Homeಮುಖಪುಟನಾಂದೇಡ್‌: ಸರಣಿ ಸಾವು ಸಂಭವಿಸಿದ ಸರ್ಕಾರಿ ಆಸ್ಪತ್ರೆಯ ಡೀನ್‌ ವಿರುದ್ಧ ಎಫ್ಐಆರ್‌ ದಾಖಲು

ನಾಂದೇಡ್‌: ಸರಣಿ ಸಾವು ಸಂಭವಿಸಿದ ಸರ್ಕಾರಿ ಆಸ್ಪತ್ರೆಯ ಡೀನ್‌ ವಿರುದ್ಧ ಎಫ್ಐಆರ್‌ ದಾಖಲು

- Advertisement -
- Advertisement -

ಮಹಾರಾಷ್ಟ್ರದ ನಾಂದೇಡ್‌ನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 72 ಗಂಟೆಗಳಲ್ಲಿ 31 ರೋಗಿಗಳ ಸರಣಿ ಸಾವುಗಳು ಸಂಭವಿಸಿದ ಹಿನ್ನೆಲೆ ಡೀನ್ ವಿರುದ್ಧ ನರಹತ್ಯೆಯ ಪ್ರಕರಣವನ್ನು ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ ಡೀನ್ ಅಲ್ಲದೆ ಮತ್ತೋರ್ವ ವೈದ್ಯನನ್ನು ಕೂಡ ಆರೋಪಿ ಎಂದು ಹೆಸರಿಸಲಾಗಿದೆ.
ಆಸ್ಪತ್ರೆಯಲ್ಲಿ ಮೃತಪಟ್ಟ ನವಜಾತ ಶಿಶುವಿನ ಸಂಬಂಧಿಕರೋರ್ವರ ದೂರಿನ ಮೇರೆಗೆ ಹಂಗಾಮಿ ಡೀನ್ ಡಾ.ಎಸ್.ಆರ್.ವಕೋಡೆ ಮತ್ತು ಮತ್ತೊಬ್ಬ ವೈದ್ಯರ ವಿರುದ್ಧ ನಾಂದೇಡ್ ಗ್ರಾಮಾಂತರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಡೀನ್ ಮತ್ತು ಮಕ್ಕಳ ತಜ್ಞರ ನಿರ್ಲಕ್ಷ್ಯದಿಂದ ನವಜಾತ ಶಿಶು ಸಾವನ್ನಪ್ಪಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಶಿಶುವಿನ ಕುಟುಂಬದವರು ಆಸ್ಪತ್ರೆಯ ಹೊರಗಿನಿಂದ ಔಷಧಿಗಳನ್ನು ಖರೀದಿಸಿ ಕಾಯುತ್ತಿದ್ದರು. ಆದರೆ ನವಜಾತ ಶಿಶುವನ್ನು ವೈದ್ಯರು ಪರಿಶೀಲಿಸಿಲ್ಲ. ಸಹಾಯಕ್ಕಾಗಿ ಡೀನ್ ಕಚೇರಿಗೆ ಹೋದಾಗ ಅವರನ್ನು ಬೆನ್ನಟ್ಟಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಮಂಗಳವಾರ ಆಸ್ಪತ್ರೆಯಲ್ಲಿ ಡೀನ್‌ಗೆ ಕೊಳಕು ಶೌಚಾಲಯವನ್ನು ಸ್ವಚ್ಛಗೊಳಿಸುವಂತೆ ಬಲವಂತ ಮಾಡಿದ ಆಡಳಿತಾರೂಢ ಶಿವಸೇನೆಯ ಸಂಸದರ ವಿರುದ್ಧ ಡೀನ್ ಪೊಲೀಸರಿಗೆ ದೂರು ನೀಡಿದ ಒಂದು ದಿನದ ನಂತರ ಡೀನ್‌ ವಿರುದ್ಧ ಈ ಪ್ರಕರಣ ದಾಖಲಾಗಿದೆ.

72 ಗಂಟೆಗಳಲ್ಲಿ 31 ಸಾವುಗಳ ವರದಿ ಬೆನ್ನಲ್ಲೇ  ನಾಂದೇಡ್‌ನ ಲೋಕಸಭಾ ಸಂಸದರಾದ ಹೇಮಂತ್ ಪಾಟೀಲ್ ಅವರು ಮಂಗಳವಾರ ಡಾ.ಶಂಕರರಾವ್ ಚವಾಣ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದರು. ಅಲ್ಲಿ ಶೌಚಾಲಯದ ದುಸ್ಥಿತಿ ಕಂಡು ಡೀನ್‌ ಕೈಯಲ್ಲೇ ಅದನ್ನೇ ಶುಚಿಗೊಳಿಸಿದ್ದರು. ಇದರ ಬೆನ್ನಲ್ಲೇ ಸಂಸದರ ವಿರುದ್ಧ ಪೊಲೀಸರಿಗೆ ದೂರನ್ನು ನೀಡಿದ್ದರು.

ಸಂಸದರು ತಮ್ಮ ಭೇಟಿಯ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ಸರ್ಕಾರ ಕೋಟಿಗಟ್ಟಲೆ ಖರ್ಚು ಮಾಡುತ್ತದೆ, ಆದರೆ ಇಲ್ಲಿನ ಪರಿಸ್ಥಿತಿ ನೋಡಿ ನನಗೆ ನೋವಾಗಿದೆ. ತಿಂಗಳಿನಿಂದ ಶೌಚಾಲಯಗಳನ್ನು ಸ್ವಚ್ಛಗೊಳಿಸಿಲ್ಲ. ಆಸ್ಪತ್ರೆಯ ವಾರ್ಡ್‌ಗಳಲ್ಲಿನ ಶೌಚಾಲಯಗಳಿಗೆ ಬೀಗ ಹಾಕಲಾಗಿದೆ. ಶೌಚಾಲಯದಲ್ಲಿ ನೀರು ಕೂಡ ಇರಲಿಲ್ಲ ಎಂದು ಪಾಟೀಲ್ ಹೇಳಿದ್ದರು.

ಇದನ್ನು ಓದಿ: ಗುಜರಾತ್‌: ಮುಸ್ಲಿಂ ಯುವಕರಿಗೆ ಛಡಿಯೇಟು ಪ್ರಕರಣ; ಪೊಲೀಸರ ವಿರುದ್ಧ ದೋಷಾರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....