Homeಮುಖಪುಟ2010ರಿಂದ 16 ಪತ್ರಕರ್ತರ ಮೇಲೆ ಕಠೋರ UAPA ಕಾಯ್ದೆಯಡಿ ಕೇಸ್ ದಾಖಲು: ಹೆಚ್ಚಿನವರು ಮುಸ್ಲಿಂ ಸಮುದಾಯದವರು

2010ರಿಂದ 16 ಪತ್ರಕರ್ತರ ಮೇಲೆ ಕಠೋರ UAPA ಕಾಯ್ದೆಯಡಿ ಕೇಸ್ ದಾಖಲು: ಹೆಚ್ಚಿನವರು ಮುಸ್ಲಿಂ ಸಮುದಾಯದವರು

- Advertisement -
- Advertisement -

2010ರಿಂದ ಇಲ್ಲಿಯವರೆಗೆ ದೇಶದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ 1967ರ ಯುಎಪಿಎ ಅಡಿಯಲ್ಲಿ 16 ಪತ್ರಕರ್ತರ ಮೇಲೆ ಪ್ರಕರಣ ದಾಖಲಾಗಿದೆ. ಈ ರೀತಿ ಕಠೋರ ಕಾನೂನುಗಳ ಅಡಿಯಲ್ಲಿ ಪತ್ರಕರ್ತರ ಮೇಲೆ ಪ್ರಕರಣ ದಾಖಲಿಸಿರುವುದು ಭಾರತದಲ್ಲಿ ವಾಕ್ ಸ್ವಾತಂತ್ರ್ಯದ ಅಪಾಯಕಾರಿ ಸ್ಥಿತಿಯಲ್ಲಿರುವುದನ್ನು ಸೂಚಿಸುತ್ತದೆ.

ಸಮಾಜದಲ್ಲಿನ ಕೆಲ ನ್ಯೂನ್ಯತೆಗಳ, ಸಮಸ್ಯೆಗಳ ಕುರಿತು ತನಿಖೆ ಮಾಡಲು ಮತ್ತು ವರದಿ ಮಾಡಲು ಬಯಸುವ ಪತ್ರಕರ್ತರ ವಿರುದ್ಧ UAPA ಕಾಯ್ದೆಯನ್ನು ಬಳಸಿದಾಗ, ಅದು ಅವರ ಕಾನೂನುಬದ್ಧ ಕೆಲಸವನ್ನು ಅಪರಾಧೀಕರಿಸಲು ಮತ್ತು ಅವರನ್ನು “ಭಯೋತ್ಪಾದಕರು” ಎಂದು ಕಳಂಕಗೊಳಿಸುವ ಕೆಲಸ ಮಾಡುತ್ತದೆ.  ಇದಲ್ಲದೆ ಅವರ ಘನತೆಗೆ ಚ್ಯುತಿ ತರುವ ಮತ್ತು ಅವರನ್ನು ವಿನಾಃಕಾರಣ ಕಾನೂನು ಪ್ರಕ್ರಿಯೆಗಳ ಹಿಂದೆ ಅಲೆದಾಡಿಸಲು ಪ್ರಯತ್ನಿಸುತ್ತದೆ. ಇದು ಅವರ ವೃತ್ತಿಪರ ಕೆಲಸದ ಮೇಲೆ ಅಗಾಧ ಪ್ರಭಾವವನ್ನು ಬೀರುತ್ತದೆ.

