನ್ನ ನೆರೆಹೊರೆಯವರು ಮತ್ತು ಅವರ ಸಂಬಂಧಿಕರಿಂದ ಥಳಿತಕ್ಕೊಳಗಾಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮತ್ತು ಆತನ...

ಸರ್ಕಾರದ ಅಧಿಕೃತ ದಾಖಲೆಗಳಲ್ಲಿ ‘ಹರಿಜನ-ಗಿರಿಜನ’ ಪದಗಳನ್ನು ನಿಷೇಧಿಸಿದ ಹರಿಯಾಣ ಸರ್ಕಾರ

ಹರಿಯಾಣ ಸರ್ಕಾರವು ತನ್ನ ಎಲ್ಲಾ ಅಧಿಕೃತ ಸಂವಹನಗಳಲ್ಲಿ 'ಹರಿಜನ' ಮತ್ತು 'ಗಿರಿಜನ' ಪದಗಳ ಬಳಕೆಯನ್ನು ನಿಷೇಧಿಸಿದೆ. ಇಲಾಖೆಗಳು 'ಪರಿಶಿಷ್ಟ ಜಾತಿ (ಎಸ್‌ಸಿ)' ಮತ್ತು 'ಪರಿಶಿಷ್ಟ ಪಂಗಡ (ಎಸ್‌ಟಿ)' ಅಥವಾ ಅವುಗಳ ಸಮಾನ ಪದಗಳನ್ನು...

ಐಎಎಸ್ ಅಧಿಕಾರಿ ಮಾನನಷ್ಟ ಮೊಕದ್ದಮೆ ಪ್ರಕರಣ: ಎನ್‌ಟಿವಿ ಸಂಪಾದಕ, ಇಬ್ಬರು ಪತ್ರಕರ್ತರ ಬಂಧನ

ತೆಲಂಗಾಣ ಸರ್ಕಾರದ ರಸ್ತೆ ಮತ್ತು ಕಟ್ಟಡಗಳ ಸಚಿವ ಕೋಮತಿರೆಡ್ಡಿ ವೆಂಕಟ್ ರೆಡ್ಡಿ ಹಾಗೂ ಮಹಿಳಾ ಐಎಎಸ್ ಅಧಿಕಾರಿ ಅವರ ಕುರಿತು ವಿವಾದಾತ್ಮಕ ಸುದ್ದಿ ವರದಿಗೆ ಸಂಬಂಧಿಸಿದಂತೆ, ಹೈದರಾಬಾದ್ ಕೇಂದ್ರ ಅಪರಾಧ ಠಾಣೆ...

ಇರಾನ್: ಪ್ರತಿಭಟನಾಕಾರರ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವಿನ ಸಂಖ್ಯೆ 2571ಕ್ಕೆ ಏರಿಕೆ 

ಇರಾನ್‌ನಲ್ಲಿ ಪ್ರತಿಭಟನೆಗಳ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕನಿಷ್ಠ 2,571 ಕ್ಕೆ ಏರಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಬುಧವಾರ ತಿಳಿಸಿದ್ದಾರೆ. ಈ ಅಂಕಿ ಅಂಶವು ಅಮೆರಿಕ ಮೂಲದ ಮಾನವ ಹಕ್ಕುಗಳ...

ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ 'ಕಲ್ಟ್' ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ...

ಹಿಂದಿ ಶೈಕ್ಷಣಿಕ ಪದ್ಧತಿ ಹೇರಿಕೆಯಿಂದ ಉತ್ತರದ ಜನರಿಂದ ದಕ್ಷಿಣಕ್ಕೆ ವಲಸೆ: ಮಾರನ್

ಇಂಗ್ಲಿಷ್ ಶಿಕ್ಷಣವನ್ನು ನಿರುತ್ಸಾಹಗೊಳಿಸುತ್ತಾ, ವಿದ್ಯಾರ್ಥಿಗಳು ಹಿಂದಿ ಮಾತ್ರ ಕಲಿಯಲು ಪ್ರೋತ್ಸಾಹಿಸುತ್ತಿದ್ದಾರೆ. ಉತ್ತರ ರಾಜ್ಯಗಳ ಈ ನೀತಿಗಳಿಂದ ಉದ್ಯೋಗ ಸಿಗದೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಉತ್ತರ...

ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ದಲಿತ ಸಮುದಾಯದ ರೈತರಿಗೆ ಅದೇ ಊರಿನ ಪ್ರಬಲ ಜಾತಿಗೆ ಸೇರಿದ ಜನರು ವಿನಾಕಾರಣ ತೊಂದರೆ ನಿಡುತ್ತಿದ್ದು, ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಾರೆ ಎಂಬ...