HomeUncategorizedಸಾಹಿತ್ಯ ಕ್ಷೇತ್ರಕ್ಕೆ ನೊಬೆಲ್‌ ಬಹುಮಾನ ಘೋಷಣೆ

ಸಾಹಿತ್ಯ ಕ್ಷೇತ್ರಕ್ಕೆ ನೊಬೆಲ್‌ ಬಹುಮಾನ ಘೋಷಣೆ

- Advertisement -
- Advertisement -

2023ರ ಸಾಲಿನ ಸಾಹಿತ್ಯ ಕ್ಷೇತ್ರದ ನೊಬೆಲ್‌ ಬಹುಮಾನವನ್ನು ಘೋಷಣೆ ಮಾಡಲಾಗಿದ್ದು, ನಾರ್ವೆಯ ಲೇಖಕ, ಕಾದಂಬರಿಕಾರ ಮತ್ತು ನಾಟಕಕಾರ ಜಾನ್ ಫೋಸ್ಸೆ 2023ರ ಸಾಹಿತ್ಯ ನೊಬೆಲ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಸ್ವೀಡಿಷ್ ಅಕಾಡೆಮಿಯ ಖಾಯಂ ಕಾರ್ಯದರ್ಶಿ ಮ್ಯಾಟ್ಸ್ ಮಾಲ್ಮ್ ಗುರುವಾರ ಸ್ಟಾಕ್ಹೋಮ್‌ನಲ್ಲಿ ಪ್ರಶಸ್ತಿಯನ್ನು ಘೋಷಿಸಿದ್ದಾರೆ. ನೊಬೆಲ್ ಪ್ರಶಸ್ತಿಗಳು 11 ಮಿಲಿಯನ್ ಸ್ವೀಡಿಷ್ ಕ್ರೋನರ್ ನಗದು ಬಹುಮಾನವನ್ನು ಒಳಗೊಂಡಿವೆ.

64 ವರ್ಷದ ಫೋಸ್ಸೆ ಎರಡು ಡಜನ್‌ಗಿಂತಲೂ ಹೆಚ್ಚು ನಾಟಕಗಳನ್ನು ಬರೆದಿದ್ದರು. ನಾಲ್ಕು ದಶಕಗಳ ಕಾಲ ಕಾದಂಬರಿಗಳು, ಪ್ರಬಂಧಗಳು, ಕವನ ಸಂಕಲನಗಳು ಮತ್ತು ಮಕ್ಕಳ ಪುಸ್ತಕಗಳನ್ನು ಕೂಡ  ಪ್ರಕಟಿಸಿದ್ದಾರೆ. ಇವರ ಲೇಖನ, ಬರಹಗಳು 40 ಭಾಷೆಗಳಲ್ಲೂ ಭಾಷಾಂತರ ಮಾಡಲಾಗಿದೆ.

2023ರ ಸಾಲಿನ ರಸಾಯನಶಾಸ್ತ್ರ ವಿಭಾಗಕ್ಕೆ ನೊಬೆಲ್ ಪ್ರಶಸ್ತಿಯನ್ನು ನಿನ್ನೆ ಘೋಷಿಸಲಾಗಿತ್ತು. ವಿಜ್ಞಾನಿಗಳಾದ ಮೌಂಗಿ ಬವೆಂಡಿ, ಲೂಯಿಸ್ ಬ್ರೂಸ್ ಮತ್ತು ಅಲೆಕ್ಸಿ ಎಕಿಮೊವ್ ಅವರಿಗೆ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ ಸಿಕ್ಕಿತ್ತು.

2023ರ ಭೌತಶಾಸ್ತ್ರದ ನೊಬೆಲ್‌ ಬಹುಮಾನವನ್ನು ವಿಜ್ಞಾನಿಗಳಾದ ಪಿಯರೆ ಅಗೊಸ್ಟಿನಿ, ಫೆರೆಂಕ್ ಕ್ರೌಸ್ಜ್ ಮತ್ತು ಆನ್ನೆ ಎಲ್ ಹುಲ್ಲಿಯರ್ ಅವರಿಗೆ ನೀಡಲಾಗಿದೆ.

ಇದಲ್ಲದೆ ಕೋವಿಡ್ -19 ವಿರುದ್ಧ ಹೋರಾಡಲು ಮೊದಲು ಲಸಿಕೆ ಅಭಿವೃದ್ಧಿಪಡಿಸಿದ ವಿಜ್ಞಾನಿಗಳಾದ ಕ್ಯಾಟಲಿನ್ ಕಾರಿಕೊ ಹಾಗೂ ಡ್ರ್ಯೂ ವೈಸ್‌ಮನ್ ಅವರಿಗೆ ಕೂಡ 2023ನೇ ಸಾಲಿನ ವೈದ್ಯಕೀಯ ವಿಭಾಗದ ನೋಬೆಲ್ ಪುರಸ್ಕಾರ ದೊರೆತಿದೆ.

ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಈ ಬಹುಮಾನವನ್ನು ನೀಡಲಿದೆ. ಈ ವಾರದಲ್ಲಿ ವೈದ್ಯಕೀಯ, ಭೌತಶಾಸ್ತ್ರ ರಸಾಯನ ಶಾಸ್ತ್ರ ಮತ್ತು ಸಾಹಿತ್ಯ ವಿಭಾಗಕ್ಕೆ ಬಹುಮಾನವನ್ನು ನೀಡಲಾಗಿದೆ.

ಇದನ್ನು ಓದಿ: ಬಿಹಾರ: ಪೊಲೀಸ್‌ ದಾಳಿ ವೇಳೆ ಬಾಲಕ ಸಾವು; ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿದ ಆಕ್ರೋಶಿತ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....