ಭಯೋತ್ಪಾದನಾ ಚಟುವಟಿಕೆಗಳನ್ನು ಹತ್ತಿಕ್ಕಲು ಯುಎಪಿಎ ಕಾಯ್ದೆ ಜಾರಿಗೆ ತರಲಾಗಿದೆ. ರಾಷ್ಟ್ರೀಯ ಭದ್ರತೆ ಮತ್ತು ಆಪಾದಿತ ದೇಶವಿರೋಧಿ ಚಟುವಟಿಕೆಗಳನ್ನು ಕೂಡ ಯುಎಪಿಎಯಡಿ ಸೇರಿಸಲಾಗಿದೆ. ಭಾರತದಲ್ಲಿ ಉಗ್ರ ಚಟುವಟಿಕೆ ನಿಗ್ರಹಕ್ಕೆ ಸಂಬಂಧಿಸಿದಂತೆ ಟಾಡಾ(TADA) ಮತ್ತು ಪೋಟಾ (POTA) ಕಾಯ್ದೆಗಳು ಅಸ್ತಿತ್ವದಲ್ಲಿದ್ದವು. ಆದರೆ, 1995ರಲ್ಲಿ ಟಾಡಾ ಕಾಯ್ದೆಯನ್ನು ಹಿಂಪಡೆಯಲಾಯಿತು. ಬಳಿಕ 2004ರಲ್ಲಿ ಪೋಟಾ ಕಾಯ್ದೆಯನ್ನು ಕೈ ಬಿಡಲಾಯಿತು. 1967ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಜಾರಿಗೆ ತಂದಿದ್ದ ಯುಎಪಿಎ ಕಾಯ್ದೆಯನ್ನು ಬಲಪಡಿಸಲಾಯಿತು. ಇದಕ್ಕಾಗಿ 2004, 2008, 2013 ಮತ್ತು 2019ರಲ್ಲಿ ತಿದ್ದುಪಡಿಗಳನ್ನು ತರುವ ಮೂಲಕ ಮತ್ತಷ್ಟು ಅಧಿಕಾರಗಳನ್ನು ನೀಡಲಾಯಿತು

ಇತ್ತೀಚಿನ ಬೆಳವಣಿಗೆಯಲ್ಲಿ ನ್ಯೂಸ್‌ಕ್ಲಿಕ್ ಸುದ್ದಿ ಪೋರ್ಟಲ್‌ನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರ  ಮೇಲೆ ಯುಎಪಿಎಯಡಿ ಪ್ರಕರಣವನ್ನು ದಾಖಲಿಸಿ ಬಂಧಿಸಲಾಗಿದೆ. ಪುರ್ಕಾಯಸ್ಥ ಮತ್ತು ನ್ಯೂಸ್‌ಕ್ಲಿಕ್ ಸುದ್ದಿ ಪೋರ್ಟಲ್‌ನ ಹೆಚ್‌ಆರ್‌ ಅಮಿತ್ ಚಕ್ರವರ್ತಿ ವಿರುದ್ಧದ ಎಫ್‌ಐಆರ್‌ನಲ್ಲಿ ಸೆಕ್ಷನ್ 13 (ಕಾನೂನುಬಾಹಿರ ಚಟುವಟಿಕೆಗಳು), 16 (ಭಯೋತ್ಪಾದನಾ ಕೃತ್ಯ), 17 (ಭಯೋತ್ಪಾದಕ ಕೃತ್ಯಗಳಿಗೆ ನಿಧಿ ಸಂಗ್ರಹಿಸುವುದು), 18 (ಪಿತೂರಿ) ಮತ್ತು ಯುಎಪಿಎ ಜೊತೆಗೆ ಐಪಿಸಿ ಸೆಕ್ಷನ್ 153ಎ (ವಿವಿಧ ಗುಂಪಿನ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 120 ಬಿ (ಅಪರಾಧ ಪಿತೂರಿ) ಆರೋಪವನ್ನು ಹೊರಿಸಲಾಗಿದೆ.

ಇದಲ್ಲದೆ ಮಾಧ್ಯಮದ ವಿರುದ್ಧ ಸೆಕ್ಷನ್ 153 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಕಾಯ್ದೆಯನ್ನು ನೇಹಾ ದೀಕ್ಷಿತ್ ಮತ್ತು ಪರಂಜಾಯ್ ಗುಹಾ ಠಾಕುರ್ತಾ ಸೇರಿದಂತೆ ಹಲವಾರು ಪತ್ರಕರ್ತರ ವಿರುದ್ಧ ಕೂಡ ಬಳಸಲಾಗಿದೆ.

ಮಾನವ ಹಕ್ಕುಗಳ ಕಾರ್ಯಕರ್ತರು, ವಕೀಲರು, ವಿದ್ಯಾರ್ಥಿಗಳು, ಕಾರ್ಮಿಕರು ಮತ್ತು ಬುಡಕಟ್ಟು ಜನಾಂಗದವರ ಮೇಲೆ ಕಳೆದ ಕೆಲವು ವರ್ಷಗಳಿಂದ ಯುಎಪಿಎಯನ್ನು ನಿರ್ದಾಕ್ಷಿಣ್ಯವಾಗಿ ಬಳಸಿರುವುದು ಕಂಡು ಬಂದಿದೆ. ಇದಲ್ಲದೆ ಜಮ್ಮು ಮತ್ತು ಕಾಶ್ಮೀರದಲ್ಲಿನ ಸಾರ್ವಜನಿಕ ಸುರಕ್ಷತಾ ಕಾಯಿದೆ ಮತ್ತು ಛತ್ತೀಸ್‌ಗಢ ಜನ್ ಸುರಕ್ಷಾ ಅಧಿನಿಯಮ್, ರಾಷ್ಟ್ರೀಯ ಭದ್ರತಾ ಕಾಯ್ದೆ ಮತ್ತು ನಿಬಂಧನೆಗಳಂತಹ ಇತರ ಕಠೋರ ನಿಯಮಗಳನ್ನು  ಕೂಡ ಪತ್ರಕರ್ತರ ಮೇಲೆ ವಿಧಿಸಲಾಗಿದೆ.

ಫ್ರೀ ಸ್ಪೀಚ್ ಕಲೆಕ್ಟಿವ್‌ನ ಅಧ್ಯಯನದ ಪ್ರಕಾರ 2010-20ರವರೆಗೆ ಭಾರತದಲ್ಲಿ 154 ಪತ್ರಕರ್ತರನ್ನು ಬಂಧಿಸಲಾಗಿದೆ. ವಿಚಾರಣೆಗೆ ಒಳಪಡಿಸಲಾಗಿದೆ ಅಥವಾ ಅವರ ವೃತ್ತಿಪರ ಕೆಲಸಕ್ಕಾಗಿ ಅವರಿಗೆ ಶೋಕಾಸ್ ನೋಟಿಸ್‌ಗಳನ್ನು ನೀಡಲಾಗಿದೆ. ಇದರಲ್ಲಿ 40 ಪ್ರತಿಶತ 2020ರಲ್ಲಿ ನಡೆದಿದೆ ಎಂದು ತಿಳಿಸಿದೆ. ಇದಲ್ಲದೆ 9 ವಿದೇಶಿ ಪತ್ರಕರ್ತರು ಗಡೀಪಾರು, ಬಂಧನ, ಭಾರತಕ್ಕೆ ಪ್ರವೇಶವನ್ನು ನಿರಾಕರಣೆ ತೊಡಕುಗಳನ್ನು ಎದುರಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಪತ್ರಕರ್ತರು ಸುದ್ದಿ ಮತ್ತು ಮಾಹಿತಿಯ ಸಂದೇಶವಾಹಕರು. ಅವರನ್ನು ಮೌನಗೊಳಿಸುವುದು ಅವರ ವರದಿಗಾರಿಕೆಯನ್ನು ಮೌನಗೊಳಿಸಿದಂತೆ. ಇದರಿಂದ ಯಾವುದೇ ಭಯವಿಲ್ಲದೆ ಮಾಹಿತಿಯನ್ನು ಪಡೆಯುವ ನಾಗರಿಕರ ಪ್ರಜಾಸತ್ತಾತ್ಮಕ ಹಕ್ಕಿಗೆ ಧಕ್ಕೆಯಾಗುತ್ತದೆ.

ಭಾರತದಲ್ಲಿ UAPA ಅಡಿಯಲ್ಲಿ ಪತ್ರಕರ್ತರ ಮೇಲೆ ದಾಖಲಾದ ಪ್ರಕರಣಗಳು 

ಪತ್ರಕರ್ತರ ಮೇಲೆ ಪ್ರಸ್ತುತ UAPA ಅಡಿಯಲ್ಲಿ ದಾಖಲಾಗಿರುವ ಪ್ರಕರಣ :16
ಯುಎಪಿಎಯಡಿ ಬಂಧಿತ ಪತ್ರಕರ್ತರು:07
ಯುಎಪಿಎಯಡಿ ಜಾಮೀನಿನ ಮೇಲೆ ಇರುವ ಪತ್ರಕರ್ತರು:08
ಯುಎಪಿಎಯಡಿ ಆರೋಪಿತ ಬಂಧನವಾಗದ ಪತ್ರಕರ್ತರ  ಸಂಖ್ಯೆ:01
ಯುಎಪಿಎಯಡಿ ಖುಲಾಸೆಗೊಂಡ ಪತ್ರಕರ್ತರು:01
ಯುಎಪಿಎಯಿಂದ ಮುಕ್ತಗೊಂಡ ಪತ್ರಕರ್ತರು:01

ಬಂಧಿತ, ಪೊಲೀಸ್ ಕಸ್ಟಡಿಯಲ್ಲಿ ಇರುವವರು
1. ಪ್ರಬೀರ್ ಪುರ್ಕಾಯಸ್ಥ, ಸಂಪಾದಕ, ನ್ಯೂಸ್‌ಕ್ಲಿಕ್ – 03.10.2023, ನವದೆಹಲಿ

ಜೈಲಿನಲ್ಲಿರುವವರು
1. ಆಸಿಫ್ ಸುಲ್ತಾನ್, ವರದಿಗಾರರು ಕಾಶ್ಮೀರ – 27.08.2018ರಿಂದ ಜೈಲಿನಲ್ಲಿದ್ದಾರೆ.
2. ಫಹಾದ್ ಶಾ, ಸಂಪಾದಕರು, ಕಾಶ್ಮೀರವಾಲಾ – 04.02.2022ರಲ್ಲಿ ಬಂಧನವಾಗಿದೆ. ಇವರು  ಪುಲ್ವಾಮಾದವರು. 
3. ಸಜ್ಜದ್ ಗುಲ್, ‘ದಿ ಕಾಶ್ಮೀರ್ ವಾಲಾ’ದ ಟ್ರೈನಿ ವರದಿಗಾರರು 

4. ರೂಪೇಶ್ ಕುಮಾರ್ ಪತ್ರಕರ್ತರು ರಾಮಗಢ ಜಿಲ್ಲೆ, ಜಾರ್ಖಂಡ್
5. ಇರ್ಫಾನ್ ಮೆಹ್ರಾಜ್, ಸಂಪಾದಕ, ವಂದೇ ಮ್ಯಾಗಜೀನ್ ಶ್ರೀನಗರ, ಜಮ್ಮು ಮತ್ತು ಕಾಶ್ಮೀರ

ಗೃಹ ಬಂಧನದಲ್ಲಿರುವವರು

1. ಗೌತಮ್ ನವ್ಲಾಖಾ, ಬರಹಗಾರರು, ಸಲಹಾ ಸಂಪಾದಕರು

ಜಾಮೀನಿನ ಮೇಲೆ ಇರುವವರು (ಬಂಧನ ದಿನಾಂಕದ ಆದೇಶದ ಪ್ರಕಾರ)

1. ಸೀಮಾ ಆಜಾದ್: ಇವರು ‘ದಸ್ತಕ್‌’ನ  ಸಂಪಾದಕರು  ಉತ್ತರ ಪ್ರದೇಶದ ಪ್ರಯಾಗ್ರಾಜ್‌ನವರು ಇವರನ್ನು  ಫೆಬ್ರವರಿ 2010ರಲ್ಲಿ ಬಂಧಿಸಲಾಗಿತ್ತು. ಆಗಸ್ಟ್ 2012 ರಲ್ಲಿ ಜಾಮೀನು ನೀಡಲಾಯಿತು.

2. ವಿಶ್ವ ವಿಜಯ್: ದಸ್ತಕ್‌ ಸಂಪಾದಕರು, ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 2010 ಬಂಧಿಸಲಾಯಿತು ಮತ್ತು ಆಗಸ್ಟ್ 2012ರಲ್ಲಿ ಜಾಮೀನು ನೀಡಲಾಯಿತು.

3. ಕೆ ಕೆ ಶಾಹಿನಾ: ಔಟ್‌ಲುಕ್ ಪತ್ರಕರ್ತೆ, ಡಿಸೆಂಬರ್ 2010 ರಲ್ಲಿ ದಾಖಲಾದ ಪ್ರಕರಣ. ಜುಲೈ 2011 ರಲ್ಲಿ ನಿರೀಕ್ಷಣಾ ಜಾಮೀನು ಮಂಜೂರು.

4. ಸಿದ್ದಿಕ್ ಕಪ್ಪನ್; ಪತ್ರಕರ್ತ, ದೆಹಲಿಯಲ್ಲಿ 05.10.2020 ರಂದು ಬಂಧಿಸಲಾಯಿತು, 09.09.2023 ರಂದು UAPA ಪ್ರಕರಣದಲ್ಲಿ ಮತ್ತು 23.12.2022 ರಂದು PMLA ಪ್ರಕರಣದಲ್ಲಿ ಜಾಮೀನು ನೀಡಲಾಯಿತು.

5. ಪಾವೊಜೆಲ್ ಚಾವೊಬಾ; ದಿ ಫ್ರಾಂಟಿಯರ್ ಮಣಿಪುರದ ಕಾರ್ಯನಿರ್ವಾಹಕ ಸಂಪಾದಕ, ಇಂಫಾಲ್‌ನಲ್ಲಿ 17.01.2021 ಬಂಧಿಸಲಾಯಿತು, 18.01.2021 ಜಾಮೀನು ಮಂಜೂರು ಮಾಡಲಾಯಿತು.

6. ದಿ ಫ್ರಾಂಟಿಯರ್ ಮಣಿಪುರ ಇಂಫಾಲ್‌ನ ಸಂಪಾದಕರಾದ ಧೀರೇನ್ ಸದೋಕ್‌ಪಂ ಅವರನ್ನು 17.01.2021 ಬಂಧನ ಮಾಡಲಾಗಿತ್ತು. ಮತ್ತು 18.01.2021ರಲ್ಲಿ ಜಾಮೀನು ನೀಡಲಾಗಿತ್ತು.

7. ಶ್ಯಾಮ್ ಮೀರಾ ಸಿಂಗ್:  ಪತ್ರಕರ್ತ, ನವದೆಹಲಿಯಲ್ಲಿ 10.11. 2021ರಲ್ಲಿ ಬಂಧನ  18.11.2021 ರಂದು ನಿರೀಕ್ಷಣಾ ಜಾಮೀನು ಪಡೆದರು.

8. ಮನನ್ ದಾರ್: ಶ್ರೀನಗರದ ಫೋಟೋ ಜರ್ನಲಿಸ್ಟ್,  22.10.2021ರಂದು ಇವರ ಬಂಧನ ನಡೆದಿದ್ದು, 04.01.2023 ರಂದು ಜಾಮೀನಿನ ಮೂಲಕ ಬಿಡುಗಡೆ

 ಯುಎಪಿಯಡಿ ಪ್ರಕರಣ ದಾಖಲಾಗಿ ಬಂಧನವಾಗದೆ ಇರುವವರು

  1. ಶ್ರೀನಗರದ ಫೋಟೋ ಜರ್ನಲಿಸ್ಟ್ ಮಸರತ್ ಜಹ್ರಾ ಅವರ ಮೇಲೆ 18.04.2020 ರಂದು ಪ್ರಕರಣ ದಾಖಲಿಸಲಾಗಿದೆ. ಆದರೆ ಬಂಧನ ನಡೆದಿಲ್ಲ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...